Home ಕರಾವಳಿ Archive by category ಉಡುಪಿ (Page 25)

ಗಣೇಶ ಚತುರ್ಥಿಯ ಪ್ರಯುಕ್ತ ಉಡುಪಿಯ ಮಧುರಂ ರೆಸ್ಟೋರೆಂಟ್‌ನಲ್ಲಿ ಗಣೇಶ ವಿವಿಧ ಬಗೆಯ ಮೋದಕಗಳ ತಯಾರಿ

ಎಲ್ಲೆಡೆ ಗಣೇಶೋತ್ಸವದ ಸಂಭ್ರಮ ಸಡಗರದಿಂದ ನಡೆಯುತ್ತಿದ್ದರೆ ಉಡುಪಿಯ ವೈಟ್ ಲೊಟಸ್‌ನ ಮಧುರಂ ರೆಸ್ಟೋರೆಂಟ್‌ನಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಗ್ರಾಹಕರಿಗಾಗಿ ವಿವಿಧ ಬಗೆಯ ಮೋದಕ ಮತ್ತು ಸಿಹಿ ತಿಂಡಿಗಳನ್ನು ತಯಾರಿಸಲಾಗಿತ್ತು. ಸಿಹಿತಿಂಡಿಗಳಿಗೆ ಹೆಸರುವಾಸಿಯಾಗಿರುವ ವೈಟ್ ಲೋಟಸ್‌ನ ಮಧುರಂ ಪ್ರತಿ ವರ್ಷದಂತೆ ಈ ವರ್ಷವೂ ಗಣೇಶ ಹಬ್ಬದ ಪ್ರಯುಕ್ತ ಹಲವಾರು ಬಗೆಯ

ಬೈಂದೂರು: ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಹುಟ್ಟೂರ ಸನ್ಮಾನ

ಬೈಂದೂರಿನ ಬವಳಾಡಿ- ಗಂಟಿಹೊಳೆಯ ವಿವೇಕಾನಂದ ಯುವಕ ಮಂಡಳಿಯ ಆಶ್ರಯದಲ್ಲಿ 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕÀ ಗುರುರಾಜ್ ಗಂಟಿಹೊಳೆ ಅವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ ನಡೆಯಿತು. ಗುರುರಾಜ್ ಗಂಟಿಹೊಳೆ ಯವರು ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬವಳಾಡಿಯಲ್ಲಿಯೂ, ಪ್ರೌಢ ಶಿಕ್ಷಣವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪುಂದದಲ್ಲಿಯೂ ಹಾಗೂ ಕಾಲೇಜು ಶಿಕ್ಷಣವನ್ನು ಸರಕಾರಿ

ಬ್ರಹ್ಮಾವರ: ಬ್ರಹ್ಮಾವರದಲ್ಲಿ ವಿಭಿನ್ನ ರೀತಿಯಲ್ಲಿ ಗಣೇಶೋತ್ಸವ ಆಚರಣೆಗೆ ಸಿದ್ಧತೆ

ಬ್ರಹ್ಮಾವರದಲ್ಲಿ 41ನೇ ಸಾರ್ವಜನಿಕ ಶ್ರೀ ಗಣೇಶೋತ್ಸವದ ಗಣಪತಿ ವಿಗ್ರಹ ಮತ್ತು ಅಲಂಕಾರ ಈ ಬಾರಿ ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದ ವತಿಯಿಂದ ನಡೆಯಲಿದೆ. ಬೈಟ್: ಶೇಖರ ದೇವಾಡಿಗ ಅಧ್ಯಕ್ಷರು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ, ವಿಭಿನ್ನ ಕಾರ್ಯಕ್ರಮವನ್ನು ನಡೆಸಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದ ನಿರ್ಧರಿಸಿದ್ದಾರೆ. ಗಣಪತಿಗೆ ಕಿರೀಟವನ್ನು ಮತ್ತು ಚೌತಿಯ ಸಮಯದಲ್ಲಿ ಅಲಂಕಾರವನ್ನು ತಿರುಪತಿ ತಿಮ್ಮಪ್ಪನ ಮಾದರಿಯಲ್ಲಿ ಗಣಪತಿ ಮೂರ್ತಿಯನ್ನು ಸಿಂಗರಿಸುವ ಹೊಸ

ಬ್ರಹ್ಮಾವರ|| ನಾರಾಯಣ ಗುರುಗಳು ಹಿಂದುಳಿದ ವರ್ಗಗಳ ಶಕ್ತಿ: ಸಚಿವ ಮಧು ಬಂಗಾರಪ್ಪ

ಬ್ರಹ್ಮಾವರ ಬಿಲ್ಲವ ಸಮಾಜ ಸೇವಾ ಸಂಘದಿಂದ ಬ್ರಹ್ಮಾವರ ನಾರಾಯಣ ಗುರು ಸಭಾ ಭವನದ ಬಳಿ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಸೋಲೂರು ಮಠದ ವಿಖ್ಯಾತಾನಂದ ಸ್ವಾಮೀಜಿ ಅವರು ಶಿಲಾನ್ಯಾಸ ನೆರವೇರಿಸಿದರು. ಸಭಾ ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಮಹಾ ಪುರುಷರ ದಿನಾಚರಣೆಗೆ ಸರಕಾರಿ ರಜೆ ನೀಡಿದಲ್ಲಿ ಮಹಾಪುರಷರನ್ನು ಮರೆತು ರಜೆಯ ಮಜಾ ಹೆಚ್ಚುತ್ತದೆ.

ಪಡುಬಿದ್ರಿ: ಕಾರುಗಳೆರಡರ ಒವರ್ ಟೇಕ್ ಭರಾಟೆ, ಎರಡೂ ಕಾರುಗಳು ಪಲ್ಟಿ, ಒರ್ವನಿಗೆ ಗಾಯ..

ಒವರ್ ಟೇಕ್ ಭರಾಟೆಯಿಂದ ಮುನ್ನುಗ್ಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಎರಡೂ ಕಾರುಗಳು ಗದ್ದೆಗೆ ಉರುಳಿದ ಘಟನೆ ಪಡುಬಿದ್ರಿಯ ಅಲಂಗಾರು ಬಳಿ ನಡೆದಿದೆ. ಕುಂದಾಪುರ ಮೂಲದ ಐ ಟೆನ್ ಕಾರು ಹಾಗೂ ಕೋಟ ಮೂಲದ ಶಿಪ್ಟ್ ಕಾರು ಅಪಘಾತಕ್ಕೆ ತುತ್ತಾಗಿದೆ. ಎರಡೂ ಕಾರುಗಳಲ್ಲೂ ಚಾಲಕರು ಮಾತ್ರ ಇದ್ದು ಶಿಪ್ಟ್ ಕಾರಿನ ಚಾಲಕ ಗಾಯಗೊಂಡು ಮುಕ್ಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈ ಭಾಗದಲ್ಲಿ ಹೆದ್ದಾರಿ ಬಹಳ ಅಪಾಯಕಾರಿ ತಿರುವು

ಬೈಂದೂರು: ಪ್ರಧಾನಿ ಮೋದಿ ಹುಟ್ಟಿಹಬ್ಬದ ಪ್ರಯುಕ್ತ ಬಿಜೆಪಿಯಿಂದ ವಿವಿಧ ಕಾರ್ಯಕ್ರಮ

ಪ್ರಧಾನಿ ನರೇಂದ್ರ ಮೋದಿ ಅವರ 73ನೇ ಜನ್ಮದಿನದ ಪ್ರಯುಕ್ತ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬಿಜೆಪಿ ಬೈಂದೂರು ಮಂಡಲ ವತಿಯಿಂದ ದೇಶದಾದ್ಯಂತ ನಡೆಯುತ್ತಿರುವ ಸೇವಾ ಪಾಕ್ಷಿಕ ದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಬೈಂದೂರಿನ ಅಂಬಿಕಾ ಇಂಟರ್ನ್ಯಾಷನಲ್ ಹೋಟೆಲ್ ನ ಶಾರದಾ ಸಭಾಂಗಣದಲ್ಲಿ ನಡೆಯಿತು. ಚಿತ್ತೂರು ಮತ್ತು ತ್ರಾಸಿಯಲ್ಲಿ ಚಾ ಫೆ ಚರ್ಚಾ ಕಾರ್ಯಕ್ರಮವು ನಡೆಯಿತು.

ಕುಂದಾಪುರ|| ಗೋಪಾಡಿ ಅಂಬೇಡ್ಕರ್ ಭವನ ನಿರ್ಮಾಣದ ತನಿಖೆಯಾಗಲಿ: ಗೋಪಾಡಿ ಗ್ರಾಮಸಭೆಯಲ್ಲಿ ದಲಿತ ಮುಖಂಡರ ಆಗ್ರಹ

ಕುಂದಾಪುರ: ದಲಿತ ಸಮುದಾಯದ ಮನೆಗಳೇ ಇಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲಾಗಿದ್ದು, ದಲಿತರು ಭವನವನ್ನು ಬಳಸಬಾರದು ಎನ್ನುವ ದೃಷ್ಠಿಯಲ್ಲಿ ನಿರ್ಮಿಸಿದಂತಿದೆ. ಅಂಬೇಡ್ಕರ್ ಭವನ ನಿರ್ಮಾಣದ ಹಿಂದಿನ ಉದ್ದೇಶವೇನು? ಯಾರ ಲಾಭಕ್ಕಾಗಿ ಈ ಕಟ್ಟಡ ನಿರ್ಮಾಣ ಮಾಡಲಾಗಿದೆ ಎನ್ನುವುದರ ಕುರಿತು ಸಮಗ್ರ ತನಿಖೆ ನಡೆಯಲಿ ಎಂದು ದಸಂಸ ಮುಖಂಡ ರಾಜು ಬೆಟ್ಟಿನಮನೆ ಆಗ್ರಹಿಸಿದ್ದಾರೆ. ಗೋಪಾಡಿ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಜರುಗಿದ ಗ್ರಾಮ ಸಭೆಯಲ್ಲಿ ಮಾತನಾಡಿದ

ಕುಂದಾಪುರ: ಚಟುವಟಿಕೆಗಳಿಲ್ಲದೇ ಪಾಳು ಬಿದ್ದಿದೆ ಗೋಪಾಡಿ ಅಂಬೇಡ್ಕರ್ ಭವನ: ತನಿಖೆಗಾಗಿ ದಸಂಸ ಆಗ್ರಹ

ದಲಿತರಿಗಾಗಿಯೇ ಆಳುವ ಸರ್ಕಾರಗಳು ತರುತ್ತಿರುವ ಹೊಸ-ಹೊಸ ಯೋಜನೆಗಳು ಉಳ್ಳವರ ಪಾಲಾಗುತ್ತಿವೆ ಎಂಬ ಆರೋಪಗಳು ಆಗಾಗೆ ಕೇಳಿ ಬರುತ್ತಲೇ ಇವೆ. ಗೋಪಾಡಿಯಲ್ಲಿ ಕಳೆದ ಆರು ವರ್ಷಗಳ ಹಿಂದೆ ನಿರ್ಮಾಣಗೊಂಡ ಅಂಬೇಡ್ಕರ್ ಭವನ ಈ ಆರೋಪಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ. ಈ ಕುರಿತಾದ ಸ್ಪೆಶಲ್ ರಿಪೋರ್ಟ್ ನೋಡಿ. ದಲಿತರ ಸಬಲೀಕರಣಕ್ಕಾಗಿ ಸರ್ಕಾರ ನಾನಾ ಯೋಜನೆಗಳನ್ನು ಹೊರತರುತ್ತಿದೆ. ಅತ್ಯಂತ ತೀರ ಹಿಂದುಳಿದ ದಲಿತ ಸಮಾಜದ ಕಾರ್ಯ ಚಟುವಟಿಕೆಗಳಿಗೆ ಆಯಾ ಗ್ರಾ.ಪಂ ವ್ಯಾಪ್ತಿಯಲ್ಲಿ

ಉಡುಪಿ: ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು

ಕಂಟೇನರ್ ಲಾರಿಯಲ್ಲಿ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಮಲ್ಪೆಯ ತೊಟ್ಟಂನಲ್ಲಿ ನಡೆದಿದೆ.ಮೃತರನ್ನು ಒರಿಸ್ಸಾ ಮೂಲದ ಬಾಬುಲ್ಲ (38) ಹಾಗೂ ಭಾಸ್ಕರ್ (40) ಎಂದು ಗುರುತಿಸಲಾಗಿದೆ. ತೊಟ್ಟಂನಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಮನೆಗೆ ಗ್ರಾನೈಟ್ ತರಲಾಗಿತ್ತು.ಕಂಟೇನರ್ ಲಾರಿಯಲ್ಲಿದ್ದ ಗ್ರಾನೈಟ್ ಇಳಿಸುವಾಗ ಆಕಸ್ಮಿಕವಾಗಿ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬ್ರಹ್ಮಾವರ: ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿರುವ ಪ್ರಸನ್ನ ಆಚಾರ್ಯ-ಚಿಕಿತ್ಸೆಗೆ ಬೇಕಾಗಿದೆ ದಾನಿಗಳ ನೆರವು

ಬ್ರಹ್ಮಾವರ : ಉಡುಪಿಯ ಅಂಬಾಗಿಲಿನ ಪ್ರಸನ್ನ ಆಚಾರ್ಯ ಅವರು ಕಳೆದ 3 ವರ್ಷದಿಂದ ಮೂತ್ರ ಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದು, ತೀರಾ ಸಂಕಷ್ಟದ ಜೀವನವನ್ನು ನಡೆಸುತ್ತಿದ್ದಾರೆ. ಅಲ್ಯೂಮಿನಿಯಂ ಫ್ಯಾಭ್ರಿಕೇಶನ್ ಕೆಲಸ ಮಾಡಿಕೊಂಡಿದ್ದ ಪ್ರಸನ್ನ ಆಚಾರ್ಯ ಅವರು ಆರೋಗ್ಯ ಸಮಸ್ಯೆಯಿಂದಾಗಿ ಕೆಲಸ ಮಾಡಲಾಗದೆ ದಯಾನೀಯ ಸ್ಥಿತಿಯಲ್ಲಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೂತ್ರಪಿಂಡದ ಬದಲಾವಣೆಗೆ 8 ಲಕ್ಷ ರೂಪಾಯಿ ವೆಚ್ಚ ತಗಲುವುದಾಗಿ ವೈದ್ಯರು