ಬ್ರಹ್ಮಾವರ : ವಿಶ್ವಕ್ಕೆ ಅಚ್ಚರಿ ಮೂಡಿಸಿದ ಭಾರತದ ಚಂದ್ರಯಾನದ ಯಶಸ್ಸಿಗೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಸಂಭ್ರಮಾಚರಣೆ ನಡೆಸಿದ್ದಾರೆ.ಬ್ರಹ್ಮಾವರ ಫ್ರೆಂಡ್ಸ್ ಮತ್ತು ಡೈಮಂಡ್ ಜಿಮ್ನ ಸದಸ್ಯರು ಭಾರತದ ಹೆಮ್ಮೆಯ ವಿಜ್ಞಾನಿಗಳ ತಂಡದ ಶ್ರಮಕ್ಕೆ, ಇಸ್ರೋ ಸಂಸ್ಥೆಗೆ, ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಮತ್ತು ಭಾರತ ಮಾತೆಗೆ ಜೈ ಕಾರ ಹಾಕಿ ಪಟಾಕಿ
ಬ್ರಹ್ಮಾವರದ ಹಾನಸ ಅರೆಮಾದನಹಳ್ಳಿ ಸುಜ್ಞಾನ ತೀರ್ಥ ಮಹಾ ಸ್ವಾಮೀಜಿಯವರ 41 ನೇ ಆರಾಧನಾ ಮಹೋತ್ಸವ ನಡೆಯಿತು. ಉಡುಪಿ ಜಿಲ್ಲೆಯ ಕೊಕ್ಕರ್ಣೆಬಳಿಯ ಶಾಖಾ ಮಠ ಕಜ್ಕೆಯಲ್ಲಿ ಗುರುಪರಂಪರೆಯ ಶಿವಸುಜ್ಞಾನ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ ಆಚರಣೆಯ ಸಂದರ್ಭ ಜರುಗಿತು. ಈ ಸಂದರ್ಭ ಶಿವಸುಜ್ಞಾನ ತೀರ್ಥ ಸ್ವಾಮೀಜಿಯವರು ಮಾತನಾಡಿ, ಇತಿಹಾಸ ಇರುವ ಗುರು ಪರಂಪರೆಯಲ್ಲಿ, ಮೂಲ ಗುರುಗಳು ದೇಶದಾದ್ಯಂತ ನಡೆದಾಡಿದ ಮತ್ತು ಪವಾಡಗಳ ಕುರಿತು ಮತ್ತು ಹಾಸನದ ಬಳಿಯ
ಭಾರತದ ಚಂದ್ರಯಾನ-೩ ಯಶಸ್ವಿಯಾದ ಹಿನ್ನೆಲೆಯಲ್ಲಿ ಅದಕ್ಕೆ ಕಾರಣೀಕರ್ತರಾದ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಗೆ ಗೌರವ ಸೂಚಕವಾಗಿ ಉಪ್ಪುಂದ ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗದ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ISRO ಎಂಬ ರಚನಾ ವಿನ್ಯಾಸವನ್ನು ರಚಿಸಿ ಅಭಿನಂದನೆ ಸಲ್ಲಿಸಲಾಯಿತು. ಕಳೆದ ಬಾರಿ ಇದೇ ಸಂಸ್ಥೆಯ ವಿದ್ಯಾರ್ಥಿಗಳು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ೭೫ ಎಂಬ ರಚನಾ ವಿನ್ಯಾಸವನ್ನು ರಚಿಸಿ ರಾಜ್ಯಾದ್ಯಂತ ಗಮನಸೆಳೆದಿದ್ದರು.
ಇಸ್ರೋ ನೇತೃತ್ವದಲ್ಲಿ ಉಡಾವಣೆಯಾದ ಚಂದ್ರಯಾನ – 3 ಇದರ ಯಶಸ್ವಿ ಕಕ್ಷೆ ತಲುಪುವಿಕೆಗೆ ಆಶಿಸಿ ಮತ್ತು ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಿ ಪರ್ಯಾಯ ಉಡುಪಿ ಶ್ರೀ ಕೃಷ್ಣಾಪುರ ಮಠದ ಆಡಳಿತಕ್ಕೊಳಪಟ್ಟಿರುವ ಕಾಪು ದಂಡತೀರ್ಥ ಮಠದಲ್ಲಿ ನವಗ್ರಹ ಯಾಗ ಪುರಸ್ಸರ ಚಂದ್ರಶಾಂತಿ ನಡೆಯಿತು. ದಂಡತೀರ್ಥ ಮಠದ ಆಡಳಿತ ಮೊಕ್ತೇಸರ ಡಾ. ಸೀತಾರಾಮ್ ಭಟ್ ನೇತೃತ್ವದಲ್ಲಿ, ವೇದ ಮೂರ್ತಿ ನಾಗಭೂಷಣ್ ಭಟ್, ವಾಗೀಶ್ ಭಟ್, ಕ್ಷೇತ್ರದ ಅರ್ಚಕರಾದ ಶ್ರೀನಿವಾಸ್ ಭಟ್ ಪೌರೋಹಿತ್ವದಲ್ಲಿ
ಉಜಿರೆ, ಆ.18: ಕನ್ನಡ ಸಾಹಿತ್ಯದ ಪ್ರಾಚೀನತೆಯನ್ನು ಗಮನಿಸಿದಾಗ ಕಾವ್ಯ ಮತ್ತು ಶಾಸ್ತ್ರ ಎಂಬ ಎರಡು ಬಗೆಯ ಸ್ರೋತ (ಪ್ರವಾಹ) ಗಳನ್ನು ಕಾಣಬಹುದಾಗಿದ್ದು, ಈ ಎರಡೂ ನೆಲೆಗಳಲ್ಲಿ ಕನ್ನಡ ಭಾಷೆಯು ಪರಿಪುಷ್ಟವಾಗಿ ಬೆಳೆದಿದೆ. 19ನೆಯ ಶತಮಾನದಲ್ಲಿಯೇ ಕನ್ನಡದಲ್ಲಿ ಅತ್ಯದ್ಭುತ ಸಾಹಿತ್ಯಿಕ ಅಧ್ಯಯನದ ಕೆಲಸಗಳು ಪ್ರಾರಂಭವಾದವು ಎಂದು ಮುಂಬೈ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ. ತಾಳ್ತಜೆ ವಸಂತ ಕುಮಾರ ಅವರು ಹೇಳಿದರು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ
ಮಕ್ಕಳಲ್ಲಿ ಅಡಕವಾಗಿರುವ ಸೂಕ್ತ ಪ್ರತಿಭೆಯನ್ನು ಹೊರಗೆಡಹುವ ಉದ್ಧೇಶದಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಹಳೆ ವಿದ್ಯಾರ್ಥಿಗಳು ಸಹಿತ ದಾನಿಗಳ ಸಹಕಾರದಿಂದ ಎರ್ಮಾಳು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ ಎಂಬುದಾಗಿ ಮುಖ್ಯ ಶಿಕ್ಷಕಿ ವಿನೋದ ಹೇಳಿದ್ದಾರೆ. ಅವರು ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕ್ಲಸ್ಟರ್ ನ
ದೇಶದ ಹೆಮ್ಮೆಯ ಇಸ್ರೋದ ಚಂದ್ರಯಾನ-3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಲು ಕ್ಷಣಗಣನೆ ಆರಂಭವಾಗಿದೆ. ಚಂದ್ರಯಾನ-3 ಯಶಸ್ವೀಗೆ ದೇಶಾದ್ಯಂತ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಅವರು ಚಂದ್ರಯಾನ-3 ಯಶಸ್ವಿಗೆ ಶುಭ ಹಾರೈಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕೇಂದ್ರದ ಸಚಿವೆ ಶೋಭಾ ಕರಂದ್ಲಾಜೆ ಅವರು, ಇಸ್ರೋ ಭಾರತದ ಹೆಮ್ಮೆಯ ಸಂಸ್ಥೆ.
ಗಾಂಧಿ ಗ್ರಾಮ ಪುರಸ್ಕಾರ ಪಡೆದಿರುವ ವಂಡ್ಸೆ ಗ್ರಾಮ ಪಂಚಾಯಿತಿ ಸದ್ಯ ಮತ್ತೆ ಸುದ್ದಿಯಲ್ಲಿದೆ. ಆದರೆ ಈ ಬಾರಿ ಯಾವುದೇ ಪ್ರಶಸ್ತಿಯಿಂದ ಪಂಚಾಯತ್ ಗುರುತಿಸಿಕೊಳ್ಳುತ್ತಿಲ್ಲ ಬದಲಿಗೆ ತ್ಯಾಜ್ಯ ವಿಲೇವಾರಿ ಘಟಕದ ಅಸಮರ್ಪಕ ನಿರ್ವಹಣೆ ವಿಚಾರವಾಗಿ ಸುದ್ದಿಯಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಉತ್ತಮ ತ್ಯಾಜ್ಯ ವಿಲೇವಾರಿ ಮಾಡಿದ್ದ ವಂಡ್ಸೆ ಗ್ರಾಮ ಪಂಚಾಯತ್ ಎಸ್ ಎಲ್ ಆರ್ ಎಂ ಘಟಕದ ನಿರ್ವಹಣೆಯ ಲೋಪದ ಕುರಿತು ಆರೋಪ ಕೇಳಿ ಬಂದಿದೆ. ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ
ಬ್ರಹ್ಮಾವರ: ಹಿಂದಿನ ಬಿಜೆಪಿ ರಾಜ್ಯ ಸರಕಾರದ ಅವಧಿಯಲ್ಲಿ ಆರಂಭವಾಗಿದ್ದ ಕೇಂದ್ರ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆ “ಅಗ್ನಿ ಪಥ್” ಸೇನಾಪೂರ್ವ ತರಬೇತಿಯ ಮರು ಚಾಲನೆಗೆ ಕಾಂಗ್ರೆಸ್ ರಾಜ್ಯ ಸರಕಾರ ಅಸ್ತು ಎಂದಿದೆ. ರಾಜ್ಯದ ಕರಾವಳಿಯ 3 ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡದಲ್ಲಿ ಕಳೆದ ವರ್ಷ “ಅಗ್ನಿ ಪಥ್” ಸೇನಾ ಪೂರ್ವ ತರಬೇತಿಗೆ ಚಾಲನೆ ನೀಡಲಾಗಿದ್ದು, ಈಗಾಗಲೇ 2 ತಂಡ ತರಬೇತಿ ಮುಗಿಸಿ ಅವರಲ್ಲಿ ಅನೇಕರು ಸೇನೆ
ಕಾಪು ತಾಲೂಕಿನ ಮಜೂರು-ಮಲ್ಲಾರು ಗೋವರ್ಧನ ಭಟ್ ಅವರ ಮನೆಯಲ್ಲಿ ಮನೆಯವರೆಲ್ಲರೂ ಜತೆ ಸೇರಿ ಜೀವಂತ ನಾಗರ ಹಾವಿಗೆ ಆರತಿ ಬೆಳಗಿ ನಾಗರ ಪಂಚಮಿ ಹಬ್ಬವನ್ನು ಆಚರಿಸಿದರು. ಗಾಯಗೊಂಡ ನಾಗರ ಹಾವುಗಳನ್ನು ಮನೆಗೆ ತಂದು ಶುಶ್ರೂಷೆ ನೀಡಿ, ಆರೈಕೆ ಮಾಡುವ ಉರಗ ಪ್ರೇಮಿ ಮಜೂರು ಗೋವರ್ಧನ ಭಟ್ ಅವರು ಪ್ರತೀ ವರ್ಷ ತಮ್ಮ ಮನೆಯಲ್ಲಿ ಶುಶ್ರೂಷೆಯಲ್ಲಿರುವ ನಾಗರ ಹಾವಿಗೆ ತನು ಎರೆದು, ಆರತಿ ಬೆಳಗಿ ನಾಗರ ಪಂಚಮಿ ಹಬ್ಬವನ್ನು ಆಚರಿಸುತ್ತಾರೆ. ಈ ಬಾರಿ ಮನೆಯಲ್ಲಿ ಎರಡು ನಾಗರ