ಬೈಂದೂರು: ಜಿಲ್ಲೆಯಲ್ಲಿ ನಾಲ್ಕು ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಬಿಜೆಪಿ ಪಕ್ಷ ತನ್ನ ಹೊಸ ಪ್ರಯೋಗದಲ್ಲಿ ಖಂಡಿತ ಯಶಸ್ಸು ಸಾಧಿಸಲಿದೆ. ಮಾತ್ರವಲ್ಲ ರಾಜ್ಯದಲ್ಲಿಯೂ ಬಿಜೆಪಿ ಪ್ರಚಂಡ ಗೆಲುವು ದೊರೆಯಲಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮದ್ವರಾಜ್ ಹೇಳಿದರು. ಅವರು ಮಂಗಳವಾರ ಬೈಂದೂರು ಬಿಜೆಪಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ
ಇಡೀ ಕ್ಷೇತ್ರದ ರಾಜಕಾರಣದ ದಿಕ್ಕನ್ನು ಬದಲಾಯಿಸುವ ಶಕ್ತಿ ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗಿದೆ. ಆ ಹಿನ್ನೆಲೆಯಲ್ಲಿ ಪ್ರಣಾಳಿಕೆಯನ್ನು ಮನೆ ಮನೆಗೂ ತಲುಪಿಸುವ ಕಾರ್ಯ ವಾಗಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಭಾರತೀಯ ಜನತಾ ಪಕ್ಷ ಬೈಂದೂರು ಮಂಡಲದ ವತಿಯಿಂದ ತ್ರಾಸಿಯ ಕೊಂಕಣ ಖಾರ್ವಿ ಸಭಾಭವನದಲ್ಲಿ ನಡೆದ ಪಂಚಾಯತ್ ಪ್ರತಿನಿಧಿಗಳ ಸಮಾವೇಶದಲ್ಲಿ ಪಕ್ಷದ ಬೈಂದೂರು ಕ್ಷೇತ್ರದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದರು. ಬಿಜೆಪಿ ಸರ್ಕಾರ ಇವತ್ತು
ಕಾರ್ಕಳ, ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ವೇಗವನ್ನು ಹೆಚ್ಚಿಸಿದೆ. ಇಂದು ಕಾರ್ಕಳದಲ್ಲಿ 210 ಬೂತ್ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರು ಏಕಕಾಲದಲ್ಲಿ ಬೂತ್ ಮಟ್ಟದಲ್ಲಿ ಮತಯಾಚನೆಯಲ್ಲಿ ತೊಡಗಿದರು.
ಮತಯಾಚನೆ ಸಂದರ್ಭದಲ್ಲಿ ಕಾಪು ಕ್ಷೇತ್ರ ಮಟ್ಟುವಿನಲ್ಲಿ ರಸ್ತೆ ಮಧ್ಯದಲ್ಲಿ ತಲೆ ತಿರುಗಿ ಬಿದ್ದಿದ್ದ ಮಹಿಳೆಯನ್ನು ಎತ್ತಿ ಉಪಚರಿಸಿ ಮಾನವೀಯತೆ ಮೆರೆದಿದ್ದಾರೆ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ಕುಮಾರ್ ಸೊರಕೆ. ಮಾನವೀಯತೆ , ಮ್ರದುತ್ವ, ಉಪಚಾರ, ಸಂತೈಸುವಿಕೆ ಇವೆಲ್ಲವೂ ರಾಜಕೀಯ ರಂಗದಲ್ಲಿ ಕಾಣಿಸದ ಈ ದಿನಗಳಲ್ಲಿ ಕಾಪು ಕ್ಷೇತ್ರದ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಯವರು ರಾಜಕೀಯ ರಂಗಕ್ಕೆ ಮಾದರಿಯಾಗಿದ್ದಾರೆ. ಕಾಪು ಕ್ಷೇತ್ರದ ಮಟ್ಟು
ಕಾಂಗ್ರೆಸ್ ಪಕ್ಷವು ದೇಶದ ಸುರಕ್ಷತೆಯನ್ನು ವೋಟ್ ಬ್ಯಾಂಕ್ ಆಗಿ ಪರಿವರ್ತಿಸಲು ರಾಜಕೀಯವಾಗಿ ಆಟವಾಡುತ್ತಿದೆ. ಬಿಜೆಪಿ ಪಕ್ಷವು ಯಾವತ್ತೂ ವೋಟ್ ಬ್ಯಾಂಕ್ ರಾಜಕೀಯದಲ್ಲಿ ನಂಬಿಕೆ ಇಟ್ಡಿಲ್ಲ ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಅವರು ಕಟಪಾಡಿಯ ಗ್ರೀನ್ ವ್ಯಾಲಿ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು, ಸಾಮಾಜಿಕ ನ್ಯಾಯದಲ್ಲಿ ಗುರುತರವಾದ ಗುರುಗಳಾಗಿ ಧರ್ಮರಕ್ಷಣೆಯನ್ನು ಮಾಡಿದವರು ನಾರಾಯಣಗುರುಗಳು. ಪ್ರವೀಣ್ ನೆಟ್ಟಾರು
ಕಾರ್ಕಳ, ಮಿಯಾರು ಗ್ರಾಮದ ಜೋಡುಕಟ್ಟೆ ಸಂಜೆ ಕಾಂಗ್ರೆಸ್ ಪಕ್ಷದ ಬಹಿರಂಗ ಪ್ರಚಾರ ಸಭೆಯು ನಡೆಯಿತು ಸಭೆಯನ್ನು ಉದ್ದೇಶಿಸಿ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶುಭದ ರಾವ್ ಮಾತನಾಡಿ ಮುನಿಯಾಲು ಉದಯಶೆಟ್ಟಿ ಯವರೇ ಕಾರ್ಕಳದ ಕಾಂಗ್ರೆಸ್ ಅಭ್ಯರ್ಥಿಯಾಗಬೇಕೆಂದು ಬಹುಜನರ ಬೇಡಿಕೆಯಾಗಿತ್ತು. ಆ ಬೇಡಿಕೆ ಇಂದು ನೆರವೇರಿದೆ. ಉದಯಣ್ಣ ಗೆದ್ದರೆ ಕಾರ್ಕಳ ಜನತೆ ಗೆದ್ದಂತೆ. ಉದಯಣ್ಣ ಗೆದ್ದರೆ ಕಾರ್ಕಳದ ಸೌಹಾರ್ದ ಗೆದ್ದಂತೆ. ಎಂದು ನಾವು ಅರ್ಥ ಮಾಡಿಕೊಳ್ಳಬೇಕೆಂದು
“ನಮ್ಮಕನಸಿನ ಕಾಪು” ಎಂಬ ಶಿರ್ಷಿಕೆಯಡಿಯಲ್ಲಿ ಕಾಪು ಕ್ಷೇತ್ರದ ಅಭಿವೃದ್ಧಿ ಯೋಜನೆಗೆ ಪೂರಕವಾದ ಪ್ರಣಾಳಿಕೆ ಎಂಬುದಾಗಿ ಸೊರಕೆ ಬಿಡುಗಡೆಗೊಳಿಸಿದರು.ಕಾಪು ಕಾಂಗ್ರೆಸ್ ಕಛೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೊರಕೆ, ಪ್ರಪ್ರಥಮವಾಗಿ ನಿವೇಶನ ರಹಿತರಿಗೆ ನಿವೇಶನ ನೀಡುವ ಕಾರ್ಯಕ್ರಮ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಒಲವು, ಮಹಿಳಾ ಗುಂಪುಗಳಿಗೆ ನಾಲ್ಕು ಶೇಕಡಾ ಬಡ್ಡಿದರದಲ್ಲಿ ಸಾಲ, ಕುಡಿಯುವ ನೀರಿನ ಯೋಜನೆ, ಕಸ ವಿಲೇವಾರಿಗೆ ಒತ್ತು,
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭೆ ಕ್ಷೇತ್ರದ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಡಗುಡ್ಡೆಯಂಗಡಿ, ಬಡಾಕೆರೆ, ಸೇನಾಪುರ ಮತ್ತು ತಾರಿಬೇರು ಭಾಗದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತಕರು ಹಾಗೂ ನೂರಾರು ಯುವಕರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ಪಕ್ಷದ
ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಮುನಿಯಾಲ್ ರವರು ಬೆಳ್ಮಣ್ ನಲ್ಲಿ ಪಾದಯಾತ್ರೆಯ ಮೂಲಕ ಮತಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಊರಿನವರು ಪಾಲ್ಗೊಂಡಿದ್ದರು.
ಕಾರ್ಕಳ ಕ್ಷೇತ್ರದಲ್ಲಿ ಕಳೆದ ೫ ವರ್ಷದ ಅವಧಿಯಲ್ಲಿ ಅಭಿವೃದ್ಧಿಯ ನವ ಶಕ್ತಿಯೇ ನಡೆದಿದೆ. ಅದನ್ನು ಬೈಲೂರಿನ ಉಮಿಕ್ಕಳ ಬೆಟ್ಟದ ಪರಶುರಾಮ ಪ್ರತಿಮೆಯುಳ್ಳ ಥೀಮ್ ಪಾರ್ಕ್ಗೆ ಭೇಟಿ ನೀಡಿದೆ. ನಿಜಕ್ಕೂ ಅದನ್ನು ಕಂಡು ದಿಗ್ಬ್ರಮೆಗೊಂಡೆ, ನೂರಕ್ಕೆ ನೂರು ದೂರದೃಷ್ಟಿಯ ದೃಷ್ಟಿಕೋನದ ಯೋಜನೆಯಿದು ಎಂದು ಮುಂಬಯಿ ಬೊರಿವಲಿಯ ಕ್ಷೇತ್ರದ ಸಂಸದ ಗೋಪಾಲ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಕಾರ್ಕಳದ ಮಾಳ ಗ್ರಾಮದಲ್ಲಿ ಮತಯಾಚಿಸಿ ಮಾತನಾಡಿದರು ಕೈಗೊಂಡು ಮಾತನಾಡಿದರು.