ಅಸೈಗೋಳಿ ಮೆರ್ಸಿ ಫ್ರೆಂಡ್ಸ್ ವತಿಯಿಂದ ‘ಕ್ರಿಸ್ಮಸ್ ಟ್ರೋಫಿ-2023′ ಕ್ರೀಡಾಕೂಟ ಅಸೈಗೋಳಿ ಐಟಿಐ ಕಾಲೇಜು ಮೈದಾನದಲ್ಲಿ ನಡೆಯಿತು. ಕೊಣಾಜೆ ಮಂಗಳ ಗ್ರಾಮೀಣ ಯುವಕ ಸಂಘದ ಮಾಜಿ ಅಧ್ಯಕ್ಷ ಅಬ್ದುಲ್ ನಾಸೀರ್ ಕೆ.ಕೆ. ಕ್ರಿಸ್ಮಸ್ ಟ್ರೋಫಿ-2023’ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಏಸು ಕ್ರಿಸ್ತನ ಜನ್ಮದಿನ ಪ್ರಯುಕ್ತ
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಸುವರ್ಣ ಮಹೋತ್ಸವ ಸಮಿತಿ ಯುವಕ ಮಂಡಲ ಇರಾ ವತಿಯಿಂದ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾವು ಇರಾ ಶಾಲಾ ವಠಾರದಲ್ಲಿ ನಡೆಯಿತು. ಯುವಕ ಮಂಡಲ ಇರಾ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದೆ. ಸಾಮಾಜಿಕ ಕಾರ್ಯಕ್ರಮಗಳ ಜೊತೆಗೆ ಕ್ರೀಡೆಗೂ ಹೆಚ್ಚಿನ ಒತ್ತನ್ನೂ ನೀಡುತ್ತಿದ್ದು, ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾವನ್ನು ಆಯೋಜಿಸಿದ್ದರು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿರು.
ಉಳ್ಳಾಲ ನಗರಸಭೆ, ಸೋಮೇಶ್ವರ ಪುರಸಭೆ, ಕೋಟೆಕಾರು ಪಟ್ಣಣ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯೋಜನೆಗೆ 150 ಕೋಟಿ ರೂ, ಉಳ್ಳಾಲ ತಾಲೂಕು ಗ್ರಾಮೀಣ ಭಾಗದ ಕುಡಿಯುವ ನೀರಿಗೆ ಎರಡನೇ ಹಂತದ ಯೋಜನೆ 210 ಕೋಟಿ ರೂ ಸಲ್ಲಿಕೆಯಾಗಿದ್ದು, ಹಣಕಾಸು ಇಲಾಖೆಯಿಂದ ಅನುಮತಿ ಪಡೆದು ಸಚಿವ ಸಂಪುಟದ ಸಭೆಯಲ್ಲಿ ಅಂಗೀಕಾರವಾಗಲಿದ್ದು, ಮುಂದಿನ ಎರಡು ವರ್ಷದೊಳಗಡೆ ಮಂಗಳೂರು ವಿಧಾನಸಭಾ ಕ್ಷೇತ್ರದ್ಯಾಂತ ಕುಡಿಯುವ ನೀರಿಗೆ ಶಾಶ್ವತ ಪರಿಹಾರ ದೊರಕಲಿದೆ ಎಂದು ವಿಧಾನಸಭಾ ಸ್ಪೀಕರ್
ಉಳ್ಳಾಲ: ತೊಕ್ಕೊಟ್ಟು ಭಾಗದ ಎರಡು ಹಾಗೂ ಕುತ್ತಾರಿನಲ್ಲಿ ಒಂದು ಅಂಗಡಿಗೆ ವಂಚಿಸಿದ ಆರೋಪಿಯ ಗುರುತು ಹಿಡಿದಿರುವ ಅಂಗಡಿ ಮಾಲೀಕರು, ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ಕಸಬಾ ಬೆಂಗ್ರೆ ನಿವಾಸಿ, ಹಲವು ವಂಚನೆ ಪ್ರಕರಣಗಳ ಆರೋಪಿ ಗೂಡ್ಸ್ ಮುನೀರ್ ಎಂಬಾತನ ವಿರುದ್ಧ ದೂರು ದಾಖಲಿಸಿದ್ದು, ಪೆÇಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಕಳೆದ ಅಕ್ಟೋಬರ್ ತಿಂಗಳಲ್ಲಿ ತೊಕ್ಕೊಟ್ಟು ಓವರ್ ಬ್ರಿಡ್ಜ್ನ ಅಯ್ಯಂಗಾರ್ ಬೇಕರಿ ಮತ್ತು ಸಮೀಪದ ಪೂರ್ಣಿಮ ಎಂಬವರ ದಿನಸಿ
ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಉಳ್ಳಾಲ ತಾಲೂಕಿನ ಮುಡಿಪು ಮೂಳೂರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕೊಲ್ನಾಡು ನಿವಾಸಿಯಾಗಿರುವ ಅಬ್ದುಲ್ ರಹಿಮಾನ್(42) ಮತ್ತು ಬೆಳ್ತಂಗಡಿ ತಾಲೂಕಿನ ಇಳಂತಿಲಾ ಗ್ರಾಮದ ಮೊಹಮ್ಮದ್ ಜಿಯಾದ್ (22) ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 1 ಲಕ್ಷ 75 ಸಾವಿರ ರೂ ಮೌಲ್ಯದ 35 ಗ್ರಾಂ
ಉಳ್ಳಾಲ: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡಿಪು ಸಮೀಪದ ಕಾರಿನ ಗ್ಯಾರೇಜ್ ನಲ್ಲಿ ನಡೆದಿದೆ.ಕಂಕನಾಡಿಯ ಕಾಂಚನ ಷೋರೂಮಿನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಮುಡಿಪು ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡವರು. ಜಯ ಎಂಬವರಿಗೆ ಸೇರಿದ ಮುಡಿಪುವಿನ ಕಾರಿನ ಗ್ಯಾರೇಜ್ ಒಳಗಡೆ ಕಬ್ಬಿಣದ ರಾಡಿಗೆ ನೇಣು ಹಾಕಿಕೊಂಡು ಕೃತ್ಯವೆಸಗಿದ್ದಾರೆ. ನ.20 ರಂದು ಕೆಲಸಕ್ಕೆ ಹೋದವರು ತಡರಾತ್ರಿಯಾದರೂ ಮನೆಗೆ ವಾಪಸ್ಸಾಗದೇ
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಸುವರ್ಣ ಮಹೋತ್ಸವ ಸಮಿತಿಯ ಯುವಕ ಮಂಡಲ ಇರಾ ವತಿಯಿಂದ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಹಾಗೂ ಅಂಧರ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಇರಾದ ಬಾವಬೀಡು ಗೋಪಿ ಎಸ್. ಭಂಡಾರಿ ಗ್ರಾಮೀಣ ಆರೋಗ್ಯ ಮತ್ತು ತರಬೇತಿ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು ನಿಟ್ಟೆ ಯುನಿವರ್ಸಿಟಿಯ ಡೀನ್ ಡಾ. ಸತೀಶ್ ಕುಮಾರ್
ಉಳ್ಳಾಲ: ಮಂಗಳೂರು ದಸರಾ ತೆರಳುತ್ತಿದ್ದ ಬೈಕ್ ಚಾಲಕನ ಧಾವಂತಕ್ಕೆ ರಸ್ತೆ ದಾಟುತ್ತಿದ್ದ ಪಾದಚಾರಿ ಮಹಿಳೆ ಸಾವನ್ನಪ್ಪಿರುವ ಘಟನೆ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ. ಬಾಗಲಕೋಟೆ ಬಾದಾಮಿ ಲಖಮಾಪುರ ನಿವಾಸಿ ಶಿವಪ್ಪ ದೊಡ್ಡಮನಿ ಎಂಬವರ ಪತ್ನಿ ಎಲ್ಲವ್ವ ಶಿವಪ್ಪ ದೊಡ್ಡಮನಿ (50) ಮೃತ ಮಹಿಳೆ. ಶಿವಪ್ಪ ಅವರು ಕೂಲಿಕಾರ್ಮಿಕರಾಗಿದ್ದು, ಸಂಜೆ ನಂತರ ಬಬ್ಬುಕಟ್ಟೆ ಬಳಿಯ ಸೋಝಾ ಇಲೆಕ್ಟ್ರಿಕಲ್ಸ್ ಬಳಿಯ ಮನೆಯಲ್ಲಿ ವಾಚ್ ಮೆನ್ ವೃತ್ತಿ
ಉಳ್ಳಾಲ ಕ್ಷೇತ್ರದಲ್ಲಿ ಭಾರೀ ಅಭಿವೃದ್ಧಿಯಾಗಿದೆ ಎಂದು ಒಂದು ಕಡೆ ಡಂಗುರ ಸಾರುತ್ತಿದ್ದರೆ,ಮತ್ತೊಂದು ಕಡೆ ಒಳರಸ್ತೆಗಳ ಅವ್ಯವಸ್ಥೆ, ಚರಂಡಿಗಳ ದುರಾವಸ್ಥೆ, ಆರೋಗ್ಯ ಕ್ಷೇತ್ರಗಳ ಸಮಸ್ಯೆಗಳು, ಆಡಳಿತಾತ್ಮಕ ಸಂಕಷ್ಟಗಳು,ಸಾಮಾಜಿಕ ಅನಾಚಾರಗಳನ್ನು ಕ್ಷೇತ್ರದ ಜನತೆ ನಿರಂತರವಾಗಿ ಅನುಭವಿಸುತ್ತಿದ್ದಾರೆ. ಒಳರಸ್ತೆಗಳಲ್ಲಿ ಚೆಂಬುಗುಡ್ಡ ದಾರಂದಬಾಗಿಲು ಪಂಡಿತ್ ಹೌಸ್ ಸಂಪರ್ಕ ರಸ್ತೆಯಂತೂ ಕಳೆದ 25 ವರ್ಷಗಳಿಂದ ತೇಪೆ ಕಾರ್ಯಕ್ಕೆ ಒಗ್ಗಿ ಹೋಗಿದೆಯೇ ಹೊರತು ಸಂಪೂರ್ಣ
ಉಳ್ಳಾಲ: ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಆರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ನೇತ್ರಾವತಿ ನದಿಯ ಹೊಸಸೇತುವೆಯಲ್ಲಿ ಸಂಭವಿಸಿದೆ. ಅಕಾಲಿಕವಾಗಿ ಸುರಿದ ಮಳೆಯಿಂದ ವಾಹನಗಳು ಒಂದರ ಹಿಂದೆಯಂತೆ ಅಪ್ಪಳಿಸಿರುವುದಾಗಿ ತಿಳಿದುಬಂದಿದೆ. ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಲಾರಿ ಸೇತುವೆ ಮಧ್ಯಭಾಗದಲ್ಲಿ ಕೆಟ್ಟು ನಿಂತಿದೆ. ಇದೇ ವೇಳೆ ಭಾರೀ ಮಳೆ ಆರಂಭವಾಗಿತ್ತು. ನಿಯಂತ್ರಣ ಕಳೆದುಕೊಂಡ ಆಲ್ಟೋ ಕಾರು ಲಾರಿ ಹಿಂಬದಿಗೆ ಢಿಕ್ಕಿ ಹೊಡೆದಿದೆ.