ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು ಬಳಿ ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52) ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೂಲತ: ಬಂಟ್ವಾಳ ನೆಟ್ಲದವರಾಗಿದ್ದ ಇವರು ಭಾನುವಾರ ಮಧೂರಿನಿಂದ ಕುಟುಂಬದ ಮನೆ ಪಿಲಾರು ಅರಮನೆಯಲ್ಲಿ
ಉಳ್ಳಾಲ: ಜಿಲ್ಲೆಯ ಪ್ರತಿಷ್ಠಿತ ಸುದ್ದಿವಾಹಿನಿ ವಿ4 ನ್ಯೂಸ್ ಹಾಗೂ ಇರಾ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಿತಿ ಸಹಯೋಗದಲ್ಲಿ ಸನ್ ಪ್ರೀಮಿಯಮ್ ರಿಫೈಂಡ್ ಸನ್ ಫ್ಲವರ್ ಆಯಿಲ್ ಪ್ರೆಸೆಂಟ್ಸ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ -4ರ ಪ್ರದರ್ಶನವು ಸೆ.24ರಂದು ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಒಟ್ಟು 12 ತಂಡಗಳು ಕಾಮಿಡಿ ಪ್ರದರ್ಶನ ನೀಡಲಿದೆ. ಎಸ್ಸೆನ್ ಕುಡ್ಲ ಕುಸಾಲ್, ಕ್ಲಿಂಗ್ ಕೃಷ್ಣ ಕೆಪೆ ಜೈಮಾತಾ,
ಮಂಗಳೂರು ವಿಶ್ವವಿದ್ಯಾನಿಲಯ ಆವರಣದಲ್ಲಿರುವ ಮಂಗಳಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗಣೇಶೋತ್ಸವಕ್ಕೆ ಕೇಳಿಬಂದ ಅಪಸ್ವರಗಳ ನಡುವೆಯೂ ಅದೇ ಸ್ಥಳದಲ್ಲಿ ಉಪಕುಲಪತಿಗಳ ಸಮಕ್ಷಮದಲ್ಲಿ ಪರಿಸರಪೂರಕ ಗಣೇಶನ ವಿಗ್ರಹವನ್ನಿಟ್ಟು ಗಣೇಶೋತ್ಸವ ಆಚರಣೆ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಕೊಣಾಜೆ ವಿಶ್ವವಿದ್ಯಾನಿಲಯದ ಕ್ಯಾಂಪಸ್ ಸುತ್ತ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ನಸುಕಿನ ಜಾವ ಬಂದೋಬಸ್ತ್ ನಡುವೆ ಗಣೇಶನ ವಿಗ್ರಹವನ್ನು ಮಂಗಳ ಸಭಾಂಗಣಕ್ಕೆ ತರಲಾಯಿತು. ಪರಿಸರ
ಉಳ್ಳಾಲ : ಉಡುಪಿಯ ರವಿ ಕಟಪಾಡಿ ಮಾದರಿಯಲ್ಲಿ ಉಳ್ಳಾಲ ಧರ್ಮನಗರ ಜ್ಯೂನಿಯರ್ ಬಾಯ್ಸ್ ನ ಯುವಕರ ತಂಡ ಎರಡರ ಮಗುವಿನ ಚಿಕಿತ್ಸೆಗೆ ವಿಭಿನ್ನ ರೀತಿಯ ವೇಷತೊಟ್ಟು ಸಂಗ್ರಹಿಸಿದ ನಗದನ್ನು ಹೆತ್ತವರಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಉಳ್ಳಾಲ ತೆಂಗಿನಹಿತ್ಲು ರಾಹುಗುಳಿಗ ಬನದ ಅರ್ಚಕ ಭಾಸ್ಕರ್ ತೆಂಗಿನಹಿತ್ಲು ಅವರು ಬಂಟ್ವಾಳ ತಾಲೂಕಿನ ಮಂಕುಡೆಕೋಡಿ ನಿವಾಸಿ ಎರಡರ ಹರೆಯದ ನ್ಯೂರೋಬ್ಲಾಸ್ಟೋಮಾ (ಕ್ಯಾನ್ಸರ್) ಕಾಯಿಲೆಯಿಂದ ಬಳಲುತ್ತಿರುವ ಹೇಮಂತ್
ಉಳ್ಳಾಲ: ಬೈಕಿನಲ್ಲಿ ಬಂದು ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ಹಣಕ್ಕಾಗಿ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೋಲಿಸ್ರ ತಂಡ ಬಂಧಿಸಿದ್ದಾರೆ. ತ್ರಿಶೂರ್ ವಡಕಂಚೇರಿ ನಿವಾಸಿ ಶೇಕ್ ತನ್ಸಿರ್ (20) ಮತ್ತು ಕೋಝಿಕ್ಕೋಡ್ ಕಡಮೇರಿ ನಿವಾಸಿ ಸಾಯಿಕೃಷ್ಣ ( 19) ಬಂಧಿತರು. ಇಬ್ಬರಿಂದ 2.77 ಗ್ರಾಂ ತೂಕದ ನಿಷೇಧಿತ ಎಂಡಿಎಂಎ, ಎರಡು ಮೊಬೈಲ್ ಹಾಗೂ ರೂ. 50,000 ಬೆಲೆಬಾಳುವ ಎಫ್ ಝೆಡ್ ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ
ಉಳ್ಳಾಲ ತಾಲೂಕು ಮತ್ತು ಬಂಟ್ವಾಳ ತಾಲೂಕಿನ ಅಧೀಕೃತ ಟಿವಿಎಸ್ ದ್ವಿಚಕ್ರ ವಾಹನದ ಡೀಲರ್ ಆಗಿರುವ ಸೋನಾ ಮೋಟರ್ಸ್ನವರಿಂದ ಇದೀಗ ಮುಡಿಪುವಿನಲ್ಲಿ ಸೋನಾ ಟಿವಿಎಸ್ ಶೋರೂಂ ಶುಭಾರಂಭಗೊಂಡಿದೆ. ಮುಡಿಪು ಜಕ್ಷನ್ನ ಯೂನಿಯನ್ ಬ್ಯಾಂಕ್ನ ಹತ್ತಿರದ ಸೂರ್ಯೇಶ್ವರ ಬಿಲ್ಡಿಂಗ್ನಲ್ಲಿ ಶುಭಾರಂಭ ಗೊಂಡ ಈ ನೂತನ ಶೋರೂಂನಲ್ಲಿ ಸೇಲ್ಸ್, ಸರ್ವಿಸ್, ಸ್ಪೇರ್ಸ್ಗಳು ಲಭ್ಯವಿದೆ. ಹಾಗೂ ಸೋನಾ ಟಿವಿಎಸ್ನ ಎಲ್ಲಾ ಶೋರೂಂನಲ್ಲಿ ಇಂಡಿಯನ್ ಫೇಸ್ಟಿವಲ್ ಧಮಾಕ
ಬಂಟ್ವಾಳದ ತನ್ನ ಪತ್ನಿ ಮನೆಯಲ್ಲಿ ಉಳ್ಳಾಲ ತಾಲೂಕು ಕೊಂಡಾಣ ಮಿತ್ರನಗರ ನಿವಾಸಿ ರವೀಂದ್ರ (35) ಆತ್ಮಹತ್ಯೆಗೈದ ಘಟನೆ ನಡೆದಿದೆ. ರವೀಂದ್ರ ಅವರು ನಿನ್ನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮದ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಗಂಡು ಮಗುವನ್ನು ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಪತ್ನಿಯ ಮನೆ ವಾಪಸ್ಸಾಗಿದ್ದರು. ಸಂಜೆ ಪತ್ನಿ ಮೊಬೈಲ್ ಕರೆ ಮಾಡಿದಾಗ ರವೀಂದ್ರ ಅವರು ಕರೆ ಸ್ವೀಕರಿಸಿಲ್ಲ. ಗಾಬರಿಗೊಂಡ
ಉಳ್ಳಾಲ: ಕಾರು ಚಾಲಕನೊರ್ವ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಇತರ ಮೂರು ವಾಹನಗಳು ಒಂದಕ್ಕೊಂದು ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದ ಘಟನೆ ರಾ.ಹೆ. 66ರ ಜೆಪ್ಪುವಿನ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಸಮೀಪದಲ್ಲಿ ನಡೆದಿದ್ದು ವಾಹನದಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸಿಯಾಝ್ ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದಾಗ ಹಿಂಬದಿಯಲ್ಲಿದ್ದ ಲಾರಿ ಸಿಯಾಝ್ ಕಾರು
ಉಳ್ಳಾಲ ಕ್ಷೇತ್ರವನ್ನು ಮುಂದಿನ 30-40 ವರ್ಷಗಳ ಜನಸಂಖ್ಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕುಡಿಯುವ ನೀರು, ರಸ್ತೆ, ವಿದ್ಯುತ್ ಮೂಲಭೂತ ಸೌಕರ್ಯವನ್ನು ಒದಗಿಸುವ ಮೂಲಕ, ಮಂಗಳೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರೋಡ್ ಮ್ಯಾಪ್ ಸಿದ್ಧಪಡಿಸಲಾಗುವುದು ಎಂದು ವಿಧಾನ ಸಭೆಯ ಸ್ಪೀಕರ್, ಸ್ಥಳೀಯ ಶಾಸಕ ಯು.ಟಿ. ಖಾದರ್ ತಿಳಿಸಿದ್ದಾರೆ. ಅವರು ನಗರದ ಸರ್ಕ್ಯೂಟ್ ಹೌಸ್ನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಮಂಗಳೂರು ಕ್ಷೇತ್ರದಲ್ಲಿ ವಿದ್ಯುತ್
ಬೈಕ್ ಕಳವುಗೈದು ಉಳ್ಳಾಲ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.ಗಾಂಜಾ ವ್ಯಸನಕ್ಕೆ ಬಲಿಯಾಗಿದ್ದ ಯುವಕ ಸೇದಲು ಗಾಂಜಾ ಸಿಗದೆ ಜಿಗುಪ್ಸೆಗೊಂಡು ಇಂದು ಬೆಳಿಗ್ಗೆ ಮನೆಯಲ್ಲಿ ಸಾವಿಗೆ ಶರಣಾಗಿದ್ದಾನೆ.ತಲಪಾಡಿ ಗ್ರಾಮದ ನಾರ್ಲ,ಪಡೀಲ್ ನಿವಾಸಿ ಪೈಝಲ್(24) ಆತ್ಮಹತ್ಯೆಗೈದ ಯುವಕ.ಫೈಝಲ್ ಇಂದು ಬೆಳಿಗ್ಗೆ ತನ್ನ ಮನೆಯ ಮೊದಲ ಅಂತಸ್ತಿನ ಕೊಠಡಿಯ ಫ್ಯಾನಿಗೆ ನೈಲಾನ್ ಬಟ್ಟೆಯಿಂದ ಕುಣಿಕೆ ಬಿಗಿದು ಆತ್ಮಹತ್ಯೆಗೈದಿದ್ದಾನೆ.ಮನೆಯಲ್ಲಿ ಫೈಸಲ್