ಕಡಬ : ಜೇಸಿಐ ಭಾರತದ ಪ್ರತಿಷ್ಠಿತ ಘಟಕವಾದ ಜೇಸಿಐ ಕಡಬ ಕದಂಬದ ಮಾಜಿ ಅಧ್ಯಕ್ಷರಾದ ಮೋಹನ್ ಕೋಡಿಂಬಾಳ ರವರಿಗೆ ಜೇಸಿಐ ವಲಯ-15 ನೀಡುವ ಪ್ರತಿಷ್ಠಿತ ‘ಉದ್ಯೋಗ ರತ್ನ’ ಪ್ರಶಸ್ತಿ ಲಭಿಸಿದೆ. ಜೇಸಿಐ ಶಂಕರನಾರಾಯಣ ಘಟಕದ ಆಶ್ರಯದಲ್ಲಿ ಹಾಲಾಡಿಯ ಶಾಲಿನಿ ಜಿ.ಶಂಕರ ಕನ್ವೆನ್ಸನ್ ಸೆಂಟರ್ನಲ್ಲಿ ನಡೆದ ವಲಯ 15ರ ಬೆಳವಣಿಗೆ ಮತ್ತು ಅಭಿವೃದ್ಧಿ ಸಮ್ಮೇಳನದಲ್ಲಿ
ಪುತ್ತೂರು: ಮಣಿಪುರ ರಾಜ್ಯದಲ್ಲಿ ಎರಡು ಜನಾಂಗಗಳ ಮಧ್ಯೆ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ಪುತ್ತೂರು ಬ್ಲಾಕ್ ಕಾಂಗ್ರೆಸ್ನಿಂದ ಪುತ್ತೂರು ಬಸ್ ನಿಲ್ದಾಣದ ಬಳಿಯ ಗಾಂಧೀಕಟ್ಟೆಯ ಬಳಿ ಮೊಂಬತ್ತಿ ಉರಿಸಿ, ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಮಾತನಾಡಿ, ಮಣಿಪುರದ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಮೆರುಗಿಗೆ ಕುಂದುಂಟಾಗಿದೆ. ಹಿರಿಯರ ದೂರದರ್ಶಿತದ ಚಿಂತನೆಗಳ ಮಣ್ಣು
ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಎರಡು ಗ್ರಾ ಪಂ ವಾರ್ಡ್ಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು ಒಂದು ಕ್ಷೇತ್ರದ ಫಲಿತಾಂಶ ಪ್ರಕಟವಾಗಿದೆ. ಆರ್ಯಾಪು ಕ್ಷೇತ್ರದಲ್ಲಿ ಪುತ್ತಿಲ ಪರಿವಾರದಿಂದ ಕಣಕ್ಕಿಳಿದಿದ್ದ ಸುಬ್ರಹ್ಮಣ್ಯ ಬಲ್ಯಾಯ ಅವರು ವಿಜಯಿಯಾಗಿದ್ದಾರೆ. ಬಲ್ಯಾಯ ಅವರು ತಮ್ಮ ಹತ್ತಿರದ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಪುರುಷೋತ್ತಮ ಪ್ರಭು ಅವರನ್ನು ಸೋಲಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ರುಕ್ಮಾ ನಾಯ್ಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಡಬ, ಸುಬ್ರಹ್ಮಣ್ಯ ಭಾಗದಲ್ಲಿ ಅತೀ ಹೆಚ್ಚಿನ ಅನಾಹುತಗಳು ನಡೆದಿದೆ. ಮಂಜೇಶ್ವರ ಸುಬ್ರಹ್ಮಣ್ಯ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಹಲವೆಡೆ ನದಿ ನೀರು ರಸ್ತೆಗೆ ಬಂದು ಸಂಚಾರ ಸ್ಥಗಿತಗೊಂಡಿದೆ. ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿಯಿಂದ ಯಾವುದೇ ವಾಹನಗಳು ಮುಂದಕ್ಕೆ ಸಾಗುವಂತಿಲ್ಲ. ಕಳೆದ ಎರಡು ದಿನಗಳಿಂದ ಇದೇ ಪರಿಸ್ಥಿತಿ ಇದ್ದು ಈ ರಸ್ತೆಯಲ್ಲಿ ಸಾಗುವವರು ಬಳ್ಪ ಗ್ರಾಮದಿಂದ ಗುತ್ತಿಗಾರು ಮಾರ್ಗವಾಗಿ
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪರಿಸರದಲ್ಲಿ ಹಾಗೂ ಘಟ್ಟ ಪ್ರದೇಶದಲ್ಲಿ ಬಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಪ್ರವಾಹದ ನೀರು ಹೆದ್ದಾರಿಗೆ ನುಗ್ಗಿ ಸಂಚಾರಕ್ಕೆ ಅಡಚನೆ ಉಂಟಾಯಿತು. ಕುಮಾರಧಾರ ನದಿಯಲ್ಲಿ ಭಾರೀ ನೀರು ಹೆಚ್ಚಳದಿಂದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಇಲ್ಲಿನ ಲಗೇಜ್ ಕೊಠಡಿ, ಶೌಚಾಲಯ ಎಲ್ಲವೂ ಮುಳುಗಡೆಯಾಗಿದೆ. ಮಂಜೇಶ್ವರ – ಸುಬ್ರಹ್ಮಣ್ಯ ರಾಜ್ಯ
ಪುತ್ತೂರು : ಮಳೆಗಾಲ ಬಂತಂದ್ರೆ ಸಾಕು ರಸ್ತೆಗಳೆಲ್ಲ ಹದಗೆಡೋದನ್ನ ನೋಡ್ಬೋದು ಆದ್ರೆ ಈ ಊರಲ್ಲಿ ಮಳೆ ಬಂದ್ರೂ ಅದೇ ಕಥೆ ಮಳೆ ಬರದಿದ್ರೂ ಅದೇ ವ್ಯಥೆ… ಹೌದು..ಕಬಕ ಗ್ರಾಮದ ಕಬಕಬೈಲು ಎಂಬಲ್ಲಿ 10ವರ್ಷದಿಂದ ಇದೇ ಸಮಸ್ಯೆ…ಮಣ್ಣಿನ ರಸ್ತೆಯಿದ್ದು ಮಳೆಯಿದ್ದಾಗಂತು ಹೇಳೋದೆ ಬೇಡ ಇಡೀ ರಸ್ತೆ ಕೆಸರುಮಯ.. ವಾಹನ ಸವಾರರಂತೂ ಎದ್ದೂ ಬಿದ್ದು ಹೋಗೋ ಪರಿಸ್ಥಿತಿ. ಅದೆಷ್ಟೋ ಬಾರಿ ವಾಹನಗಳು ಕೆಸರಿಗೆ ಜಾರಿದ ಉದಾಹರಣೆಗಳು ಕೂಡಾ ಇದೆ. ಇನ್ನು ನಿತ್ಯ ಪಾದಚಾರಿಗಳ ಪರಿ ಕೇಳೋದೇ
ಪುತ್ತೂರು; ದಲಿತ ಸಂಘಟನೆಯೊಂದರ ಮುಖಂಡರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುವುದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾ ದಲಿತ್ ಸೇವಾಸಮಿತಿ ಈ ಬಗ್ಗೆ ಕಾನೂನು ಸಮರ ನಡೆಸಲು ತೀರ್ಮಾನಿಸಿದ್ದು, ಕಾನೂನು ಹೋರಾಟಕ್ಕೆ ಬೆಲೆ ಸಿಗದಿದ್ದರೆ ಬೀದಿಗಿಳಿದು ಹೋರಾಟ ನಡೆಸುವ ಎಚ್ಚರಿಕೆ ನೀಡಿದೆ. ಪುತ್ತೂರು ಪತ್ರಿಕಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಸಮಿತಿ ಕಾರ್ಯಾಧ್ಯಕ್ಷ ಚಂದ್ರಶೇಖರ್ ವಿಟ್ಲ ಮಾತನಾಡಿ, ನೆಲ್ಯಾಡಿ ಭಾಗದಲ್ಲಿ ಜಮೀನಿನ
ಪುತ್ತೂರು ತಾಲೂಕಿನ ಕೊಳ್ತಿಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಪಾಲ್ತಾಡು ಶಾಖಾ ವ್ಯವಸ್ಥಾಪಕರಾದ ಜಯರಾಮ ಗೌಡ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ನುಡಿನಮನ ಕಾರ್ಯಕ್ರಮವು ಪೆರ್ಲಂಪಾಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಮಾಜಕ್ಕೆ ಸ್ಫೂರ್ತಿಯ ಚಿಲುಮೆಯಾಗಿದ್ದಂತಹ ಜಯರಾಮ ಗೌಡ ಅವರ ಅಗಲಿಕೆ ಇಡೀ ಕುಟುಂಬಕ್ಕೆ, ಬಂಧು ಮಿತ್ರರಿಗೆ ತುಂಬಲಾರದ ನಷ್ಟ. ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವು ಪೆರ್ಲಂಪಾಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಪುತ್ತೂರು : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಮಾರಣಾಂತಿಕ ಹಲ್ಲೆಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪ್ರದೀಪ್ ರೈ ಅವರು ಬೊಳುವಾರು ಆಸ್ಪತ್ರೆಯ ಬಳಿ ಕಾರನ್ನು ಪಾರ್ಕ್ ಮಾಡುತ್ತಿದ್ದ ವೇಳೆ ಡಸ್ಟರ್ ಕಾರಿನಲ್ಲಿ ಬಂದ ತಂಡವೊಂದು ಅವರಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲದೇ ಕೈಯಲ್ಲಿದ್ದ ಉಂಗುರ ಹಾಗೂ ಸುಮಾರು 9 ಸಾವಿರ
ಪುತ್ತೂರು: ಡ್ರಗ್ಸ್ ಚಟಗಳು ಯುವ ಸಮುದಾಯವನ್ನು ಹೆಚ್ಚಾಗಿ ಕಾಡುತ್ತಿದೆ. ಇಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ನಿರಂತರವಾಗಿ ಜಾಗೃತಿ ಕಾರ್ಯಕ್ರಮ ನಡೆಯಬೇಕು. ಡ್ರಗ್ಸ್ ಕುರಿತ ಜನ ಜಾಗೃತಿಗಾಗಿ ಎಲ್ಲಾ ಇಲಾಖೆಗಳ ಸಹಯೋಗ ಅಗತ್ಯವಾಗಿದೆ ಎಂದು ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಗಿರೀಶ್ ನಂದನ್ ತಿಳಿಸಿದರು. ಅವರು ಮಂಗಳವಾರ ಪುತ್ತೂರು ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ವಸ್ತುಗಳ ದುರುಪಯೋಗ