ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇ ಗೌಡ 514ನೇ ಜಯಂತಿ ಆಚರಣೆಯು ತಾಲೂಕು ಆಡಳಿತ ಸೌಧದಲ್ಲಿರುವ ತಹಶಿಲ್ದಾರ್ ಸಭಾಂಗಣದಲ್ಲಿ ನಡೆಯಿತು. ಸಂಸ್ಮರಣಾ ಜ್ಯೋತಿ ಬೆಳಗಿಸಿ, ಅಧ್ಯಕ್ಷತೆ ವಹಿಸಿದ್ದ ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ರಾಜದಾನಿ ಬೆಂಗಳೂರನ್ನು ವಿಶ್ವಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಂಪೇ ಗೌಡರವರು 14ನೇ ಶತಮಾನದಲ್ಲಿ
ವಿಟ್ಲ: ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಲಪದವು ಕೊಡಂಚಡ್ಕ ಎಂಬಲ್ಲಿ ನಿರ್ಮಾಣವಾಗುತ್ತಿರುವ ಗೋಫಾರ್ಮ್ ಕಟ್ಟಡಕ್ಕೆ ಪುಣಚ ಗ್ರಾಮ ಪಂಚಾಯತ್ ಕಾನೂನು ಬದ್ಧ ಪರವಾನಿಗೆಯನ್ನು ನೀಡಲಾಗಿದೆ. ಇದನ್ನು ರದ್ದುಗೊಳಿಸಲು ಅವಕಾಶ ಇಲ್ಲ ಎಂದು ಪುಣಚ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ ಮೂಡಂಬೈಲು ತಿಳಿಸಿದ್ದಾರೆ. ಅವರು ವಿಟ್ಲ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿ ಪರವಾನಿಗೆ ನೀಡಿದ ವಿಚಾರವನ್ನು ಸಮರ್ಥಿಸಿ ಕೊಂಡರು. ಇದು ಹಸೈನಾರ್ ಮಾದುಮೂಲೆ ಎಂಬವರಿಗೆ
ಪುತ್ತೂರು: ಯುವಕರು ಸಮಾಜ ಕಟ್ಟಬೇಕು ಹೊರತು ಬಿಕ್ಕಟ್ಟು ಸೃಷ್ಠಿಸಬಾರದು. ಅದೇ ರೀತಿ ಸಮಸ್ಯೆಯನ್ನು ಬಗೆಹರಿಸಬೇಕು ಹೊರತು ಸಮಸ್ಯೆಯನ್ನು ಸೃಷ್ಠಿಸುವ ಕೆಲಸ ಮಾಡಬಾರದು ಎಂದು ನೂತನ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ಅವರು ಪುತ್ತೂರಿನ ಮುಸ್ಲಿಂ ಸಮುದಾಯ ಒಕ್ಕೂಟದ ವತಿಯಿಂದ ಪುರಭವನದಲ್ಲಿ ನೂತನ ಸ್ಪೀಕರ್ ಯು.ಟಿ. ಖಾದರ್ ಮತ್ತು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ಯುವ ಸಮುದಾಯ ಉತ್ತಮ ನಡೆಯೊಂದಿಗೆ ಮುಂದುವರಿದಲ್ಲಿ
ಕಡಬ: ಕುಟ್ರುಪ್ಪಾಡಿ ಗ್ರಾಮದ ಹೊಸಮಠ ಉಳಿಪು ನಿವಾಸಿ ಗಿರಿಯಪ್ಪ ಗೌಡ ಅವರ ಪುತ್ರ ಸುಮಂತ್(32ವ.)ರವರು ಅನಾರೋಗ್ಯದಿಂದ ಜೂ.22ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಮಂತ್ ಅವರು ಕಳೆದ ಎರಡು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಕೆಲ ದಿನಗಳಿಂದ ಅವರ ಆರೋಗ್ಯದಲ್ಲಿ ಮತ್ತಷ್ಟೂ ಏರುಪೇರಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ಜೂ.22ರಂದು ರಾತ್ರಿ ನಿಧನರಾಗಿದ್ದಾರೆ.
ಉಪ್ಪಿನಂಗಡಿ : ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿ ಚಲಾಯಿಸುತಿದ್ದ ಬೈಕ್ ಅಪಘಾತಗೊಂಡು ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ಜೂ.22 ರಂದು ನಡೆದಿದೆ. ಉಪ್ಪಿನಂಗಡಿ ಬೆಳ್ತಂಗಡಿ ರಸ್ತೆಯ ಎಚ್ಎಮ್ ಆಡಿಟೋರಿಯಂ ಸಮೀಪ ಅಪಘಾತ ಸಂಭವಿಸಿದೆ. ಪುತ್ತೂರಿನ ನೆಹರುನಗರ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಬೆಳ್ತಂಗಡಿಯ ಉಳಿ ಗ್ರಾಮದ ನಿತಿನ್ ಬೆಳಗ್ಗೆ ಕಾಲೇಜು ಬರುವಾಗ ಬೈಕ್ ಪಾದಚಾರಿ ಇಳಂತಿಲದ ಪೆರ್ನಾಂಡೀಸ್ (64 ವ.) ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ
ಕಡಬ : ಕಳೆದ ಆರು ವರ್ಷಗಳಿಂದ ಖಾತೆ ಬದಲಾವಣೆಗೆ ಅರ್ಜಿದಾರನ್ನು ಸತಾಯಿಸುತ್ತಿದ್ದ ಪಿಡಿಓ ಇಂದು ಲಂಚ ಪಡೆಯುತ್ತಿದ್ದಾಗ ಲೋಕಾಯಯಕ್ತ ಬಲೆಗೆ ಬಿದ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ಪಿಡಿಓ ಮಹೇಶ್ ಎಂಬಾತ ಅರ್ಜಿದಾರರಿಂದ ಖಾತೆ ಬದಲಾವಣೆಗೆ 20 ಸಾವಿರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರರು ನೊಂದು ನೇರ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಲಂಚದ 20 ಸಾವಿರ ರೂಪಾಯಿ ಹಣ
ಕಡಬ: ತನ್ನದೇ ಚಿನ್ನದ ಅಂಗಡಿ ಉದ್ಘಾಟನೆಯ ತಯಾರಿಯಲಿದ್ದ ಯುವಕನೋರ್ವನ ಮೃತದೇಹ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಜೂ. 22ರ ಗುರುವಾರ ಕಂಡುಬಂದಿದೆ.ಕಡಬ ನಿವಾಸಿ ದಯಾನಂದ ಆಚಾರ್ಯ ಅವರ ಪುತ್ರ ನಾಗಪ್ರಸಾದ್ ಮೃತಪಟ್ಟ ಯುವಕ. ಮರ್ಧಾಳದ ಮಸೀದಿ ಬಿಲ್ಡಿಂಗ್ ನಲ್ಲಿ ಇಂದು (ಜೂನ್ 22) ಐಶ್ವರ್ಯ ಗೋಲ್ಡ್ ಹೆಸರಿನ ಚಿನ್ನದಂಗಡಿ ಶುಭಾರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ತಯಾರಿ ನಡೆಸಿಕೊಂಡಿದ್ದರು. ಆದರೆ ಇಂದು ಬೆಳಿಗ್ಗೆ ಸಕಲೇಶಪುರ ಠಾಣಾ ವ್ಯಾಪ್ತಿಯ ಗುಂಡ್ಯ
ಪುತ್ತೂರು :ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28 ವ.) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾರೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ. ಭವ್ಯರವರದ್ದು 3ನೇ ಹೆರಿಗೆಯಾಗಿದ್ದು, ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ
ಪುತ್ತೂರು ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಕಾರು ಹಾಗು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ. ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತದ ರಭಸಕ್ಕೆ ಸ್ಕೂಟರ್
ಪುತ್ತೂರು: ಮತಾಂತರದ ಪಿಡುಗು ಸಾಮಾನ್ಯವಾದುದಲ್ಲ. ಇದರ ವಿರುದ್ಧ ತಂದ ಕಾನೂನುಗಳನ್ನು ರದ್ದು ಮಾಡುವ ಮೂಲಕ ನಮ್ಮ ಮನೆಯಲ್ಲಿ ನಮಗೇ ಸ್ವಾತಂತ್ರ್ಯ ಇಲ್ಲದ ಸ್ಥಿತಿಯನ್ನು ರಾಜ್ಯ ಸರಕಾರ ಮಾಡುತ್ತಿದೆ. ಸಂತರಿಗೆ ಹಿಂದೂ ಎಂಬುದು ಮಾತ್ರ ಪಕ್ಷ. ಹಿಂದೂ ವಿರೋಧಿ ನಿಲುವುಗಳ ವಿರುದ್ಧ ಯಾವುದೇ ಸರಕಾರ ಕೆಲಸ ಮಾಡಿದರೂ ಬೀದಿಗಿಳಿದು ಹೋರಾಟ ಮಾಡಲು ಸಂತರೆಲ್ಲರೂ ಈಗಾಗಲೇ ತೀರ್ಮಾನ ಮಾಡಿದ್ದೇವೆ ಎಂದು ಕಣಿಯೂರು ಶ್ರೀ ಮಹಾಬಲೇಶ್ವರ ಸ್ವಾಮೀಜಿ ಸರಕಾರಕ್ಕೆ ಎಚ್ಚರಿಕೆ