Home ಕರಾವಳಿ Archive by category ಪುತ್ತೂರು (Page 2)

ರಬ್ಬರ್ ಟ್ಯಾಪಿಂಗ್ ಕತ್ತಿ ಎದೆಯೊಳಗೆ ಹೊಕ್ಕಿ ಮಹಿಳೆಸಾವು

ಕಡಬ : ರಬ್ಬರ್ ಟ್ಯಾಪಿಂಗ್ ಕತ್ತಿಯ ರೂಪದಲ್ಲಿ ಬಂದ ಸಾವು ಮಹಿಳೆಯನ್ನು ಬಲಿಪಡೆದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ಮಾ.17ರಂದು ನಡೆದಿದೆ. ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ(37 ವ.) ಎಂಬವರು ಬೆಳ್ಳಂಬೆಳಗ್ಗೆ 6.30 ಗಂಟೆ ಹೊತ್ತಿಗೆ ತನ್ನ ಗಂಡನ ಜೊತೆ ತಮ್ಮದೇ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿದ್ದರು. ಟ್ಯಾಪಿಂಗ್

Puttur : ಅಕ್ರಮ ಗಾಂಜಾ ಮಾರಾಟ ಪ್ರಕರಣ – ಆರೋಪಿ ಬಂಧನ, ರೂ. 40ಸಾವಿರ ಮೌಲ್ಯದ ಗಾಂಜಾ ವಶ.

ಪುತ್ತೂರು: ಮಾದಕ ಪದಾರ್ಥ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಆರೋಪಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಮತ್ತು ಎಸ್.ಐ ಅವರ ನೇತೃತ್ವದ ಕಾರ್ಯಾಚರಣೆಯಲ್ಲಿ ಬಂಧಿಸಿ, ಆರೋಪಿಯಿಂದ ರೂ. 40ಸಾವಿರ ಮೌಲ್ಯದ 1.020 ಕೆ.ಜಿ ತೂಕದ ಗಾಂಜಾವನ್ನು ವಶಕ್ಕೆ ಪಡೆದು ಕೊಂಡ ಘಟನೆ ಪುತ್ತೂರು ಮುಕ್ರಂಪಾಡಿಯ ಬಸ್‍ತಂಗುದಾಣದಲ್ಲಿ ಮಾ.16ರಂದು ನಡೆದಿದೆ. ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆ ನಿವಾಸಿ ಅಬೂಬಕ್ಕರ್ ಎಂಬವರ

ಪುತ್ತೂರು ನಗರಸಭೆ ಸದಸ್ಯ ನೇಣು ಬಿಗಿದು ಆತ್ಮಹತ್ಯೆ.

ಪುತ್ತೂರು: ನಗರಸಭಾ ಸದಸ್ಯರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಸಾಲ್ಮರ ಸಮೀಪದ ಊರಮಾಲು ಎಂಬಲ್ಲಿ ಗುರುವಾರ ನಡೆದಿದೆ. ಇಲ್ಲಿನ ನಿವಾಸಿ ಶಿವರಾಮ ಸಫಲ್ಯ(46) ಮೃತಪಟ್ಟ ವ್ಯಕ್ತಿ. ಅವರು ಪುತ್ತೂರು ನಗರಸಭೆಯ 1ನೆ ವಾರ್ಡಿನ ಸದಸ್ಯರಾಗಿದ್ದಾರೆ.ಗುರುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಅವರು ಮನೆಯ ಒಳಗಡೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಅವರ ಪತ್ನಿಯು ಪತಿಯ

ಶಿಕ್ಷಣ ಪದ್ಧತಿಯಿಂದ ದೇಶದ ಚಿತ್ರಣ ಬದಲು ಮಾಡಲು ಸಾಧ್ಯ: ಶಾಸಕ ಸಂಜೀವ ಮಠಂದೂರು

ಪುತ್ತೂರು: ಶಿಕ್ಷಣ ಪದ್ಧತಿಯಿಂದ ದೇಶದ ಚಿತ್ರಣ ಬದಲು ಮಾಡಲು ಸಾಧ್ಯವಿದ್ದು, ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಆಸಕ್ತಿ ಇರುವ ಕ್ಷೇತ್ರದಲ್ಲೇ ಅಭ್ಯಾಸ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಐದು ಸರ್ಕಾರಿ ಪದವಿ ಕಾಲೇಜು ಹೊಂದಿರುವ ಏಕೈಕ ವಿಧಾನ ಸಭಾಕ್ಷೇತ್ರ ಪುತ್ತೂರು. ಅದರಲ್ಲೂ ಒಂದು ಮಹಿಳಾ ಕಾಲೇಜು ಇರುವುದು ವಿಶೇಷವಾಗಿದೆ. ಇಲ್ಲಿರುವ ಪ್ರಾಥಮಿಕ ಶಾಲೆಯನ್ನು

ಎನ್‍ಐಎ ತಂಡ ಸಂಚರಿಸುತಿದ್ದ ಪೊಲೀಸ್ ವಾಹನಕ್ಕೆ ಬೈಕ್ ಢಿಕ್ಕಿ…!

ಪುತ್ತೂರು: ಪುತ್ತೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ) ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮಾಣಿ ಮೈಸೂರು ರಸ್ತೆಯ ಸಂಪ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಭಾನುವಾರ ರಾತ್ರಿ ವಿಶೇಷ ತನಿಖೆಯ ದೃಷ್ಠಿಯಿಂದ ಸಂಚರಿಸುತ್ತಿದ್ದ ಎನ್. ಐ. ಎ. ತಂಡದ ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿದೆ. ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ ಬಿ. (50) ಮೃತ

ಹಾರಾಡಿ ರೈಲ್ವೇ ನಿಲ್ದಾಣ ಸಂಪರ್ಕ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ಪ್ರಗತಿ ; ಗುಣಮಟ್ಟದ ಕಾಮಗಾರಿಗಾಗಿ ಮರದ ಹಲಗೆ ತೆರವು ಗೊಳಿಸಿದ ಅಧಿಕಾರಿಗಳು !

ಪುತ್ತೂರು: ಹಾರಾಡಿ ರೈಲ್ವೇ ನಿಲ್ದಾಣ ಸಂಪರ್ಕ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಗುಣಮಟ್ಟದ ಕಾಮಗಾರಿಗಾಗಿ ಈಗಾಗಲೇ ಅಳಡಿಸಿದ ಮರದ ಹಲಗೆಯನ್ನು ತೆರವುಗೊಳಿಸಿ ಕಬ್ಬಿಣದ ಹಲಗೆಯನ್ನು ಅಳವಡಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಮಾ.2ರಂದು ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಿಂದ ಬಂದಿರುವ ಕಾರ್ಯಪಾಲಕ ಅಭಿಯಂತರ ಪುರಂದರ, ಸಹಾಯಕ ಕಾರ್ಯಪಾಲಕ ಅಭಿಯಂತರ ಅರುಣ್, ಕೃಷ್ಣಮೂರ್ತಿ ಅವರು ಹಾರಾಡಿಯಿಂದ ರೈಲ್ವೇ ನಿಲ್ದಾಣ ಕಾಮಗಾರಿ ನಡೆಯುತ್ತಿರುವುದನ್ನು

ಕೊಯಿಲ ಫಾರ್ಮ್‍ನ ಹುಲ್ಲುಗಾವಲಿಗೆ ಆಕಸ್ಮಿಕ ಬೆಂಕಿ

ಕಡಬ ತಾಲೂಕಿನ ಕೊಯಿಲ ಪಶು ಸಂಗೋಪನ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಒಣಹುಲ್ಲುಗಳಿಂದ ಆವೃತ್ತವಾದ ಗುಡ್ಡಕ್ಕೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಸುಮಾರು 15 ಎಕರೆಯಷ್ಟು ಆವರಿಸಿದ್ದು, ಇದರಿಂದ ಸೃಷ್ಠಿಯಾದ ದಟ್ಟ ಹಿಗೆ ಮುಗಿಲೆತ್ತರಕ್ಕೆ ಚಾಚಿದ್ದು ಭಯಾನಕವಾಗಿತ್ತು. ಹುಲ್ಲುಗಾವಲಿನ ಸುಮಾರು ಹದಿನೈದು ಎಕರೆ ಪ್ರದೇಶಕ್ಕೆ ಬೆಂಕಿ ಆವರಿಸಿ ಸುಟ್ಟು ಕರಕಲಾಗಿದೆ. ಇದರಿಂದಾಗಿ ಅಪಾರ ನಷ್ಟ ಉಂಟಾಗಿದೆ. ಫಾರ್ಮನ ಆನೆಗುಂಡಿ ಭಾಗದಲ್ಲಿ ಕಾಣಿಸಿಕೊಂಡ

ಕಡಬ : ಕೊಯಿಲ ಫಾರ್ಮ್ಗೆ ಬೆಂಕಿ: ಅಪಾರ ನಷ್ಟ

ಕಡಬ ತಾಲೂಕಿನ ಕೊಹಿಲದಲ್ಲಿರುವ ಪಶುಸಂಗೋಪನಾ ಕ್ಷೇತ್ರ, ಕೊಹಿಲ ಫಾರ್ಮ್ನ ಹುಲ್ಲುಗಾವಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಒಣ ಮುಳಿಹುಲ್ಲು ಬೆಂಕಿಗೆ ಆಹುತಿಯಾದ ಘಟನೆ ಬುಧವಾರ ನಡೆದಿದೆ.ಹುಲ್ಲುಗಾವಲಿನ ಸುಮಾರು ಹದಿನೈದು ಎಕರೆ ಪ್ರದೇಶಕ್ಕೆ ಬೆಂಕಿ ಆವರಿಸಿ ಸುಟ್ಟು ಕರಕಲಾಗಿದೆ. ಇದರಿಂದಾಗಿ ಅಪಾರ ನಷ್ಟ ಉಂಟಾಗಿದೆ. ಫಾರ್ಮ್ನ ಆನೆಗುಂಡಿ ಭಾಗದಲ್ಲಿ ಕಾಣಿಸಿಕೊಂಡ ಬೆಂಕಿ ತಹಬಂದಿಗೆ ಬಾರದೆ ಫಾರ್ಮ್ನ ದ್ವಾರದ ತನಕ ಧಾವಿಸಿ ಅಪಾರ ಪ್ರಮಾಣದ ಒಣ ಹುಲ್ಲನ್ನು ಆಹುತಿ

ವಿಜಯಕುಮಾರ್ ಹೆಬ್ಬಾರಬೈಲು ಅವರಿಗೆ”ಗಡಿನಾಡ ಧ್ವನಿ ಮಾಧ್ಯಮ ರಾಜ್ಯ ಪ್ರಶಸ್ತಿ “

ಪುತ್ತೂರು : ಕವಿ, ಪತ್ರಕರ್ತ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಅವರ ಸಂಪಾದಕತ್ವದ “ಪೂವರಿ” ತುಳು ಪತ್ರಿಕಾ ಕ್ಷೇತ್ರದಲ್ಲಿ ನಾಡಿಗೆ ಸಲ್ಲಿಸಿದ ಅನುಪಮ ಸಾಧನೆಗಾಗಿ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನ – 2023ರ “ಗಡಿನಾಡ ಧ್ವನಿ ಮಾಧ್ಯಮ ರಾಜ್ಯ ಪ್ರಶಸ್ತಿ”ಯನ್ನು ಒಡ್ಯ ಸರಕಾರಿ ಶಾಲಾ ವಠಾರದಲ್ಲಿ ಜರಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಡಕೊಂಡಿದೆ. ತುಳುನಾಡಿನಲ್ಲಿ ಕಳೆದ ಎಂಟು ವರ್ಷಗಳಿಂದ ಸದ್ದು ಮಾಡುತ್ತಿರುವ ತುಳು

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ನೌಕರರ ಮುಷ್ಕರ : ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

ಪುತ್ತೂರು: ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಮಾ.1ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇದಕ್ಕೆ ಪುತ್ತೂರು ತಾಲೂಕು ಶಾಖೆಯಿಂದ ಬೆಂಬಲ ಸೂಚಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪುತ್ತೂರು ಅಧ್ಯಕ್ಷ ಶಿವಾನಂದ ಆಚಾರ್ಯ ಹೇಳಿದರು. ಅವರು