Home ಕರಾವಳಿ Archive by category ಪುತ್ತೂರು (Page 23)

ಪುತ್ತೂರು : ಪೊಲೀಸರ ಅಮಾನವೀಯ ವರ್ತನೆಗೆ ಕೆಂಡವಾದ ಹಿಂದೂ ಮುಖಂಡ ಅರುಣ್ ಪುತ್ತಿಲ

ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಭಾವಚಿತ್ರವುಳ್ಳ ಬ್ಯಾನರ್ ಮೇಲೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ದೌರ್ಜನ್ಯವೆಸಗಿದ ಪೋಲೀಸರ ವಿರುದ್ಧ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಕೆಂಡವಾಗಿದ್ದಾರೆ. ಡಿವೈಎಸ್ಪಿ, ಸಂಪ್ಯ ಠಾಣಾ ಎಸ್‍ಐ ಹಾಗೂ ಸಿಬ್ಬಂದಿ ವರ್ಗದ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಂದು ಸಂಜೆಯೊಳಗಡೆ

ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ : ಗಾಯಾಳುಗಳನ್ನು ವಿಚಾರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಪುತ್ತೂರು: ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಭಾವಚಿತ್ರವುಳ್ಳ ಬ್ಯಾನರ್ ಮೇಲೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತರು ಅಸ್ಪತ್ರೆಗೆ ದಾಖಲಾಗಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಗಾಯಾಳುಗಳನ್ನು ಭೇಟಿಯಾಗಿ ವಿಚಾರಿಸಿದ್ದಾರೆ. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು ಇಂತಹ ಘಟನೆ ಮತ್ತೆ ಮರುಕಳಿಸಬಾರದು, ಇದೊಂದು ಹೀನ ಕೃತ್ಯ, ಪೊಲೀಸರ ಈ ಅಮಾನವೀಯ ಕೃತ್ಯವನ್ನು

ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣ : ಪೊಲೀಸರ ಥಳಿತ, ವಿಡೀಯೋ ವೈರಲ್

ಪುತ್ತೂರು: ಪುತ್ತೂರು ಅರಣ್ಯ ಇಲಾಖೆಯ ಆವರಣ ಗೋಡೆಯ ಬಳಿ ಬಿಜೆಪಿ ಮುಖಂಡರಾದ ಡಿ. ವಿ. ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲ್ ಅವರ ಭಾವ ಚಿತ್ರವುಳ್ಳ ಶ್ರದ್ಧಾಂಜಲಿ ಬ್ಯಾನರ್ ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆದುಕೊಂಡಿದ್ದ ಆರೋಪಿಗಳ ಮೇಲೆ ಪೊಲೀಸ್ ರು ಹಿಗ್ಗಾಮುಗ್ಗಾ ಥಳಿಸಿ ಗಾಯಗೊಳಿಸಿರುವ ವೀಡೀಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ಮೇಲೆ ಪೋಲೀಸರು

ಶ್ರದ್ಧಾಂಜಲಿ ಬ್ಯಾನರ್ ಪ್ರಕರಣ : ಮತ್ತೆ 7 ಮಂದಿ ಪೊಲೀಸ್ ವಶಕ್ಕೆ

ಪುತ್ತೂರು: ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಇರುವ ಅರಣ್ಯ ಇಲಾಖೆಯ ಆವರಣಗೋಡೆಯ ಎದುರು “ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ದಾಂಜಲಿ” ನೊಂದ ಹಿಂದು ಕಾರ್ಯಕರ್ತರೆಂಬ ಚಪ್ಪಲಿ ಹಾರ ಹಾಕಲಾಗಿರುವ ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬ್ಯಾನರ್ ಅಳವಡಿಸಿದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ನರಿಮೊಗರು

ಬಿಜೆಪಿಯಿಂದ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಯತ್ನ : ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಹೇಳಿಕೆ

ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯ ಎಸಗಿದವರು ಯಾರು ಎಂದು ಗೊತ್ತಿದ್ದರೂ, ಬಿಜೆಪಿ ಪ್ರತಿಭಟನಾ ನಾಟಕ ಮಾಡಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಆಗಿರುವುದು ಕೈಲಾಗದವರು ಮೈ ಪರಚಿಕೊಂಡಂತೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಇವತ್ತು ಪರಿಸ್ಥಿತಿ ಎನಾಗಿದೆ ಎಂದರೆ ಬಿಜೆಪಿ ವಿಲವಿಲ ಒದ್ದಾಡುತ್ತಿದೆ. ಯಾರಿಗೂ ಚಪ್ಪಲಿ ಹಾಕುವ ದುಸ್ತಿತಿ ನಮ್ಮ ಪಕ್ಷಕ್ಕೆ

ಕಾಂಗ್ರೆಸ್ ಕಾರ್ಯಕರ್ತರು ನೀಚ ಕೃತ್ಯಕ್ಮೆ ಕೈ ಹಾಕುವುದಿಲ್ಲ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರ‌‌ಭಾವ ಚಿತ್ರ ಇರುವ ಬ್ಯಾನರನ್ನು ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದ್ದು ಇದು ಯಾರ ಕೃತ್ಯ ಎಂಬುದನ್ನು ಪೊಲೀಸ್ ಇಲಾಖೆ ತನಿಖೆ ಮಾಡಬೇಕು. ಸುತ್ತಮುತ್ತಲಿರುವ ಸಿ ಸಿ ಕೆಮರಾ ಪರಿಶೀಲಿಸಿ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಬೇಕು. ಘಟನೆಯ ಖಂಡಿಸಿ ಬಿಜೆಪಿಯವರು ನಡೆಸಿದ ಪ್ರತಿಭಟನೆಯಲ್ಲಿ ಮಾಜಿ ಶಾಸಕರು ಪರೋಕ್ಷವಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗೂಬೆ ಕೂರಿಸುವ ಯತ್ನವನ್ನು ಮಾಡಿದ್ದು

ಡಿವಿಎಸ್, ನಳಿನ್ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಬ್ಯಾನರ್ ಅಳವಡಿಕೆ ,ಪುತ್ತೂರು ಠಾಣೆಯಲ್ಲಿ ದೂರು

ಪುತ್ತೂರು: ಬಿಜೆಪಿ ನಾಯಕರಿಬ್ಬರಾದ, ರಾಜ್ಯ ಬಿಜೆಪಿ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರದ ಮಾಜಿ ಸಚಿವ ಬೆಂಗಳೂರು ಉತ್ತರದ ಹಾಲಿ ಸಂಸದ ಡಿ ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ ಕೋರಿ ಪುತ್ತೂರು ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಿರುವುದನ್ನು ವಿರೋಧಿಸಿ, ಕೃತ್ಯ ಎಸಗಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಪುತ್ತೂರು ಬಿಜೆಪಿಯಿಂದ ಪುತ್ತೂರು ನಗರ ಪೆÇಲೀಸ್ ಠಾಣೆಗೆ ದೂರು ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ

ಬಿಜೆಪಿಗೆ ಹೀನಾಯ ಸೋಲು : ನಳಿನ್, ಡಿವಿಎಸ್ ಶ್ರದ್ಧಾಂಜಲಿ ಬ್ಯಾನರಿಗೆ ಚಪ್ಪಲಿ ಹಾರ

ಪುತ್ತೂರು: ನಳಿನ್ ಕುಮಾರ್ ಕಟೀಲ್ ಹಾಗೂ ಡಿ.ವಿ. ಸದಾನಂದ ಗೌಡ ಅವರೇ ಬಿಜೆಪಿ ಸೋಲಿಗೆ ಕಾರಣ ಎಂಬ ಒಕ್ಕಣೆಯ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಲಾಗಿದೆ.ಪುತ್ತೂರು ಸರ್ಕಾರಿ ಬಸ್ ನಿಲ್ದಾಣ ಮುಂಭಾಗ ಈ ಬ್ಯಾನರನ್ನು ಅಳವಡಿಸಿದ್ದು, ತವರು ಕ್ಷೇತ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂಗೆ ಸೋಲಿನ ಬಿಸಿ ತಟ್ಟುವಂತೆ ಮಾಡಲಾಗಿದೆ. ಭಾವಪೂರ್ಣ ಶ್ರದ್ಧಾಂಜಲಿ ಎಂದು ಬ್ಯಾನರ್ ಹಾಕಿ, ಅದರಲ್ಲಿ ಬಿಜೆಪಿ ಸೋಲಿಗೆ ನೀವೇ ಕಾರಣ ಎಂಬ ಬರಹವನ್ನು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಭೇಟಿ

ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಅವರು ಶನಿವಾರ ಸಂಜೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರಿಗೆ ಆಗಮಿಸಿದ ಅಶೋಕ್ ಕುಮಾರ್ ರೈ ಅವರಿಗೆ ಕಬಕದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಅಲ್ಲಿಂದ ನೇರವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದರು. ಅಲ್ಲಿಯೂ ಅಶೋಕ್ ಕುಮಾರ್ ರೈ ಅವರ ದೊಡ್ಡ ಸಂಖ್ಯೆಯ ಅಭಿಮಾನಿಗಳು

ರಿಷಭ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ

ಕುಕ್ಕೆ ಸುಬ್ರಹ್ಮಣ್ಯ: ಕಾಂತಾರ ಸಿನಿಮಾ ಖ್ಯಾತಿಯ ರಿಷಭ್ ಶೆಟ್ಟಿ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದೇಶದಾಧ್ಯಂತ ಗಮನ ಸೆಳೆದ ಕಾಂತರ ಸಿನಿಮಾದ ನಟ, ನಿರ್ದೇಶಕ ರಿಷಭ್ ಶೆಟ್ಟಿ ಕುಟುಂಬ ಸಮೇತರಾಗಿ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದರು. ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಅಭಿಮಾನಿಗಳು ಸೆಲ್ಪಿಗಾಗಿ ಮುಗಿಬಿದ್ದರು.