Home ಕರಾವಳಿ Archive by category ಪುತ್ತೂರು (Page 3)

ಪುತ್ತೂರು : ಅಂತರ್ ರಾಜ್ಯ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು

ಕಳೆದ ಒಂದೂವರೆ ತಿಂಗಳ ಹಿಂದೆ ಚಿನ್ನಾಭರಣ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಅಂತರ್ ರಾಜ್ಯ ಕಳ್ಳತನ ಪ್ರಕರಣವನ್ನು ಭೇದಿಸಿದ ಪುತ್ತೂರು ನಗರ ಪೊಲೀಸರು ತಮಿಳುನಾಡಿನ ಮಹಿಳೆಯನ್ನು ಬಂಧಿಸಿ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಫೆ.12ರಂದು ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ರೇಷ್ಮಾ ಎನ್ ಎಂಬವರ

ವಿಟ್ಲ: ಎರಡು ಅಂಗಡಿಗಳಿಗೆ ಕನ್ನ

ವಿಟ್ಲ: ವಿಟ್ಲ ಪೇಟೆ ಎರಡು ಅಂಗಡಿಗಳಿಗೆ, ವಿಟ್ಲದ ಮೇಗಿನ ಪೇಟೆಯ ಒಂದು ಅಂಗಡಿಗೆ ಶುಕ್ರವಾರ ರಾತ್ರಿ ಕಳ್ಳರು ನುಗ್ಗಿ ಹಣ ಹಾಗೂ ದಿನಸಿ ಸಾಮಾಗ್ರಿ ಕದ್ದೋಯ್ಯಿದಿದ್ದಾರೆ. ಚುನಾವಣೆ ಹಿನ್ನಲೆ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ನಿಯೋಜನೆಗೊಳಿಸಲಾಗಿದ್ದು, ಅವರು ತಡ ರಾತ್ರಿ ಹೊತ್ತಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ, ಕಳ್ಳರು ಸಲೀಸಾಗಿ ಬಂದು ಕಳ್ಳತನ ನಡೆಸಿ, ಅಷ್ಟೇ ಸಲೀಸಾಗಿ ತಪ್ಪಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ ವಿಟ್ಲ ಪೊಲೀಸ್

ಮಂಗಳೂರು : ಕರಾವಳಿಯಲ್ಲಿ ಮೂರು ದಿನಗಳ ಕಾಲ ಮಳೆ

ಕರ್ನಾಟಕದ ಕರಾವಳಿ ಮತ್ತು ಮಲೆನಾಡು, ತೆಂಕಣ ಒಳನಾಡಿನಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿಯಲ್ಲಿ ಮೋಡ ಮುಚ್ಚಿದ ವಾತಾವರಣ ಮುಂದುವರಿಯಲಿದೆ. ಗಾಳಿ ಕೂಡ ಬಲವಾಗಿ ಬೀಸಲಿದೆ ಎನ್ನಲಾಗಿದೆ. ಕರ್ನಾಟಕದ ಬಡಗಣ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಕೊಪ್ಪಳದಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅದು ಆ ಸುತ್ತ ಕೆಲ ದಿನಗಳ ಕಾಲ ‌ಮುಂದುವರಿಯುತ್ತದೆ ಎಂದೂ ತಿಳಿಸಲಾಗಿದೆ.

ಪುತ್ತೂರು : ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ನಿಧನ

ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ(60)ಯವರು ದಿಡೀರ್ ಅಸ್ವಸ್ಥಗೊಂಡು ಮಾ 13ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ ಅವರ ಆರೋಗ್ಯದಲ್ಲಿ ನಸುಕಿನ ಜಾವ 2 ಗಂಟೆ ಸುಮಾರಿಗೆ ಏರು ಪೇರು ಉಂಟಾಗಿದ್ದು, ಬಳಿಕ ಕೆಲವೇ ಕ್ಷಣಗಳಲ್ಲಿ ನಿಧನ ಹೊಂದಿರುವುದಾಗಿ ಅವರ ಆಪ್ತ ವಲಯದವರು ತಿಳಿಸಿದ್ದಾರೆ.ನಿನ್ನೆ ರಾ ತ್ರಿಯವರೆಗೂ ಕ್ರಿಯಾಶೀಲರಾಗಿ ವಿವಿಧ ಚಟುವಟಿಕೆಗಳಲ್ಲಿ

ಪುತ್ತೂರು: ಕರ್ನಾಟಕ ಪೊಲೀಸ್ ರನ್: ಮಾದಕ ದ್ರವ್ಯಗಳ ದುಷ್ಪರಿಣಾಮದ ಜಾಗೃತಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಕರ್ನಾಟಕ ಪೊಲೀಸ್ ರನ್ – 2024 ಕಾರ್ಯಕ್ರಮಕ್ಕೆ ಪುತ್ತೂರಿನಲ್ಲಿ ದರ್ಬೆ ಬೈಪಾಸ್ ವೃತ್ತದಿಂದ ನಗರ ಪೊಲೀಸ್ ಠಾಣೆಯ ತನಕದ ಪೊಲೀಸ್ ರನ್ ಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ

ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆ-ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಪುತ್ತೂರು: ರಾಜ್ಯಾದ್ಯಂತ ನಡೆದ ಹಿಂದೂ ವಿರೋಧಿ ಕೃತ್ಯವನ್ನು ವಿರೋಧಿಸಿ ಪುತ್ತೂರಿನಲ್ಲಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು. ದರ್ಬೆ ವೃತ್ತದ ಬಳಿ ಜಮಾವಣೆಗೊಂಡ ಸಮಿತಿ ಕಾರ್ಯಕರ್ತರು ದರ್ಬೆ ವೃತ್ತದ ಬಳಿ ಕುಳಿತು ಪ್ರತಿಭಟನೆ ನಡೆಸಿದರು. ಪ್ರತಭಟನಾಕಾರರನ್ನು ಅಲ್ಲಿಂದ ತೆರವುಗೊಳಿಸಲು ಪೊಲೀಸರು ಮುಂದಾದಾಗ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ

ಅಪಘಾತಗೊಂಡ ಯುವಕ ಚಿಕಿತ್ಸೆ ಫಲಿಸದೆ ಸಾವು

ಪುತ್ತೂರು: ಕಳೆದ ಒಂದು ವಾರಗಳ ಹಿಂದೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್‌ನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಬೀರ್ಮಕಜೆ ಎಂಬಲ್ಲಿನ ನಿವಾಸಿ ಪ್ರಸಾದ್(27) ಮೃತಪಟ್ಟ ಯುವಕ. ನಗರದ ಬೈಪಾಸ್‌ನಲ್ಲಿರುವ ಗ್ಯಾರೇಜ್‌ನಲ್ಲಿ ಮೆಕಾನಿಕ್ ಆಗಿರುವ

ಪುತ್ತೂರು: ಬಿಜೆಪಿಯಿಂದ ಗ್ರಾಮ ಚಲೋ ಕಾರ್ಯಾಗಾರ

ಪುತ್ತೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಭಾರಿ ದೊಡ್ಡ ಪ್ರಮಾಣದಲ್ಲಿ ಮುನ್ನಡೆ ಒದಗಿಸಿಕೊಡುವ ಭರವಸೆಯನ್ನು ಪುತ್ತೂರು ಕ್ಷೇತ್ರದ ಎಲ್ಲಾ ಕಾರ್ಯಕರ್ತರು ನೀಡಿದ್ದಾರೆ. ಈ ಕಾರಣದಿಂದ ಜಿಲ್ಲೆಯಲ್ಲಿ 3 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದೆ ಗೆಲ್ಲುತ್ತೇವೆ. ಮರಳಿ ಪ್ರಧಾನಿ ನರೇಂದ್ರ ಮೋದಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತು ಪ್ರಧಾನಿ

ಪುತ್ತೂರು : ಬೈಕ್ ಹಾಗೂ ಮಿನಿ ಗೂಡ್ಸ್ ವಾಹನ ಡಿಕ್ಕಿ : ಬೈಕ್ ಸವಾರ ಸಾವು

ರಾಮಕುಂಜ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ. ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್(20ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶ್ರೀಜಿಸ್‌ರವರು ರಾಮಕುಂಜ

ಕಡಬ: ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರಕಾರೀ ಪ್ರಥಮ ದರ್ಜೆ ಕಾಲೇಜು ಬಳಿ ಮಾಸ್ಕ್ ಮತ್ತು ಹ್ಯಾಟ್ ದರಿಸಿದ್ದ ದಾಳಿಕೋರನೊಬ್ಬನು ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಕಾಲೇಜು ಆವರಣದಲ್ಲಿ ನಿಂತಿದ್ದಾಗ ಆಮ್ಲ ದಾಳಿ ಆಗಿದೆ. ಮುಖಕ್ಕೆ ಗಂಭಿರ ಗಾಯಗಳಾಗಿರುವುದಾಗಿ ಹೇಳಲಾಗಿದೆ. ಸಂತ್ರಸ್ತ ಯುವತಿಯರನ್ನು ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರಂಭಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಕರೆ