Home ಕರಾವಳಿ Archive by category ಪುತ್ತೂರು (Page 36)

ಪುತ್ತೂರು : ಬಸ್ ಇಲ್ಲದ ಮೇಲೆ ಪಾಸ್ ಯಾಕೆ? ವಿದ್ಯಾರ್ಥಿಗಳ ಆಕ್ರೋಶ

ಪುತ್ತೂರು: ರೆಂಜ ಮಾರ್ಗವಾಗಿ ಸುಳ್ಯ ಪದವಿಗೆ ಬಸ್ ಸಂಪರ್ಕ ಕಲ್ಪಿಸಬೇಕೆಂದು ಆಗ್ರಹಿಸಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಜ.3 ರಂದು ಪುತ್ತೂರು ತಾಲೂಕು ಆಡಳಿತ ಸೌಧ ಮತ್ತು ಕೆಎಸ್‍ಆರ್‍ಟಿಸಿ ವಿಭಾಗೀಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಬಸ್ ಇಲ್ಲದ ಮೇಲೆ ನಮಗೆ ಪಾಸ್ ಯಾಕೆ ಎಂದು ಆಕ್ರೋಶ

ಅಡಕೆಗೆ ಭವಿಷ್ಯವಿಲ್ಲ ಗೃಹ ಸಚಿವರ ಬಾಲಿಶತನದ ಹೇಳಿಕೆಗೆ ಖಂಡನೆ, ಕಿಸಾನ್ ಘಟಕದ ವತಿಯಿಂದ ಪ್ರತಿಭಟನೆ

ಪುತ್ತೂರು:ಪುತ್ತೂರು ಬ್ಲಾಕ್ ಕಾಂಗ್ರೆಸ್ ಹಾಗೂ ಬ್ಲಾಕ್ ಕಿಸಾನ್ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ರಾಜ್ಯ ಗೃಹ ಸಚಿವರು ಅಡಕೆ ಬೆಳೆಗಾರರ ಕುರಿತು ವಿರೋಧಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟನಾ ಸಭೆ ಸೋಮವಾರ ಅಮರ್ ಜವಾನ್ ಸ್ಮಾರಕದ ಬಳಿಕ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ, ಜಿಲ್ಲೆಯ ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿರುವ ಅಡಕೆಯ ಕುರಿತು ಗೃಹ ಸಚಿವರು ಅಡಕೆಗೆ ಭವಿಷ್ಯವಿಲ್ಲ ಎಂದು ವಿರೋಧಿ ಹೇಳಿಕೆ

ಪುತ್ತೂರಿನಲ್ಲಿ ರಸ್ತೆ ನಿರ್ಮಾಣಕ್ಕೆ ತಹಶೀಲ್ದಾರ್‍ಗೆ ಮನವಿ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಪಳ್ಳತ್ತೂರು -ಬಂಟಕಲ್ಲು-ಬಾರೆಕೊಚ್ಚಿ-ಕಟ್ಟತ್ತಾರು ಕಾಲನಿಗೆ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ರೈತ ಸಂಘ ಹಸಿರು ಸೇನೆ (ವಾಸುದೇವ ಬಣ) ಹಾಗೂ ಸ್ಥಳೀಯ ನಿವಾಸಿಗಳು ಪುತ್ತೂರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.ಈ ಭಾಗದಲ್ಲಿ ಸುಮಾರು ೩೦ ಮನೆಗಳಿಗೆ ಸಂಪರ್ಕ ರಸ್ತೆಯಿಲ್ಲ. ಹಲವು ದಶಕಗಳಿಂದ ಇವರು ವಾಸಿಸುತ್ತಿದ್ದರೂ ಅನಾರೋಗ್ಯದಂತಹ ತುರ್ತು ಸಂದರ್ಭದಲ್ಲಿ ರೋಗಿಯನ್ನು ಹೊತ್ತುಕೊಂಡೇ ಸಾಗಬೇಕಾದ ಸ್ಥಿತಿ

ಕೋವಿಡ್ ನೆಪದಲ್ಲಿ ಭಾರತ ಜೋಡೋ ಯಾತ್ರೆ ತಡೆಯುವ ಷಡ್ಯಂತ್ರ : ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ ಆರೋಪ

ಪುತ್ತೂರು: ಭಾರತವನ್ನು ಬೆಸೆಯುವ ನಿಟ್ಟಿನಲ್ಲಿ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ ಜೋಡೋ ಯಾತ್ರೆಯಿಂದ ಕಂಗೆಟ್ಟಿರುವ ಬಿಜೆಪಿಯು ಇದೀಗ ಅದನ್ನು ತಡೆಯುವ ನಿಟ್ಟಿನಲ್ಲಿ ಕೋವಿಡ್ ನೆಪ ಬಳಸಿಕೊಳ್ಳುತ್ತಿದೆ ಎಂದು ಕೆಪಿಸಿಸಿ ರಾಜ್ಯ ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ ಆರೋಪಿಸಿದ್ದಾರೆ. ಅವರು ಶನಿವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜೋಡೋ ಯಾತ್ರೆಯನ್ನು ನಿಲ್ಲಿಸಿ ಇಲ್ಲದಿದ್ದಲ್ಲಿ ಕೋವಿಡ್

ಕುಟ್ರುಪ್ಪಾಡಿ ಗ್ರಾ.ಪಂ.ನ ಜಾಗಕ್ಕೆ ಅಗಳು ನಿರ್ಮಾಣಕ್ಕೆ ವಿರೋಧ : ತೀವ್ರ ವಿರೋಧದ ಹಿನ್ನೆಲೆಯಲ್ಲಿ ಸ್ಥಗಿತಗೊಂಡ ಕಾರ್ಯಾಚರಣೆ

ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಹೊಸ್ಮಠ ಬಲ್ಯದಲ್ಲಿರುವ ಕಾಡಿಗೆ ಮನ್ನಾ ಜಾಗಕ್ಕೆ ಬೇಲಿ ನಿರ್ಮಿಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಅಗಳು ನಿರ್ಮಾಣಕ್ಕೆ ಮುಂದಾದಾಗ ಇಲ್ಲಿನ ಇನ್ನೊಂದು ಗುಂಪು ಅದಕ್ಕೆ ತೀವೃ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು. ಶುಕ್ರವಾರ ಮಧ್ಯಾಹ್ನದ ಹೊತ್ತಿಗೆ ಪಂಚಾಯಿತಿಯವರು ಪಂಚಾಯಿತಿ ಅಧ್ಯಕ್ಷ ಮೋನಪ್ಪ ಗೌಡ(ಮೋಹನ ಗೌಡ) ಕೆರೆಕೋಡಿ ಅವರ ನೇತೃತ್ವದಲ್ಲಿ

ನ್ಯಾಯಾಲಯದಿಂದ ಸ್ಟೇ ತಂದರೂ ಜೆಸಿಬಿಯಲ್ಲಿ ಅಗೆದು ಕೃಷಿಗೆ ಹಾನಿ : ಹಿಂದುಳಿದ ವರ್ಗಗಳ ಆಯೋಗದ ಸಹಾಯವಾಣಿ ಮೂಲಕ ಹೋರಾಟ

ಸುಮಾರು ಮೂರು ಎಕ್ರೆ ಜಾಗ ಹೊಂದಿರುವ ನನ್ನ ವರ್ಗ ಜಾಗದಲ್ಲಿ ಕಾಮಗಾರಿ ಮಾಡಲು ನ್ಯಾಯಾಲಯದಿಂದ ಸ್ಟೇ ತಂದರೂ ಕೆಲವೊಂದು ವ್ಯಕ್ತಿಗಳು ಈ ಜಾಗದಲ್ಲಿ ಜೆಸಿಬಿಯಿಂದ ಅಗೆದು ತನ್ನ ಕೃಷಿ ಭೂಮಿಯನ್ನು ಹಾಳು ಮಾಡುತ್ತಿದ್ದಾರೆ. ಈ ಕುರಿತು ಮಹಿಳಾ ಆಯೋಗ, ಹಿಂದುಳಿದ ವರ್ಗಗಳ ಆಯೋಗ ಸಹಾಯವಾಣಿಯ ಮೂಲಕ ಹೋರಾಟ ಮುಂದುವರಿಸಲಾಗುವುದು ಎಂದು ಮುಂಡೂರು ಗ್ರಾಮದ ರವೀಂದ್ರ ಎಂ. ಮುಳಾರು ಮನೆ ಎಂಬವರು ತಿಳಿಸಿದ್ದಾರೆ. ಅವರು ಪುತ್ತೂರಿನ ಪ್ರೆಸ್‍ಕ್ಲಬ್‍ನಲ್ಲಿ

ಭಜನೆ ಮತ್ತು ಭಜಕರ ಬಗ್ಗೆ ನಿಂದನಾ ಪೋಸ್ಟ್ ವಿಚಾರ : ಸಂಜೀವ ಪೂಜಾರಿಯನ್ನು ಬಂಧಿಸದಿದ್ದರೆ ಬೀದಿಗಿಳಿದು ಹೋರಾಟ

ಕಡಬ: ಭಜನೆ ಮತ್ತು ಭಜಕರ ಹಾಗು ಹಿಂದೂ ಧರ್ಮದ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಿರಂತರ ಪೋಸ್ಟ್ಗಳನ್ನು ಹಾಕುತ್ತಿರುವ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ದ ಜಾಮೀನು ರಹಿತ ಪ್ರಕರಣ ದಾಖಲಾದರೂ ಆವರನ್ನು ಇನ್ನೂ ಪೊಲೀಸರು ಬಂಧಿಸಿಲ್ಲ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷದ್ ಭಜರಂಗದಳ ಕಡಬ ಪ್ರಖಂಡ ನೇತೃತ್ವದಲ್ಲಿ ಕಡಬ ಠಾಣಾ ಮುಂಭಾಗದ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಬಿಜೆಪಿ

ಗೃಹ ಸಚಿವರ ಹೇಳಿಕೆ ಅಡಿಕೆ ಬೆಳೆಗಾರರಿಗೆ ಮಾಡಿದ ಅವಮಾನ : ಪುತ್ತೂರಿನಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿಕೆ

ಗೃಹ ಸಚಿವರು ಅಡಿಕೆಗೆ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸಬೇಕು. ಅದು ಅಗತ್ಯವಿಲ್ಲ ಎಂಬ ರೀತಿ ಹೇಳಿಕೆಯನ್ನು ನೀಡಿದ್ದಾರೆ. ಈ ಹೇಳಿಕೆ ಅಡಿಕೆ ಬೆಳೆಗಾರರಿಗೆ ಮಾಡಿದಂತಹ ಅವಮಾನವಾಗಿದೆ ಎಂದು ಮಾಜಿ ಶಾಸಕ ಶಕುಂತಳಾ ಶೆಟ್ಟಿ ಹೇಳಿದರು.ಅವರು ಪುತ್ತೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದರು. ಅಡಿಕೆ ಬೆಳೆ ಬೆಳೆಯುವುದಕ್ಕೆ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸಬೇಕು ಎನ್ನುವ ಬದಲು ಅವರು ಅದಕ್ಕೆ ಯಾವ ರೀತಿ ಪರಿಹಾರ ನೀಡಬಹುದು ಎಂಬುವುದನ್ನು ಯೋಚಿಸಬೇಕಾಗಿದೆ.

ಹೃದಯಾಘಾತದಿಂದ ಹೆಚ್ಚುತ್ತಿರುವ ಮಕ್ಕಳ ಸಾವು ಪ್ರಕರಣ; ತನಿಖೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು : ಶಕುಂತಳಾ ಶೆಟ್ಟಿ

ಪುತ್ತೂರಿನಲ್ಲಿ ಇತ್ತೀಚೆಗೆ ಮಕ್ಕಳು ಸಾವನ್ನಪ್ಪುವ ವಿಚಾರಗಳು ಹೆಚ್ಚಾಗಿ ಕಾಣುತ್ತಿದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಹೆಚ್ಚಿನ ಗಮನಹರಿಸಿಬೇಕೆಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.ಅವರು ಪುತ್ತೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಇದು ಪುತ್ತೂರಿನಲ್ಲಿ ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಸಂಭವಿಸುತ್ತಿದೆ. ಇದನ್ನು ಆರೋಗ್ಯ ಇಲಾಖೆ ಗಮನಹರಿಸಬೇಕು. ಯಾವ ಕಾರಣದಿಂದ ಈ ಕಾಯಿಲೆಗಳು ಬರುತ್ತಿದೆ. ಸಣ್ಣ ವಯಸ್ಸಿನವರಿಗೂ ಹೃದಯಾಘಾತ,

ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಕಾರು ಅಪಘಾತ

ಪುತ್ತೂರು ಬೈಪಾಸ್ ರಸ್ತೆಯಲ್ಲಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರ ಕಾರು ಅಪಘಾತ ಪ್ರಾಣಪಾಯದಿಂದ ಪಾರು. ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರ ಖಾಸಗಿ ಒಡೆತನದ ಕಾರೊಂದು ಪುತ್ತೂರು ಬೈಪಾಸ್ ರಸ್ತೆ ನೂಜಿ ಎಂಬಲ್ಲಿ ಡಿ.29 ರಂದು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಡಾ.ದೀಪಕ್ ರೈ ದಂಪತಿ ಸಮೇತ ಮಂಗಳೂರು ಕಡೆಯಿಂದ ಕಾರಿನಲ್ಲಿ ಬರುತ್ತಿದ್ದ ವೇಳೆ ಬೈಪಾಸ್ ರಸ್ತೆಯ ನೂಜಿ ಎಂಬಲ್ಲಿ ಕಾರಿನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೆ