Home ಕರಾವಳಿ Archive by category ಪುತ್ತೂರು (Page 38)

ವಕೀಲ ಕುಲ್‌ದೀಪ್ ಶೆಟ್ಟಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ : ಪುತ್ತೂರು ವಕೀಲರ ಸಂಘದಿಂದ ಪ್ರತಿಭಟನೆ

ಯುವ ವಕೀಲ ಕುಲ್‌ದೀಪ್ ಶೆಟ್ಟಿಯವರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ , ದೌರ್ಜನ್ಯ ಎಸಗಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ವಕೀಲರ ಸಂಘದಿಂದ ಪುತ್ತೂರು ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ. ನಡೆಯಿತು ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ ಅವರು ಮಾತನಾಡಿ ಏಕಾಏಕಿ ಮನೆಗೆ ಆಗಮಿಸಿದ ಪೊಲೀಸರು ವಕೀಲ

ಕ್ಷುಲ್ಲಕ ಕಾರಣಕ್ಕೆ ಸಹೋದರನ ಕೊಲೆ

ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಬಳಿ ನ್ಯೂ ಲೈಫ್ ಫಿಲಾಶಿಪ್ ಚರ್ಚ್ ಹತ್ತಿರದ ಸೈಟ್ನಲ್ಲಿ ಗಾರೆ ಕೆಲಸ ಮಾಡುವ ನಿಂಗಪ್ಪ ಗೌಡ ಮತ್ತು ಮಹಾದೇವ ಎಂಬ ಸಹೋದರ ನಡುವೆ ಕ್ಷುಲ್ಲಕ್ಕ ಕಾರಣಕ್ಕೆ ಗಲಾಟೆ ನಡೆದಿದ್ದು, ಮಹಾದೇವ ಎಂಬುವವರು ಮೃತಪಟ್ಟಿದ್ದಾರೆ ನಿಂಗಪ್ಪ ಎಂಬುವನು ಮಹಾದೇವನಿಗೆ ಕಬ್ಬಿಣದ ರಾಡಿನಿಂದ ತಲೆಗೆ ಮತ್ತು ಮೈಯಿಗೆ ಬಲವಾಗಿ ಹೊಡೆದು ಹಲ್ಲೆಗೊಳಿಸಿ , ಅಲ್ಲಿಂದ ನಿಂಗಪ್ಪ ಗೌಡನು ಓಡಿ ಹೋಗಿದ್ದು , ಗಾಯಗೊಂಡ ಮಹದೇವನನ್ನು ಪುತ್ತೂರು ಸಾರ್ವಜನಿಕ ಸರ್ಕಾರಿ

ಪುತ್ತೂರು : ಮತದಾರರ ಗುರುತಿನ ಚೀಟಿ ಅನಧಿಕೃತ ವಿತರಣೆ ಆರೋಪ

ಪುತ್ತೂರು: ಮತದಾರನ ಗುರುತಿನ ಚೀಟಿಯನ್ನು ಅನಧಿಕೃತವಾಗಿ ವಿತರಣೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರಿನ ಜನಸೇವಾ ಕೇಂದ್ರವೊಂದರ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಅಂಗಡಿಗೆ ಬೀಗ ಹಾಕಿದ ಘಟನೆ ನಡೆದಿದೆ. ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ನಗರದ ಹಳೆ ತಾಲೂಕು ಕಚೇರಿ ರಸ್ತೆಯಲ್ಲಿರುವ ಜನಸೇವಾ ಕೇಂದ್ರದ ಮೇಲೆ ದಾಳಿ ಮಾಡಿದೆ. ತಹಸೀಲ್ದಾರ್ ನಿಸರ್ಗ ಪ್ರಿಯ ಮತ್ತು ತಾಲೂಕು ಕಚೇರಿಯ ಚುನಾವಣಾ ಶಾಖೆಗೆ

ಗೃಹರಕ್ಷಕ ದಳ ಸಿಬ್ಬಂದಿಗಳ ಕುಂದು ಕೊರತೆಗಳ ಬಗ್ಗೆ ಮನವರಿಕೆ : ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿರುವ ಗೃಹ ಸಚಿವರು

ಸರ್ಕಾರಿ ಗೌರವಧನಾಧಾರಿತ ಕ್ಷೇಮಭಿವೃದ್ಧಿ ಮಹಾಸಂಘದ ಪದಾಧಿಕಾರಿಗಳು ಗೃಹ ಸಚಿವರಾದ ಅರಗ ಜ್ಞಾನೇಂದ್ರ ರವರನ್ನು ಭೇಟಿ ಮಾಡಿ ಗೃಹರಕ್ಷಕ ದಳ ಸಿಬ್ಬಂದಿಗಳ ಸಮಸ್ಯೆ ಮತ್ತು ಕುಂದು ಕೊರತೆಗಳ ಬಗ್ಗೆ ಸಚಿವರಿಗೆ ತಿಳಿಸಿ, ಮುಂಬರುವ ಅಧಿವೇಶನದಲ್ಲಿ ಸಿಬ್ಬಂದಿಗಳ ಕೊರತೆಗಳನ್ನು ಚರ್ಚಿಸಿ ನ್ಯಾಯಯುಕ್ತವಾದ ಬೇಡಿಕೆಗಳನ್ನು ಈಡೇರಿಸುವಂತೆ ವಿನಂತಿಸಿಕೊಂಡಿದ್ದಾರೆ. ಮನವಿ ಸ್ವೀಕರಿಸಿದ ಗೃಹ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ

ಲವ್ ಜಿಹಾದ್ ಗೆ ನೀವು  ಬಲಿಯಾಗಬೇಡಿ ಕಟೌಟ್

ಪುತ್ತೂರು; ಹಿಂದೂ ಹುಡುಗಿ ಶ್ರದ್ಧಾಳ ಹತ್ಯೆ. ದೇಹವನ್ನು 35 ತುಂಡು ಮಾಡಿದರು. ಕಾರಣ ಲವ್ ಜಿಹಾದ್. ಇದಕ್ಕೆ ನೀವು ಬಲಿಯಾಗಬೇಡಿ’ ಕಟೌಟ್ ಅನ್ನು ವೈದ್ಯ, ಹಿಂದುತ್ವ ಪರ ಸಂಘಟನೆಗಳಲ್ಲಿ ಸಕ್ರಿಯರಾಗಿರುವ ಡಾ.ಎಂ.ಕೆ. ಪ್ರಸಾದ್ ಅವರ ಹೆಸರಿನಲ್ಲಿ ಅಳವಡಿಸಲಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಸಿರುವ ಎಂ. ಕೆ. ಪ್ರಸಾದ್’ ನಾನು ಯಾವುದೇ ಧರ್ಮ ಅಥವಾ ಸಮುದಾಯದ ವಿರುದ್ಧ ಅಲ್ಲ. ಆದರೆ, ನಮ್ಮ ಸುತ್ತಮುತ್ತಲ ಬೆಳವಣಿಗೆ ಬಗ್ಗೆ ಹದಿಹರೆಯದವರಿಗೆ ಅರಿವು ಇರಬೇಕು. ಬಣ್ಣದ

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಸಚಿವ ಬೈರತಿ ಬಸವರಾಜ್ ಭೇಟಿ

ಸುಬ್ರಹ್ಮಣ್ಯ, ನ.20: ಒಂಬತ್ತು ಸಾವಿರ ಕೋಟಿ ರೂಪಾಯಿಗಳನ್ನು ನಮ್ಮ ಸರಕಾರ ಅಭಿವೃದ್ಧಿಗೆ ಇರಿಸಿದೆ. ಸರಕಾರದ ಸಂಕಲ್ಪ ದಾಹಮುಕ್ತ ಕರ್ನಾಟಕ ಮಾಡಬೇಕೆಂಬುದು. ಮುಂದಿನ ಎರಡು ಮೂರು ತಿಂಗಳಲ್ಲಿ ಅದನ್ನು ಕಾರ್ಯಗತ ಗೊಳಿಸಲು ಪ್ರಯತ್ನಿಸಲಾಗುವುದು ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದರು. ಅವರು ರವಿವಾರ ರಾತ್ರಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು. ನಗರಾಭಿವೃದ್ಧಿ ಇಲಾಖೆ ವತಿಯಿಂದ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಕರೆ ಉತ್ಸವ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.20 ರಂದು ದೇವಳದ ತಂತ್ರಿ ಬ್ರಹ್ಮಶ್ರೀ ವೇ ಮೂ ಕುಂಟಾರು ರವೀಶ್ ತಂತ್ರಿಯವರ ಮಾರ್ಗದರ್ಶನದಲ್ಲಿ ವೇ ಮೂ ಶ್ರೀಧರ್ ತಂತ್ರಿಯವರ ನೇತೃತ್ವದಲ್ಲಿ ಪೂಕರೆ ಉತ್ಸವ ವಿಜೃಂಭಣೆಯಿಂದ ನಡೆದಿದೆ. ನಂದಿ ಮುಖವಾಡ ಧರಿಸಿದ `ಎರುಕೊಳ’ ದೈವದೊಂದಿಗೆ ದೇವರ ಉತ್ಸವ ಬರುವುದೇ ವಿಶೇಷ. ಸಂಜೆ ದೇವರು ಉತ್ಸವ ಸವಾರಿಗೆ ದೇವಳದ ಪಶ್ಚಿಮ ದ್ವಾರದಿಂದ ಹೊರಟು ಪೇಟೆ ಸವಾರಿಯಲ್ಲಿ ನಂದಿಯ ಮುಖವಾಡ

ವೈದ್ಯ ಡಾ. ಕೃಷ್ಣಮೂರ್ತಿ ಸಂರ್ಪಂಗಳ ಅನುಮಾನಾಸ್ಪದ ಸಾವು : ಸೂಕ್ತ ತನಿಖೆಗೆ ಆಗ್ರಹಿಸಿ ವಿಹಿಂಪ ನೇತೃತ್ವದಲ್ಲಿ ಪ್ರತಿಭಟನೆ

ಪುತ್ತೂರು : ಮೂಲತ: ಪುತ್ತೂರಿನವರಾದ ಬದಿಯಡ್ಕದ ವೈದ್ಯ ಡಾ.ಕೃಷ್ಣಮೂರ್ತಿ ಸರ್ಪಂಗಳ ಅವರ ಅನುಮಾನಾಸ್ಪದ ಸಾವನ್ನು ಖಂಡಿಸಿ ಮತ್ತು ಸೂಕ್ತ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಸೋಮವಾರ ಸಂಜೆ ಪುತ್ತೂರು ನಗರದ ಅಮರ ಜವಾನ್ ಜ್ಯೋತಿ ಸ್ಮಾರಕದ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಪುತ್ತೂರಿನ 100ಕ್ಕೂ ಅಧಿಕ ವೈದ್ಯರು ಪಾಲ್ಗೊಂಡರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಜರಂಗದಳ ಪ್ರಾಂತ ಸಹ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ ಅವರು,

ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ : ಜಾತ್ರಾ ಮಹೋತ್ಸವದ ಪ್ರಯುಕ್ತ ನಡೆದ ಪೂರ್ವಭಾವಿ ಸಭೆ

ಕಡಬ: ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.21ರಿಂದ ನಡೆಯಲಿರುವ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು.ಬ್ರಹ್ಮರಥೋತ್ಸವ ಬಗ್ಗೆ ಚರ್ಚೆ ನಡೆಯಿತು. ಬ್ರಹ್ಮರಥೋತ್ಸವ ಸೇವೆಯಲ್ಲಿ ಭಕ್ತರಿಗೆ ಗರಿಷ್ಠ 100 ಸೇವಾ ರಶೀದಿಗಳನ್ನು ನೀಡಲು ಮತ್ತು ಸೇವಾರ್ಥಿಗಳಿಗೆ

ನವಂಬರ್ 18 ರಾಜ್ಯದಾದ್ಯಂತ ಸಮುದಾಯ ಆರೋಗ್ಯ ನೌಕರರ ಪ್ರತಿಭಟನೆ

ಪುತ್ತೂರು: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಮುದಾಯ ಆರೋಗ್ಯ ನೌಕರರ ಸಂಘದ ನೇತೃತ್ವದಲ್ಲಿ ನವೆಂಬರ್ 18 ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಯಲಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ನೌಕರರ ಸಂಘದ ದಕ್ಷಿಣಕನ್ನಡ ಜಿಲ್ಲಾಧ್ಯಕ್ಷೆ ಜ್ಯೋತಿ. ಜೆ.ಆರ್ ಹೇಳಿದರು. ಪುತ್ತೂರು ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಾರತ ಸರಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ