Home ಕರಾವಳಿ Archive by category ಬಂಟ್ವಾಳ (Page 21)

ಅಭಿವೃದ್ಧಿ ಕಾರ್ಯಕ್ಕೆ ಜನರು ಒಲವು ತೋರಿ ಗೆಲುವು ತಂದುಕೊಟ್ಟಿದ್ದಾರೆ : ರಾಜೇಶ್ ನಾಯ್ಕ್

ಬಂಟ್ವಾಳ: ನನ್ನ ಪಕ್ಷದ ಕಾರ್ಯಕರ್ತರು ಅತ್ಯಂತ ಶ್ರದ್ಧೆ ಹಾಗೂ ನಿಷ್ಠೆಯಿಂದ ದುಡಿದಿರುವುದೇ ನನ್ನ ಗೆಲುವಿಗೆ ಪೂರಕವಾದ ಅಂಶವಾಗಿದೆ. ಕಳೆದ ಐದು ವರ್ಷದ ಅಧಕಾರವಧಿಯಲ್ಲಿ ಮಾಡಿದ ಅಭಿವೃದ್ದಿ ಕಾರ್ಯ ಹಾಗೂ ಈ ಭಾಗದಲ್ಲಿ ಶಾಂತಿ ಸೌಹಾರ್ದತೆ ನೆಲೆ ನಿಂತಿರುವುದರಿಂದ ಜನರು ಒಲವು ತೋರಿಸಿ ಗೆಲುವು ತಂದು ಕೊಟ್ಟಿದ್ದಾರೆ ಎಂದು ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ

ಬಂಟ್ವಾಳ ಎಸ್.ವಿ.ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ : 100% ಫಲಿತಾಂಶ

ಬಂಟ್ವಾಳದ ಎಸ್.ವಿ.ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿದೆ.ಪರೀಕ್ಷೆ ಬರೆದ 96 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಯು 100% ಫಲಿತಾಂಶ ಪಡೆದುಕೊಂಡಿದೆಶಾಲಾ ವಿದ್ಯಾರ್ಥಿನಿ ಕೆ.ಶೃತಿ 625 ರಲ್ಲಿ 610 ಅಂಕ ಗಳಿಸಿ ಶಾಲೆಗೆ ಮೊದಲಿಗಳಾಗಿದ್ದಾಳೆ. 24 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 36 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ

ಬಂಟ್ವಾಳ : ರಮಾನಾಥ ರೈ ಅವರ ಶ್ರಮ ವ್ಯರ್ಥವಾಗಬಾರದೆಂದಿದ್ದರೆ ಮತನೀಡಿ ಗೆಲ್ಲಿಸಿ: ಬಿ. ಜನಾರ್ದನ ಪೂಜಾರಿ

ಬಂಟ್ವಾಳ: ರಮಾನಾಥ ರೈ ಒಳ್ಳೆಯ ಮನುಷ್ಯ.. ಒಳ್ಳೆಯ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ.. ಅವರು ಚುನಾವಣೆಯಲ್ಲಿ ಸೋತರೆ ನಾನು ಸತ್ತಂತೆ.. ನಾನು ಸಾಯಬಾರದೆಂದಿದ್ದರೆ ಅವರನ್ನು ಗೆಲ್ಲಿಸಿ..ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಅವರ ಪರವಾಗಿ, ಭಾವನಾತ್ಮಕವಾಗಿ ಮೆಚ್ಚುಗೆಯ ಮಾತಗಳನ್ನಾಡಿದ್ದು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ. ಭಾನುವಾರ ಬಿ.ಸಿ.ರೋಡಿನ ಬಸ್ತಿಪಡ್ಪುವಿನಲ್ಲಿರುವ ತನ್ನ ನಿವಾಸ ಚೆನ್ನಮ್ಮ

ಮೇ 7ರಂದು ಬಿ.ಸಿ ರೋಡ್‍ನ ಸೋನಾ ಟಿವಿಎಸ್‍ನಲ್ಲಿ ಟಿವಿಎಸ್ ರೋನಿನ್ ದ್ವಿಚಕ್ರ ವಾಹನ ಬಿಡುಗಡೆ

ಬಿ.ಸಿ. ರೋಡ್‍ನಲ್ಲಿ ಕಾರ್ಯಾಚರಿಸುತ್ತಿರುವ ಸೋನಾ ಟಿವಿಎಸ್ ಶೋರೂಂನಲ್ಲಿ ಅತ್ಯಾಧುನಿಕ ಶೈಲಿಯ ಟಿವಿಎಸ್ ರೋನಿನ್ ದ್ವಿಚಕ್ರ ವಾಹನ ಮೇ 7ರಂದು ಮಾರುಕಟ್ಟೆಗೆ ಬಿಡುಗಡೆಗೊಳ್ಳಲಿದೆ. ಪ್ರತಿಷ್ಠಿತ ಟಿವಿಎಸ್ ಕಂಪೆನಿಯ ದ್ವಿಚಕ್ರ ವಾಹನಗಳು ವಿವಿಧ ವಿನ್ಯಾಸ ಮತ್ತು ಆತ್ಯಾಕರ್ಷಕ ಶೈಲಿ ಹಾಗೂ ದ್ವಿಚಕ್ರ ಪ್ರೀಯರ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ಬಿ.ಸಿ ರೋಡ್‍ನಲ್ಲಿರುವ ಸೋನಾ ಟಿವಿಎಸ್ ಶೋರೂಂನಲ್ಲಿ ಟಿವಿಎಸ್ ರೋನಿನ್ ದ್ವಿಚಕ್ರ ವಾಹನ ಮೇ 7ರಂದು

ಕಣ್ಣಿಗೆ ಕಾಣುವ ದೇವತಾ ಮನುಷ್ಯ ಬಿ.ರಮಾನಾಥ ರೈಯವರನ್ನು ಬೆಂಬಲಿಸಬೇಕು : ನ್ಯಾಯವಾದಿ ಚಂದ್ರಶೇಖರ ಪೂಜಾರಿ

ಬಂಟ್ವಾಳ: ಜಾತ್ಯಾತೀತ ಶಕ್ತಿಗಳು ಒಂದಾಗಿ ಕೋಮುವಾದಿ ಪಕ್ಷಗಳನ್ನು ಸೋಲಿಸಿಬೇಕು, ಕಣ್ಣಿಗೆ ಕಾಣುವ ದೇವತಾ ಮನುಷ್ಯ-ಅಭಿವೃದ್ಧಿಯ ಹರಿಕಾರ ಬಿ.ರಮಾನಾಥ ರೈಯವರನ್ನು ಬೆಂಬಲಿಸಬೇಕು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಚಂದ್ರಶೇಖರ್ ಪೂಜಾರಿ ಕರೆ ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೋಮುವಾದಿ ಪಕ್ಷಗಳಾದ ಬಿಜೆಪಿ ಮತ್ತು ಎಸ್.ಡಿ.ಪಿ.ಗೆ ಮತ ಹಾಕಿದರೆ

ಮತವಿಭಜನೆ ಮಾಡದೆ ರಮಾನಾಥ ರೈ ಗೆಲ್ಲಿಸಬೇಕು : ಚಂದ್ರಶೇಖರ ಪೂಜಾರಿ

ಬಂಟ್ವಾಳ : ಬಂಟ್ವಾಳದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈಯವರನ್ನು ಗೆಲ್ಲಿಸಬೇಕು. ಕ್ಷೇತ್ರದ ಜನರು ಮತವಿಭಜನೆ ಮಾಡದೆ ಎಲ್ಲಾ ಮತಗಳನ್ನು ರೈಯವರಿಗೆ ನೀಡಬೇಕು ಎಂದು ನ್ಯಾಯವಾದಿ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಪೂಜಾರಿ ವಿನಂತಿಸಿದರು. ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಇಂತಹ ಸನ್ನಿವೇಶದಲ್ಲಿ ಜಾತ್ಯತೀತ ಶಕ್ತಿಗಳು ಒಂದಾಗಬೇಕು. ಇಲ್ಲವಾದರೆ ಕೋಮುವಾದಿ ಶಕ್ತಿಗಳು ವಿಜೃಂಭಿಸುತ್ತವೆ. ಎಸ್

ಬಂಟ್ವಾಳ : ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಮತಯಾಚನೆ

ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಬಂಟ್ವಾಳ ಬೈಪಾಸ್ ಜಂಕ್ಷನ್ ನಿಂದ ಕಾಲ್ನಡಿಗೆಯಲ್ಲಿ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ಪೇಟೆಯಲ್ಲಿ ಅಂಗಡಿಗಳಿಗೆ ತೆರಳಿ ಮತಯಾಚನೆ ನಡೆಸಿದರು. ಬಳಿಕ ಮಾತನಾಡಿದ ಅವರು ಗೌರವಯುತವಾದ ಮತ್ತು ಶಾಂತಿಯುತ ಬದುಕಿಗಾಗಿ ಬಂಟ್ವಾಳದಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು. ಬಂಟ್ವಾಳ ಕ್ಷೇತ್ರದಲ್ಲಿ 2 ಸಾವಿರಕ್ಕಿಂತಲೂ ಅಧಿಕ ಅನುದಾನದ ಮೂಲಕ ಸರ್ವ ವ್ಯಾಪಿ ಮತ್ತು

ಬಜರಂಗದಳವನ್ನು ನಿಷೇಧಿಸುವವರನ್ನು ಸಮಾಜ ನಿಷೇಧಿಸುತ್ತದೆ : ವಿಹಿಂಪ ಬಂಟ್ವಾಳ ಸಮಿತಿ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಹೇಳಿಕೆ

ಬಂಟ್ವಾಳ: ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸಲು ಹೊರಟಿರುವುದು ತೀವ್ರ ಖಂಡನೀಯ ಎಂದು ವಿಶ್ವ ಹಿಂದೂ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ, ನ್ಯಾಯವಾದಿ ಪ್ರಸಾದ್ ಕುಮಾರ್ ರೈ ಹೇಳಿದರು. ಅವರು ಗುರುವಾರ ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬಿಟಿಷರು ಹೇಗೆ ಈ ದೇಶದಲ್ಲಿ ಒಡೆದು ಆಳುವ ನೀತಿಯನ್ನು ಅನುಸರಿಸಿದರೋ ಅದೇ ರೀತಿ ಕಾಂಗ್ರೆಸ್ ಕೂಡ ಒಡೆದು ಆಳುವ ನೀತಿಯನ್ನು ಮುಂದುವರೆಸಿಕೊಂಡು

ಬಡವರಿಗೆ ಅಚ್ಛೇ ದಿನ್ ಬಂದಿಲ್ಲ : ರಮಾನಾಥ ರೈ

ಅಂಬಾನಿ, ಅದಾನಿಯಂತಹ ಶ್ರೀಮಂತರಿಗೆ ಅಚ್ಛೇದಿನ್ ಬಂದಿದೆಯೇ ಹೊರತು, ಬಡವರಿಗೆ ಅಚ್ಛೇದಿನ್ ಬಂದಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಕಕ್ಯಪದವಿನಲ್ಲಿ ನಡೆದ ಪ್ರಚಾರಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಗ್ಯಾರಂಟಿಗಳನ್ನು ಬಿಜೆಪಿಗರು ಲೇವಡಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸರಕಾರ ಉಚಿತ ಅಕ್ಕಿ ಕೊಟ್ಟಾಗ ಇಂತಹುದೇ ಮಾತುಗಳನ್ನಾಡುತ್ತಿದ್ದರು. ಜನರನ್ನು ಸೋಮಾರಿಗಳನ್ನಾಗಿ ಮಾಡುತ್ತಿದ್ದಾರೆ ಎನ್ನಲಾಗಿತ್ತು. ಆದರೆ

ಭಾರತ ಹಿಂದೂಗಳ ದೇಶ : ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ

ಪುತ್ತೂರು: ಭಾರತದ ಇತಿಹಾಸ ಸಾವಿರಾರು ವರ್ಷ. ಈ ದೇಶ ಸುಮ್ಮನೆ ಬದುಕಿ ಬರಲಿಲ್ಲ. ಸಾಯುವವರನ್ನು ಬದುಕುವ ಹಾಗೆ ಮಾಡಿರುವ, ಜೀವನದ ದೃಷ್ಟಿ ನೀಡಿರುವ ದೇಶ ಭಾರತ, ಎಂದು ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ಪುತ್ತಿಲ ಕೆರೆಮನೆ ಕಟ್ಟೆಯಲ್ಲಿ ನಡೆದ ಭಾರತ್ ಮಾತಾ ಪೂಜ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ಮಾತನಾಡಿದರು, ಈ ದೇಶ ನಮ್ಮ ಹಿಂದೂಗಳ ದೇಶ. ಹಿಂದುತ್ವವೇ ಮೂಲ ಚಿಂತನೆ ಎಂದು ಬೆಳೆದುಕೊಂಡು ಬಂದಿರುವ ಪಕ್ಷ. ಪಿಎಫ್‍ಐಯಂತಹ ದೇಶದ್ರೋಹದ