Home ಕರಾವಳಿ Archive by category ಬಂಟ್ವಾಳ (Page 35)

ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನ: ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ತೀರ್ಥ ಸ್ನಾನ

ಪುರಾಣ ಪ್ರಸಿದ್ದ ಪರ್ವತ ಕ್ಷೇತ್ರ ಬಂಟ್ವಾಳ ತಾಲೂಕಿನ ನರಹರಿ ಪರ್ವತದ ಮೇಲಿರುವ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಯ ಪ್ರಯುಕ್ತ ವಿಶೇಷ ತೀರ್ಥ ಸ್ನಾನ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಬೆಟ್ಟ ಹತ್ತಿ ದೇವಸ್ಥಾನದ ತೀರ್ಥ ಬಾವಿಗಳಾದ ಶಂಖ, ಚಕ್ರ, ಗಧಾ, ಪದ್ಮ ಕೆರೆಗಳಿಗೆ ವೀಳ್ಯ ಅಡಿಕೆಯ ಭಾಗಿನ ಬಿಟ್ಟು ತೀರ್ಥ ನೀರು ಮಿಂದು ಪುನೀತರಾದರು. ದೇವರ ದರ್ಶನ ಪಡೆದು ವಿಶೇಷ ಸೇವೆಗಳನ್ನು ಸಲ್ಲಿಸಿದರು. ಮಹಾಭಾರತ ಯುದ್ಧದ ಬಳಿಕ ಪಾಂಡವರು ತಮ್ಮ

ವಿಟ್ಲಕಾರಿನಲ್ಲಿಅಕ್ರಮ ಗೋ ಸಾಗಾಟ ಪತ್ತೆ

ವಿಟ್ಲ: ಕೇಪು ಕಲ್ಲಂಗಳದಿಂದ ತೋರಣಕಟ್ಟೆ ಸಂಪರ್ಕ ರಸ್ತೆಯ ಒಳ ರಸ್ತೆಯೊಂದರಲ್ಲಿ ಕಾರಿನಲ್ಲಿ ದನ ಸಾಗಾಟ ಮಾಡುತ್ತಿದ್ದು ಪತ್ತೆಯಾಗಿದೆ.ಕಾರಿನ ಹಿಂಭಾಗದಲ್ಲಿ ಎರಡು ಗೋವಿದ್ದು, ಕಾರಿದ ಹಿಂಭಾಗ ಹಾಗೂ ಮುಂಭಾಗದ ಗಾಜು ಒಡೆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೋಲೀಸರು ತೆರಳಿದ್ದು, ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ. ಈ ರಸ್ತೆ ಸಾರಡ್ಕ ಚೆಕ್ ಪೋಸ್ಟ್ ಸಂಪರ್ಕಹೊಂದಿದ್ದು, ಚೆಕ್ ಪೋಸ್ಟ್ ಮೂಲಕವೇ ಗೋವು ಸಾಗಾಟ ಮಾಡಲಾಗುತ್ತಿತ್ತಾ ಎಂಬ ಅನುಮಾನ ಮೂಡುತ್ತಿದೆ.

ಮೃತ್ಯುಕೂಪದಂತಿರುವ ರಾಷ್ಟ್ರೀಯ ಹೆದ್ದಾರಿ, ಪ್ರತಿನಿತ್ಯ ಹೆದ್ದಾರಿಗಳಲ್ಲಿ ಅಪಘಾತಗಳ ಸರಮಾಲೆ

ಜಿಲ್ಲೆಯ ಸಾವಿರಾರು ಪ್ರಯಾಣಿಕ ವಾಹನಗಳಿಗೆ ನಿತ್ಯ ಆಸರೆಯಾಗುವ ಹೆದ್ದಾರಿಯು ಮರಣ ಗುಂಡಿಗಳಾಗಿ ಬದಲಾಗುತ್ತಿದೆ. ಹೆದ್ದಾರಿಯ ಬಹುತೇಕ ಭಾಗಗಳಲ್ಲಿ ಹೊಂಡಗಳೇ ತುಂಬಿಕೊಂಡಿದ್ದು, ಸಂಚಾರ ಕಷ್ಟಕರವಾಗಿದೆ.ಇಲ್ಲಿರುವ ಗುಂಡಿಗಳು ಸವಾರರ ಮತ್ತು ಪ್ರಯಾಣಿಕರ ಹೃದಯಬಡಿತ ಹೆಚ್ಚಿಸುವಂತಿದೆ.ಸ್ವಲ್ಪ ಎಚ್ಚರ ತಪ್ಪಿದ್ರೆ ಸಾಕು ವಾಹನ ಹೊಂಡಕ್ಕೆ ಬೀಳುವುದು ಖಚಿತ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೃಹತ್ತಾಕಾರದ ಹೊಂಡಗುಂಡಿಗಳಿಂದ ವಾಹನ ಸವಾರ ನರಕಯಾತನೆ ಅನುಭವಿಸುವಂತಾಗಿದೆ.

ವಿಟ್ಲ: ಹಾಳೆ ತಟ್ಟೆ ಕಾರ್ಖಾನೆಯಲ್ಲಿ ಬೆಂಕಿ: ಲಕ್ಷಾಂತರ ರೂ. ನಷ್ಟ

ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಳೆ ತಟ್ಟೆ ತಯಾರಿಕಾ ಘಟಕ ಇಕೋ ವಿಶನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕಟ್ಟಡದ ಮೇಲ್ಭಾಗದಲ್ಲಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಫ್ಯಾಕ್ಟರಿ ಯಿಂದ ದಟ್ಟ ಹೊಗೆ ಆವರಿಸುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೆÇಲೀಸರು, ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದರೂ ಕಟ್ಟಡದಲ್ಲಿದ್ದ ಹಲವು ಮೆಷಿನ್, ಮತ್ತು ಹಾಳೆತಟ್ಟೆಗಳು ಸುಟ್ಟು ಕರಕಲಾಗಿದೆ. ಇದರಿಂದ ಲಕ್ಷಾಂತರ

ಬಂಟ್ವಾಳದ ಪಂಜಿಕಲ್ಲು ಮುಕ್ಕುಡಲ್ಲಿ ಗುಡ್ಡ ಕುಸಿತ ಪ್ರಕರಣ : ಪರಿಹಾರದ ಚೆಕ್ ವಿತರಣೆ

ಬಂಟ್ವಾಳ: ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಇತ್ತೀಚೆಗೆ ಗುಡ್ಡ ಜರಿದು ಮಣ್ಣಿನಡಿ ಸಿಲುಕಿ ಮೃತಪಟ್ಟ ಕೇರಳದ ಮೂವರು ರಬ್ಬರ್ ಟ್ಯಾಪಿಂಗ್ ಕಾರ್ಮಿಕರಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷದಂತೆ ಪರಿಹಾರದ ಚೆಕ್‍ನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಂಟ್ವಾಳದ ನಿರೀಕ್ಷಣಾ ಮಂದಿರದಲ್ಲಿ ವಿತರಿಸಿದರು. ಭೂ ಕುಸಿತದಲ್ಲಿ ಮೃತಪಟ್ಟ ಬಿಜು ಪಾಲಕ್ಕಡ್, ಸಂತೋಷ್ ಆಲಪುರ, ಬಾಬು ಕೊಟ್ಟಾಯಂ ಅವರ ಕುಟುಂಬ ಸದಸ್ಯರು ಕೇರಳದಿಂದ ಆಗಮಿಸಿದ್ದು ಪರಿಹಾರ

ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ರಮಾನಾಥ ರೈ ಭೇಟಿ

ಬಂಟ್ವಾಳ: ಬಾರಿ ಮಳೆಯಿಂದ ತಾಲೂಕಿನ ಅರಳ, ಕಾವಳಪಡೂರು, ಕಾಡಬೆಟ್ಟು, ಮೂಡನಡುಗೋಡು, ಕಾವಳಮೂಡೂರು, ಪಂಜಿಕಲ್ಲು, ಗೂಡಿನ ಬಳಿಯಲ್ಲಿ ಭೂ ಕುಸಿತ ಉಂಟಾಗಿ ಮನೆ, ರಸ್ತೆಗಳಿಗೆ ವ್ಯಾಪಕ ಹಾನಿ ಉಂಟಾಗಿರುವ ಹಿನ್ನಲೆಯಲ್ಲಿ ಮಾಜಿ ಸಚಿವರಾದ ಬಿ ರಮಾನಾಥ ರೈ ಯವರು ಭೇಟಿ ನೀಡಿ ಪರಿಶೀಲಿಸಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವ ನೀಡಿದರು. ಈ ಸಂದರ್ಭ ಹಾನೀಗೀಡಾದ ಮನೆಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮನವಿ ಮಾಡಿಕೊಂಡರು. ಈ ಸಂದರ್ಭ

ಮಳೆಗೆ ಬಂಟ್ವಾಳದ ಗೂಡಿನ ಬಳಿ ಗುಡ್ಡ ಕುಸಿತ : ಅಪಾಯ ಎದುರಿಸುತ್ತಿರುವ ಮನೆ ಮಂದಿ

ಬಂಟ್ವಾಳ: ನಿರಂತರವಾಗಿ ಸುರಿಯುತ್ತಿರುವ ವ್ಯಾಪಕ ಮಳೆಗೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಗೂಡಿನಬಳಿಯ ಟಿಪ್ಪು ರಸ್ತೆ ಎಂಬಲ್ಲಿ ಗುಡ್ಡ ಕುಸಿದು ಇಲ್ಲಿನ ಮನೆಗಳ ಜನರು ತೀವ್ರ ಅಪಾಯವನ್ನು ಎದುರಿಸುತ್ತಿದ್ದಾರೆ. ವರ್ಷದ ಹಿಂದೆಯೇ ಗುಡ್ಡ ಸ್ವಲ್ಪ ಮಟ್ಟಿಗೆ ಕುಸಿದಿತ್ತು. ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಗುಡ್ಡ ಮತ್ತಷ್ಟು ಕುಸಿದಿದೆ. ಇದರಿಂದ ಟಿಪ್ಪು ರಸ್ತೆ ಸಂಪೂರ್ಣ ಹಾನಿಗೊಂಡಿದ್ದು ಸಂಪರ್ಕ ಕಡಿತಗೊಂಡಿದೆ.ಗುಡ್ಡ ಕುಸಿದ ಭಾಗ ಮಳೆಯಿಂದ

ಬಂಟ್ವಾಳದ ಮುಕ್ಕುಡದಲ್ಲಿ ಮತ್ತೆ ಭೂಕುಸಿತ

ಬಂಟ್ವಾಳ: ಇತ್ತಿಚೆಗೆ ಭೂ ಕುಸಿತ ಉಂಟಾಗಿ 3 ಮಂದಿ ಕೇರಳ ಮೂಲದ ರಬ್ಬರ್ ಟ್ಯಾಪಿಂಗ್ ಕಾರ್ಮಿಕರು ಮೃತಪಟ್ಟ ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಮತ್ತೆ ಭೂ ಕುಸಿತ ಉಂಟಾಗಿದೆ. ಇದರಿಂದಾಗಿ ಹೆನ್ರಿ ಕಾರ್ಲೋ ಅವರ ಮನೆಗೆ ಇದ್ದ ರಸ್ತೆ ಸಂಪರ್ಕವೂ ಕಡಿತಗೊಂಡಿದೆ. ಇತ್ತೀಚೆಗೆ ಭೂ ಕುಸಿತ ಆದ ಸಂದರ್ಭ ಗುಡ್ಡ ಬಿರುಕು ಬಿಟ್ಟಿತ್ತು. ಭಾರಿ ಮಳೆಗೆ ಮಣ್ಣು ಮೆದುಗೊಂಡು ಬಿರಿಕು ಬಿದ್ದ ಜಾಗದಿಂದಲೇ ಗುಡ್ಡ ಕುಸಿದಿದೆ

ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ. : ನೂತನ ಕೊಡಾಜೆ ಶಾಖೆ ಉದ್ಘಾಟನೆ

ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇದರ 10 ನೇ ಕೊಡಾಜೆ ಶಾಖೆಯು ನೇರಳಕಟ್ಟೆ ಬಳಿಯ ಕೊಡಾಜೆಯ ನಿಧಾ ಆರ್ಕೆಡ್ ನಲ್ಲಿ ಶುಭಾರಂಭಗೊಂಡಿತು. ಮಾಜಿ ಸಚಿವ ಬಿ. ರಮಾನಾಥ ರೈ ನೂತನ ಶಾಖೆಯನ್ನು ಉದ್ಘಾಟಿಸಿ ದೀಪ ಪ್ರಜ್ವಲಿಸಿದರು.ಪುತ್ತೂರು ನಗರ ಸಭೆ ಅಧ್ಯಕ್ಷ ಜೀವಂದರ್ ಜೈನ್ ಭದ್ರತಾ ಕೊಠಡಿ ಉದ್ಘಾಟಿಸಿದರು. ನೆಟ್ಲಮುಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪುಷ್ಪರಾಜ ಚೌಟ ಕಂಪ್ಯೂಟರ್ ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ