Home ಕರಾವಳಿ Archive by category ಬೆಳ್ತಂಗಡಿ (Page 13)

ವಸಂತ ಬಂಗೇರ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ : ಅಭಿಮಾನಿ ಬಳಗದಿಂದ ದೂರು

ತಮ್ಮ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡಿ ಅಪಪ್ರಚಾರ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಶಾಸಕ ವಸಂತ ಬಂಗೇರ ಅವರ ಅಭಿಮಾನಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಸುಳ್ಳು ಸುದ್ದಿ ಹಬ್ಬಿ ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಪ್ರಯತ್ನವಾಗಿದೆ. ಈ ಸಂದೇಶವನ್ನು ತಾಲೂಕಿನ ಹಲವರು ಹಂಚಿಕೊಂಡು ಗೊಂದಲ ಮೂಡಿಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ

ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್ ಗಿರಿ – ಆಟೋ ರಿಕ್ಷಾ ಚಾಲಕನ ಮೇಲೆ ತಂಡದಿಂದ ಹಲ್ಲೆ

ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಾಡಿಗೆಗೆ ಹೋಗಿದ್ದ ಉಜಿರೆಯ ಆಟೋ ರಿಕ್ಷಾ ಚಾಲಕನಿಗೆ ತಂಡವೊಂದು ತೀವ್ರ ಹಲ್ಲೆ ನಡೆಸಿದ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಉಜಿರ ಹಳೆ ಪೇಟೆ ನಿವಾಸಿ ಮುಹಮ್ಮದ್ ಆಶಿಕ್ ಹಲ್ಲೆಗೊಳಗಾದ ಯುವಕ. ಆಶಿಕ್ ತನ್ನ ಆಟೋದಲ್ಲಿ ಬುಧವಾರ ರಾತ್ರಿ ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಾಡಿಗೆ ಹೋಗಿ ಹಿಂದಿರುಗುತ್ತಿದ್ದ ವೇಳೆ ಈ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ನಾಲ್ವರ ತಂಡವೊಂದು ಧರ್ಮಸ್ಥಳ ಕೆಎಸ್ಸಾರ್ಟಿಸಿ

ಉಜಿರೆ ಎಸ್.ಡಿ.ಎಂ. ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ಶಾಂತಿಪ್ರಕಾಶ್ ಸೇವಾನಿವೃತ್ತಿ; ಸಮ್ಮಾನ

ಉಜಿರೆ, ಆ.1: ತಮ್ಮ ಸಮರ್ಪಣಾ ಭಾವದ ಮೂಲಕ ವೃತ್ತಿಯಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಪ್ರೊ. ಶಾಂತಿಪ್ರಕಾಶ್ ಅವರು ಸಹೃದಯತೆ ಮೂಲಕ ಸಹೋದ್ಯೋಗಿಗಳ ಪ್ರೀತಿ ಗಳಿಸಿದ್ದಾರೆ. ಶಿಸ್ತು, ಪರಿಪೂರ್ಣತೆ ಮತ್ತು ಸಮರ್ಪಣೆ ಅವರ ಸ್ವಭಾವ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅಭಿಪ್ರಾಯಪಟ್ಟರು. ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಜು.31ರಂದು ಸೇವಾನಿವೃತ್ತಿ

ಚಾರ್ಮಾಡಿ ಘಾಟಿ : ಜಲಪಾತ ವೀಕ್ಷಿಸುತ್ತಿರುವ ಮಂದಿ, ವಾಹನ ಸಂಚಾರಕ್ಕೆ ತೊಡಕು

ಚಾರ್ಮಾಡಿ ಘಾಟಿ ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಹಗಲಲ್ಲೂ ದಟ್ಟ ಮಂಜಿನ ವಾತಾವರಣ ಕಂಡುಬರುತ್ತಿದ್ದು, ವಾಹನ ಸವಾರರು ಪರದಾಟ ನಡೆಸುತ್ತಾ ಚಾಲನೆ ಮಾಡಬೇಕಾದ ಪರಿಸ್ಥಿತಿ ಇದೆ. ಕಳೆದ ಕೆಲವು ದಿನಗಳಿಂದ ನಿರಂತರ ಮಳೆ ಸುರಿದಿದ್ದು, ಪ್ರಸ್ತುತ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಈ ಸಮಯ ಘಾಟಿಯಲ್ಲಿ ದಟ್ಟವಾದ ಮಂಜಿನ ವಾತಾವರಣ ಏರ್ಪಟ್ಟು ವಾಹನಗಳ ಹೆಡ್ಲೈಟ್ ಹಾಕಿದರೂ ದಾರಿ ಕಾಣದ ಸ್ಥಿತಿ ಉಂಟಾಗುತ್ತಿದೆ. ಸಂಜೆಯಾಗುತ್ತಿದ್ದಂತೆ ಇನ್ನಷ್ಟು ದಟ್ಟ ಮಂಜಿನಿಂದ ದಾರಿ

ಉಜಿರೆ ಎಸ್.ಡಿ.ಎಂ. ಕಾಲೇಜಿನ ಕಚೇರಿ ಅಧೀಕ್ಷಕರಾಗಿ ದಿವಾಕರ ಪಟವರ್ಧನ್ ನೇಮಕ

ಉಜಿರೆ, ಜು.17: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕಚೇರಿ ಅಧೀಕ್ಷಕರಾಗಿ ದಿವಾಕರ ಪಟವರ್ಧನ್ ಮುಂಡಾಜೆ ಅವರು ಪದೋನ್ನತಿ ಹೊಂದಿದ್ದಾರೆ. ಯುವರಾಜ್ ಪೂವಣಿ ಅವರು ಹುದ್ದೆಯಿಂದ ಸೇವಾನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ. ಪಟವರ್ಧನ್ ಅವರು ಕಳೆದ 20 ವರ್ಷಗಳಿಂದ ಕಾಲೇಜಿನಲ್ಲಿ ಸೀನಿಯರ್ ಅಕೌಂಟ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಜು.14ರಂದು ಕಚೇರಿ ಅಧೀಕ್ಷಕರಾಗಿ

‘ಭಿನ್ನ ಯೋಚನೆ ಸೃಜನಶೀಲತೆಗೆ ಆಧಾರ’

‘ಭಿನ್ನ ಯೋಚನೆ ಸೃಜನಶೀಲತೆಗೆ ಆಧಾರ’ ಉಜಿರೆ: ವಿಭಿನ್ನವಾಗಿ ಆಲೋಚಿಸುವ ಸಾಮರ್ಥ್ಯ ಮತ್ತು ಕೌಶಲ್ಯಪೂರ್ಣ ಅಭಿವ್ಯಕ್ತಿಯ ಮಾದರಿಗಳೊಂದಿಗೆ ಗುರುತಿಸಿಕೊಂಡಾಗ ಮಾತ್ರ ಮಾಧ್ಯಮರಂಗ ನಿರೀಕ್ಷಿಸುವ ಸೃಜನಶೀಲತೆಯನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಬೆಂಗಳೂರು ಆಕಾಶವಾಣ ಯ ಹಿರಿಯ ಉದ್ಘೋಷಕಿ, ಕಂಟೆಂಟ್ ಬರಹಗಾರ್ತಿ ಬಿ.ಕೆ ಸುಮತಿ ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ.ಧ.ಮಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ರೇಡಿಯೋ ಬರಹ ಮತ್ತು

ಬೆಳ್ತಂಗಡಿ ನೆರಿಯ ಗ್ರಾಮದಲ್ಲಿ ಸ್ಮಶಾನದ ಕೊರತೆ : ಮೃತ ದೇಹ ಇಟ್ಟು ಗ್ರಾಮಸ್ಥರಿಂದ ಪ್ರತಿಭಟನೆ

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದೆ ಶವ ಸಂಸ್ಕಾರಕ್ಕೆ ಸಮಸ್ಯೆ ಆಗುತಿದೆ. ತಕ್ಷಣ ಸ್ಮಶಾನದ ಜಾಗ ನಿಗದಿಗೊಳಿಸುವಂತೆ ಆಗ್ರಹಿಸಿ ಮೃತ ದೇಹ ಇಟ್ಟು ಗ್ರಾಮಸ್ಥರು ಪ್ರತಿಭಟನೆ ಮಾಡಿದ ಘಟನೆ ನೆರಿಯದಲ್ಲಿ ನಡೆದಿದೆ. ಕಳೆದ ಹಲವಾರು ವರ್ಷಗಳಿಂದ ಸ್ಮಶಾನವಿಲ್ಲದೆ ಶವ ಸಂಸ್ಕಾರಕ್ಕಾಗಿ ಗ್ರಾಮಸ್ಥರು ಅಲೆದಾಡುವ ಸ್ಥಿತಿ ಇದ್ದರೂ ಯಾರೂ ಕೂಡ ಗ್ರಾಮಸ್ಥರ ಮನವಿಗೆ ಸ್ಪಂದಿಸುತ್ತಿಲ್ಲ ಸ್ಮಶಾನ ನಿಗದಿಗೊಳಿಸದೇ ಮೃತ ದೇಹದ ಅಂತಿಮ ಸಂಸ್ಕಾರ ಮಾಡುವುದಿಲ್ಲ

ಬೆಳ್ತಂಗಡಿ : ನೆಟ್ವರ್ಕ್ ಸಮಸ್ಯೆ- ಏರ್ಟೆಲ್ ಸಂಸ್ಥೆಯ ವಿರುದ್ಧ ಪ್ರತಿಭಟನೆ

ನಿರಂತರ ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮಸ್ಥರು, ಏರ್ಟೆಲ್ ಸಂಸ್ಥೆ ವಿರುದ್ಧ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಏರ್ಟೆಲ್ ನೆಟ್ವರ್ಕ್ ವಿರುದ್ಧ ಘೋಷಣೆಯನ್ನು ಕೂಗಲಾಯಿತು ಮತ್ತು ನೆಟ್ವರ್ಕ್ ಸಮಸ್ಯೆಯನ್ನು ಬಗೆಹರಿಸಲು ಗಡುವು ನೀಡಲಾಯಿತು. ಮುಂದಿನ ದಿನಗಳಲ್ಲಿ ಕಾನೂನಾತ್ಮಕವಾಗಿ ಬೃಹತ್ ಪ್ರತಿಭಟನೆಯನ್ನು ನಡೆಸುವುದಾಗಿ ಎಚ್ಚರಿಸಲಾಯಿತು. ಪ್ರತಿಭಟನೆಯಲ್ಲಿ ಬಳಂಜ ಗ್ರಾಮ ಪಂಚಾಯತ್

ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಚಿವ ದಿನೇಶ್ ಗುಂಡೂರಾವ್ || Minister Dinesh Gundurao visited Dharamsthala

ದ.ಕ ಜಿಲ್ಲಾ ಪ್ರವಾಸ ಕೈಗೊಂಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಆಶೀರ್ವಾದ ಪಡೆದುಕೊಂಡರು.ಸಚಿವರ ಜೊತೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕೂಡಾ ಇದ್ದರು.

ಪೂಜ್ಯ ಶ್ರೀ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಂಸ್ಥಾಪಕ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಯು ಜುಲೈ 5ರಂದು ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ. ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ನಿರ್ದೇಶಕ ಡಾ. ಬಿ. ಪಿ. ಸಂಪತ್ ಕುಮಾರ ಅವರು ಬೆಳಗ್ಗೆ 9.30ಕ್ಕೆ ಉದ್ಘಾಟನೆ ನೆರವೇರಿಸಲಿದ್ದಾರೆ. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ