Home ಕರಾವಳಿ Archive by category ಮೂಡಬಿದರೆ (Page 49)

ಮೂಡುಬಿದಿರೆಯಲ್ಲಿ ರಾಜ್ಯಮಟ್ಟದ ಕವಿಕಾವ್ಯ ಸಂಗಮ-2021

ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ ಮೂಲಕ ಸರ್ಕಾರದ ಮಟ್ಟದಲ್ಲಿ ಸಾಹಿತ್ಯದ ಕೆಲಸವಾಗುತ್ತಿದೆ. ಹಾಗೆಯೇ ರಾಜ್ಯದಲ್ಲಿ ಖಾಸಗಿ ಸಂಘ ಸಂಸ್ಥೆಗಳು ಕೂಡ ಮಾದರಿ ಸಾಹಿತ್ಯ ಸೇವೆಗಳನ್ನು ಮಾಡುತ್ತಿವೆ. ಅಂತಹ ಸಂಸ್ಥೆಗಳನ್ನು ಗುaರುತಿಸಬೇಕು.ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಸ್ತಬ್ಧವಾದ ನಮ್ಮ ಜೀವನಕ್ರಮ ಸಾಹಿತ್ಯ, ಸಾಂಸ್ಕೃತಿಕಗಳ ಮೂಲಕ ಮತ್ತೆ ಚೈತನ್ಯವನ್ನು ಪಡೆಯಲಿ

ಮೆಸ್ಕಾಂ ಕಚೇರಿಯ ಎದುರು ರಾತ್ರೋ ರಾತ್ರಿ ಧರಣಿ

ಮೂಡುಬಿದಿರೆ: ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ಗ್ರಾಮದ ಕೋಂಕೆ ಎಂಬಲ್ಲಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕೆಟ್ಟು 4 ದಿನಗಳಾಗಿದ್ದು ಸ್ಥಳಿಯ ನಿವಾಸಿಗಳು ಕುಡಿಯಲೂ ನೀರಿಲ್ಲದೆ ತೊಂದರೆ ಅನುಭವಿಸಿದ್ದಾರೆ. ಈ ಭಾಗದಲ್ಲಿ ಬಹಳಷ್ಟು ಕೃಷಿಕರೂ ಇದ್ದು ಕೃಷಿಗೆ ನೀರು ಬಿಡಲೂ ಸಾಧ್ಯವಾಗದೆ ತೊಂದರೆ ಅನುಭವಿಸಿದರೂ ಮೆಸ್ಕಾಂ ಇಲಾಖೆಯ ಎ.ಇ.ಇ., ಎಸ್ .ಒ. ಸಹಿತ ಸಿಬ್ಬಂದಿಗಳು ವಿಷಯ ತಿಳಿದರೂ ಸಹಕರಿಸದೆ ಬಹಳಷ್ಟು ತೊಂದರೆ ನೀಡಿದ್ದಾರೆ. ಕೊನೆಕೊನೆಗೆ

ಮೂಡುಬಿದಿರೆ: 6ನೇ ವರ್ಷದ ಕಂಬಳ ಓಟಗಾರ ತರಬೇತಿ ಶಿಬಿರ ಉದ್ಘಾಟನೆ

ಮೂಡುಬಿದಿರೆ: ದ.ಕ., ಉಡುಪಿ ಮತ್ತು ಕಾಸರಗೋಡು ಜಿಲ್ಲಾ ವ್ಯಾಪ್ತಿ ಹೊಂದಿರುವ ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ವತಿಯಿಂದ ಮೂಡುಬಿದಿರೆ ಒಂಟಿಕಟ್ಟೆಯಲ್ಲಿರುವ ವೀರ ರಾಣಿ ಅಬ್ಬಕ್ಕ ಸಂಸ್ಕøತಿ ಗ್ರಾಮದ ಕೋಟಿ-ಚೆನ್ನಯ ಕಂಬಳ ಕ್ರೀಡಾಂಗಣದಲ್ಲಿ 15 ದಿನಗಳು ನಡೆಯುವ 6ನೇ ವರ್ಷದ ಕಂಬಳ ಓಟಗಾರ ತರಬೇತಿ ಶಿಬಿರಕ್ಕೆ ಭಾನುವಾರ ಕಡಲಕೆರೆಯ ಸೃಷ್ಟಿ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಮಾಜಿ ಸಚಿವ, ಮೂಡುಬಿದಿರೆ ಕಂಬಳ ಸಮಿತಿಯ ಮಾಜಿ ಅಧ್ಯಕ್ಷ ಅಭಯಚಂದ್ರ

ಮಹಿಳಾ ಪೊಲೀಸ್ ಅಧಿಕಾರಿಯ ಅತ್ಯಾಚಾರ, ಹತ್ಯೆ ಖಂಡಿಸಿ : ಮೂಡಬಿದ್ರೆಯಲ್ಲಿ ಎಸ್‌ಡಿಪಿಐ ಪ್ರತಿಭಟನೆ

ಮಹಿಳೆಯ ಮೇಲೆ ನಡೆಯುತ್ತಿರುವ ಅತ್ಯಾಚಾರ ಹಾಗೂ ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣವನ್ನು ಖಂಡಿಸಿ ಮೂಡಬಿದ್ರೆಯಲ್ಲಿ ಎಸ್‌ಡಿಪಿಐ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಡಿಪಿಐ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆಸಿಫ್ ಕೋಟೆಬಾಗಿಲು,ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ಶೀಘ್ರ ಮುಕ್ತಾಯಗೊಳಿಸಿ ಆರೋಪಿಗಳಿಗೆ ಮರಣದಂಡನೆ ವಿಧಿಸುವ ಹೊಸ ಕಾನೂನನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದ್ರು. ಹೋರಾಟಗಾರ ಅಚ್ಯುತ ಸಂಪಿಗೆ

ಶಿರ್ತಾಡಿ ಮೌಂಟ್ ಕಾರ್ಮೆಲ್‌ನಲ್ಲಿ ಮೊಂತಿ ಹಬ್ಬ, ಬಲಿಪೂಜೆ

ಶಿರ್ತಾಡಿ : “ಮಾತೃ ಸ್ವರೂಪ ಭೂಮಿಯ ಮೇಲೆ ಇರುವ ಉನ್ನತವಾದ ಭಾವನೆಯಾಗಿದೆ. ದೇವರ ಸೃಷ್ಟಿಯಲ್ಲಿ ಉತ್ಕೃಷ್ಟ ಸಂಬಂಧವಾಗಿ ಮತ್ತು ಅಷ್ಟೇ ಗಟ್ಟಿ ಬಾಂಧವ್ಯವನ್ನು ಪ್ರತಿಪಾದಿಸುವ ಮಾತೃಶಕ್ತಿಯು ಮನುಷ್ಯನನ್ನು ಭೂಮಿಯ ಮೇಲೆ ಪೊರೆಯುವ ಮೂಲಕ ಚೈತನ್ಯ ತುಂಬುತ್ತದೆ. ಮೇರಿ ಮಾತೆಯ ಹುಟ್ಟು ಮಾನವ ಕುಲಕ್ಕೆ ಒಳಿತನ್ನು ಉಂಟುಮಾಡಿದೆ” ಎಂದು ಶಿರ್ತಾಡಿ ಮೌಂಟ್ ಕಾರ್ಮೆಲ್ ಚರ್ಚ್ ನ ಧರ್ಮಗುರುಗಳಾದ ವಂ| ಹೆರಾಲ್ಡ್ ಮಸ್ಕರೇನಸ್ ನುಡಿದರು. ಅವರು ಶಿರ್ತಾಡಿ ಮೌಂಟ್

ಆನೆಯ ಸೀನಿಗೆ ಹೆದರಿ ಓಡಿದ ವ್ಯಕ್ತಿ ಕಾಲು ಜಾರಿ ಬಿದ್ದು ಮೃತ್ಯು

ಮೂಡುಬಿದಿರೆ : ಆನೆ ಸೀನಿದ ಶಬ್ದಕ್ಕೆ ಹೆದರಿ ಓಡಿ ಹೋಗುವಾಗ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಡ್ಯಡ್ಕ ದೇವಸ್ಥಾನದಲ್ಲಿ ಸೋಮವಾರ ಸಂಜೆ ನಡೆದಿದೆ. ಕೊಡ್ಯಡ್ಕ ದೇವಸ್ಥಾನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಕಳ ಇಂಡಸ್ಟ್ರಿಯಲ್ ಬಳಿಯ ನಿವಾಸಿ ವಿಶ್ವನಾಥ ದೇವಾಡಿಗ (58ವ) ಮೃತಪಟ್ಟ ವ್ಯಕ್ತಿ. ಇವರು ದೇವಸ್ಥಾನದ ಆನೆಯ ಸಮೀಪ ಕೆಲಸ ಮಾಡುತ್ತಿದ್ದ ಸಂದರ್ಭ ಆನೆ ಸೀನಿದ್ದು ಈ ಸಂದರ್ಭ ಹೆದರಿ ಓಡಿ ಹೋಗುವಾಗ ಬಿದ್ದು ತಲೆಗೆ ಏಟು ಬಿದ್ದು ಗಂಭೀರ

ಉದ್ಯಮಿ ಕಜಂಗೆ ಸುದರ್ಶನ್ ಜೈನ್ ನಿಧನ

ಮೂಡುಬಿದರೆ ಎಸ್‌ಜೆಆರ್ ಟಿಂಬರ್ಸ್ ಮಾಲಕ, ರಿಯಲ್ ಎಸ್ಟೇಟ್ ಉದ್ಯಮಿ ಕಜಂಗೆ ಸುದರ್ಶನ್ ಜೈನ್(56) ಅವರು ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಮೂಡುಬಿದರೆ ರೋಟರಿ ಮಾಜಿ ಕಾರ್ಯದರ್ಶಿ, ಜೈನ್ ಮಿಲನ್ ಉಪಾಧ್ಯಕ್ಷರಾಗಿ, ಧಾರ್ಮಿಕ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಮೂಡುಬಿದರೆಯ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಸುದರ್ಶನ್ ಅವರಿಗೆ ಸದ್ಗತಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಶಾಸಕ ಉಮಾನಾಥ

ಕೋವಿಡ್ ಲಸಿಕೆ ಹಂಚಿಕೆಯಲ್ಲಿ ತಾರತಮ್ಯ : ಮೂಡುಬಿದರೆಯಲ್ಲಿ ಕಾಂಗ್ರೆಸ್‍ನಿಂದ ಪ್ರತಿಭಟನೆ

ಮೂಡುಬಿದಿರೆ: ತಾಲೂಕಿನ ವಿವಿಧ ಕಡೆ ಕೋವಿಡ್ ಲಸಿಕೆ ಕೊಡುವಲ್ಲಿ ತಾರತಮ್ಯವಾಗುತ್ತಿದೆ ಎಂದು ಆರೋಪಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಸೀಲ್ದಾರ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಕೋವಿಡ್ ವ್ಯಾಕ್ಸಿನ್ ವಿಚಾರದಲ್ಲಿ ಶಾಸಕರು, ಬಿಜೆಪಿ ಮುಖಂಡರು ತಾರತಮ್ಯ ಮಾಡುತ್ತಿದ್ದಾರೆ. ಸರ್ಕಾರಿ ಆರೋಗ್ಯ ಕೇಂದ್ರಗಳು, ಪಂಚಾಯಿತಿ ಕಾರ್ಯಾಲಯ ಅಥವಾ ಶಾಲೆಗಳಲ್ಲಿ ಕೋವಿಡ್

ಮೂಡುಬಿದಿರೆಯ ಪುರಸಭೆ- ಗ್ರಾ.ಪಂ ಸದಸ್ಯರಿಗೆ ಪ್ರಶಿಕ್ಷಣ ವರ್ಗ ಕಾರ್ಯಕ್ರಮ

ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ಮೂಲ್ಕಿ-ಮೂಡುಬಿದಿರೆ ಮಂಡಲದ ವತಿಯಿಂದ ಪುರಸಭೆ ಮತ್ತು ಗ್ರಾ.ಪಂಚಾಯತ್ ಸದಸ್ಯರಿಗೆ ಪ್ರಶಿಕ್ಷಣ ವರ್ಗ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ  ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಂಘಟನೆಯ ಆಧಾರ ಕಾರ್ಯಕರ್ತರು. ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕು ಮತ್ತು ವಿಚಾರವಂತರಾಗಿ ಸಾಗಬೇಕೆನ್ನುವ ದೃಷ್ಠಿಕೋನದಿಂದ ಪ್ರಶಿಕ್ಷಣ ವರ್ಗ ರೂಪುಗೊಂಡಿದೆ. ಹಲವು ವರ್ಷಗಳ ನಂತರ ಜನರು

ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯ ವಿಖಾಯದಿಂದ ರಕ್ತದಾನ ಶಿಬಿರ ಹಾಗೂ ಕೊರೊನಾ ವಾರಿಯರ್ಸ್‌ಗೆ ಸನ್ಮಾನ

ಗುರುಪುರ: ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯ ವಿಖಾಯ ವತಿಯಿಂದ ಬ್ರಹತ್ ರಕ್ತದಾನ ಶಿಬಿರ ಹಾಗೂ ಕೊರೊನಾ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮ ಆದಿತ್ಯವಾರ ಗುರುಪುರ ಕೈಕಂಬ ಪ್ರೀಮಿಯರ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಲಯ ಅಧ್ಯಕ್ಷರಾದ ಬಹು: ಜಮಲುದ್ದೀನ್ ದಾರಿಮಿ ಅಧ್ಯಕ್ಷತೆ ವಹಿಸಿದ್ದರು. ಬಹು:ಝುಬೈರ್ ಫೈಝಿ ಅಂಕೋಲಾ ದುಆ: ನೆರವರಿಸಿದರು. ಸಮಸ್ತ ಕೇರಳ ಜಮಿಯತುಲ್ ಉಲೆಮಾ ಕೇಂದ್ರ ಮುಶಾವರ ಸದಸ್ಯರಾದ ಬಾಂಬ್ರಣ ಉಸ್ತಾದ್ ರವರು