Home ಕರಾವಳಿ Archive by category ಮೂಡಬಿದರೆ (Page 9)

ಮೂಡುಬಿದಿರೆ: ವಿರಾಸತ್ ನಲ್ಲಿ ಶ್ರೇಯಾ ಘೋಷಾಲ್ “ಭಾವ ಲಹರಿ”

ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ನ ಮೂರನೇ ದಿನವಾಗಿರುವ ಶನಿವಾರದಂದು  ಭಾರತೀಯ ಚಿತ್ರರಂಗದ ಹಿನ್ನಲೆ ಗಾಯಕಿ, ಮೆಲೋಡಿ ಹಾಡುಗಳ ಮೂಲಕ ಗುರುತಿಸಿಕೊಂಡಿರುವ ಶ್ರೇಯಾ ಘೋಷಾಲ್ ಅವರ ಮೆಲೋಡಿ ಹಾಡುಗಳ  “ಭಾವ ಲಹರಿ” ಸಂಗೀತ ಕಾರ್ಯಕ್ರಮವು ಪುತ್ತಿಗೆ ವಿವೇಕಾನಂದ ನಗರದ  ಬಯಲು ರಂಗಮಂದಿರದಲ್ಲಿ ಸೇರಿದ  ಸಂಗೀತ ರಸಿಕರ ಹೃದಯ ಗೆದ್ದಿತು.

ಕಿನ್ನಿಗೋಳಿ: ಮಾನವನ ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ: ಹಿಲ್ಡಾ ಡಿಸೋಜ

ಮನುಷ್ಯನ ಮಾನಸಿಕ ಹಾಗೂ ದೈಹಿಕ ಸದೃಡತೆಗೆ ಕ್ರೀಡೆಯು ಸಹಕಾರಿ ಎಂದು ಕಿನ್ನಿಗೋಳಿ ಲಯನ್ಸ್ ಕ್ಲಬ್‌ನ ಅಧ್ಯಕ್ಷೆ  ಹಿಲ್ಡಾ ಡಿಸೋಜ ಅವರು ಹೇಳಿದರು. ಅವರು ಐಕಳ ಶಕ್ತಿಕಲ್ಯಾಣಿ ಮೈದಾನದಲ್ಲಿ ಐಕಳ ಕಂಬಲ ಫ್ರೆಂಡ್ಸ್ ವತಿಯಿಂದ ಆಶಕ್ತರಿಗೆ ವೈದ್ಯಕೀಯ ನೆರವಿಗಾಗಿ ಐಕಳ ಪ್ರೀಮಿಯರ್ ಲೀಗ್  ಕ್ರಿಕೆಟ್ ಪಂದ್ಯಾಟವನ್ನು ದೀಪ ಬೆಳಗಿಸಿ  ಉದ್ಘಾಟಿಸಿ ಮಾತನಾಡಿದರು. ಐಕಳ ಗ್ರಾಮ ಪಂಚಾಯತ್ ಅಧ್ಯಕ್ಷ ದೀವಾಕರ ಚೌಟ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಈ ವೇಳೆ 

ಮೂಡುಬಿದಿರೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಡಿ.19ಕ್ಕೆ ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟ

ಮೂಡುಬಿದಿರೆ: ಜಿಲ್ಲೆಯ ಜನರಿಗೆ ಉತ್ತಮ ಶಿಕ್ಷಣ, ಆರೋಗ್ಯ, ಉದ್ಯೋಗ, ಮೂಲ ಸೌಕರ್ಯ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಸಿಪಿಐ(ಎಂ)ವತಿಯಿಂದ ಡಿ. 19ರಂದು  ಬೆಳಿಗ್ಗೆ 10 ಗಂಟೆಗೆ  ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಚಲೋ ಹೋರಾಟ ನಡೆಯಲಿದೆ ಎಂದು ಸಿಪಿಐ(ಎಂ)ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ ಹೇಳಿದರು. ಅವರು ಮೂಡುಬಿದಿರೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಶಿಕ್ಷಣ ಖಾಸಗೀಕರಣದಿಂದ ಜನಸಾಮಾನ್ಯರ ಮಕ್ಕಳು ಉನ್ನತ ಶಿಕ್ಷಣದಿಂದ

ಮೂಡುಬಿದರೆ: ಆಳ್ವಾಸ್ ವಿರಾಸತ್ – ಸಪ್ತ ಮೇಳಗಳನ್ನು ಉದ್ಘಾಟಿಸಿದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ

ಮೂಡುಬಿದಿರೆ : ಲಕ್ಷಾಂತರ ಮಕ್ಕಳನ್ನು ಸತ್ಪ್ರಜೆ ಮಾಡುವ ಆಳ್ವಾಸ್, ವಿರಾಸತ್ ಹಾಗೂ ವಿವಿಧ ಮೇಳಗಳ ಮೂಲಕ ಎಲ್ಲರ ಹೃದಯದ ಕಣ್ಣು ತೆರೆಸುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ಭಾರತ್ ಸ್ಕೌಟ್ಸ್-ಗೈಡ್ಸ್ ಮುಖ್ಯ ಆಯುಕ್ತ, ಮಾಜಿ ಸಚಿವ ಪಿ. ಜಿ. ಆರ್. ಸಿಂಧ್ಯಾ ಶ್ಲಾಘಿಸಿದರು. ವಿದ್ಯಾಗಿರಿಯಲ್ಲಿ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’೨೯ನೇ ಆಳ್ವಾಸ್ ವಿರಾಸತ್’ ಅಂಗವಾಗಿ ಕೃಷಿಸಿರಿ ಆವರಣದಲ್ಲಿ ಅನ್ವೇಷಣಾತ್ಮಕ ಕೃಷಿಕ,

ಮೂಡುಬಿದಿರೆ: ಆಳ್ವಾಸ್ ವಿರಾಸ್-2023ರ ಮಾಧ್ಯಮ ಕೇಂದ್ರ ಉದ್ಘಾಟನೆ

ಮೂಡುಬಿದಿರೆ : ಡಿ.14.ರಿಂದ 17ರ ವರೆಗೆ ನಡೆಯುವ ‘ಆಳ್ವಾಸ್‌ವಿರಾಸತ್-23’ರ ಮಾಧ್ಯಮ ಕೇಂದ್ರವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ವಿರಾಸತ್ ನ ರೂವಾರಿ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಿದರು. ನಂತರ  ಮಾತನಾಡಿದ ಅವರು  ಸಣ್ಣಮಟ್ಟದಿಂದ ಆರಂಭಗೊಂಡ ಆಳ್ವಾಸ್ ವಿರಾಸತ್ ಇಂದು ಲೋಕ ಪ್ರಸಿದ್ಧವಾಗಿದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಸಂದೇಶವನ್ನು  ಹೊಂದಿದೆ. ವಿರಾಸತ್ ಯಶಸ್ಸಿನಲ್ಲಿ ಮಾಧ್ಯಮದ ಪಾತ್ರ ಮಹತ್ತರವಾದುದು ಎಂದರು. ವನ್ಯಜೀವ ಛಾಯಾಗ್ರಾಹಕ,

ಮೂಲ್ಕಿ: ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಡಾ. ಗಣೇಶ ಅಮೀನ್ ಸಂಕಮಾರ್ ಆಯ್ಕೆ

ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ತುಳು ಕನ್ನಡ ಸಾಹಿತಿ ಡಾ ಗಣೇಶ ಅಮೀನ್ ಸಂಕಮಾರ್ ಆಯ್ಕೆಯಾಗಿದ್ದಾರೆ ಎಂದು ದ.ಕ ಜಿಲ್ಲಾ ಕಸಾಪ ಅಧ್ಯಕ್ಷ ಡಾ ಎಂ ಪಿ ಶ್ರೀನಾಥ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಇದೇ ಡಿಸೆಂಬರ್ 27ರಂದು ಮೂಲ್ಕಿ ಕಾರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.  ಡಾ.ಗಣೇಶ ಅಮೀನ್ ಸಂಕಮಾರ್ ಅವರು ತುಳು ಕನ್ನಡ ಜಾನಪದ ವಿದ್ವಾಂಸರಾಗಿ ಪ್ರಸಿದ್ಧರಾಗಿದ್ದಾರೆ. 33 ವರ್ಷಗಳ ಕಾಲ

ಮೂಡುಬಿದಿರೆ: ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್‌ಗೆ ಕ್ಷಣಗಣನೆ

ಮೂಡುಬಿದಿರೆ: ಕಳೆದ 28 ವರ್ಷಗಳಿಂದ ರಾಷ್ಟ್ರ- ಅಂತರಾಷ್ಟ್ರಮಟ್ಟದ ಕಲಾವಿದರನ್ನು ಮೂಡುಬಿದಿರೆಯ ಎಂಬ ಗ್ರಾಮೀಣ ಪ್ರದೇಶಕ್ಕೆ ಕರೆಸಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾದರಪಡಿಸುವ ಮೂಲಕ  ಮೂಡುಬಿದಿರೆಯ ಹೆಸರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ  ಪರಿಚಯಿಸಿದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಇದೀಗ 29ನೇ ವರ್ಷದ ಸಡಗರಕ್ಕೆ ಸಜ್ಜಾಗಿದ್ದು  ಇಂದಿನಿಂದ ನಾಲ್ಕು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕಲಾಸಕ್ತರಿಗೆ ರಸದೌತಣ

ಮೂಡುಬಿದಿರೆ: ಹಿರಿಯ ಆಟೋ ಚಾಲಕ ಗುರುವಪ್ಪ ಪೂಜಾರಿ ನಿಧನ

ಮೂಡುಬಿದಿರೆ: ಕಳೆದ ಹಲವಾರು ವರ್ಷಗಳಿಂದ ಮೂಡುಬಿದಿರೆಯಲ್ಲಿ ಹಿರಿಯ ಅಟೋ ಚಾಲಕರಾಗಿ, ರಂಗಕಲಾವಿದರಾಗಿ ಗುರುತಿಸಿಕೊಂಡಿದ್ದ ಒಂಟಿಕಟ್ಟೆಯ ಗುರುವಪ್ಪ ಪೂಜಾರಿ ಗುರುವಪ್ಪ ಪೂಜಾರಿಒಂಟಿಕಟ್ಟೆಯ ಗುರುವಪ್ಪ ಪೂಜಾರಿ(68)ಅಲ್ಪ ಕಾಲದ ಅನಾರೋಗ್ಯದಿಂದ ಸೋಮವಾರ ಸ್ವಗೃಹದಲ್ಲಿ ನಿಧನರಾದರು.ಮೂಡುಬಿದಿರೆಯಲ್ಲಿ ಸುಮಾರು 45 ವರ್ಷಗಳಿಂದ ರಿಕ್ಷಾ ಚಾಲಕರಾಗಿ ಸೇವೆ ಸಲ್ಲಿಸಿ ಜನಪ್ರಿಯರಾಗಿದ್ದರು. ಹಲವು ತುಳು ನಾಟಕಗಳಲ್ಲಿ ಅಭಿನಯಿಸಿದ್ದ ಅವರು ಸಾಂಸ್ಕೃತಿಕ, ಧಾರ್ಮಿಕ

ಮೂಡುಬಿದರೆ: ಬೈಕ್-ಕಾರು ಢಿಕ್ಕಿ : ಯುವಕ ಸಾವು

ಮೂಡುಬಿದಿರೆ: ಕಳೆದ ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕನ ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆ ಪೆÇಲೀಸ್ ಠಾಣಾ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ ನಡೆದಿದೆ. ಮಹಾವೀರ ಕಾಲೇಜು ಬಳಿಯ ನಿವಾಸಿ ಪ್ರದೀಪ್ ಶೆಟ್ಟಿ (38) ದುರ್ಘಟನೆಯಲ್ಲಿ ಮೃತಪಟ್ಟ ಯುವಕ. ಪ್ರದೀಪ್ ಅವರು ತನ್ನ ಮನೆಯಲ್ಲಿ ರಾತ್ರಿ ಊಟ ಮುಗಿಸಿ ಬೈಕ್ ನಲ್ಲಿ ಮೂಡುಬಿದಿರೆಯಿಂದ ಗಂಟಲ್ ಕಟ್ಟೆಗೆ ಬರುತ್ತಿದ್ದ ಸಂದರ್ಭದಲ್ಲಿ

ಮೂಡುಬಿದಿರೆ: ಆಳ್ವಾಸ್ ಶಾಲೆಯಲ್ಲಿ ಇಂಡಿಯನ್ ಸೈನ್ಸ್ ಸೊಸೈಟಿ ಸ್ಪರ್ಧೆ: 5 ಮಾದರಿಗಳು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

ಮೂಡುಬಿದಿರೆ:‘ಆವಿಷ್ಕಾರದ ಫಲ ಸಮುದಾಯಕ್ಕೆ ತಲುಪಿದಾಗ ಸಾರ್ಥಕ’ಎಂದು ಅಮೆರಿಕ ಫ್ಲಾರಿಡಾದ ಹೂಡಿಕೆ ಬ್ಯಾಂಕರ್ ಎಮಿಲಿ ಆಳ್ವ ಹೇಳಿದರು. ಭಾರತೀಯ ವಿಜ್ಞಾನ ಸಮಾಜ(ಇಂಡಿಯನ್ ಸೈನ್ಸ್ ಸೊಸೈಟಿ) ಸಹಯೋಗದಲ್ಲಿ ಆಳ್ವಾಸ್ ಕೇಂದ್ರೀಯ ಶಾಲೆ (ಸಿಬಿಎಸ್‌ಸಿ)ಯಲ್ಲಿ ಶನಿವಾರ ನಡೆದ ‘ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿAಗ್ ಮೇಳ (ಇನ್‌ಸೆಫ್)’ದ ಪ್ರಾದೇಶಿಕ ಮೇಳ ಮತ್ತು ವಿಜ್ಞಾನ ವಿಸ್ತರಣಾ ಕಾರ್ಯಕ್ರಮ’ದಲ್ಲಿ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ‘ಕುತೂಹಲ ಹಾಗೂ