Home ಕರಾವಳಿ Archive by category ಸುರತ್ಕಲ್ (Page 4)

ಸುರತ್ಕಲ್‍ : ಎಟಿಎಂ ಮೆಷಿನ್ ಕಳವು ಯತ್ನ ಪ್ರಕರಣ – ನಾಲ್ವರ ಬಂಧನ

ಸುರತ್ಕಲ್ ಬಳಿಯ ಇಡ್ಯಾ ಎಂಬಲ್ಲಿ ಜೆಸಿಬಿ ಮೂಲಕ ಎಟಿಎಂ ಒಡೆದು ಹಣ ದೋಚುವ ಯತ್ನ ನಡೆದಿತ್ತು. ಪ್ರಕರಣದ ಬೆನ್ನತ್ತಿದ ಸುರತ್ಕಲ್ ಪೊಲೀಸರು ಶಿವಮೊಗ್ಗ ಮೂಲದ ನಾಲ್ವರನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬೇಗೂರು ಗ್ರಾಮದ ದೇವರಾಜ್ (24), ಭರತ್ (20), ನಾಗರಾಜ ನಾಯ್ಕ (21), ಕೃತ್ಯಕ್ಕೆ ಧನಸಹಾಯ ಮಾಡಿದ್ದ ಧನರಾಜ್ ನಾಯ್ಕ (26)

ಸುರತ್ಕಲ್ ; ಸೌಹಾರ್ದ ಆಟಿಕೂಟ, ಗ್ರಾಮೀಣ ಆಟೋಟ ಸ್ಪರ್ಧೆ

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಸುರತ್ಕಲ್ ಬ್ಲಾಕ್ ಕಿಸಾನ್ ಘಟಕದ ವತಿಯಿಂದ ಸುರತ್ಕಲ್ ಪಡ್ರೆಯಲ್ಲಿ ಸೌಹಾರ್ದ ಆಟಿಕೂಟ, ಗ್ರಾಮೀಣ ಆಟೋಟ ಸ್ಪರ್ಧೆ ನಡೆಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರು ಸೌಹಾರ್ದ ಆಟಿಕೂಟಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪರಿಸ್ಪರ ಅರಿತು ಬಾಳುವ, ಸೌಹಾರ್ದತೆಯಿಂದ ಬಾಂಧವ್ಯವನ್ನು ಬೆಳೆಸುವ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು. ಸುರತ್ಕಲ್ ಬ್ಲಕ್ ಕಾಂಗ್ರೆಸ್ ಅಧ್ಯಕ್ಷ

ಜುಲೈ 26ರಂದು ರಾಷ್ಟ್ರಭಕ್ತ ನಾಗರಿಕ ವೇದಿಕೆಯಿಂದ ಕಾರ್ಗಿಲ್ ವಿಜಯೋತ್ಸವ

ಸುರತ್ಕಲ್: “ರಾಷ್ಟ್ರಭಕ್ತ ನಾಗರಿಕ ವೇದಿಕೆಯಿಂದ 10ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಹಾಗೂ ಅರ್ಹ ಸೈನಿಕ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ವಿತರಣೆ ಕಾರ್ಯಕ್ರಮ, ಇಡ್ಯಾ ದೇವಸ್ಥಾನದಿಂದ ಹಣತೆಯ ಮೆರವಣಿಗೆ, ಸೈನಿಕರ ಗೌರವ ಇತ್ಯಾದಿ ಕಾರ್ಯಕ್ರಮ ಜುಲೈ 26ರ ಸಂಜೆ ನಡೆಯಲಿದೆ” ಎಂದು ಸಂಘಟನೆಯ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಮಾಹಿತಿ ನೀಡಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಸೇವಾ ವೃಂದ ವೇದಿಕೆ, ಸುರತ್ಕಲ್

ಸುರತ್ಕಲ್ ನಿಂದ ಬಿ.ಸಿ ರೋಡ್ ವರೆಗಿನ ಹೆದ್ದಾರಿ ಗುಂಡಿಗಳನ್ನು ಮುಚ್ಚಲು ಡಿವೈಎಫ್ಐ ಮನವಿ

ಸುರತ್ಕಲ್ ನಿಂದ ಬಿ.ಸಿ ರೋಡ್ ವರೆಗಿನ ಹೆದ್ದಾರಿಯಲ್ಲಿ ನಿರ್ಮಾಣಗೊಂಡಿರುವ ಗುಂಡಿಗಳನ್ನು ಮುಚ್ಚಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಇಂದು (19-7-2023) ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನಿಯೋಗವು ಮನವಿಯನ್ನು ಸಲ್ಲಿಸಿದೆ. ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ,ಕಾರ್ಯದರ್ಶಿ ಸಂತೋಷ್ ಬಜಾಲ್, ಡಿವೈಎಫ್ಐ ಮುಖಂಡರಾದ ಉಸ್ಮಾನ್ ಕಣ್ಣೂರ್, ಆಸೀಫ್, ರಿಯಾಝ್ ಮುಂತಾದವರು ಉಪಸ್ಥಿತರಿದ್ದರು.

ಪ್ರಾಣ ತೆಗೆಯುವ ಸುರತ್ಕಲ್ ಟೋಲ್ ಗೇಟ್ ಗುಂಡಿಗಳು

ಸುರತ್ಕಲ್: ಭಾರೀ ಪ್ರತಿಭಟನೆ, ಹೋರಾಟ ನಡೆದು ಕೊನೆಗೆ ಇಲ್ಲಿನ ಎನ್‍ಐಟಿಕೆ ಬಳಿಯ ಟೋಲ್ ಗೇಟ್ ಅನ್ನು ಮುಚ್ಚಲಾಯ್ತು. ಸುಂಕ ಕೊಡೋ ಕಷ್ಟ ತಪ್ಪಿತು ಎಂದು ವಾಹನ ಸವಾರರು ಖುಷಿ ಏನೋ ಪಟ್ಟರು, ಆದರೆ ಈಗ ಟೋಲ್ ಗೇಟ್ ಪರಿಸರದಲ್ಲಿ ಎದ್ದಿರುವ ಗುಂಡಿಗಳಿಂದಾಗಿ ಹೈರಾಣಾಗಿದ್ದಾರೆ. ಟೋಲ್ ಗೇಟ್ ಎರಡೂ ಕಡೆಗಳಲ್ಲಿ ಹತ್ತಾರು ಗುಂಡಿಗಳು ನಿರ್ಮಾಣಗೊಂಡಿದ್ದು ಅದರಲ್ಲಿ ರಿಕ್ಷಾ, ಕಾರ್, ಬೈಕ್ ಸವಾರರು ಸಂಚರಿಸಲು ಹರಸಾಹಸ ಪಡುವಂತಾಗಿದೆ. ಇಲ್ಲಿ ಈಗಾಗಲೇ ಇಬ್ಬರು

ಕರಾವಳಿ : ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರ ಮಳೆ – ರೆಡ್ ಅಲರ್ಟ್ ಘೋಷಣೆ

ಕರಾವಳಿ ಭಾಗದಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜು.4 ರ ಇಂದು ಮಧ್ಯಾಹ್ನದಿಂದ ಜು.5 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.4ರ ಮಧ್ಯಾಹ್ನ ಬಳಿಕ ಮುಂದಿನ ಕೆಲವು ಗಂಟೆಗಳ ಕಾಲ ಬಲವಾದ ಮೇಲ್ಮೈ ಮಾರುತಗಳು ಬೀಸಲಿದ್ದು, ಗುಡುಗು ಮತ್ತು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್

ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಅಧ್ಯೆಕ್ಷೆಯಾಗಿ ಭವ್ಯಾ ಎ ಶೆಟ್ಟಿ ಆಯ್ಕೆ

ಸುರತ್ಕಲ್ :ಬಂಟರ ಸಂಘ ಸುರತ್ಕಲ್ ಮಹಿಳಾ ವೇದಿಕೆಯ ಅಧ್ಯೆಕ್ಷೆಯಾಗಿ ಭವ್ಯಾ ಎ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಬಂಟರ ಭವನದಲ್ಲಿ ನಡೆದ ಮಹಿಳಾ ವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳ ನೇಮಕ ನಡೆಯಿತು. ಅಧ್ಯಕ್ಷರಾಗಿ ಭವ್ಯಾ ಎ ಶೆಟ್ಟಿ, ಉಪಾಧ್ಯಕ್ಷರಾಗಿ ಸರೋಜ ಟಿ ಶೆಟ್ಟಿ, ಕಾರ್ಯದರ್ಶಿಯಾಗಿ ಸುಜಾತ ಶೆಟ್ಟಿ ಕೃಷ್ಣಾಪುರ, ಜೊತೆ ಕಾರ್ಯದರ್ಶಿಯಾಗಿ ವಜ್ರಾಕ್ಷಿ ಶೆಟ್ಟಿ, ಕೋಶಾಧಿಕಾರಿಯಾಗಿ ಜ್ಯೋತಿ ಪಿ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ನಾಗಲತಾ

ಸುರತ್ಕಲ್‍ : ಕ್ಷುಲ್ಲಕ ಕಾರಣಕ್ಕೆ ಯುವಕನಿಂದ ಚೂರಿ ಇರಿತ

ಸುರತ್ಕಲ್‍ನ ಜನತಾ ಕಾಲನಿಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಗುರುವಾರ ರಾತ್ರಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ಇಲ್ಲಿನ ಕಾನ ಕಾಲನಿ ನಿವಾಸಿ ಮುಹಮ್ಮದ್ ಶಾಫಿ(35) ಚೂರಿ ಇರಿತಕ್ಕೊಳಗಾದವರು. ಅದೇ ಪರಿಸರದ ಯುವಕ ತ್ವಾಹಿರ್ (24) ಚೂರಿಯಿಂದ ಇರಿದ ಆರೋಪಿ ಎಂದು ತಿಳಿದು ಬಂದಿದೆ. ಗುರುವಾರ ರಾತ್ರಿ ಕಾನಕಾಲನಿ ಮಸೀದಿಯ ಬಳಿ ಇಬ್ಬರ ನಡುವೆ ಜಗಳವಾಗಿದ್ದು, ತಾಹಿರ್ ಚೂರಿಯಲ್ಲಿ ಇರಿದು ಪರಾರಿಯಾಗಿದ್ದಾನೆ. ಮಸೀದಿಯಲ್ಲಿನ

ಪಿಯುಸಿ ಫೇಲ್ ಆದ ಪ್ರಿಯಾಂಕ ಖರ್ಗೆ ಅವರು ಎಂಜಿನಿಯರ್ ಸೂಲಿಬೆಲೆಯ ಪದವಿ ಕೇಳುತ್ತಿದ್ದಾರೆ- ಡಾ.ಭರತ್ ಶೆಟ್ಟಿ ವ್ಯಂಗ್ಯ

ಸುರತ್ಕಲ್: ಎಂಜಿನಿಯರಿಂಗ್ ಮುಗಿಸಿ ಕೈ ತುಂಬಾ ವೇತನವಿದ್ದ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನ ಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ. ಸೂಲಿಬೆಲೆ ಯಾವ ಪಿಎಚ್‌ಡಿ ಪದವಿ ಗಳಿಸಿದ್ದಾನೆ,

ಬಂಟರ ಸಂಘ ಸುರತ್ಕಲ್ : 2023-25 ರ ಸಾಲಿನ ಅಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ ಆಯ್ಕೆ

ಬಂಟರ ಸಂಘ ( ರಿ) ಸುರತ್ಕಲ್ 2023-25 ರ ಸಾಲಿನ ಅಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ ಆಯ್ಕೆಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮುಂಚೂರು ಲೋಕಯ್ಯ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡರು.ಉಪಾಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ, ಕೋಶಾಧಿಕಾರಿಯಾಗಿ ಅವಿನಾಶ್ ಶೆಟ್ಟಿ, ಜೊತೆ ಕಾರ್ಯದಶಿಯಾಗಿ