ಸುರತ್ಕಲ್ ಅಕ್ರಮ ಟೋಲ್ ಸುಂಕ ಹೆಜಮಾಡಿ ಟೋಲ್ಗೇಟ್ನಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ವಿಲೀನ ಆದ್ಯಾದೇಶ ಶಾಶ್ವತವಾಗಿ ಹಿಂಪಡೆಯಲು ಆಗ್ರಹಿಸಿ ಸುರತ್ಕಲ್ ನಂತೂರು ಹೆದ್ದಾರಿಯನ್ನು ಟೋಲ್ ಮುಕ್ತ ರಸ್ತೆಯಾಗಿ ಘೋಷಿಸಲು ಒತ್ತಾಯಿಸಿ ಸಾಮೂಹಿಕ ಜನಾಗ್ರಹ ಧರಣಿ ಬನ್ನಂಜೆಯಲ್ಲಿ ನಡೆಯಿತು. ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಮತ್ತು
ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣದಲ್ಲಿ ಪೆÇಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕಾಟಿಪಳ್ಳ ನಾಲ್ಕನೇ ಬ್ಲಾಕ್ ಕೃಷ್ಣಾಪುರ ನಿವಾಸಿ ಲಕ್ಷ್ಮೀಶ ದೇವಾಡಿಗ(28) ಬಂಧಿತ. ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಶೈಲೇಶ್ ಪೂಜಾರಿ, ಸವಿನ್ ಕಾಂಚನ್ ಮತ್ತು ಪವನ್ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಲಕ್ಷ್ಮೀಶ ಮತ್ತು ಶೈಲೇಶ್ ಸೇರಿಕೊಂಡು ಜಲೀಲ್ ಕೊಲೆಗೆ ಸಂಚು ಹೆಣೆದಿದ್ದರು ಎನ್ನಲಾಗಿದೆ.
ಕೃಷ್ಣಾಪುರದಲ್ಲಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಮಾಧ್ಯಮದವರಿಗೆ ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಆಯುಕ್ತರು, ಬಂಧಿತರ ಪೈಕಿ ಇಬ್ಬರು ಕೃತ್ಯದಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಬೈಕಿನಲ್ಲಿ ಪರಾರಿಯಾಗಲು ನೆರವಾದವನು ಎಂದು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ರವಿವಾರ ರಾತ್ರಿ
ಮೂಲ್ಕಿ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯಂಗಡಿ ಸಮೀಪದ ಪಾವಂಜೆ ಸೇತುವೆಯಲ್ಲಿ ಆಟೋ ಮತ್ತು ಬಸ್ ಹಾಗೂ ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಆಟೋದಲ್ಲಿದ್ದ ಮಹಿಳೆ ಗಂಭೀರ ಗಾಯಗೊಂಡಿದ್ದ, ಮಹಿಳೆಯನ್ನು ಸ್ಧಳೀಯ ಆಸ್ಪತ್ರಗೆ ದಾಖಲಿಸಿದ್ದಾರೆ. ಗಾಯಗೊಂಡ ಮಹಿಳೆಯನ್ನು ಮಂಗಳೂರು ನಿವಾಸಿ ಸರಸ್ವತಿ ಎಂದು ಗುರುತಿಸಲಾಗಿದೆ. ಆಟೋ ಮಂಗಳೂರಿನಿಂದ ಮೂಲ್ಕಿ ಕಡೆಗೆ ಹೋಗುತ್ತಿದ್ದು ಆಟೋಗೆ ಪಾವಂಜೆ ಸೇತುವೆ ಬಳಿ ಮುಂಬೈ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ
ತುಳು ನಾಡು ದೈವ ದೇವರುಗಳ ನೆಲೆಬೀಡು. ತುಳು ನಾಡಿನಲ್ಲಿ ಹೆಜ್ಜೆಗೊಂದರಂತೆ ದೈವಸ್ಥಾನ, ದೇವಸ್ಥಾನಗಳು ಕಾಣಸಿಗುತ್ತವೆ. ಅದರಂತೆ ಸುರತ್ಕಲ್ ಸಮೀಪದ ಅತ್ಯಂತ ಪ್ರಸಿದ್ಧ ಶಿಬರೂರು ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಒಂದು ವಾರಗಳ ಕಾಲ ನಡೆಯಲಿದ್ದು ಇಂದು ಪ್ರಾರಂಭವಾಯಿತು. ಅತ್ಯಂತ ಕಾರಣಿಕ ಕ್ಷೇತ್ರ ಎಂದು ಪ್ರಸಿದ್ಧಿಯನ್ನು ಪಡೆದ ಈ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡುವುದು ವಿಶೇಷ. ಮಂಗಳೂರಿನ ಸುರತ್ಕಲ್ ಸಮೀಪದ ಶಿಬರೂರು ಕೊಡಮಣಿತ್ತಾಯ
ಸುರತ್ಕಲ್ ಟೋಲ್ ಗೇಟ್ ತೆರವಾಗಿರುವ ಹಿನ್ನಲೆಯಲ್ಲಿ ಕಿನ್ನಿಗೋಳಿ ಹಳೆಯಂಗಡಿ ನಡುವೆ ಸಂಚರಿಸುವ ಎಲ್ಲಾ ಬಸ್ಗಳ ಟಿಕೆಟ್ ದರದಲ್ಲಿ ಡಿ.20 ರಿಂದ 2ರೂ ಕಡಿತ ಮಾಡಲಾಗುವುದು, ಕಿನ್ನಿಗೋಳಿಯಿಂದ ಮುಕ್ಕ ತನಕ ಹಿಂದಿನ ದರವೇ ಇರಲಿದೆ ಎಂದು ಕಿನ್ನಿಗೋಳಿ ವಲಯ ಬಸ್ ಮಾಲಕರ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್ ಹೆಗ್ಡೆ ತಿಳಿಸಿದ್ದಾರೆ
ಮಂಗಳೂರು : ಸುರತ್ಕಲ್ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸಿಂಗ್ವಿದ್ಯಾರ್ಥಿ ಪವನ್ ಈ ಕೃತ್ಯವೆಸಗಿದ ಆರೋಪಿ. ಮೂಲತಃ ಕಲಬುರಗಿಯವನಾದ ಪವನ್ ಬಜಪೆಯಲ್ಲಿ ವಾಸವಿದ್ದ.ಆಸ್ಪತ್ರೆಗೆ ತಪಾಸಣೆಗೆ ಬಂದವರು ಸ್ಕ್ಯಾನಿಂಗ್ಗೆ ಒಳಗಾಗುವ ಮುನ್ನ ಬಟ್ಟೆ
ಸುರತ್ಕಲ್ ಟೋಲ್ ಗೇಟ್ ದಾಟಿ ಮುಲ್ಕಿ, ಕಿನ್ನಿಗೋಳಿ, ಮುಕ್ಕ ಪ್ರದೇಶದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ಸುಗಳು ಪ್ರಯಾಣಿಕರ ಟಿಕೆಟ್ ಮೇಲೆ ಹಾಕಿದ್ದ ಟೋಲ್ ತೆರಿಗೆಯನ್ನು ತಕ್ಷಣವೇ ಕೈಬಿಟ್ಟು ಪ್ರಯಾಣ ದರವನ್ನು ಇಳಿಸಬೇಕು ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ. ಏಳು ವರ್ಷಗಳ ಹಿಂದೆ ಸುರತ್ಕಲ್ ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹ ಆರಂಭಗೊಂಡಾಗ ಮುಲ್ಕಿ, ಹಳೆಯಂಗಡಿ, ಕಿನ್ನಿಗೋಳಿ ಮುಂತಾದ ಮಂಗಳೂರು ಗ್ರಾಮೀಣ ಭಾಗಗಳಿಗೆ ಸಂಚರಿಸುತ್ತಿದ್ದ ಖಾಸಗಿ
ಇಲ್ಲಿನ ಟೋಲ್ ಗೇಟ್ ನಲ್ಲಿ ಉದ್ಯೋಗದಲ್ಲಿದ್ದು ಟೋಲ್ ತೆರವು ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಂಡಿರುವ 35 ಮಂದಿಗೆ ಕೆಲಸ ನೀಡುವುದಾಗಿ ಹೇಳಿದ್ದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು ತಮ್ಮನ್ನು ಸಂಪರ್ಕಿಸಿದ 19 ಮಂದಿಯಲ್ಲಿ ಹೆಚ್ಚಿನ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಮೂಲಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಈ ಕುರಿತು ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಪ್ರತಿಭಾ ಕುಳಾಯಿ ಅವರು, “ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗ ಕಳೆದುಕೊಂಡ 35
ಹಲವಾರು ಪ್ರತಿಭಟನೆಗಳ ನಂತರ ಇಲ್ಲಿನ ಟೋಲ್ ಗೇಟಿಗೆ ಕೊನೆಗೂ ಮುಕ್ತಿ ದೊರಕಿದ್ದು, ಶುಕ್ರವಾರದಿಂದ ವಾಹನಗಳು ಉಚಿತವಾಗಿ ಸಂಚರಿಸುತ್ತಿವೆ. ಈ ನಡುವೆ ಈ ಶುಲ್ಕ ಕೇಂದ್ರದಲ್ಲಿ ಮೂರು ಪಾಳಿಗಳಲ್ಲಿ ಕೆಲಸ ಮಾಡುತ್ತಿದ್ದ 50ಕ್ಕೂ ಅಧಿಕ ಮಂದಿ ಉದ್ಯೋಗ ವಂಚಿತರಾಗಿದ್ದಾರೆ. ಗುರುವಾರ ಮುಂಜಾನೆ ಶುಲ್ಕ ಕೇಂದ್ರದ ಕೆಲ ಸಿಬ್ಬಂದಿಗಳು ಆಗಮಿಸಿ ಕುರ್ಚಿಗಳಲ್ಲಿ ಕುಳಿತು ಮೊಬೈಲ್ ವೀಕ್ಷಿಸುತ್ತಿದ್ದ ದೃಶ್ಯ ಕಂಡು ಬಂತು.ಹೆಜಮಾಡಿಯ ನವಯುಗ ಟೋಲ್ ಗೇಟ್ ಗೆ ಕೇಂದ್ರ ಸರ್ಕಾರ