ಕಡಬ :ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ಪಲ್ಟಿಯಾದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕೋಡಂದೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಳೆ ಬರುತ್ತಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಪಲ್ಟಿಯಾಗಿದೆ.
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.28ರಂದು ಶನಿವಾರ ಚಂದ್ರಗ್ರಹಣ ಇರುವುದರಿಂದ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತಾಧಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅ.28ರಂದು ಶನಿವಾರ ರಾತ್ರಿ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯಗೊಳ್ಳಲಿದೆ.ಆ ಬಳಿಕ ಶ್ರೀ ದೇವರ ದರುಶನಕ್ಕೆ ಅವಕಾಶ ಇರುವುದಿಲ್ಲ. ಅಲ್ಲದೆ ಅಂದು ಸಾಯಂಕಾಲ ಸಂಜೆಯ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ. ರಾತ್ರಿ
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕಲೆಕ್ಷನ್ ಕೇಂದ್ರವಾಗಿದೆ. ಬರಕ್ಕೆ ತುತ್ತಾಗಿರುವ ರೈತರಿಗೆ ಪರಿಹಾರ ನೀಡಿಲ್ಲ. ತುಷ್ಟೀಕರಣದಲ್ಲಿ ಸರ್ಕಾರ ಮುಳುಗಿದೆ. ಇತ್ಯಾದಿ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಸುಳ್ಯದಲ್ಲಿ ಪ್ರತಿಭಟನೆ ನಡೆಸಿದರು. ಸುಳ್ಯದ ತಾಲೂಕು ಕಚೇರಿ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡರು, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ.
ದೇಶದ ರಕ್ಷಣೆಯೊಂದಿಗೆ ನಮ್ಮಲ್ಲರ ರಕ್ಷಣೆ ಮಾಡುವ ಯೋಧರಿಗೆ ಸ್ಮಾರಕ ನಿರ್ಮಾಣ ಮಾಡುವ ಕಾರ್ಯಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿಯವರು ಯೋಧರಿಗೆ ಅತ್ಯತ ಹೆಚ್ಚು ಗೌರವ ನೀಡುವ ಕಾರ್ಯ ಮಾಡುತ್ತಿದ್ದಾರೆ ಎಂದು ಸುಳ್ಯ ಕ್ಷೇತ್ರ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಕಡಬದಲ್ಲಿ ನೆಹರು ಯುವ ಕೇಂದ್ರ ಮಂಗಳೂರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ಸ,ಪ.ಪೂ.ಕಾಲೇಜು ಕಡಬ ,ತಾಲೂಕು ಯುವಜನ ಒಕ್ಕೂಟ ಕಡಬ, ತಾ.ಪಂ.ಕಡಬ ,ಪಟ್ಟಣ
ಕಡಬ:ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸರ್ವೋತ್ತಮ ಗೌಡ ಇವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆದೇಶ ಮಾಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಕಾರದಲ್ಲಿ ಪಕ್ಷ ಸಂಘಟನೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ. ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಹೊಸಮನೆ ನಿವಾಸಿಯಾಗಿರುವ ಸರ್ವೋತ್ತಮ ಗೌಡ ಅವರು ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್
ಭಾರತ ಸರ್ಕಾರದ ಮಾಜಿ ಪ್ರಧಾನ ಮಂತ್ರಿ ಹಾಗೂ ರಾಜ್ಯ ಸಭಾ ಸಂಸತ್ ಸದಸ್ಯರಾದ ಹೆಚ್.ಡಿ. ದೇವೇಗೌಡ ಹಾಗೂ ಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು. ದೇವೇಗೌಡ ದಂಪತಿಗಳು ನಿನ್ನೆ ಮಧ್ಯಾಹ್ನ ಬೆಂಗಳೂರು ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ ಸಕಲೇಶಪುರ, ಸುಬ್ರಹ್ಮಣ್ಯ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣ ಅ. 7ರ ಶನಿವಾರದಿಂದ ಆರಂಭಗೊಳ್ಳಲಿದೆ. ಇದೀಗ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ಚಾರಣಕ್ಕೆ ಅವಕಾಶ ಒದಗಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾದ್ಯಮಕ್ಕೆ ತಿಳಿಸಿದ್ದಾರೆ. ಈ ಹಿಂದೆ ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಭಾರೀ ಮಳೆಯ ಕಾರಣ ಚಾರಣಿಗರ ಹಿತದೃಷ್ಟಿಯಿಂದ ಕುಮಾರಪರ್ವತ ಚಾರಣವನ್ನು ಅ. 3ರಿಂದ ನಿಷೇಧಿಸಲಾಗಿತ್ತು. ಅದಕ್ಕಿಂತ ಮೊದಲು ಮೇ ತಿಂಗಳಿನಿಂದ ಸೆ.29ರ ತನಕ ಅರಣ್ಯ
ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ರಾಜ್ಯ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, 6 ಆರೋಪಿಗಳ ಪೈಕಿ ಒರ್ವರನ್ನು ಹೊರತುಪಡಿಸಿ ಐದು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ತೀರ್ಪು ನೀಡಿದೆ.ಆಡಳಿತಾಧಿಕಾರಿ ಪ್ರೊ.ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪನ್ನು ವಾರದ ಹಿಂದೆ ರದ್ದುಗೊಳಿಸಿದ್ದ
ಕಾಡಿನಲ್ಲಿ ಸಿಗುವ ಯಾವುದೋ ಹಣ್ಣನ್ನು ಮೈರೋಳ್ ಹಣ್ಣ ಎಂದು ಭಾವಿಸಿ ಮನೆಗೆ ತಂದು ಶರಬತ್ತು ಮಾಡಿ ಕುಡಿದ ಮಹಿಳೆಯೊಬ್ಬರು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಅಮರಪಡ್ನೂರು ಗ್ರಾಮದ ಕುಳ್ಳಾಜೆ ನಿವಾಸಿ ಲೀಲಾವತಿ(35) ಮೃತಪಟ್ಟವರು. ಇವರ ಇದೇ ಲೋಕಯ್ಯ ನಾಯ್ಕ ಕೂಡಾ ಹಣ್ಣಿನ ಶರಬತ್ತು ಕುಡಿದು ಅಸ್ವಸ್ಥಗೊಂಡಿದ್ದರೆನ್ನಲಾಗಿದೆ. ಲೀಲಾವತಿ ಹಾಗೂ ಲೋಕಯ್ಯ ನಾಯ್ಕ ಒಂದು ವಾರದ ಹಿಂದೆ ಮೈರೋಳ್ ಹಣ್ಣಿನ ರಸ ತೆಗೆದು ಶರಬತ್ತು ಮಾಡಿ
ಕಡಬ ಪಟ್ಟಣ ಪಂಚಾಯತ್, ಕಡಬ ತಾಲೂಕು ಗ್ಯಾರೇಜ್ ಮಾಲಕರ ಹಾಗೂ ಸಹೋದ್ಯೋಗಿಗಳ ಸಂಘ (ರಿ ), ಕಡಬ, ಇವರ ಸಹಭಾಗಿತ್ವದಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ಕಡಬ ಪಟ್ಟಣ ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ ಕಡಬದ ಶ್ರೀ ಗಣೇಶ್ ಬಿಲ್ಡಿಂಗ್ ಕಟ್ಟಡದ ಎದುರುಗಡೆ ನಡೆಯಿತು. ಕಾರ್ಯಕ್ರಮವನ್ನು ಕಡಬ ತಾಲೂಕು ಉಪ ತಹಸೀಲ್ದಾರ್ ಗೋಪಾಲ್ ಕಲ್ಲುಗುಡ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸ್ವಚ್ಚತೆ ಪ್ರತಿಯೊಬ್ಬರ