Home ಕರಾವಳಿ Archive by category ಸುಳ್ಯ (Page 8)

ಕಡಬ: ಬಾಲಕಿ ಬರೆದ ಪತ್ರಕ್ಕೆ ಸಿಎಂ ಪ್ರತಿಕ್ರಿಯೆ: ಟ್ವಿಟ್ಟರ್(x)ನಲ್ಲಿ ಸಂತಸ ಹಂಚಿಕೊಂಡ ಸಿದ್ದರಾಮಯ್ಯ

ಶಾಲೆಯ ಪಕ್ಕದ ಅಂಗಡಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ತಡೆಯಿರಿ ಎಂಬ ಬಾಲಕಿಯ ಮನವಿಗೆ ಸಿಎಂ ಸಿದ್ದರಾಮಯ್ಯ ಅವರು ತಕ್ಷಣ ಸ್ಪಂದಿಸಿದ್ದೂ,ಇದೀಗ ತನ್ನ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಸಾರ್ವಜನಿಕ ವಲಯದಿಂದ ಬರುತ್ತಿರುವ ಕೆಲವು ವಿಶೇಷ ವಿಚಾರಗಳಿಗೆ ತ್ವರಿತವಾಗಿ ಸ್ಪಂದಿಸುವ ಪ್ರಕ್ರಿಯೆಯನ್ನು

ಕಡಬ: ಕಾಡಾನೆ ತುಳಿತಕ್ಕೊಳಗಾದ ಸ್ಥಳಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ, ಪರಿಶೀಲನೆ

ಕಡಬದ ಮರ್ದಾಳ ಸಮೀಪ ಕಾಡಾನೆ ತುಳಿತಕ್ಕೊಳಗಾದ ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಐತ್ತೂರು ಕೋಕಲಾ ಸ್ಥಳವನ್ನು ಪರಿಶೀಲಿಸಿ ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು. ನಂತರ ತುಳಿತಕ್ಕೊಳಗಾದ ನೇಲ್ಯಡ್ಕ ನಿವಾಸಿ ಚೋಮ ರವರ ಮನೆಗೆ ಸುಳ್ಯ ಶಾಸಕಿರವರು ಭೇಟಿ ನೀಡಿದರು. ಮನೆಯಲ್ಲಿ ಚೋಮ ರವರ ಪತ್ನಿಯ ಜೊತೆ ಮಾತನಾಡಿ ಧೈರ್ಯ ತುಂಬಿದರು. ಸರ್ಕಾರದಿಂದ ಸಿಗುವ ಸೌಲಭ್ಯ ನೀಡುವುದಾಗಿ ಹೇಳಿದರು.

ಕಡಬ : ವ್ಯಕ್ತಿಯ ಮೇಲೆ ಕಾಡಾನೆ ದಾಳಿ- ಗಂಭೀರ ಗಾಯ

ಕಡಬ: ಐತ್ತೂರು ಗ್ರಾಮದ ನೇಲ್ಯಡ್ಕ ಎಂಬಲ್ಲಿ ಕಾಡಾನೆಯೊಂದು ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿದ್ದು, ಅವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಕಡಬ ಆಸ್ಪತ್ರೆಗೆ ದಾಖಲಿಸಲಾಗಿದೆ.ಐತ್ತೂರು ಗ್ರಾಮದ ಗೇರ್ತಿಲ ನಿವಾಸಿ ಚೋಮ ಎಂಬವರು ಮರ್ದಾಳದಿಂದ ಕೊಣಾಜೆ ಮಾರ್ಗವಾಗಿ ಮನೆ ಕಡೆಗೆ ಹೋಗುತ್ತಿದ್ದ ವೇಳೆ ಸುಳ್ಯ ಎಂಬಲ್ಲಿ ಕಾಡಾನೆ ದಾಳಿ ನಡೆಸಿದೆ.

ಸುಳ್ಯ: ಕೆವಿಜಿ ಶಿಕ್ಷಣ ಸಂಸ್ಥೆಗಳ ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣ: 6 ಮಂದಿ ದೋಷಿಗಳೆಂದು ಹೈಕೋರ್ಟ್ ತೀರ್ಪು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾಗಿದ್ದ ಎ.ಎಸ್. ರಾಮಕೃಷ್ಣ ಅವರ ಹತ್ಯೆ ಪ್ರಕರಣದ ತೀರ್ಪನ್ನು ರಾಜ್ಯ ಹೈ ಕೊರ್ಟು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಡಾ.ರೇಣುಕಾ ಪ್ರಸಾದ್ ಸೇರಿದಂತೆ 6 ಮಂದಿಯನ್ನು ದೋಷಿಗಳು ಎಂದು ತೀರ್ಮಾನಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. 2011ರ ಏಪ್ರಿಲ್ ತಿಂಗಳಿನಲ್ಲಿ ಎ.ಎಸ್. ರಾಮಕೃಷ್ಣ ಸುಳ್ಯ ನಗರದ ರಸ್ತೆಯೊಂದರಲ್ಲಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ

ಕಡಬ: ಮಸೀದಿ ಆವರಣದೊಳಗೆ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳ ಬಂಧನ

ಕಡಬ: ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಕಾಂಪೌಂಡ್ ಒಳಗೆ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳಿಬ್ಬರನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಹಾಗೂ ಕೈಕಂಬ ನಡ್ತೋಟ ನಿವಾಸಿ ಸಚಿನ್ (26) ಎಂದು ಗುರುತಿಸಲಾಗಿದೆ. ಆರೋಪಿಗಳು ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಮಸೀದಿಯ ಕಾಂಪೌಂಡ್ ಒಳಗೆ ಬೈಕಿನಲ್ಲಿ ಆಗಮಿಸಿ ಜೈಶ್ರೀರಾಂ ಘೋಷಣೆ ಕೂಗಿದ್ದಾರೆ ಎನ್ನಲಾಗಿದ್ದು, ಮಸೀದಿಯಲ್ಲಿದ್ದ ಧರ್ಮಗುರುಗಳನ್ನು ಕಂಡು

ಕಡಬ : ಕಾಂಗ್ರೆಸ್ ನಾಯಕರನ್ನು ಪಕ್ಷದಿಂದ ಉಚ್ಛಾಟಿಸಲು ಸುಳ್ಯ ಬ್ಲಾಕ್‍ನಿಂದ ಶಿಫಾರಸ್ಸು ಮಾಡಿಲ್ಲ, ಮಮತಾ ಗಟ್ಟಿ

ಸುಳ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಯ ಮೇಲೆ ಕೆಲವರನ್ನು ಉಚ್ಛಟಿಸಲಾಗಿದೆ ಎನ್ನುವ ಸುದ್ದಿ ಯಾವುದೋ ಕಾರಣಕ್ಕೆ ಹರಡಿತ್ತು. ಆದರೆ ಸುಳ್ಯ ಬ್ಲಾಕ್ ಕಾಂಗ್ರೆಸ್‍ನಿಂದ ಉಚ್ಛಾಟನೆಗೆ ಯಾವುದೇ ಶಿಫಾರಸ್ಸು ಹೋಗಿಲ್ಲ ಎಂದು ಕೆ.ಪಿ.ಸಿ.ಸಿ ಉಸ್ತುವಾರಿ ಮಮತಾ ಗಟ್ಟಿ ಸ್ಪಷ್ಟಪಡಿಸಿದರು. ಅವರು ಕಡಬ ಅನುಗ್ರಹ ಸಭಾಭವನದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪಕ್ಷ

ಕಡಬ: ಪಂಚಾಯತ್ ಸಂಪರ್ಕ ರಸ್ತೆ ಬಂದ್ ಮಾಡಿ ದಿಗ್ಬಂಧನ: ತಹಶೀಲ್ದಾರರಿಂದ ತೆರವು

ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಬದನೆ ಎಂಬಲ್ಲಿ ಪಂಚಾಯತ್ ರಸ್ತೆಗೆ ಸಂಪರ್ಕಿಸುವ ರಸ್ತೆಯನ್ನು ವೆಂಕಪ್ಪ ಪೂಜಾರಿ ಮತ್ತು ರೂಪೇಶ್ ಕುಮಾರ್ ಅವರು ಬಂದ್ ಮಾಡಿರುವ ಬಗ್ಗೆ ಇಚ್ಲಂಪಾಡಿ ಗ್ರಾಮದ ಬದನೆ ನಿವಾಸಿ ಶ್ರೀನಿವಾಸ್ ಪೂಜಾರಿಯವರು, ಪುತ್ತೂರು ಸಹಾಯಕ ಆಯುಕ್ತರು, ಕಡಬ ತಹಶೀಲ್ದಾರರು, ಗ್ರಾಮ ಪಂಚಾಯತ್ ಹಾಗೂ ಪೋಲಿಸ್ ಇಲಾಖೆಗೆ ದೂರು ನೀಡಿದ್ದಾರೆ. ಕಡಬ ತಹಶೀಲ್ದಾರರಾದ ಪ್ರಭಾಕರ ಕಜುರೆ, ಕಂದಾಯ ನಿರೀಕ್ಷಕರಾದ ಪೃಥ್ವಿರಾಜ್ ಘಟನಾ ಸ್ಥಳಕ್ಕೆ ಭೇಟಿ ನೀಡಿ

ಸುಳ್ಯ: ಗ್ರಾ.ಪಂ ಗ್ರಂಥಾಲಯ, ಮಾಹಿತಿ ಕೇಂದ್ರಗಳಿಗೆ ಲ್ಯಾಪ್‍ಟಾಪ್, ಮೋನಿಟರ್ ಕೊಡುಗೆ

ಕರ್ನಾಟಕ ಸರಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಪೌಂಡೇಶನ್ ಮತ್ತು ಡೆಲ್ ಟೆಕ್ನಲಾಜಿ ಸಹಭಾಗಿತ್ವದಲ್ಲಿ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ನಡೆಯುತ್ತಿರುವ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿ ಆಯ್ಕೆಯಾದ ಸುಳ್ಯ ತಾಲೂಕಿನ ಎಂಟು ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಿಗೆ ಕೊಡುಗೆಯಾಗಿ ನೀಡುವ ಲ್ಯಾಪ್‍ಟಾಪ್, ಮೋನಿಟರ್‍ಗಳನ್ನು ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ಹಸ್ತಾಂತರಿಸಿದರು. ಸುಳ್ಯ ತಾಲೂಕು

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ದಯಾನಂದ ಕಲ್ನಾರ್ ಆಯ್ಕೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2023-24ನೇ ಸಾಲಿನ ಅಧ್ಯಕ್ಷರಾಗಿ ದಯಾನಂದ ಕಲ್ನಾರ್ ಆಯ್ಕೆಯಾಗಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆದ ವಾರ್ಷಿಕ ಮಹಾ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಪದ್ಮನಾಭ ಅರಂಬೂರು,ಪ್ರಧಾನ ಕಾರ್ಯದರ್ಶಿಯಾಗಿ ತೇಜೇಶ್ವರ ಕುಂದಲ್ಪಾಡಿ, ಜೊತೆ ಕಾರ್ಯದರ್ಶಿಯಾಗಿ ಜಯದೀಪ್ ಕುದ್ಕುಳಿ, ಕೋಶಾಧಿಕಾರಿಯಾಗಿ ಪ್ರಜ್ಞಾ ಎಸ್.ನಾರಾಯಣ್ ಆಯ್ಕೆಯಾದರು. ನಿರ್ದೇಶಕರಾಗಿ ಜೆ.ಕೆ.ರೈ, ಕೃಷ್ಣ ಬೆಟ್ಟ,

ಸುಳ್ಯ: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ, ಮೂವರು ಮೃತ್ಯು

ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಸುಳ್ಯದ ಅಡ್ಕಾರಿನಲ್ಲಿ ಸಂಭವಿಸಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರಾದ ಚಂದ್ರಪ್ಪ ರೇಗಪ್ಪ, ಮಾಂತೇಶ್ ಮೃತ ಕಾರ್ಮಿಕರು ಎಂದು ಗುರುತಿಸಲಾಗಿದೆ. ಹುಣಸೂರು ಕಡೆಯಿಂದ ಬಂದ ಕಾರೊಂದು ವಿರುದ್ಧ ದಿಕ್ಕಿನಲ್ಲಿ ಚಲಿಸಿ ರಸ್ತೆ ಬದಿ ನಿಂತಿದ್ದ ನಾಲ್ವರು ಕಾರ್ಮಿಕರಿಗೆ ಡಿಕ್ಕಿ ಹೊಡೆದಿದ್ದು, ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪಕ್ಕದಲ್ಲಿ