Home ಕರಾವಳಿ Archive by category ಸುಳ್ಯ (Page 9)

ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಹೂವಪ್ಪ ವಿಧಿವಶ

ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಕೇನ್ಯ ಗ್ರಾಮದ ಕಣ್ಕಲ್ ಹೂವಪ್ಪರು ಜು. 25ರಂದು ನರ ಸಂಬಂಧಿ ಕಾಯಿಲೆಯಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ ಅಂದಾಜು 55 ವರ್ಷ ವಯಸ್ಸಾಗಿತ್ತು. ಮುಖ್ಯ ಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದ ಹೂವಪ್ಪರ ನಿಧನಕ್ಕೆ ದ.ಕ ಜಿಲ್ಲಾ ಗೃಹ ರಕ್ಷಕ ದಳದ ಸಮಾದೇಷ್ಟರಾದ ಡಾ ಮುರಲಿ ಮೋಹನ್ ಚೂಂತಾರು

ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಕ ಅಧಿಕಾರಿ ಭವಾನಿಶಂಕರ್ ವರ್ಗಾವಣೆ

ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯಾಗಿ ಎನ್.ಭವಾನಿಶಂಕರ್ ಅವರಿಗೆ ವರ್ಗಾವಣೆಗೊಂಡಿದ್ದಾರೆ. ಎಂಟು ವರ್ಷಗಳಿಂದ ಸುಳ್ಯ ತಾಲೂಕು ಪಂಚಾಯತ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಾನಿಶಂಕರ್ ಅವರು 4 ವರ್ಷಗಳ ಕಾಲ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾಗಿ ಮತ್ತು 4 ವರ್ಷಗಳಿಂದ ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಳ್ಯಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ರಾಜಣ್ಣ

ದ.ಕ. ಜಿಲ್ಲೆಯಲ್ಲಿ ಮಳೆಯ ಅವಾಂತರ : ಹರಿಹರ, ಪಲ್ಲತಡ್ಕ, ಗುಂಡಡ್ಕ ಸೇತುವೆ ಮುಳುಗಡೆ

ಕಡಬ: ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕದ ಬಳಿಯ ಗುಂಡಡ್ಕ ಸೇತುವೆ ಮುಳುಗಡೆ ಹಾಗೂ ರಸ್ತೆಗೆ ಬಂಡೆ ಬಿದ್ದು, ಬರೆ ಜರಿದು ರಸ್ತೆ ಸಂಚಾರವು ಸ್ಥಗಿತಗೊಂಡಿದೆ. ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದೇವರ ಗದ್ದೆ ಎಂಬಲ್ಲಿ ರಸ್ತೆಗೆ ಮಣ್ಣು ಕುಸಿದಿದೆ, ದೇವರಗದ್ದೆ ಎಂಬಲ್ಲಿ ಬಂಡೆ ಬಿದ್ದಿದ್ದು, ವಿದ್ಯುತ್ ಕಂಬಗಳು ಮುರಿದು ಬಿದ್ದ ಘಟನೆ ನಡೆದಿದೆ. ಕಳೆದೆರಡು

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸಂಭ್ರಮದ ಉದ್ಘಾಟನೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬ ಆಚರಣೆಯ ಸಂಭ್ರಮಕ್ಕೆ ಸುಳ್ಯ ಕೇರ್ಪಳದ ಭಂಟರ ಭವನದಲ್ಲಿ ಅದ್ದೂರಿಯಾಗಿ ಚಾಲನೆ ಸಿಕ್ಕಿತ್ತು. ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಬಳಿಕ ಮಾತನಾಡಿ ಅವರು, ಸುಳ್ಯದ ಕಾರ್ಯನಿರತ ಪತ್ರಕರ್ತರ ಸಂಘ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. ಈ ಕಾರ್ಯಕ್ರಮ ಯಶಸ್ವಿಯಾಗಲಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳು ಮೂಡಿ ಬರಲಿ ಎಂದರು. ಆನಂತರ ಜಿಲ್ಲಾ

ಸುಳ್ಯ : ಹೊಳೆ ದಾಟುವಾಗ ಹೊಳೆಗೆ ಬಿದ್ದು ವ್ಯಕ್ತಿ ನಾಪತ್ತೆ

ಸುಳ್ಯದ ಅಲೆಟ್ಟಿ ಎಂಬಲ್ಲಿ ವ್ಯಕ್ತಿ ಯೋರ್ವರು ಹೊಳೆ ದಾಟುವಾಗ ಹೊಳೆಗೆ ಬಿದ್ದು ನಾಪತ್ತೆಯಾಗಿರುವ ಘಟನೆ ನಡೆದಿದೆ. ಸುಳ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಸುಳ್ಯ ಪೊಲೀಸರೊಂದಿಗೆ ತೆರಳಿ ಹುಡುಕಾಟ ನಡೆಸಿದ್ದಾರೆ. ಸುಳ್ಯ ಅಗ್ನಿಶಾಮಕ ದಳದ ಸಿಬ್ಬಂದಿ, ಎಸ್‍ಡಿಆರ್‍ಎಫ್ ತಂಡ, ಸ್ಥಳೀಯ ಈಜುಗಾರರ ತಂಡ ಸುಳ್ಯ ಪೊಲೀಸರು ರಾತ್ರಿವರೆಗೂ ಹುಡುಕಾಟ ನಡೆಸಿದ್ದಾರೆ. ನಾಪತ್ತೆಯಾಗಿರುವ ವ್ಯಕ್ತಿ ಇನ್ನೂ ಪತ್ತೆಯಾಗಿರುವುದಿಲ್ಲ. ನಾಪತ್ತೆಯಾಗಿರುವ ವ್ಯಕ್ತಿ

ಸುಳ್ಯದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ – ದೈವಗಳ ಮೊರೆ ಹೋದ ಕಾಂಗ್ರೆಸ್ ಮುಖಂಡರು

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ.ಜಿ ಅವರ ವಿರುದ್ದ ಕೆಲಸ ಮಾಡಿದ ಆರೋಪದಲ್ಲಿ ಪಕ್ಷದಿಂದ ಉಚ್ಚಾಲಿಸಲ್ಪಟ್ಟ ಕಾಂಗ್ರೆಸ್ ಮುಖಂಡರು ಇದೀಗ ದೈವದ ಮೊರೆ ಹೋಗಿದ್ದಾರೆ. ಪ್ರಸಿದ್ದ ಕಾರಣಿಕ ಕ್ಷೇತ್ರ ಕೋಡಿಂಬಾಳ ಗ್ರಾಮದ ಮಜ್ಜಾರು ರಾಜನ್ ದೈವದ ಸಾನಿಧ್ಯಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡರಾದ ಬಾಲಕೃಷ್ಣ ಬಳ್ಳೇರಿ, ಸುಧೀರ್ ದೇವಾಡಿಗ, ಉಷಾ ಆಂಚನ್ ನೆಲ್ಯಾಡಿ, ಆಶಾ ಲಕ್ಷ್ಮಣ್ ಗುಂಡ್ಯ ಅವರುಗಳು ದೈವಗಳ ಎದುರು ಪ್ರಾರ್ಥಿಸಿಕೊಂಡಿದ್ದಾರೆ.

ಕಡಬ : ಶಾಸಕಿ ಭಾಗೀರಥಿ ಮುರುಳ್ಯ ಅವರ ನೂತನ ಕಚೇರಿ ಉದ್ಘಾಟನೆ

ಸುಳ್ಯ ತಾಲೂಕಿನ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬದ ನೂತನ ಕಛೇರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಡಬ ಮಿನಿ ವಿಧಾನ ಸೌಧದಲ್ಲಿ ನೂತನ ಕಚೇರಿ ಉದ್ಘಾಟಿಸಲಾಯಿತು. ಬೆಳಿಗ್ಗೆ ಗಣಹೋಮ ಪೂಜೆ ನಡೆಸಿದ ಬಳಿಕ ಉದ್ಘಾಟನೆ ನೆರವೇರಿಸಲಾಯಿತು. ಜನಸಂಘ ಹಗೂ ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಹರಿಶ್ಚಂದ್ರ ರೈ ಪಟ್ಟೆಗುತ್ತು ಪೆರಾಬೆ ಹಾಗೂ ತನಿಯಪ್ಪ ಮಜ್ಜಗುಡ್ಡೆ ಕಡಬ, ಕುಶಾಲಪ್ಪ ಗೌಡ ಕುಡಾಲ ದೀಪ ಬೆಳಗಿಸಿ ಉದ್ಘಾಟನೆ ನೆರವೇರಸಿದರು. ಶಾಸಕಿ ಭಾಗೀರಥಿ ಮುರುಳ್ಯ ಅವರು 94

ಕಡಬ : ಬೃಹತ್ ಗಾತ್ರದ ಕಾಡುಕೋಣದ ಮೃತದೇಹ ಪತ್ತೆ

ಬೃಹತ್ ಗಾತ್ರದ ಕಾಡುಕೋಣದ ಮೃತದೇಹವು ಕಡಬ ಸಮೀಪದ ಕೋಡಿಂಬಾಳದ ಪುಳಿಕುಕ್ಕು ಎಂಬಲ್ಲಿ ಶನಿವಾರದಂದು ಕಂಡುಬಂದಿದೆ. ಪುಳಿಕುಕ್ಕು ಸೇತುವೆಯ ಬಳಿ ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಕಾಡುಕೋಣದ ಮೃತದೇಹವು ಕಂಡುಬಂದಿದ್ದು, ಸ್ಥಳೀಯರು ವೀಡಿಯೋ ಮಾಡಿದ್ದಾರೆ. ಇದೀಗ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅರಣ್ಯ ಇಲಾಖೆಯವರು ಕಾಡುಕೋಣದ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ-ಆರೋಪಿಗಳಿಗೆ ಜೂನ್30ರ ಒಳಗೆ ಶರಣಾಗಲು ಗಡುವು

ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್‍ಐಎ ಅಧಿಕಾರಿಗಳು ನಾಪತ್ತೆಯಾಗಿರುವ ಆರೋಪಿಗಳಿಗೆ ತೀವ್ರ ಶೋಧ ನಡೆಸುತ್ತಿದ್ದಾರೆ. ಸುಳ್ಯ ನಗರದ ಬೀದಿಗಳಲ್ಲಿ ಈ ಬಗ್ಗೆ ಧ್ವನಿವರ್ಧಕ ಬಳಸಿ ಪ್ರಕಟಣೆ ಹೊರಡಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಮುಟ್ಟುಗೋಲು ಮಾಡಲಾಗುವುದೆಂದು ಅನೌನ್ಸ್ ಮೂಲಕ ಎಚ್ಚರಿಕೆ ನೀಡಿದ್ದಾರೆ. ಎನ್‍ಐಎ ನ್ಯಾಯಾಲಯದ

ಸುಳ್ಯ : ಸ್ವಯಂ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಬಂದೂಕಿನಿಂದ ಸ್ವಯಂ ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ. ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ ಎಂಬಲ್ಲಿನ ಗುಡ್ಡದಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗಿದೆ.ಬೆಳ್ರಂಪಾಡಿಯ ಮನೆಯೊಂದರಲ್ಲಿ ರವಿ ಕೆಲಸಮಯದಿಂದ ಕೆಲಸಕ್ಕಿದ್ದು ಕುಡಿತದ ಚಟ ಹೊಂದಿದ್ದ ಎನ್ನಲಾಗಿದೆ. ಕಳೆದ ರಾತ್ರಿ ಕೋವಿ