Home Archive by category ಕರಾವಳಿ (Page 42)

ಬಂಟ್ವಾಳ: ಫೆ.11ರಂದು ಇರಾ ಬಂಟರ ಭವನದಲ್ಲಿ ‘ಸಂಧ್ಯಾ’ ಲಯನ್ಸ್ ಪ್ರಾಂತೀಯ ಸಮ್ಮಿಲನ

ಬಂಟ್ವಾಳ: ಲಯನ್ಸ್ ಇಂಟರ್‌ನ್ಯಾಷನಲ್ ಜಿಲ್ಲೆ 317 ಡಿ ಲಯನ್ಸ್ ಪ್ರಾಂತ್ಯ 5ರ ಪ್ರಾಂತೀಯ ಸಮ್ಮಿಲನ ‘ಸಂಧ್ಯಾ’ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿಯವರ ನೇತೃತ್ವದಲ್ಲಿ, ಸಮ್ಮಿಲನ ಸಮಿತಿ ಅಧ್ಯಕ್ಷ ದಾಮೋದರ ಬಿ. ಎಂ. ಇವರ ಸಾರಥ್ಯದಲ್ಲಿ ಲಯನ್ಸ್ ಕ್ಲಬ್ ಕೊಳ್ಳಾಡು ಸಾಲೆತ್ತೂರು ಇದರ ಆತಿಥ್ಯದಲ್ಲಿ ಫೆಬ್ರವರಿ 11ರಂದು ಇರಾ ಬಂಟರ ಭವನದ ಬಿ. ವಿ.

ಮಂಗಳೂರು : ಶ್ರೀ ಗುಜರಾತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತೆ ಜಾಗೃತಿ ಕಾರ್ಯಕ್ರಮ

ಮಂಗಳೂರಿನ ಶ್ರೀ ಗುಜರಾತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಿಬಿಎಸ್‌ಸಿ ರಸ್ತೆ ಸುರಕ್ಷತೆ ಜಾಗೃತಿ ತಿಂಗಳ ನಿಮಿತ್ತ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಶಿಕ್ಷಕರಾದ ನಾಗರಾಜ್ ಮತ್ತು ಜಯಶ್ರೀ ಅವರ ಮಾರ್ಗದರ್ಶನದಲ್ಲಿ ಶಾಲೆಯ ವಿದ್ಯಾರ್ಥಿಗಳು ದ್ವಿಚಕ್ರ ವಾಹನ ಸವಾರರಲ್ಲಿ ಹೆಲ್ಮೆಟ್ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಿದರು. ಕುದ್ರೋಳಿ ಬಳಿ ರಸ್ತೆಬದಿಯಲ್ಲಿ ನಿಂತು ಹೆಲ್ಮೆಟ್ನ ಮಹತ್ವ ಸಾರುವ ಘೋಷಣಾ ಫಲಕಗಳನ್ನು ಹಿಡಿದರು. ಅವರು

ಬಂಟ್ವಾಳ:ಆಲದಪದವಿನಲ್ಲಿ ವೈಭವಯುತವಾಗಿ ಸಂಪನ್ನಗೊಂಡ ಬೈದಶ್ರೀ ಸೌಹಾರ್ದ ಕ್ರೀಡಾಕೂಟ

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಸ್ವಾಮಿ ಗುರು ಸಮಾಜ ಸೇವಾ ಸಂಘ, ವಾಮದಪದವು-ಆಲದಪದವು ಆಶ್ರಯದಲ್ಲಿ ಬೈದಶ್ರೀ ಸೌಹಾರ್ದ ಕ್ರೀಡಾಕೂಟವು ಆಲದಪದವು ಮೈದಾನದಲ್ಲಿ ವೈಭವಯುತವಾಗಿ ಸಂಪನ್ನಗೊಂಡಿತು.ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆದಿದ್ದು ಉತ್ಸಾಹದಿಂದ ಪಾಲ್ಗೊಂಡರು.ಸಂಘದ ಗೌರವಾಧ್ಯಕ್ಷ ಮೋನಪ್ಪ‌ ಪೂಜಾರಿ ಪಾಲೆದಡಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.‌ದ.ಕ ಜಿಲ್ಲಾ ಮೂರ್ತೆದಾರರ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಬಿರ್ವ

ಬಂಟ್ವಾಳ : ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಎ.ಗೋಪಾಲ ಅಂಚನ್ ನೇಮಕ

ಬಂಟ್ವಾಳ: ದಕ್ಷಿಣಕನ್ನಡ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಬಂಟ್ವಾಳ ಹೋಬಳಿ ಅಧ್ಯಕ್ಷರಾಗಿ‌ ಪತ್ರಕರ್ತ ಗೋಪಾಲ ಅಂಚನ್ ಆಯ್ಕೆಯಾಗಿದ್ದಾರೆ.ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಅಧ್ಯಕ್ಷರ ಅನುಮತಿಯಂತೆ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಅವರ ಶಿಫಾರಸ್ಸಿನಂತೆ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ ಅವರು ಈ ನೇಮಕಾತಿ ಮಾಡಿದ್ದಾರೆ.ಕರ್ನಾಟಕ ತುಳು

ಮಂಗಳೂರಿನಲ್ಲಿ ಪೈಪ್ ಹಾನಿ, ಒಂದು ವಾರ ಉಳ್ಳಾಲಕ್ಕೆ ನೀರಿಲ್ಲ

ಉಳ್ಳಾಲ: ಮಂಗಳೂರಿ‌ನ ಪಡೀಲ್ ಸಮೀಪ ಉಳ್ಳಾಲಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಒಡೆದ ಪರಿಣಾಮ ದುರಸ್ತಿ ಕಾರ್ಯಕ್ಕಾಗಿ ಉಳ್ಳಾಲ ನಗರಕ್ಕೆ ಒಂದು ವಾರದ ಕಾಲ ನೀರು ಸರಬರಾಜು ಇರುವುದಿಲ್ಲ ಎಂದು ಉಳ್ಳಾಲ ನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.ಫೆ. 6 ರಂದು ಪಂಪ್ವೆಲ್ ಮಹಾವೀರ ವೃತ್ತ ಸಮೀಪದ ಪಡೀಲ್ ರೋಹನ್ ಸ್ಕ್ವೇರ್‌ ಕಟ್ಟಡದ ಮುಂಭಾಗದಲ್ಲಿ ತುಂಬೆ ಅಣೆಕಟ್ಟಿನಿಂದ ಉಳ್ಳಾಲಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಹಾನಿಯಾಗಿದೆ. ಈ ನಿಟ್ಟಿನಲ್ಲಿ

ಗುಡ್ಡೆ ಹೋಟೆಲಿನ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಹೆಮ್ಮುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿಗಾಗಿ ನೆರವು

ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ

ಮಂಗಳೂರು ಇಎಸ್ ಐ ಆಸ್ಪತ್ರೆ ಮೇಲ್ದರ್ಜೆಗೇರಿಸಲು ನಳಿನ್ ಕುಮಾರ್ ಕಟೀಲ್ ಮನವಿ

ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೋಪೇಂದ್ರ ಯಾದವ್ ರವರನ್ನು ಇಂದು ನಳಿನ್ ಕುಮಾರ್ ಕಟೀಲ್ ರವರು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ, ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಅತ್ಯಾದುನಿಕ ವೈದ್ಯಕೀಯ ಉಪಕರಣಗಳು, ಎಂ.ಆರ್.ಐ. ಘಟಕ, ಸಿ.ಟಿ. ಸ್ಕಾನಿಂಗ್ ಯಂತ್ರಗಳ ಅಳವಡಿಕೆ, ತಜ್ಞ ವೈದ್ಯರ ಹಾಗೂ ಇತರೆ

ಉರ್ವ ಶ್ರೀ ಮಹಾಗಣಪತಿ ದೇವಳದಲ್ಲಿ ಬ್ರಹ್ಮಕಲಶೋತ್ಸವ

ನಗರದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.11ರಿಂದ 18ರವರೆಗೆ ಭಾರೀ ವಿಜೃಂಭಣೆಯ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಅದರ ಪೂರ್ವಸಿದ್ಧತೆಯ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಮಹಾನಗರ ಪಾಲಿಕೆ, ಆರೋಗ್ಯ, ಪೊಲೀಸ್ ಹಾಗೂ ಮೆಸ್ಕಾಂ ಅಧಿಕಾರಿಗಳ ಸಭೆ ನಡೆಸಿದರು. ಈ ಬಾರಿ ಬ್ರಹ್ಮಕಲಶೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಆಗಮಿಸಲಿದ್ದಾರೆ. ಅದರಲ್ಲೂ ವಿಶೇಷವಾಗಿ ನಡೆಯಲಿರುವ ನೂತನ ಬ್ರಹ್ಮರಥದ

ಮೂಡುಬಿದಿರೆ: ಸುಸಜ್ಜಿತವಾದ ಪೊಲೀಸ್ ಠಾಣೆ, ಮೈನ್ ಶಾಲೆಗಳಿಗೆ ಕಟ್ಟಡಗಳ ಬೇಡಿಕೆ

ಮೂಡುಬಿದಿರೆಯ ಆರಕ್ಷಕರ ಠಾಣೆಯು ಸುಸಜ್ಜಿತವಾಗಿಲ್ಲ, ಪೊಲೀಸರಿಗೆ ಬೇಕಾಗುವ ಮೂಲಭೂತವಾದ ವ್ಯವಸ್ಥೆ ಸರಿಯಾಗಿಲ್ಲ, 60 ಸಿಬಂದಿಗಳ ಅವಶ್ಯಕತೆ ಇರುವ ಠಾಣೆಯಲ್ಲಿ ಕೇವಲ 40 ಸಿಬಂದಿಗಳಷ್ಟೇ ಇದ್ದಾರೆ, ಇದರಿಂದಾಗಿ ಸೂಕ್ತ ರೀತಿಯಲ್ಲಿ ಕರ್ತವ್ಯ ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಅವರು ಶಾಸಕರ ಗಮನಕ್ಕೆ ತಂದರು. ಶಾಸಕ ಉಮನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಸೌಧದಲ್ಲಿ ನಡೆದ ಮೊದಲ ತಾಲೂಕು ಕೆಡಿಪಿ

ಮಾಡು ಮೂಡದ ಮೋಡ

ಏಶಿಯಾ ಪೆಸಿಫಿಕ್ ವಲಯದ ವಸತಿ ಕ್ಷೇತ್ರದ ಬೆಲೆಯೇರಿಕೆಯಲ್ಲಿ ಬೆಂಗಳೂರು 8ನೇ ಮತ್ತು ಮುಂಬಯಿ 9ನೇ ಸ್ಥಾನದಲ್ಲಿ ಇದೆ ಎಂದು ನೈಟ್ ಫ್ರಾಂಕ್ ರಿಯಲ್ ಎಸ್ಟೇಟ್ ಸಂಸ್ಥೆ ಸಂತೋಷ ಪ್ರಕಟಿಸಿದೆ. ಬೆಂಗಳೂರಿನಲ್ಲಿ ವರುಷದಿಂದ ವರುಷಕ್ಕೆ ವೃದ್ಧಿ ದರ 7.1 ಶೇಕಡಾದಷ್ಟು ಇದ್ದರೆ, ಮುಂಬಯಿಯದು 7ಶೇಕಡಾದಷ್ಟು ಇದೆ. ಏಶಿಯಾ ಪೆಸಿಫಿಕ್ ವಲಯದ 25 ನಗರಗಳಲ್ಲಿ 21 ನಗರಗಳು ರಿಯಲ್ ಎಸ್ಟೇಟ್ ಪೂರಕವಾಗಿ ಇವೆ. ನಾಲ್ಕು ಚಪಟ್ ಎನ್ನಲಾಗಿದೆ. ಸಿಂಗಾಪುರ 13.7 ವಾರ್ಷಿಕ ವೃದ್ಧಿ ದರದೊಡನೆ