Home Archive by category ಕರಾವಳಿ (Page 67)

ಸುಳ್ಯ: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಬಲಿಬಿಂಬಕ್ಕೆ ಚಿನ್ನದ ಕವಚ ಸಮರ್ಪಣೆ

ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಗುರುವಾರ ಬೆಳಗ್ಗೆ ಶ್ರೀ ದೇವಿಯ ಬಲಿಬಿಂಬಕ್ಕೆ ಚಿನ್ನದ ಕವಚ, ಉಳ್ಳಾಕುಲು ದೈವಕ್ಕೆ ಬೆಳ್ಳಿಯ ಆಭರಣ ಸಮರ್ಪಣೆ ನಡೆಯಿತು. ಶತಮಾನದ ಬಳಿಕ ದೇವಳಕ್ಕೆ ಬ್ರಹ್ಮರಥ ಸಮರ್ಪಣೆಯಾಗಿದ್ದು ಜ.19ರಂದು ಬ್ರಹ್ಮ ರಥೋತ್ಸವ

ಬಂಟ್ವಾಳ: ನೆಚ್ಚಿನ ಶಿಕ್ಷಕಿಗೆ ನಿವೃತ್ತಿ ಸಂದರ್ಭ ಬಂಗಾರದ ಮಾಲೆ ನೀಡಿದ ಹಳೆ ವಿದ್ಯಾರ್ಥಿಗಳು

ಬಂಟ್ವಾಳ: ಕಳೆದ 3 ದಶಕಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕಿಗೆ ಅವರ ನಿವೃತ್ತಿ ವೇಳೆ ಹಳೆ ವಿದ್ಯಾರ್ಥಿಗಳೆಲ್ಲಾ ಸೇರಿ ಸುಮಾರು 2 ಲಕ್ಷ ಹತ್ತು ಸಾವಿರ ರೂ. ವೌಲ್ಯದ 33 ಗ್ರಾಂನ ಬಂಗಾರದ ಮಾಲೆ ಉಡುಗೊರೆಯಾಗಿ ನೀಡಿದ ಅಪರೂಪದ ಘಟನೆ ಪಾಣೆ ಮಂಗಳೂರಿನ ಅಕ್ಕರಂಗಡಿಯ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಜಯಲಕ್ಷ್ಮೀ ಆರ್. ಭಟ್ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 28 ವರ್ಷಗಳಿಂದ

ಹೃದಯಾಫಾತ ಸೂಚಕ ಕಿಣ್ವಗಳು

ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ ಕೆಲವೊಂದು ಕಿಣ್ವಗಳು ಏರಿಕೆಯಾಗುತ್ತದೆ. ಹೃದಯದ ಘಾಸಿಗೊಂಡ ಸ್ನಾಯುಗಳಿಂದ ಬಿಡುಗಡೆಯಿಂದ ಈ ಕಿಣ್ವಗಳನ್ನು ಕಾರ್ಡಿಯಾಕ್ ಮಾರ್ಕರ್ ಅಥವಾ ಹೃದಯಾಘಾತ ಸೂಚಕ ಕಿಣ್ವಗಳು ಎಂದೂ ಕರೆಯುತ್ತಾರೆ. ಹೃದಯಾಫಾತ ಆದ ಕೂಡಲೇ ಈ ಕಿಣ್ವಗಳು

ಕದ್ರಿ ಭೌಧದಿಂದ ಮಾಧ್ವಕ್ಕೆ

ಸಂಕ್ರಾಂತಿಯೊಂದಿಗೆ ನಾನಾ ದೈವ ದೇವರುಗಳ ಉತ್ಸವ ಗರಿಗೆದರುತ್ತದೆ. ಮಂಗಳೂರಿನ ಕದ್ರಿ ಆಲಯದಲ್ಲೂ ಉತ್ಸವದ ರಂಗು ಎದ್ದಿದೆ. ಹಿಂದೆಲ್ಲ ದೈವ ದೇವರುಗಳ ಉತ್ಸವ ಎಂದರೆ ಕೆಂಪು ಬಿಳಿಯ ಬಟ್ಟೆಯ ಅಲಂಕಾರ ಇರುತ್ತಿತ್ತು. ಈಗೆಲ್ಲ ಕೇಸರಿ ವಿಜಯ; ಭಗವಾ ಬಾವುಟ. ಕದ್ರಿ ಮಂಜುನಾಥ ಎಂದಾಗ ಕದರಿಕಾ ವಿಹಾರ ಎನ್ನುವರು. ಈ ಕದ್ರ, ಕದ್ರಾ, ಕದರಿ ಎಂಬ ಸ್ಥಳನಾಮ ಉತ್ತರ ಕನ್ನಡ ಜಿಲ್ಲೆ, ಕರ್ನಾಟಕ, ಆಂಧ್ರದ ಹಲವು ಕಡೆ ಇವೆ. ಇವೆಲ್ಲ ಗುಡ್ಡದಿಂದ ಇಳಿದ ಕಡಿದು ಸ್ಥಳಗಳು. ಅದೇ ಕದ್ರಿ,

ಸಂಗಬೆಟ್ಟು: ಸಾರ್ವಜನಿಕ ರಸ್ತೆ ಸಂಚಾರಕ್ಕೆ ತಡೆ

ಬಂಟ್ವಾಳ: ಸಾರ್ವಜನಿಕ ರಸ್ತೆಗೆ ತಡೆವೊಡ್ಡಿದ ಪ್ರಕರಣವೊಂದು ಸಂಗಬೆಟ್ಟು ಗ್ರಾಮದಲ್ಲಿ ನಡೆದಿದ್ದು ಆರೋಪಿತರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪರಿಸರದ ನಿವಾಸಿಗಳು ಆಗ್ರಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾಡಿ ಪಲ್ಕೆ ಮುಗೇರು ಎಂಬಲ್ಲಿ ನೂರಾರು ವರ್ಷಗಳ ಕಾಲದಿಂದ ಸಾರ್ವಜನಿಕರು, ಶಾಲಾ ಮಕ್ಕಳು, ನಿತ್ಯ ವ್ಯವಹಾರ ವಹಿವಾಟುಗಳಿಗೆ ಹೋಗುವವರು, ಸ್ಥಳೀಯ ವಿಷ್ಣುಮೂರ್ತಿ ದೇವಸ್ಥಾನಕ್ಕೆ

ಹೆಮ್ಮಾಡಿ: ಆರ್ಯ ಬಿಲ್ಡ್ ಕೇರ್ ಸಂಸ್ಥೆ ಉದ್ಘಾಟನೆ

ಕುಂದಾಪುರ ತಾಲೂಕಿನ ಹೆಮ್ಮಾಡಿಯಲ್ಲಿ ಆರ್ಯ ಬಿಲ್ಡ್ ಕೇರ್ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು. ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವುದರ ಜತೆಗೆ ಯುವ ಜನತೆಗೆ ಉದ್ಯೋಗವಕಾಶವನ್ನು ಮಾಡಿಕೊಡುವುದು ಸಂಸ್ಥೆಯ ಮೂಲ ಉದ್ದೇಶವಾಗಿದೆ.ಎಮಿಯೆಂಟೆಕ್ ಸಿಎಂಡಿ ಸಿಜಿತ್ ಆರ್ಯ ಬಿಲ್ಡ್ ಕೇರ್ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿ,ಸಾರ್ವಿನ್ ಪ್ಲಾಸ್ಟ್

*ಬಂಟ್ವಾಳ: ತುಂಬೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ತುಂಬೆ ನೇತ್ರಾವತಿ ನದಿ ತೀರದಲ್ಲಿ ಸುಮಾರು ೫ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ ಗೊಂಡಿರುವ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ.೧೩ರಿಂದ ೨೩ರವರೆಗೆ ದೇವರ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ, ಧ್ವಜಸ್ತಂಭ ಪ್ರತಿಷ್ಠೆ ಸಹಿತ ವಾರ್ಷಿಕ ಜಾತ್ರಾ ಮಹೋತ್ಸವವು ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಹೇಳಿದರು.

ಮಂಗಳೂರು: ಆಶಾ ಕಿರಣ ಟ್ರಸ್ಟ್‌ನಿಂದ ನೀಡಲ್ಪಡುವ ಕೊಠಡಿಗೆ ಭೂಮಿ ಪೂಜೆ

ಆಶಾ ಕಿರಣ ಟ್ರಸ್ಟ್ ವತಿಯಿಂದ ಲೋಕನಾಥ್ ಮೆಂಡನ್ ಅವರು ನಿರ್ಮಿಸಿ ಕೊಡುವ ನೂತನ ಕೊಠಡಿಯ ಭೂಮಿ ಪೂಜೆ ಕಾರ್ಯಕ್ರಮವು ನೆರವೇರಿತು. ಈ ಕಾರ್ಯಕ್ರಮದಲ್ಲಿ ಲೋಕನಾಥ್ ಮೆಂಡನ್ ಹಾಗೂ ಅವರ ಕುಟುಂಬಸ್ಥರು, ಆಶಾ ಕಿರಣ್ ಟ್ರಸ್ಟ್ ನ ಕುಸುಮ್, ಕೇಶವ ಕರ್ಕೇರ ಬೆಂಗ್ರೆ, ಬೆಂಗ್ರೆ ಮಹಿಳಾ ಸಭಾ ಅಧ್ಯಕ್ಷರಾದ ತಿಲೋತ್ತಮ, ವೀರ ಭಾರತಿ ವ್ಯಾಯಾಮ ಶಾಲೆ ಅಧ್ಯಕ್ಷರಾದ ಉತ್ತಮ್ ಅಮೀನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಬೆಂಗ್ರೆ ವಿದ್ಯಾರ್ಥಿ ಸಂಘ ಹಾಗೂ ಯುವಕಮಂಡಲದ

ಪುತ್ತೂರು: ಈಶ್ವರಮಂಗಲದ ಮೇನಾಲ ದರ್ಗಾಗೆ ಶಾಸಕ ಅಶೋಕ್ ರೈ ಭೇಟಿ

ಪುತ್ತೂರು: ಈಶ್ವರಮಂಗಲ ಮೇನಾ ಮಖಾಂ ದರ್ಗಾ ಶರೀಫ್‌ಗೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದರ್ಗಾದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆದಿತ್ತು. ಈ ಸಂದರ್ಭದಲ್ಲಿ ಮಸೀದಿಯ ಧರ್ಮಗುರುಗಳಾದ ಜಮಾಲುದ್ದೀನ್ ತಂಙಳ್ ದುಗ್ಗಲಡ್ಕ, ನೆಟ್ಟಣಿಗೆ ಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮೂಸಾನ್, ನೆಟ್ಟನಿಗೆ ಮುಡ್ನೂರು ಗ್ರಾಪಂ ಸದಸ್ಯರಾದ ಶ್ರೀರಾಂ ಪಕ್ಕಳ, ಅಕ್ರಮಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು

ಕಡಬ: ಕೋಡಿಂಬಾಳದಲ್ಲಿ ರೈಲ್ವೇ ಹಳಿ ಸಮೀಪ ಆತ್ಮಹತ್ಯೆಗೆ ಶರಣಾದ ನಿವೃತ್ತ ರೈಲ್ವೇ ಉದ್ಯೋಗಿ

ಕೋಡಿಂಬಾಳ ದಲ್ಲಿ ನಿವೃತ್ತ ರೈಲ್ವೇ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೋಡಿಂಬಾಳ ಗ್ರಾಮದ ಗುಂಡಿಮಜಲು‌ ನಿವಾಸಿ ಮಾಧವ ರೈ ( 62 ವ) ಆತ್ಮಹತ್ಯೆ ಮಾಡಿಕೊಂಡವರು. ಕೋಡಿಂಬಾಳದ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿ ಯಲ್ಲಿ ಪತ್ತೆಯಾಗಿದೆ .ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ಮರಣೊತ್ತರ ಪರೀಕ್ಷೆಗೆ ತರಲಾಗಿದೆ. ಮೃತರು ಕೋಡಿಂಬಾಳದ ಅಯಪ್ಪ ಭಜನಾ ಮಂದಿರದ ಸೇವಾ ಕಾರ್ಯದಲ್ಲಿಯೂ ಸಕ್ರಿಯವಾಗಿ