ಕೋಟ ಠಾಣೆ ಉಪನಿರೀಕ್ಷಕರಾಗಿದ್ದು, ಪ್ರಸ್ತುತ ಒಒಡಿ ಮೇಲೆ ಕಾರ್ಕಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಂಭುಲಿಂಗಯ್ಯ ಅವರನ್ನು ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿ ಅಮಾನತುಗೊಳಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕುಮಾರ್ ತಿಳಿಸಿದ್ದಾರೆ. ಅಚ್ಚಾಡಿಯ ಖಾಸಗಿ ಕಾಲೇಜಿನಲ್ಲಿ ಆಡಳಿತ ಮಂಡಳಿಯೊಳಗೆ ಗಲಾಟೆಗೆ ಸಂಬಂಧಿಸಿದಂತೆ ಮಧು ಭಾಸ್ಕರ್
ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ಪಿಕಪ್ ವಾಹನವೊಂದು ಹಾಲಿನ ಬೂತ್ ಎದುರಿಗಿದ್ದ ಟ್ರೇಗಳಿಗೆ ಡಿಕ್ಕಿ ಹೊಡೆದ ಘಟನೆ ಕಡಿಯಾಳಿಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪರಿಣಾಮ ಹಾಲಿನ ಪ್ಯಾಕೇಟ್ಗಳು ಒಡೆದು ಹಾಲು ಚೆಲ್ಲಾಪಿಲ್ಲಿಯಾಗಿದೆ. ದ್ವಿಚಕ್ರ ವಾಹನ ಹಾಗೂ ಪಕ್ಕದಲ್ಲಿದ್ದ ಸ್ಯೆಕಲ್ ಸವಾರರು ಅಪಾಯದಿಂದ ಪಾರಾಗಿದ್ದಾರೆ.
ತೀರ್ಪು ಕೇಂದ್ರ ಸರಕಾರದ ಪರ ಆದ ಮತ್ತು ಚುನಾವಣೆ ನಡೆಸಲು ಇನ್ನೂ ಹತ್ತು ತಿಂಗಳಷ್ಟು ಕಾಲಾವಕಾಶ ಕೊಟ್ಟಿರುವುದು ಜಮ್ಮು ಮತ್ತು ಕಾಶ್ಮೀರದ ರಾಜಕೀಯ ನಾಯಕರಿಗೆ ತೃಪ್ತಿ ತಂದಿಲ್ಲ. ಮತ್ತೆ ಬಂಧಿಸಿ ಗೃಹ ಬಂಧನದಲ್ಲಿ ಇಡುವಂತೆ ಮಾಜೀ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಒತ್ತಾಯಿಸಿದರು.ಆದರೆ ಲೆಫ್ಟಿನೆಂಟ್ ಗವರ್ನರ್ ಅದಕ್ಕೆ ಸಮ್ಮತಿಸಿಲ್ಲ. ಕಾಶ್ಮೀರದ ಎಲ್ಲ ಕಡೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಉಸಿರು ಕಟ್ಟಿಸುವಂತಿದೆ. ನನ್ನನ್ನೂ ಬಂಧನದಲ್ಲಿಡಿ ಎಂದು ಮೆಹಬೂಬಾ
ಹಲವು ಶತಮಾನಗಳ ಇತಿಹಾಸ ಹೊಂದಿರುವ ಉಡುಪಿ ಜಿಲ್ಲೆ ಬೈಂದೂರು ಸಮೀಪದ ತಗ್ಗರ್ಸೆ ಸಾಂಪ್ರದಾಯಿಕ ಕಂಬಳೋತ್ಸವವು ಕಂಠದಮನೆ ಕುಟುಂಬಸ್ಥರಿಗೆ ಸೇರಿದ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ಸಂಭ್ರಮದಿಂದ ನಡೆಯಿತು. 60ಕ್ಕೂ ಅಧಿಕ ಜೊತೆ ಕೋಣಗಳು ಹರಕೆ ಹಾಗೂ ಸ್ವರ್ಧೆಯಲ್ಲಿ ಭಾಗವಹಿಸುವ ಮೂಲಕ ತಗ್ಗರ್ಸೆ ಕಂಬಳದ ಮೆರುಗು ಮತ್ತಷ್ಟು ಹೆಚ್ಚಿತು. ಕಂಠದಮನೆ ಟಿ. ನಾರಾಯಣ ಹೆಗ್ಡೆಯವರ ಕುಟುಂಬದವರಿಂದ ಸಾಂಪ್ರದಾಯಿಕ ಕಂಬಳ ವರ್ಷಂಪ್ರತಿ ನಡೆಯುತ್ತಿದ್ದು ಈ ಬಾರಿ
ಬೆಳ್ಮಣ್: ಬಸ್ಸು ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒರ್ವ ಸ್ಥಳದಲ್ಲೇ ಮೃಪಟ್ಟು ಇಬ್ಬರ ಗಂಭೀರ ಗಾಯಗೊಂಡ ಘಟನೆ ಕಾರ್ಕಳದ ಮಂಜರಪಲ್ಕೆ ಎಂಬಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಂಜರ್ಪಲ್ಕೆ ಎಂಬಲ್ಲಿ ನಂದಳಿಕೆ ಕಡೆಯಿಂದ ಬರುತ್ತಿದ್ದ ಬೋಲೆರೊ ಕಾರು ಕಾರ್ಕಳ ಕಡೆಯಿಂದ ಬರುತ್ತಿದ್ದ ಮುಂಬೈ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಜಯಪುರ ನಿವಾಸಿ ಶಿವಪ್ಪ 48 ಸ್ಥಳದಲ್ಲೇ ಮೃತಪಟ್ಟರೆ, ಮಂಜು 45
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.10ರಿಂದ 24ರ ವರೆಗೆ ಚಂಪಾಷಷ್ಠಿ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಶ್ರೀ ದೇವಳದಲ್ಲಿ ಮೂಲಮೃತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಮೋಹನ್ ರಾಮ್ ಎಸ್ ಸುಳ್ಳಿ, ವ್ಯವಸ್ಥಾಪನ ಸಮಿತಿಯ ಸದಸ್ಯರು ಸೀತಾರಾಮ ಎಡಪಡಿತಾಯ, ಲೋಕೇಶ್, ಶ್ರೀಮತಿ ವನಜ ವಿ. ಭಟ್ , ಶೋಭಾ ಎಸ್ ಜಿ, ಮನೋಹರ ರೈ, ಪ್ರೀತಿ ಜಿಎಸ್ ಎನ್ ಪ್ರಸಾದ್, ದರ್ಬೆ ಪ್ರಸನ್ನ, ಶ್ರೀವಸ್ತ ವಿ. ಹಾಜರಿದ್ದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕಿನ ಕಡಬ ವಲಯದಲ್ಲಿ ಶಾರೀರಿಕ ಅಸಕ್ತರಿಗೆ ಸಲಕರಣೆ ವಿತರಣೆ ಹಾಗೂ ಮಾರಣಾಂತಿಕ ಕಾಯಿಲೆಯಿಂದ ಬಲಳುತ್ತಿರುವ ಕುಟುಂಬಕ್ಕೆ ಸಹಾಯಧನ ವಿತರಣೆ ಮಾಡಲಾಯಿತು. ಕಡಬ ವಲಯದ ಕಡಬ ಜನನಿ ಪ್ರಗತಿಬಂಧು ಸಂಘದ ಪ್ರಭಾಕರ ಶೆಟ್ಟಿಯವರು ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ರೂ 25000 ಸಹಾಯಧನ ವನ್ನು ವಿತರಿಸಲಾಯಿತು. ಕಡಬ ವಲಯದ ಪಿಜಕ್ಕಳ ತೇಜಸ್ ರವರು ಶಾರೀರಿಕ ಸಮಸ್ಶೆಯಿಂದ ನಡೆಯಲು ಸಾಧ್ಶವಾಗದಿದ್ದು
ನವಮಂಗಳೂರು ಬಂದರಿಗೆ ಐಷಾರಾಮಿ ಸೆವೆನ್ ಸೀಸ್ ನ್ಯಾವಿಗೇಟರ್ ಪ್ರವಾಸಿ ಹಡಗು ಆಗಮಿಸುವುದರೊಂದಿಗೆ ಈ ಬಾರಿಯ ಕ್ರೋಸ್ ಸೀಸನ್ ಅರಂಭಗೊಂಡಿತು. ನಾರ್ವೆಯ ಒಡೆತನದ, ಬಹಾಮಾಸ್ ಧ್ವಜ ಹೊಂದಿದ್ದು 500 ಪ್ರಯಾಣಿಕರು ಮತ್ತು 350 ಸಿಬಂದಿಯನ್ನು ಹೊಂದಿದೆ. 173 ಮೀಟರ್ ಉದ್ದವಿರುವ ಈ ಹಡಗು ಆಗಿದ್ದು, 28,803 ಟನ್ ಭಾರ, ಮತ್ತು 7.5 ಮೀಟರ್ ಆಳವಿದೆ. ಹಡಗಿನಿಂದ ಇಳಿದ ಕ್ರೂಸ್ ಪ್ರಯಾಣಿಕರಿಗೆ ಚೆಂಡೆ ಮತ್ತು ಯಕ್ಷಗಾನ, ಭರತನಾಟ್ಯ ಪ್ರದರ್ಶನದೊಂದಿಗೆ ಸಾಂಪ್ರದಾಯಿಕ ಸ್ವಾಗತ
ವಾರದ ಹಿಂದೆ ಓಡಿ ಹೋಗಿದ್ದ, ಆಮೇಲೆ ಮದುವೆಯ ಸುದ್ದಿಯನ್ನು ಹಂಚಿಕೊಂಡ ಆಯಿಷಾ ಮತ್ತು ಅಕ್ಷತಾ ದಂಪತಿ ಇಂದು ಸುರತ್ಕಲ್ ಪೋಲೀಸು ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದರು. ಆಯಿಷಾಳ ಹೆತ್ತವರು ಆಕೆ ಡಿಸೆಂಬರ್ 1ರಿಂದ ನಾಪತ್ತೆಯಾಗಿದ್ದುದರ ಬಗೆಗೆ ಸುರತ್ಕಲ್ ಪೋಲೀಸು ಠಾಣೆಯಲ್ಲಿ ದೂರು ನೀಡಿದ್ದರು. ಆದ್ದರಿಂದ ಅವರು ಸದರಿ ಠಾಣೆಗೆ ಭೇಟಿ ನೀಡುವುದು ಅನಿವಾರ್ಯವಾಗಿತ್ತು. ಮೂರು ವರುಷದಿಂದ ಪ್ರೀತಿಸುತ್ತಿದ್ದೆವು. ಅನ್ಯ ಧರ್ಮೀಯರಾದ್ದರಿಂದ ಮದುವೆಗೆ ಒಪ್ಪಿಗೆ ಸಿಗುವ ಸಂಭವ
ಮಾಜೀ ಬಿಜಾಪುರ ಬದಲಾದ ವಿಜಯಪುರದ ಮೌಲ್ವಿ ಹಾಶ್ಮಿ ಅವರು ಪ್ರಧಾನಿ ಮೋದಿಯವರ ಜೊತೆಗೆ ಇರುವ ಫೆÇೀಟೋ ಹೊರ ಬೀಳುವುದರೊಂದಿಗೆ ಶಾಸಕ ಯತ್ನಾಳರ ಐಸಿಸ್ ಆರೋಪ ನೆಲನಡುಕ ತರುತ್ತಿದೆ. ಕೆಲವರ ಪ್ರಕಾರ ಬಿಜೆಪಿ ಶಾಸಕ ಯತ್ನಾಳರ ಮೂಲಕವೇ ಹಾಶ್ಮಿಯವರು ಪ್ರಧಾನಿ ಮೋದಿಯವರನ್ನು ಭೇಟಿ ಆಗಿದ್ದಾರೆ. ಹಾಶ್ಮಿಯವರ ಕುಟುಂಬ ಮತ್ತು ಯತ್ನಾಳರ ಕುಟುಂಬಗಳು ವಿಜಯಪುರದಲ್ಲಿ ಬಿಡದಿ ಹೋಟೆಲಿನಿಂದ ಹಿಡಿದು ನಾನಾ ಉದ್ಯಮ ಪಾಲುದಾರಿಕೆ ಹೊಂದಿವೆ. ಅಧಿಕಾರದಲ್ಲಿ ಯಾರು ಇದ್ದರೂ ಹೋಗುವ