Home Archive by category ಕರಾವಳಿ (Page 87)

ಮಂಗಳೂರು: ಡಿ.10 ರಂದು ಕೀರ್ತಿಶೇಷ ಕುಂಬ್ಳೆ ಸುಂದರರಾವ್ ಸಂಸ್ಮರಣಾ ಕಾರ್ಯಕ್ರಮ

ಯಕ್ಷಲೋಕ ವಿಖ್ಯಾತ, ಮಾತಿನ ರಂಗದ ಮಹಾರಥಿ, ಹಿರಿಯ ಯಕ್ಷಗಾನ ಕಲಾವಿದರು, ಸುರತ್ಕಲ್ ಕ್ಷೇತ್ರದ ಶಾಸಕರು, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರು, ಸಂಸ್ಕಾರ ಭಾರತೀಯ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವಾರು ಪ್ರತಿಷ್ಟಿತ ಪುರಸ್ಕಾರವನ್ನು ಪಡೆದ ಕುಂಬ್ಳೆ ಸುಂದರರಾವ್‌ರವರ ಸಂಸ್ಮರಣಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ಡಿಸೆಂಬರ್ ೧೦, ೨೦೨೩ನೇ

ಮಂಗಳೂರು: ಡಿ.9ರಂದು ಬಿಎಂಆರ್ ಗ್ರೂಪ್‌ನಿಂದ 2ನೇ ತಿಂಗಳ ಡ್ರಾ

ಬಿಎಂಆರ್ ಗ್ರೂಪ್ ವತಿಯಿಂದ ಎರಡನೇ ತಿಂಗಳ ಡ್ರಾ ಕಾರ್ಯಕ್ರಮವು ಡಿಸೆಂಬರ್ 9ರಂದು ಕೃಷ್ಣಾಪುರದ ಬಿಎಂಆರ್ ಕಚೇರಿಯಲ್ಲಿ ನಡೆಯಲಿದೆ. ಅದೃಷ್ಟ ಶಾಲಿಗಳಿಗೆ ಆರು ಬಂಪರ್ ಪ್ರೆöÊಸ್ ಗೆಲ್ಲುವ ಅವಕಾಶವಿದ್ದು, ಮೂವರಿಗೆ 75 ಸಾವಿರ ಮೌಲ್ಯದ ಚಿನ್ನದ ನೆಕ್ಲಿಸ್ ಹಾಗೂ ಮೂವರಿಗೆ ಹೋಂಡಾ ಆಕ್ಟಿವಾ ಬಹುಮಾನವಾಗಿ ಗೆಲ್ಲುವ ಅವಕಾಶವಿದೆ. ಡಿಸೆಂಬರ್ 5ರೊಳಗೆ ಹಣ ಪಾವತಿಸಿದವರಿಗೆ 25 ಚಿನ್ನದ ಉಂಗುರ ಮತ್ತು 50 ಮಂದಿಗೆ ಸರ್ಪ್ರೈಸ್ ಬಹುಮಾನ ಗೆಲ್ಲುವ ಅವಕಾಶವಿದೆ. ಹೆಚ್ಚಿನ

ಕೋಲ ಕಟ್ಟುವ ಸಮುದಾಯವರಿಗೆ ಇನ್ನೂ ಸಿಗದ ಮೀಸಲಿಟ್ಟ ಭೂಮಿ

ಕರಾವಳಿಯ ದೈವಾರಾಧನೆಯ ಭಾಗವಾಗಿರುವ ಕೋಲವನ್ನು ಕಟ್ಟುವ ಸಮುದಾಯದವರಿಗಾಗಿ ಮೀಸಲಿಟ್ಟ ಭೂಮಿ ಇದುವರೆಗೂ ಅವರಿಗೆ ದೊರೆತಿಲ್ಲ. ನಿವೇಶನರಹಿತರ ಹೆಸರಿನಲ್ಲಿ ಸರಕಾರದಿಂದ ಮಂಜೂರಾದ ಜಾಗದ ಅಭಿವೃದ್ಧಿಗಾಗಿ ಸರಕಾರ ಲಕ್ಷಾಂತರ ರೂಪಾಯಿ ವ್ಯಯಿಸಿದ್ದರೂ ಕೂಡ ಇದುವರೆಗೂ ಒಂದು ರೂಪಾಯಿ ಕೂಡ ಸೂಕ್ತ ವಿನಿಯೋಗವಾಗಿಲ್ಲ.. ಹೌದು ನಾವು ಹೇಳುತ್ತಿರುವುದು ಕಾಪು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬೊಮ್ಮಾರ ಬೆಟ್ಟು ಗ್ರಾಮ ಪಂಚಾಯಿತಿಯ ಕರ್ಮಕಾಂಡವನ್ನು. 2017ರಲ್ಲಿ

ಕಾರ್ಕಳ: ಡಾ. ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನ

ಭಾರತ ರತ್ನ ಸಂವಿಧಾನಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ರವರ 67ನೇ ಮಹಾ ಪರಿ ನಿರ್ವಾಣ ದಿನವಾದ ಇಂದು ಕಾರ್ಕಳ ತಾಲೂಕು ಕಚೇರಿ ಬಳಿ ಇರುವ ಪ್ರತಿಮೆಗೆ ದಂಡಾಧಿಕಾರಿ ನರಸಪ್ಪ ರವರು ಪ್ರತಿಭೆಗೆ ಮಾಲಾರ್ಪಣೆ ಮತ್ತು ಗೌರವ ಸಮರ್ಪಣೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸಮಾನತೆಯ ಹರಿಕಾರ. ಇಂದು ಅವರ ಮಹಾ ಪರಿನಿರ್ವಾಣದ ದಿನಾಚರಣೆಯನ್ನು ದೇಶದ ಎಲ್ಲಾ ಕಡೆ ಆಚರಿಸುತ್ತಿದ್ದಾರೆ. ಅಂಬೇಡ್ಕರ್‍ರವರ ವಿಚಾರಧಾರೆಗಳು ದೇಶಕ್ಕೆ

ಬ್ರಹ್ಮಾವರ : ಕರಾವಳಿಗೆ ಮಾದರಿಯಾದ ಎಳ್ಳಂಪಳ್ಳಿ ಕಿಂಡಿ ಅಣೆಕಟ್ಟು ತುಂಬಿತುಳುಕುವಷ್ಟು ನೀರು ಶೇಖರಣೆ

ಬ್ರಹ್ಮಾವರ : ನೀಲಾವರ ಗ್ರಾಮಪಂಚಾಯತಿ ವ್ಯಾಪ್ತಿಯ ಎಳ್ಳಂಪಳ್ಳಿ ಮತ್ತು ಕಾಡೂರು ನಡುವೆ ಹರಿಯುವ ಸೀತಾನದಿಗೆ ಕಳೆದ ವರ್ಷ ಮೆಟಲ್ ಡೋರ್ ಅಳವಡಿಸಿ ಮಾಡಲಾದ ಕಿಂಡಿ ಅಣೆಕಟ್ಟು ಯಶಸ್ಸು ಕಂಡಿದೆ. ಕರಾವಳಿ ಜಿಲ್ಲೆಯಲ್ಲಿ ಸಾಕಷ್ಟು ಜೀವ ನದಿಗಳು ಇದ್ದರೂ ಎಪ್ರಿಲ್, ಮೇ ತಿಂಗಳಲ್ಲಿ ಕುಡಿಯುವ ನೀರಿಗೆ ಬರ ಇದ್ದ ಕಾರಣ ಸಿಹಿ ನೀರಿನ ನದಿಗಳಿಗೆ ಮರದ ಮತ್ತು ಫೈಭರ್‍ನ ಕಿಂಡಿ ಅಣೆಕಟ್ಟಿನಿಂದ ನೀರು ಸೋರುವ ಸಮಸ್ಯೆಗೆ ಎಳ್ಳಂಪಳ್ಳಿ ಡ್ಯಾಂ ರೈತರ ಮತ್ತು ಕುಡಿಯುವ ನೀರಿನ

ಮಂಜೇಶ್ವರ : ವ್ಯಕ್ತಿಯೋರ್ವ ವಿದ್ಯುತ್ ಕಂಬಕ್ಕೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ

ಮಂಜೇಶ್ವರ : ಅಜ್ಞಾತ ಮಧ್ಯ ವಯಸ್ಕನೊಬ್ಬ ರೈಲ್ವೇ ಹಳಿಯ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸುಮಾರು 55 ವರ್ಷ ಪ್ರಾಯವಿರುವ ಈತ ಎರಡು ದಿವಸಕ್ಕೆ ಮೊದಲು ಗಡಿ ಪ್ರದೇಶವಾದ ತಲಪಾಡಿಯಲ್ಲಿ ಮಲಯಾಳ ಭಾಷೆಯಲ್ಲಿ ಮಾನಸಿಕವಾಗಿ ಅಸ್ವಸ್ಥಗೊಂಡ ರೀತಿಯಲ್ಲಿ ಮಾತನಾಡುತ್ತಿದ್ದನೆಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಈತನ ಕ್ರೆಯಲ್ಲಿ ಮನೋಹರ್ ಎಂದು ಬರೆಯಲಾಗಿದೆ. ಮಾಹಿತಿ ಅರಿತು ಸ್ಥಳಕ್ಕೆ ಸಮಾಜ

ಶಿರಾಡಿ ಘಾಟ್ ; ಮಿನಿಲಾರಿಗೆ ಡಿಕ್ಕಿಯಾಗಿ ಪರಾರಿಯಾದ ಘನ ವಾಹನ – ಇಬ್ಬರು ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ: ಶಿರಾಡಿ ಘಾಟ್ ನ ಗುಂಡ್ಯ ಗಡಿ ದೇವಸ್ಥಾನಕ್ಕಿಂತ ಮೇಲೆ ಕೆಂಪು ಹೊಳೆ ಸಮೀಪ ಮಿನಿ ಲಾರಿಯೊಂದಕ್ಕೆ ಯಾವುದೋ ವಾಹನವೊಂದು ಡಿಕ್ಕಿ ಯಾಗಿ ಪರಾರಿಯಾಗಿದ್ದು ಈ ಅಪಘಾತದಲ್ಲಿ ಮಿನಿ ಲಾರಿಯಲ್ಲಿದ್ದ ಚಾಲಕ ಹಾಗೂ ಇನ್ನೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.6ರ ಮುಂಜಾನೆ 3 ಗಂಟೆ ವೇಳೆಗೆ ನಡೆದಿದೆ ಎಂದು ವರದಿಯಾಗಿದೆ. ಮೃತಪಟ್ಟವರು ಹಾಸನ ನಿವಾಸಿಗಳು ಎಂದು ತಿಳಿದುಬಂದಿದೆ. ಮಿನಿ ಲಾರಿ ಹಾಸನದಿಂದ ಮಂಗಳೂರಿಗೆ ಬರುತ್ತಿತ್ತು. ಶಿರಾಡಿ ಘಾಟ್ ನ ಕೆಂಪು ಹೊಳೆ

ಪಚ್ಚನಾಡಿ ತ್ಯಾಜ್ಯ ಸಂಸ್ಕರಣಾ ಘಟಕ ಸುರಕ್ಷತೆಗೆ ಬೋರ್‍ವೆಲ್ ನೀರಿನ ವ್ಯವಸ್ಥೆ : ಮೇಯರ್ ಸುಧೀರ್ ಶೆಟ್ಟಿ

ಪಚ್ಚನಾಡಿಯ ಕಸ ವಿಲೇವಾರಿ ಘಟಕದ ಸುತ್ತ ಪೈಪ್‍ಲೈನ್ ಅಳವಡಿಸಿ ಸ್ಪ್ರಿಂಕ್ಲರ್ ಹಾಕಿ ಆಕಸ್ಮಿಕ ಬೆಂಕಿ ಅನಾಹುತ ತಡೆಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು. ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಂದೊಗೆ ಮಾತನಾಡಿದರು. ಕಳೆದ ವರ್ಷ ಬೇಸಿಗೆಯಲ್ಲಿ ಕಸ ವಿಲೇವಾರಿ ಘಟಕಕ್ಕೆ ಬೆಂಕಿ ಹೊತ್ತಿಕೊಂಡು ಅವಘಡ ಸಂಭವಿಸಿತ್ತು. ಹೀಗಾಗಿ ಈ ಬಾರಿ ಮುನ್ನೆಚ್ಚರಿಕೆಯಾಗಿ ಎರಡು ಬೋರ್‍ವೆಲ್

ಕಡಬ : ಕೊಣಾಜೆ ಆನೆ ದಾಳಿ ಶಂಕೆ; ದನ ಸಾವು

ಕಡಬ: ಕಡಬ ತಾಲೂಕು ಕೊಣಾಜೆಯ ತಮಿಳು ಸಿ.ಆರ್. ಸಿ ಕಾಲೋನಿ ಬಳಿ ದನವೊಂದು ರಾತ್ರಿ ವೇಳೆ ತೋಟದಲ್ಲಿ ಗಾಯಗೊಂಡು ಮೃತಪಟ್ಟಿದ್ದು, ಆನೆ ದಾಳಿ ನಡೆಸಿದ ಬಗ್ಗೆ ಸಂಶಯ ವ್ಯಕ್ತವಾಗಿದೆ. ಕೊಣಾಜೆ ದೊಡ್ಡಮನೆಯ ಅಶೋಕ ಎಂಬವರಿಗೆ ಸೇರಿದ ದನವನ್ನು ಮಂಗಳವಾರ ಮೇಯಲು ಬಿಟ್ಟಿದ್ದು, ಸಂಜೆ ಮನೆಯವರು ಹುಡುಕಾಡಿದಾಗ ದನ ಸಿಕ್ಕಿರಲಿಲ್ಲ. ಬುಧವಾರ ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ದನ ತೋಟದಲ್ಲಿ ಗಾಯಗೊಂಡು ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಟದಲ್ಲಿ ನೀರಾವರಿ ಪೈಪ್

ಮಂಗಳೂರಿಗೆ ಬಂದ ಕಾಟಿ ಕೊಟ್ಟ ಎಚ್ಚರಿಕೆ ಏನು?

ಮಂಗಳೂರಿನ ಕದ್ರಿ, ನೀರುಮಾರ್ಗಗಳ ಹಲವೆಡೆ ಕಾಟಿ ನನ್ನ ಕಾಡು ಎಲ್ಲಿದೆ ಎಂದು ಹುಡುಕಿ ಹೋದುದರ ವರದಿಯಾಗಿದೆ. ಮಲೆನಾಡಿನ ಎಲ್ಲ ಕಡೆ ಯಾವ ಬೇಲಿಗಳಿಗೂ ಕಾಟಿ, ಕಾಡುಕೋಣ ಜಗ್ಗುವುದಿಲ್ಲ ಎಂದು ಮಲೆನಾಡಿಗರು ದೂರುತ್ತಿದ್ದಾರೆ. ಕಾಡುಕೋಣಗಳಲ್ಲಿ ಕಾಡೆಮ್ಮೆ ಹೆಣ್ಣು ಇದ್ದರೂ ಕಾಡುಕೋಣ ಎಂದೇ ಕರೆಯುತ್ತಾರೆ. ಇದು ಪುರುಷ ವರ್ಗದ ಮೇಲಾಳ್ಕೆ ಕಿತಾಪತಿ ಎಂದು ಕೆಲವು ಮಹಿಳಾ ಹೋರಾಟಗಾತಿಯರು ದೂರಿದ್ದಾರೆ. ಮಲೆನಾಡಿಗರು ನಮ್ಮ ಬೇಲಿಯನ್ನು ಕಾಡುಕೋಣ ಮುರಿಯುತ್ತಿದೆ ಎಂದು