Home Archive by category ಕ್ರೈಮ್ (Page 2)

ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ: ದರೋಡೆಗೆ ಬಂದವರ ಕೃತ್ಯ ಶಂಕೆ!

ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ. ನಾಲ್ವರ ಹತ್ಯೆ ಹಿಂದೆ ದರೋಡೆ ಕೃತ್ಯದ ಶಂಕೆ ವ್ಯಕ್ತವಾಗಿದೆ. ಹಬ್ಬದ ದಿನ ಈ ಸುದ್ದಿ ಕೇಳಿ ಜನ ಬೆಚ್ಚಿ ಬಿದ್ದಿದ್ದಾರೆ. ಮನೆಗೆ ನುಗ್ಗಿ ತಾಯಿ ಹಾಗೂ ಮೂವರು ಮಕ್ಕಳನ್ನು ಹತ್ಯೆ ಮಾಡಲಾಗಿದೆ. ಈ ಮನೆಯ ಯಜಮಾನ ವಿದೇಶದಲ್ಲಿ

ಉಡುಪಿ: ಕುಖ್ಯಾತ ಅಂತರ್ ಜಿಲ್ಲಾ ಮನೆಗಳ್ಳತನ ಆರೋಪಿಯ ಬಂಧನ; 46.67 ಲಕ್ಷ ಮೌಲ್ಯದ ಸೊತ್ತು ವಶ

ಕುಂಜಿಬೆಟ್ಟುವಿನಲ್ಲಿ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೆÇಲೀಸರು ಬಂಧಿಸಿ, ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಉತ್ತರಹಳ್ಳಿಯ ಮಂಜುನಾಥ್ ಯಾನೆ ಕಲ್ಕೆರೆ ಮಂಜ (43) ಬಂಧಿತ ಆರೋಪಿ. ಈತ ಅ.8ರಂದು ಕುಂಜಿಬೆಟ್ಟುವಿನ ಅಮ್ಮುಂಜೆ ವಿಠಲ್ದಾಸ್ ನಾಯಕ್ ಅವರ ಮನೆಯ ಬಾಗಿಲು ಮುರಿದು, ಬೆಡ್ ರೂಮ್ ನ ಅಲ್ಮೇರಾದಲ್ಲಿದ್ದ ಸುಮಾರು 66,36,300 ರೂ. ಮೌಲ್ಯದ ಅಂದಾಜು 1882 ಗ್ರಾಂ ತೂಕದ ಚಿನ್ನಾಭರಣ ಹಾಗೂ

ಕಾರ್ಕಳ: ನಾಪತ್ತೆಯಾಗಿದ್ದ ಹೆಡ್‌ ಕಾನ್ ಸ್ಟೇಬಲ್ ಶೃತಿನ್ ಶೆಟ್ಟಿ ಶವವಾಗಿ ಪತ್ತೆ || V4NEWS

ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ಶೃತಿನ್ ಶೆಟ್ಟಿ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದು ಇಂದು ಅವರ ಶವವು ಕಾರ್ಕಳದ ಪುರಿಯ ಸಾರ್ವಜನಿಕ ಬಾವಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶೃತಿನ್ ಶೆಟ್ಟಿ ಕಾಣೆಯಾಗಿರುವ ಕುರಿತು ಅವರ ಪತ್ನಿ ದೂರು ದಾಖಲಿಸಿದ್ದರು. ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿಯಾಗಿರುವ ಶೃತಿನ್ ಶೆಟ್ಟಿ ಗುರುವಾರ ರಾತ್ರಿ 7.30ಕ್ಕೆ ಹೆಂಡತಿಗೆ ಫೋನ್

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ

ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಪುಣಚ ಚೆಕ್ಕುತ್ತಿ ನಿವಾಸಿ ಶ್ರೀ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಶ್ರೀ ಕೃಷ್ಣ ಸೆಂಟ್ರಿoಗ್ ಕೆಲಸ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ಚಿತ್ರಾಪುರ ಬೀಚ್‌ನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ರಜಾ ಹಿನ್ನೆಲೆ ಬೀಚ್‌ಗೆ ತೆರಳಿದ್ದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್‌ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ನಿಶಾ(15) ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಲ ಮೂಲದವರಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಳು. ವಿಟ್ಲ ಮೂಲದ ದಿಗಂತ (15) ದಿವ್ಯರಾಜ್ (15) ತೇಜಸ್ (14) ಕೀರ್ತನ್ (16) ಅಶ್ಮಿತಾ (15) ನಿಶಾ (15) ಇವರೆಲ್ಲರೂ ಕುಳಾಯಿ

ಪುತ್ತೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

ಪುತ್ತೂರು :ಪುತ್ತೂರಿನ ಖಾಸಗಿ ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕುರಿಯ ಪಡ್ಪು ನಿವಾಸಿ, ಪುತ್ತೂರಿನ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ. ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ

ಮೂಡುಬಿದಿರೆ: ಆಟೋ ರಿಕ್ಷಾ-ಬಸ್ ಮುಖಾಮುಖಿ ಡಿಕ್ಕಿ : ವೃದ್ಧೆ ಸಾವು

ಮೂಡುಬಿದಿರೆ: ಖಾಸಗಿ ಶಿಕ್ಷಣ ಸಂಸ್ಥೆಯ ಬಸ್ಸು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿಯಾದ ಪರಿಣಾಮವಾಗಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆ ಮೃತಪಟ್ಟ ಸಂಪಿಗೆಯಲ್ಲಿ ನಡೆದಿದೆ. ಸುರತ್ಕಲ್ ನ ಆಲಿಯಮ್ಮ (76) ಮೃತಪಟ್ಟ ವೃದ್ಧೆ. ಮೂಡುಬಿದಿರೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸುರತ್ಕಲ್‌ನಿಂದ ಬೀಪಾತಿಮ್ಮ, ಆಯೀಷಾ ಹಾಗೂ ಆಲಿಯಮ್ಮ ಎಂಬವರು ಬರುತ್ತಿದ್ದ ಸಂದರ್ಭದಲ್ಲಿ ಪುತ್ತಿಗೆ ಗ್ರಾ.ಪಂ.ವ್ಯಾಪ್ತಿಯ ಸಂಪಿಗೆಯಲ್ಲಿ ಮೂಡುಬಿದಿರೆಯಿಂದ

ಮಾರ್ಬಲ್‌ ತುಂಬಿಕೊಂಡಿದ್ದ ಲಾರಿ ಪಲ್ಟಿ : ನಾಲ್ಕು ಜನ ಗಂಭೀರ

ವಿಟ್ಲ: ಮಾರ್ಬಲ್‌ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ನಡೆದಿದೆ. ಲಾರಿ ಪಲ್ಟಿಯಾಗಿ ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದ್ದು, ಗಂಭೀರ ಗಾಯಗೊಂಡ ಗಾಯಾಳುಗಳನ್ನು ನಾಲ್ಕು ಆಂಬ್ಯುಲೆನ್ಸ್‌ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ

ಮೂಡುಬಿದಿರೆ: ಗಾಂಜಾ ಮಾರಾಟ, ಮೂವರು ಪೊಲೀಸರ ವಶಕ್ಕೆ

ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ವಶಕ್ಕೆ ಪಡೆದುಕೊಂಡಿದೆ. ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್( 22 ವ), ಫರ್ಹಾನ್ ಖಾನ್ (18ವ) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತರು. ಇವರು ಮೂವರು ಬೆಳುವಾಯಿ ಕಾಂತಾವಾರ ದ್ವಾರದ ಬಳಿ ಸ್ಕೂಟರ್ ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದು ಖಚಿತ

ಉಳ್ಳಾಲ : ಗಾಂಜಾ ವ್ಯಸನಕ್ಕೆ ಬಲಿಯಾಗಿದ್ದ ಯುವಕ ಆತ್ಮಹತ್ಯೆ

ಬೈಕ್ ಕಳವುಗೈದು ಉಳ್ಳಾಲ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.ಗಾಂಜಾ ವ್ಯಸನಕ್ಕೆ ಬಲಿಯಾಗಿದ್ದ ಯುವಕ ಸೇದಲು ಗಾಂಜಾ ಸಿಗದೆ ಜಿಗುಪ್ಸೆಗೊಂಡು ಇಂದು ಬೆಳಿಗ್ಗೆ ಮನೆಯಲ್ಲಿ ಸಾವಿಗೆ ಶರಣಾಗಿದ್ದಾನೆ.ತಲಪಾಡಿ ಗ್ರಾಮದ ನಾರ್ಲ,ಪಡೀಲ್ ನಿವಾಸಿ ಪೈಝಲ್(24) ಆತ್ಮಹತ್ಯೆಗೈದ ಯುವಕ.ಫೈಝಲ್ ಇಂದು ಬೆಳಿಗ್ಗೆ ತನ್ನ ಮನೆಯ ಮೊದಲ ಅಂತಸ್ತಿನ ಕೊಠಡಿಯ ಫ್ಯಾನಿಗೆ ನೈಲಾನ್ ಬಟ್ಟೆಯಿಂದ ಕುಣಿಕೆ ಬಿಗಿದು ಆತ್ಮಹತ್ಯೆಗೈದಿದ್ದಾನೆ.ಮನೆಯಲ್ಲಿ ಫೈಸಲ್