ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ದಶಮಾನೋತ್ಸವ ಕಾರ್ಯಕ್ರಮವು 2025 ಜೂನ್ 29 ರಂದು ದುಬೈ ಯ ಶೇಖ್ ರಾಶೀದ್ ಆಡಿಟೋರಿಯಂ ನಲ್ಲಿ ಜರಗಲಿದ್ದು “ದುಬೈ ಯಕ್ಷೋತ್ಸವ -2025” ಕಾರ್ಯಕ್ರಮದ ಪೂರ್ವ ತಯಾರಿ ಶುಭಾರಂಭ ಪ್ರಯುಕ್ತ ಮುಹೂರ್ತ ಪೂಜಾ ಸಮಾರಂಭವು ಇತ್ತೀಚೆಗೆ ನಗರದ ಫಾರ್ಚೂನ್ ಪ್ಲಾಝದ ಬಾಂಕ್ವೆಟ್ ಸಭಾಂಗಣದಲ್ಲಿ ೫ರಂದು ನಡೆಯಿತು. ಶ್ರೀಯುತ
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ವರ್ಷಂಪ್ರತಿಯಂತೆ ನಡೆಯುವ ಗುರುಪೌರ್ಣಮಿ ಪ್ರಯುಕ್ತದ ಗುರುಪೂಜೆ- ವಂದನೆಯ ಜೊತೆಜೊತೆಗೆ 2024- 2025 ನೇ ಸಾಲಿನ ನೂತನ ತರಗತಿಗಳ ಉದ್ಘಾಟನೆ ಮತ್ತು 2015-2016 ನೇ ಸಾಲಿನಲ್ಲಿ ತನ್ನ ಕಾರ್ಯಚಟುವಟಿಕೆ ಪ್ರಾರಂಭಿಸಿದ ನಮ್ಮ ಅಭ್ಯಾಸ ಕೇಂದ್ರ ಈ ವರ್ಷಪೂರ್ತಿ ನಡೆಸಲುದ್ದೇಶಿಸಿರುವ ದಶಮಾನೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ಕೂಡ ನೆರೆದ ಗಣ್ಯರ ಸಮಕ್ಷ ದೀಪ ಬೆಳಗಿಸುವ ಮೂಲಕ ನಡೆಸಲಾಯಿತು. ಗುರುಪೂಜೆ- ಗುರುವಂದನೆ, ಭಜನೆ ಜೊತೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ನಮ್ಮ
ಯಕ್ಷಗಾನ ಇತಿಹಾಸದಲ್ಲೇ ಪರಿಪೂರ್ಣ ಮೇಳವೊಂದು ಪ್ರಪ್ರಥಮ ಬಾರಿಗೆ ವಿದೇಶಕ್ಕೆ ತೆರಳಿ ಯಕ್ಷಗಾನ ಪ್ರದರ್ಶನ ನೀಡಲು ಸಿದ್ಧವಾಗಿದೆ.ತೆಂಕುತಿಟ್ಟಿನ ಪ್ರಸಿದ್ಧ ಶ್ರೀ ಗೆಜ್ಜೆಗಿರಿ ಮೇಳವು ಮಸ್ಕತ್ ಮತ್ತು ದುಬೈ ಯಲ್ಲಿ ಆದಿ ಮಾಯೆ ಪರಾಶಕ್ತಿ ಧೂಮಾವತಿ ಮತ್ತು ಮಾತೆ ದೇಯಿ ಬೈದೆತಿ ಅಮ್ಮನವರ ಬೆಳಕಿನ ಯಕ್ಷಗಾನ ಗೆಜ್ಜೆಸೇವೆ ನೀಡಲಿದ್ದು ಪೂರ್ಣ ಪ್ರಮಾಣದ ಮೇಳವೊಂದು ವಿದೇಶಿ ನೆಲದಲ್ಲಿ ಪ್ರದರ್ಶನ ನೀಡುತ್ತಿರುವುದು ಯಕ್ಷರಂಗದ ಇತಿಹಾಸದಲ್ಲಿ ಪ್ರಥಮವೆನಿಸಿದೆ. ವಿದೇಶದ
ಬಂಟ್ಸ್ ಕತಾರ್ ನೂತನ ಆಡಳಿತ ಸಮಿತಿಯ ಅಡಿಯಲ್ಲಿ ಆಯೋಜಿಸಲಾದ ಮೆಗಾ ಕಲ್ಚರಲ್ ಶೋ-2024 ಕಾರ್ಯಕ್ರಮವು ಡಿಪಿಎಸ್ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಪ್ರಸಿದ್ಧಗಾಯಕರಾದ ಇಂಡಿಯನ್ ಐಡಲ್ ಖ್ಯಾತಿಯ ನಿಹಾಲ್ ತೌರೊ ಮತ್ತು ಸರಿಗಮಪ ಖ್ಯಾತಿಯ ಸಾನ್ವಿ ಶೆಟ್ಟಿ ಅವರ ಲೈವ್ ಸಂಗೀತ ಕಾರ್ಯಕ್ರಮವು ಸುಂದರ ಸಂಜೆಯಲ್ಲಿ ಸಂಗೀತ ಲೋಕವನ್ನುಸೃಷ್ಟಿಸಿತು. ಬಂಟ್ಸ್ ಕತಾರ್ ಸದಸ್ಯರಿಂದ ಯಕ್ಷಗಾನ”ನಾಟ್ಯ ವೈಭವ”, ವಿಶೇಷವಾಗಿ ಬಂಟ್ಸ್ ಕತಾರ್ನ ಸಣ್ಣ ಪುಟ್ಟ ತಂಡಗಳು
ಲಂಡನ್ : ಇಂಗ್ಲೆಂಡಿನಲ್ಲಿ ಭಾರತೀಯ ಮೂಲದ 36ರ ವಿಘ್ನೇಶ್ ಪಟ್ಟಾಭಿರಾಮನ್ ಎಂಬವರ ಸಾವು ಆಗಿದೆ. ಸೈಕಲಿನಲ್ಲಿ ಮನೆಗೆ ಹೋಗುವಾಗ ಅಪಘಾತವಾಗಿ ಸಾವಾಗಿದೆ ಎಂದು ಒಂದು ವರದಿ ಹೇಳಿದರೆ ಇನ್ನೊಂದು ಅದು ಕೊಲೆ ಎಂದು ವರದಿ ಮಾಡಿದೆ.ಬ್ರಿಟನ್ನಿನ ವೆಲ್ ರೀಡಿಂಗ್ನಲ್ಲಿ ಹೋಟೆಲೊಂದರ ಮ್ಯಾನೇಜರ್ ಆಗಿ ವಿಘ್ನೇಶ್ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹೋಗುವಾಗ ಹೋಟೆಲಿಗೆ ಹತ್ತಿರದ ಪ್ಲೇಸ್ ಜಂಕ್ಷನ್ನಲ್ಲಿ ಸೈಕಲಿನಿಂದ ಅವರು ಬಿದ್ದು ಮೃತರಾಗಿದ್ದಾರೆ. ಬೀಳಲು
ಬಹರೈನ್ ಕನ್ನಡ ಸಂಘ ಕೇವಲ ಕನ್ನಡಿಗರ ಸಂಘಟನೆಯಲ್ಲ ಇದು ಕನ್ನಡ ಕಲೆ, ಸಂಸ್ಕ್ರತಿ ,ಭಾಷೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವಂತಹ ಒಂದು ಪರಿಣಾಮಕಾರಿಯಾದ ಮಾಧ್ಯಮ. ಇಲ್ಲಿರುವ ನಮ್ಮ ಸಂಸ್ಕ್ರತಿಯ ಅಧ್ಯಯನ ಕೇಂದ್ರಗಳು ನಿಜವಾಗಿಯೂ ಕನ್ನಡ ಭಾಷೆ, ಕಲೆ, ಸಂಸ್ಕ್ರತಿಯ ಮೇಲೆ ಬಹರೈನ್ ಕನ್ನಡಿಗರಿಗಿರುವ ಅನನ್ಯ ಪ್ರೀತಿಗೆ ಸಾಕ್ಷಿಯಾಗಿದೆ ” ಎಂದು ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಯು.ಟಿ. ಖಾದರ್ ಹೇಳಿದರು. ಅವರು, ಕನ್ನಡ ಸಂಘವು ಸಭಾಧ್ಯಕ್ಷರ ಬಹರೈನ್ ಭೇಟಿಯ
ದುಬೈ : ದುಬೈನಲ್ಲಿ ಡಿ.10 ರಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ಯು.ಎ.ಇ. ದುಬೈ ಘಟಕದ ವತಿಯಿಂದ ಅದ್ದೂರಿಯಾಗಿ “ದುಬೈ ಗಡಿನಾಡ ಉತ್ಸವ-2023″ಕಾರ್ಯಕ್ರಮ ನಡೆಯಲಿದೆ. ಆಮಂತ್ರಣ ಪತ್ರಿಕಾ ಬಿಡುಗಡೆ ಮಾಡಿದ ಕನ್ನಡ ಚಿತ್ರರಂಗದ ಹಾಸ್ಯ ನಟ ಸಂಗೀತ ನಿರ್ದೇಶಕ ಸಾದುಕೋಕಿಲರವರು ಕನ್ನಡ ಭಾಷೆ ಮತ್ತು ಕನ್ನಡ ಸಂಸ್ಕೃತಿಗಳನ್ನು ಉಳಿಸುವಲ್ಲಿ ಗಡಿನಾಡಿನ ಕನ್ನಡಿಗರ ಪಾತ್ರ ಬಹಳ ದೊಡ್ಡದು. ಅದರಲ್ಲಿ ಅನಿವಾಸಿ ಕನ್ನಡಿಗರ ಪಾತ್ರಕ್ಕೆ ನನ್ನ
ಇತ್ತೀಚೆಗೆ ಉತ್ತರ ಕೊರಿಯಾವು ಗೂಢಚಾರಿಕೆ ಸಂಬಂಧದ ಉಪಗ್ರಹವನ್ನು ಹಾರಿಸಿದ ಬೆನ್ನಿಗೇ ದಕ್ಷಿಣ ಕೊರಿಯಾ ಸಹ ಅದಕ್ಕೆ ಸಂವಾದಿಯಾಗಿ ಗೂಢಚಾರಿಕೆ ಉಪಗ್ರಹವನ್ನು ಕಕ್ಷೆಗೇರಿಸಿತು. ಕ್ಯಾಲಿಫೋರ್ನಿಯಾದ ವ್ಯಾಂಡೆನ್ಬರ್ಗ್ ಬಾಹ್ಯಾಕಾಶ ಬೇಸ್ ಕೇಂದ್ರದಲ್ಲಿ ಸ್ಪೇಸ್ ಎಕ್ಸ್ ಫಾಲ್ಕನ್ 9 ರಾಕೆಟ್ ಬಳಸಿ ಈ ಉಪಗ್ರಹವನ್ನು ಕಕ್ಷೆಗೆ ಏರಿಸಲಾಯಿತು. ಈ ವಾರದ ಆರಂಭದಲ್ಲಿ ಗಗನಕ್ಕಟ್ಟಲು ಯೋಜಿಸಲಾಗಿತ್ತು. ಹವಾಮಾನದ ವೈಪರೀತ್ಯದ ಕಾರಣ ವಾರದ ಕೊನೆಯಲ್ಲಿ ಆಕಾಶ
ಮಾಂಡ್ ಸೊಭಾಣ್ ನಿರ್ಮಾಣದ ಅಸ್ಮಿತಾಯ್’ ಕೊಂಕಣಿ ಚಲನಚಿತ್ರವು ಅಮೇರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ, ಡಿಸಿ ಸೌತ್ ಏಶಿಯನ್ ಫಿಲ್ಮ್ ಫೆಸ್ಟಿವಲಲ್ಲಿ, 2023 ಡಿಸೆಂಬರ್ 02 ರಂದು ಪೂರ್ವಾಹ್ನ 11.00 ಗಂಟೆಗೆ, ಎ ಎಮ್ ಸಿ ಥಿಯೆಟರ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಸೆಪ್ಟೆಂಬರ್ 15 ರಂದು ತೆರೆಗೆ ಬಂದ ಅಸ್ಮಿತಾಯ್ ಚಲನಚಿತ್ರದ 400ಕ್ಕೂ ಮಿಕ್ಕಿ ದೇಖಾವೆಗಳು ನಡೆದಿದ್ದು, ಇದುವರೆಗೆ ವಿಶ್ವದಾದ್ಯಂತ 13 ದೇಶಗಳಲ್ಲಿ ಪ್ರದರ್ಶನಗೊಂಡಿದೆ. ಕೊಂಕಣಿ ಚಲನಚಿತ್ರ