ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿ ಕೂಟದವರು ಗುಂಪು ಫೋಟೋ ತೆಗೆಸಿಕೊಳ್ಳುವಾಗ ಮುಸ್ಲಿಮರ ಆಜಾನ್ ಹಾಕಿದ್ದರು, ಎಚ್ಚರ ಎಂಬ ಪೋಸ್ಟ್ ಒಂದು ಜಾಲ ತಾಣಗಳಲ್ಲಿ ಹರಿದಾಡುತ್ತಿದೆ. ಅದು ಸುಳ್ಳು ಸುದ್ದಿ ಎಂದು ಕ್ವಿಂಟ್ ಫ್ಯಾಕ್ಟ್ ಚೆಕ್ ಹೇಳಿದೆ. ಇಲ್ಲಿ ಈ ಪೋಸ್ಟ್ಗೆ ಬಳಸಿದ ವೀಡಿಯೋ ಆಗಸ್ಟ್ 31, ಸೆಪ್ಟೆಂಬರ್ 1ರಂದು ಮುಂಬಯಿಯಲ್ಲಿ ನಡೆದ ಇಂಡಿಯಾ ಮೈತ್ರಿ ಕೂಟದ
ಮುಖ್ಯಮಂತ್ರಿ ಜೋರಮ್ ತಂಗ, ಉಪ ಮುಖ್ಯಮಂತ್ರಿ ಸಹಿತ ಹಲವು ಮಂತ್ರಿಗಳ ಸೋಲಿನೊಂದಿಗೆ ಮಿಜೋರಾಂ ನ್ಯಾಶನಲ್ ಫ್ರಂಟ್ ಅಧಿಕಾರ ಕಳೆದುಕೊಂಡಿದೆ. ಬಿಜೆಪಿ ಸಹ ಈ ಸರಕಾರದ ಭಾಗವಾಗಿತ್ತು. ಜೆಡ್ಪಿಎಂ ಮೈತ್ರಿ ಕೂಟವು 40 ಸದಸ್ಯ ಬಲದ ಮಿಜೋರಾಂನಲ್ಲಿ 27 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೆ ಬಂದಿದೆ. ಎಂಎನ್ಎಫ್ ಬರೇ 10 ಕಡೆ ಗೆದ್ದಿದೆ. ಬಿಜೆಪಿ 2, ಕಾಂಗ್ರೆಸ್ 1 ಸ್ಥಾನ ಪಡೆದಿವೆ.
ನಾಲ್ಕು ರಾಜ್ಯಗಳ ಚುನಾವಣೆಯ ಫಲಿತಾಂಶ ಬಿಜೆಪಿಗೆ ಲಾಭ ನೀಡಿದೆ. ಕಾಂಗ್ರೆಸ್ ಬಲ ನಿಂತ ನೀರಾಗಿದೆ. ಭಾರತ, ಇಂಡಿಯಾಗಳು ಸೋತು ಹೋಗಿವೆ. ಬಿಜೆಪಿಯಯ 142 ಹೆಚ್ಚು ಶಾಸಕರನ್ನು ಗೆದ್ದಿದೆ. ನಾಲ್ಕು ರಾಜ್ಯಗಳಲ್ಲೂ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸ್ಥಾನ ಪಡೆದಿದೆ. ಕಾಂಗ್ರೆಸ್ ಮತ ಭಾರ ಭಾರೀ ಇಳಿಯದಿದ್ದರೂ ಒಟ್ಟು 66 ಶಾಸಕರನ್ನು ಕಳೆದುಕೊಂಡಿದೆ. ತೆಲಂಗಾಣದಲ್ಲಿ ಮಾತ್ರ ಅದು ತನ್ನ ಶಾಸಕ ಸಂಖ್ಯೆ ಹೆಚ್ಚಿಸಿಕೊಂಡು ಮೂರು ರಾಜ್ಯಗಳ ಕೊರತೆಯನ್ನು ಸ್ವಲ್ಪ ಭರ್ತಿ
ರಾಜ್ಯ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಎಲ್ ಕೆ ಅತೀಖ್ ಅವರನ್ನು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಈವರೆಗೆ ಆ ಹುದ್ದೆಯಲ್ಲಿದ್ದ ಡಾ. ರಜನೀಶ್ ಗೋಯಲ್ ಅವರನ್ನು ಆ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ಎಲ್ ಕೆ ಅತೀಖ್ ಅವರು ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿಯೂ ಮುಂದಿನ ಆದೇಶದವರೆಗೆ ಹೆಚ್ಚುವರಿ ಹೊಣೆ ನಿರ್ವಹಿಸಲಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಾಮಾಣಿಕರು, ಪಾರದರ್ಶಕವಾಗಿ ಇದ್ದಿದ್ದೇ ಆದರೆ ಅವರ ವಿರುದ್ಧದ ಪ್ರಕರಣ ಹಿಂಪಡೆಯುವ ಅಗತ್ಯ ಇರಲಿಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು. ಸಚಿವ ಸಂಪುಟ ಸಭೆಯಲ್ಲಿ ಡಿಕೆಶಿ ಅವರ ಮೇಲಿದ್ದ ಸಿಬಿಐ ತನಿಖೆ ಪ್ರಕರಣ ವಾಪಸ್ ಪಡೆಯಲು ನಿರ್ಧರಿಸಿದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದರು. ‘ಅವರಿಗೆ ಭಯ ಯಾಕೆ? ಅವರ ಪ್ರಾಮಾಣಿಕತೆ ಪ್ರಶ್ನಾರ್ಥಕ ಚಿಹ್ನೆಯಲ್ಲಿದೆ. ಸಿಬಿಐ ತನಿಖೆಯ
ಬಂಟ್ವಾಳ: ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ರಾಜ್ಯ ಬಿಜೆಪಿ ನಿಕಟಪೂರ್ವ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಅಭಿನಂದನೆ ಸಮಾರಂಭ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ನಳಿನ್ ಕುಮಾರ್ ಕಟೀಲು ಮಾತನಾಡಿ ನಾನು ಸಾಧನೆ ಮಾಡಿದೆನೆಂದು ಹೇಳುವುದಿಲ್ಲ. ರಾಜಕೀಯಕ್ಕೆ ಇಚ್ಚೆಯಿಂದ ಬಂದವನಲ್ಲ. ಸಂಘದ ಹಿರಿಯ ಸೂಚನೆಯಂತೆ ಸಂಸದನಾಗಿ ಜನಸೇವೆ ಮಾಡಿದ್ದೇನೆ. ಸಂಘದ ವಿಚಾರಧಾರೆಯನ್ನು ಒಪ್ಪಿಕೊಂಡು ರಾಷ್ಟ್ರದ
ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಂಗಳೂರಿಗೆ ಆಗಮಿಸಿದ ಬಿ. ವೈ ವಿಜಯೇಂದ್ರ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ನಗರಕ್ಕೆ ಆಗಮಿಸಿದ ಅವರು, ತೆರೆದ ವಾಹನದ ಮೂಲಕ ನಗರದ ಬಂಟ್ಸ್ ಹಾಸ್ಟೆಲ್ನಿಂದ ಸಿವಿ ನಾಯಕ್ ಹಾಲ್ ವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದರು. ಈ ವೇಳೆ ಬಿಜೆಪಿಯ ಮಹಿಳಾ ಕಾರ್ಯಕರ್ತರು ಆರತಿ ಬೆಳಗಿ, ತಿಲಕ ಹಚ್ಚಿ ಬರಮಾಡಿಕೊಂಡರು, ಜೊತೆಗೆ ಸೇಬು ಹಣ್ಣಿನ ಹಾರದ ಮೂಲಕ ಭರ್ಜರಿ ಸ್ವಾಗತ ಮಾಡಿದರು.
ವಿರೋಧ ಪಕ್ಷದ ನಾಯಕರಾಗಿ ಆರ್.ಅಶೋಕ್ ಆಯ್ಕೆಯಾಗಿದ್ದಾರೆ. ಶುಕ್ರವಾರ ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡಲಾಗಿದ್ದು, 6 ತಿಂಗಳ ಬಳಿಕ ವಿರೋಧ ಪಕ್ಷದ ನಾಯಕನ ಆಯ್ಕೆ ನಡೆದಿದೆ. ಶಾಸಕರ ಅಭಿಪ್ರಾಯ ಪಡೆದು ದೆಹಲಿಯಿಂದ ಬಂದಿದ್ದ ವೀಕ್ಷಕರು ಅಶೋಕ್ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. 66ರ ಹರೆಯದ ಅಶೋಕ್ ಅವರು ಆರ್ ಎಸ್ ಎಸ್ ಹಿನ್ನಲೆ ಹೊಂದಿದ್ದು, ಈ ಹಿಂದೆ ವಿಧಾನಸಭೆಯ ವಿಪಕ್ಷದ ಉಪನಾಯಕರಾಗಿ ಉಪಮುಖ್ಯಮಂತ್ರಿಯಾಗಿ, ಕಂದಾಯ , ಗೃಹ
ಪುತ್ತೂರು: ರಾಜ್ಯದ 216 ತಾಲೂಕುಗಳಲ್ಲಿ ಭೀಕರ ಬರಗಾಲ ಆವರಿಸಿದೆ. 36 ಲಕ್ಷ ಹೆಕ್ಟೇರ್ ಕೃಷಿ ಮತ್ತು 3 ಲಕ್ಷ ಹೆಕ್ಟೇರ್ ತೋಟಗಾರಿಕೆ ಪ್ರದೇಶದಲ್ಲಿ ಬರಗಾಲದ ಛಾಯೆ ಆವರಿಸಿದೆ. ಒಟ್ಟಾರೆ ರಾಜ್ಯದಲ್ಲಿ ಸುಮಾರು 33 ಸಾವಿರ ಕೋಟಿ ರೂ. ನಷ್ಟ ಅಂದಾಜಿಸಲಾಗಿದೆ. ಇಷ್ಟೆಲ್ಲ ಆಗಿದ್ದರೂ ಸಿದ್ದರಾಮಯ್ಯ ಸರಕಾರ ಕೇವಲ 320 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಸರಕಾರ ಒಂದು ವಾರದಲ್ಲಿ ಕನಿಷ್ಠ 10 ಸಾವಿರ ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಾಜ್ಯ
ಹಲವು ಸಮಯದಿಂದ ಬಾಕಿ ಇರುವ ನಿಗಮ ಮಂಡಳಿಗಳಿಗೆ ಶೀಘ್ರ ಅಧ್ಯಕ್ಷರ ನೇಮಕ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರಿಗೆ ಆದ್ಯತೆ ನೀಡಿ, ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಗೃಹ ಸಚಿವ ಜಿ. ಪರಮೇಶ್ವರ ಅವರು ಮನೆಗೆ ಊಟಕ್ಕೆ ಕರೆದಿದ್ದರು. ನಾನು ಮತ್ತು ಕೆಲವು ಸಚಿವರು ಹೋಗಿದ್ದೆವು. ಅಲ್ಲಿ