Home Archive by category ರಾಜಕೀಯ (Page 27)

ಪುತ್ತೂರು ಪೊಲೀಸ್ ದೌರ್ಜನ್ಯ ಪ್ರಕರಣ – ಆಸ್ಪತ್ರೆಗೆ ದಿ. ಹರ್ಷನ ಸಹೋದರಿ ಅಶ್ವಿನಿ ಭೇಟಿ

ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾಯಕರ್ತರ ಆರೋಗ್ಯವನ್ನು ಶಿವಮೊಗ್ಗದ ದಿವಂಗತ ಹರ್ಷನ ಸಹೋದರಿ ಅಶ್ವಿನಿಯವರು ವಿಚಾರಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅಶ್ವಿನಿ ಅವರು ಕಾರ್ಯಕರ್ತರ ಸ್ಥಿತಿಯನ್ನ ನೋಡಿ ತುಂಬಾ ಬೇಸರಗೊಂಡಿದ್ದೇನೆ. ಇವತ್ತು ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ ನೋಡುತ್ತಿರಲಿಲ್ಲ. ಕಾರ್ಯಕರ್ತರು ಹಿಂದೂ ಸಮಾಜ ಗಟ್ಟಿಗೊಳಿಸಲು ಹೋರಾಡ್ತಾ ಇದ್ದಾರೆ.

ಇಂದಿನಿಂದ ಮೂರು ದಿನ ವಿಧಾನಸಭೆ ಅಧಿವೇಶನ

ಇಂದಿನಿಂದ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭಗೊಂಡಿದೆ. ಹಂಗಾಮಿ ಸ್ವೀಕರ್ ಆಗಿ ಆರ್ ವಿ ದೇಶಪಾಂಡೆಯವರು ನೇಮಕಗೊಂಡಿದ್ದಾರೆ. ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತ್ರ, ಶಾಸಕರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕಾಗಿ ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. ಇಂದಿನಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡಯಲಿದ್ದು, ಅದಕ್ಕೂ ಮುನ್ನಾ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಂಗಾಮಿ ಸ್ವೀಕರ್ ಆರ್ ವಿ ದೇಶಪಾಂಡೆ ಅವರಿಗೆ

ಪುತ್ತಿಲ ಪರಿವಾರ ಸಂಘಟನೆಯ ಲಾಂಛನ ಬಿಡುಗಡೆ : 5ಸಾವಿರಕ್ಕೂ ಅಧಿಕ ಮಂದಿ ಪುತ್ತಿಲರೊಂದಿಗೆ ಹೆಜ್ಜೆ

ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗರಿಂದ ನಮ್ಮ ನಡಿಗೆ ಶ್ರೀ ಮಹಾಲಿಂಗೇಶ್ವರನ ನಡೆಗೆ” ಎಂಬ ಬೃಹತ್ ಪಾದಯಾತ್ರೆ ಹಾಗೂಸೇವಾ ಸಮರ್ಪಣಾ ಕಾರ್ಯಕ್ರಮ” ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರ ಮಾರುಗದ್ದೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ `ಪುತ್ತಿಲ ಪರಿವಾರ’ ಸಂಘಟನೆಯ ಲಾಂಚನ ಬಿಡುಡೆಗೊಳಿಸಲಾಯಿತು. ದರ್ಬೆಯಲ್ಲಿ ಚಾಲನೆ ಪಡೆದುಕೊಂಡ ಕಾಲ್ನಡಿಗೆ ಜಾಥಾ, ಮುಖ್ಯರಸ್ತೆಯಾಗಿ ಸಾಗಿ ದೇವಸ್ಥಾನದ ದೇವರಮಾರು ಗದ್ದೆಗೆ

ಕಾಪುವಿನಲ್ಲಿ ಎಲ್‍ಇಡಿ ಸ್ಕ್ರೀನ್‍ನಲ್ಲಿ ಪ್ರಮಾಣ ವಚನದ ನೇರಪ್ರಸಾರ

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಪ್ರಮಾಣವಚನ ಸ್ವೀಕಾರ ಮಾಡಿರುವ ದೃಶ್ಯವನ್ನು ಕಾಪು ಕಾಂಗ್ರೆಸ್ ಎಲ್‍ಇಡಿ ಸ್ಕ್ರೀನ್ ಮೂಲಕ ಕಾಪು ಪೇಟೆಯಲ್ಲಿ ಸಾರ್ವಜನಿಕರ ವೀಕ್ಷಣೆಗೆ ಇಟ್ಟು ಸಂಭ್ರಮಾಚರಣೆ ನಡೆಸಿದ್ದಾರೆ.ಸಿದ್ಧರಾಮಯ್ಯ ಹಾಗೂ ಅವರ ತಂಡ ಪ್ರಮಾಣವಚನ ಸ್ವೀಕರಿಸುತ್ತಿದಂತೆ ಕಾಂಗ್ರೆಸ್ ಕಾರ್ಯಕರ್ತರು ಸುಡುಮದ್ದು ಸಿಡಿಸಿ…ಸಾರ್ವಜನಿಕರಿಗೆ ಸಿಹಿ ಹಂಚಿ ಸಿದ್ದರಾಮಯ್ಯ ಹಾಗೂ ವಿನಯ ಕುಮಾರ್ ಸೊರಕೆ ಪರ ಘೋಷಣೆಯನ್ನು ಕೂಗಿ

ಸಿಎಂ ಆಗಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆ

ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಅವರನ್ನ ಬುಧವಾರ ತಡರಾತ್ರಿ ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ ಎಂದು ವರದಿಯಾಗಿದೆ. ಜೊತೆಗೆ ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಆಕಾಂಕ್ಷಿಯಾಗಿದ್ದ ಅವರಿಗೆ ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರೇ ಮುಂದುವರಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು ಸಂಜೆ 7 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ

ಮಳೆಗಾಲದಲ್ಲಿ ಜನರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು-ಶಾಸಕ ಖಾದರ್ ಆದೇಶ

ಉಳ್ಳಾಲ: ಮಳೆಗಾಲದಲ್ಲಿ ಜನರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಅಧಿಕಾರಿಗಳು ತಕ್ಷಣದಿಂದ ಕ್ರಮಕೈಗೊಳ್ಳಬೇಕು, ಉಳ್ಳಾಲ ನಗರಸಭೆಯಾದ್ಯಂತ 8 ಟ್ಯಾಂಕರ್ಗಳ ಮೂಲಕ ಸರಬರಾಜು ಆಗುತ್ತಿರುವ ಕುಡಿಯುವ ನೀರು ಸಮರ್ಪಕವಾಗಿ ಎಲ್ಲರ ಉಪಯೋಗಕ್ಕೆ ಬರಬೇಕು. ಕಡಲ್ಕೊರೆತದಿಂದ ಹಾನಿಗೊಳಗಾದ ಮುಕ್ಕಚ್ಚೇರಿ ಸೀಗ್ರೌಂಡ್ ಮತ್ತು ಉಚ್ಚಿಲ ಸೋಮೇಶ್ವರದಲ್ಲಿ ಅನುದಾನ ಮಂಜೂರುಗೊಳಿಸಿದ ತಕ್ಷಣ ಕಾಮಗಾರಿ ಆರಂಭಿಸಿ ಮುಗಿಸಬೇಕು ಎಂದು ಶಾಸಕ ಯು.ಟಿ ಖಾದರ್ ಅಧಿಕಾರಿಗಳಿಗೆ ಆದೇಶ

ಚುನಾವಣಾ ಕಣದಿಂದ ದೂರ ಸರಿದ ರಮಾನಾಥ್ ರೈ

ಚುನಾವಣಾ ರಾಜಕೀಯದಿಂದ ನಿವೃತ್ತಗೊಳ್ಳುತ್ತಿದ್ದೇನೆ. ಪಕ್ಷದ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಬಿ.ರಮಾನಾಥ ರೈ ಘೋಷಿಸಿದ್ದಾರೆ. ಅವರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವಿಗೆ ಶ್ರಮಿಸಿದ ರಾಜ್ಯದ ಜನತೆಗೆ ಹಾಗೂ ನನ್ನ ಕ್ಷೇತ್ರದಲ್ಲಿ ನನಗೆ ಮತ ಚಲಾಯಿಸಿದ ಮತದಾರರಿಗೆ, ಪಕ್ಷದ

ಡಿವಿಎಸ್, ನಳಿನ್ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಬ್ಯಾನರ್ ಅಳವಡಿಕೆ ,ಪುತ್ತೂರು ಠಾಣೆಯಲ್ಲಿ ದೂರು

ಪುತ್ತೂರು: ಬಿಜೆಪಿ ನಾಯಕರಿಬ್ಬರಾದ, ರಾಜ್ಯ ಬಿಜೆಪಿ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರದ ಮಾಜಿ ಸಚಿವ ಬೆಂಗಳೂರು ಉತ್ತರದ ಹಾಲಿ ಸಂಸದ ಡಿ ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ ಕೋರಿ ಪುತ್ತೂರು ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಿರುವುದನ್ನು ವಿರೋಧಿಸಿ, ಕೃತ್ಯ ಎಸಗಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಪುತ್ತೂರು ಬಿಜೆಪಿಯಿಂದ ಪುತ್ತೂರು ನಗರ ಪೆÇಲೀಸ್ ಠಾಣೆಗೆ ದೂರು ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ

ಶಾಸಕ ಸುನಿಲ್ ಕುಮಾರ್ ಬೆದರಿಕೆ ಖಂಡಿಸುತ್ತೇನೆ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್

ಚುನಾವಣೆಯಲ್ಲಿ ಕಾರ್ಯಕರ್ತರು ಒಂದು ಪಕ್ಷದ ಪರ ಮತ್ತು ವಿರುದ್ದ ಕೆಲಸ ಮಾಡುವುದು ಸಾಮಾನ್ಯ ಚಟುವಟಿಕೆ ಆದರೆ ನನ್ನ ವಿರುದ್ಧ ಕೆಲಸ ಮಾಡಿದವರನ್ನು ನೋಡಿಕೊಳ್ಳುತ್ತೇನೆ ಎಂದು ವಿಜಯೋತ್ಸವದಲ್ಲಿ ಶಾಸಕ ಸುನೀಲ್ ಕುಮಾರ್ ಆಡಿದ ಮಾತನ್ನು ತೀವ್ರವಾಗಿ ಖಂಡಿಸುತ್ತೇನೆ, ಕಾರ್ಯಕರ್ತರಿಗೆ ಬೆದರಿಕೆ ಹಾಕಿದ ಶಾಸಕನ ವಿರುದ್ಧ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರರಾದ