Home Archive by category ರಾಜ್ಯ (Page 59)

ಎಚ್ ಆರ್ ಪಿ ಹಗರಣ : ಕಂದಾಯ ನಿರೀಕ್ಷಕ ಮಂಜುನಾಥ್ ಬಂಧನ

ಸಕಲೇಶಪುರ: ಹೇಮಾವತಿ ಜಲಾಶಯ ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಿ ಮಂಜೂರು ಹಗರಣಕ್ಕೆ ಸಂಬಂಧಿಸಿದಂತೆ ಯಸಳೂರು ಕಂದಾಯ ನಿರೀಕ್ಷಕ ಮಂಜುನಾಥ್ ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಇಡೀ ರಾಜ್ಯದ ಗಮನ ಸೆಳೆದಿರುವ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಎಚ್‌ಆರ್‌ಪಿ ಭೂ ಹಗಣದಲ್ಲಿ ಪೊಲೀಸರಿಂದ ಬಂಧನಕ್ಕೆ ಒಳಗಾದವರ ಸಂಖ್ಯೆ

ದ.ಕ. ಜಿಲ್ಲೆಯಲ್ಲಿ ಹಡೀಲು ಗದ್ದೆ ಉಳುಮೆಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಮೆಚ್ಚುಗೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 8೦೦೦ ಎಕರೆ ಹಡೀಲು ಭೂಮಿಯಿದ್ದು, ಅಲ್ಲಿ ಕೃಷಿಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸುವುದು ಹಾಗೂ ಸಹಕಾರ ಸಂಸ್ಥೆಯ ಮೂಲಕ ಕೃಷಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚಿಂತನೆ ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಅವರು ಕುಂಜತ್‌ಬೈಲ್ ಪ್ರದೇಶದ ಮರಕಡ ವಾರ್ಡಿನ ದಿ. ಕಾಂತಣ್ಣ ಶೆಟ್ಟಿ ಕೊಂರ್ಗಿಬೈಲ್ ಅವರ ಹಡೀಲು ಬಿಟ್ಟ ಜಮೀನಿನಲ್ಲಿ ಯಾಂತ್ರೀಕೃತ ಭತ್ತದ ಕೃಷಿಯ ಉದ್ಘಾಟನೆಗೆ ಆಗಮಿಸಿದ

ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತು ಅವರ ವೈಯಕ್ತಿಕ ಅಭಿಪ್ರಾಯ: ಕೃಷಿ ಸಚಿವ ಬಿ.ಸಿ.ಪಾಟೀಲ್

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಎಂಬ ವಿಚಾರಕ್ಕೆ ಸಂಬಂಧಿಸಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ರಾಜೀನಾಮೆ ಮಾತು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಅವರೇ ಉತ್ತರ ಕೊಡಲಿ, ಅವರು ರಾಜೀನಾಮೆ ಕೊಡೋದು ಏನೂ ಆಗಿಲ್ಲ. ಅವರು ಕಾಂಗ್ರೆಸ್‌ನಲ್ಲಿ ಮೋಸ ಆಯ್ತು ಅಂತ ಬಿಜೆಪಿಗೆ ಬಂದವರು, ಸಿಡಿ ಜಾಲ ಸೇರಿ ಬೇರೆ ಬೇರೆ ಕಾರಣಕ್ಕೆ ಈ ವಿದ್ಯಮಾನ ನಡೀತಿದೆ ಎಂದು

ಚಿನ್ನಕ್ಕೆ ಹಾಲ್‌ಮಾರ್ಕಿಂಗ್ ಕಡ್ಡಾಯ: ಇದು ಖರೀದಿದಾರರು, ಮಾರಾಟಗಾರರಿಗೆ ಅತ್ಯಗತ್ಯ: ಎಂ.ಪಿ.ಅಹ್ಮದ್

ಬೆಂಗಳೂರು: ಗ್ರಾಹಕರ ಹಕ್ಕುಗಳು ಅತ್ಯಂತ ಮಹತ್ವ ಮತ್ತು ಅಗತ್ಯ ಎಂಬುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರಗಳು ಅನೇಕ ಕಾನೂನುಗಳನ್ನು ತಂದಿವೆ. ಗ್ರಾಹಕರು ತಾವು ಖರೀದಿಸುವ ಯಾವುದೇ ಉತ್ಪನ್ನವಾಗಲೀ ಅದಕ್ಕೆ ನೀಡುವ ಹಣಕ್ಕೆ ತಕ್ಕಂತೆ ಮೌಲ್ಯವನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆ 1986 ರಲ್ಲಿ ಜಾರಿಗೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಸರ್ಕಾರ ಚಿನ್ನ ಮತ್ತು ಚಿನ್ನದ ಉತ್ಪನ್ನಗಳಿಗೆ ಹಾಲ್‌ಮಾರ್ಕ್ ಅನ್ನು ಕಡ್ಡಾಯಗೊಳಿಸಿದ ಕಾನೂನು

ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್  ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳವನ್ನು ಕೂಡಲೇ ಹಿಂಪಡೆಯಬೇಕೆಂದು ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದ HP ಪೆಟ್ರೋಲ್ ಪಂಪ್ ಹತ್ತಿರ ಪ್ರತಿಭಟನೆ ಮಾಡಲಾಯಿತು. ತಿಕೋಟಾ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿರೇಶ ಸಿಂಧೂರ ಮಾತನಾಡಿ,ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ವ್ಯಾಪ್ತಿಗೆ ತರಬೇಕು

ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ ವಿಧಿವಶ

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ(67) ಚಿಕಿತ್ಸೆ ಫಲಕಾರಿಯಾಗದೇ, ಸಾವನ್ನಪ್ಪಿದ್ದಾರೆ. ಈ ಮೂಲಕ ಕನ್ನಡ ಸಾಹಿತ್ಯ ಲೋಕದ ಕೊಂಡಿ ಕಳಚಿದಂತೆ ಆಗಿದೆ. ಮೇ 2ರಂದು ಕೆಮ್ಮ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಂತ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ರಂಗದೊರೆ ಆಸ್ಪತ್ರೆಯಿಂದ ಕಳೆದ ಸೋಮವಾರದಂದು ಮಣಿಪಾಲ್ ಆಸ್ಪತ್ರೆಗೆ

ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಸಿಎಂ: ಹಾಸನದಲ್ಲಿ ಬಿಎಸ್‌ವೈ

ರಾಜ್ಯದಲ್ಲಿ ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿರುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅವರು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸವಿಟ್ಟು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅದರಂತೆ ಎಲ್ಲರ ಸಹಕಾರದಿಂದ ಅಭಿವೃದ್ಧಿಯತ್ತ ಗಮನಹರಿಸುವೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡುವೆ ಎಂದು ತಿಳಿಸಿದ್ದಾರೆ. ರಾಜ್ಯ ಬಿಜೆಪಿ

ವಿಜಯಪುರದಲ್ಲಿ ತೈಲ ಬೆಲೆ ಏರಿಕೆಗೆ ಕಾಂಗ್ರೆಸ್ ಖಂಡನೆ

ವಿಜಯಪುರ: ಕೇಂದ್ರ ಸರಕಾರ ನಿರಂತರವಾಗಿ ತೈಲ ಬೆಲೆ ಏರಿಸುವ ಮೂಲಕ ಬಡವರನ್ನು ಸಂಕಷ್ಟಕ್ಕೆ ದೂಡಿದೆ ಎಂದು ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್ ಬಿ ಪ್ರಕಾಲಿ ಅವರು ಆರೋಪಿಸಿದ್ದಾರೆ. ಕೇಂದ್ರ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ನಿರಂತರವಾಗಿ ಬೆಲೆ ಏರಿಕೆ ಮಾಡುವ ಮೂಲಕ ಜನರನ್ನು ಸುಲಿಗೆ ಮಾಡುತ್ತಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ದರ ಕಡಿಮೆ ಇದ್ದರು ಕೂಡ ಸರಕಾರ ಬೆಲೆಯನ್ನು ಗಗನಕ್ಕೆ ಏರಿಸುವ ಮೂಲಕ ಜನರ ಹಿತ

ಹಾಸನ ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್‌ಡೌನ್: ಸಚಿವ ಗೋಪಾಲಯ್ಯ

ಹಾಸನ ಜಿಲ್ಲೆಯಲ್ಲಿ ಜೂನ್ 14 ರ ನಂತರವೂ ಒಂದು ವಾರ ಲಾಕ್ಡೌನ್ ಮುಂದುವರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ 16.97 ಇರುವುದರಿಂದ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಒಂದು ವಾರ ಹೆಚ್ಚುವರಿಯಾಗಿ ಜಿಲ್ಲೆಯನ್ನು ಲಾಕ್ಡೌನ್ ಮಾಡಲು ಅನುಮತಿ ನೀಡಬೇಕೆಂದು ಮುಖ್ಯಮಂತ್ರಿಯವರಿಗೆ ಮನವಿ

ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ತಡೆಗೆ ಸಚಿವ ಕೋಟ ಆದೇಶ

ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ, ರಾಜ್ಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಮಾಧ್ಯಮದ ಮೂಲಕ ಹೇಳಿಕೆಯೊಂದನ್ನು ನೀಡಿದ್ದು,