Home Archive by category ರಾಜ್ಯ (Page 6)

17ನೇ ಲೋಕ ಸಭೆಗೆ ವಿದಾಯ ಹೇಳುವ ಮೊದಲು

17ನೇ ಲೋಕ ಸಭೆಯು 88% ನಿಗದಿತ ಕೆಲಸ ಮಾಡಿದೆ ಎಂದು ವರದಿ ಆಗಿದೆ. ಆದರೆ ಅವರೆಲ್ಲ ಲೋಕಸಭೆಯಲ್ಲಿ ಗದ್ದಲ ಮಾಡಿದ್ದರ ಬಗೆಗೇ ಮಾಧ್ಯಮಗಳಲ್ಲಿ ಹೆಚ್ಚು ವರದಿಯಾಗಿತ್ತು. ಗದ್ದಲ ಮಾಡಿದ, ಕೂಗಾಡಿದ, ಕಲಾಪ ಮುಂದೂಡಿದ, ಹೊರ ನಡೆದ, ಹಾಜರಿ ಹಾಕಿ ಭತ್ಯೆ ಪಡೆದು ಕ್ಯಾಂಟೀನ್‍ನಲ್ಲಿ ಕುಳಿತ ಕಾಲ ಎಷ್ಟು ಎಂದು ಲೆಕ್ಕ ಸಿಕ್ಕಿಲ್ಲ. ಬಹುತೇಕ ಸಂಸದರು ತಮ್ಮ ಅನುಕೂಲದ ಹೊರತಾಗಿ

ಡ್ರೋನ್ ಮೂಲಕ ರೈತರ ಕಣ್ಣೀರು ತರಿಸಿದ ಸಂಶೋಧನೆ

ದಿಲ್ಲಿಗೆ ಪ್ರತಿಭಟನೆ ಮಾಡಲು ಬಂದ ರೈತರಿಗೆ ಗೃಹ ಮಂತ್ರಿ ಅಮಿತ್ ಶಾ ನಿರ್ವಹಣೆಯ ಪೊಲೀಸ್ರು ನೀವು ಊಟ ಕೊಟ್ರೆ ನಾವು ಲಾಠಿ ಬೀಸ್ತೀವಿ ಎಂದಿದ್ದಾರೆ. ಕೊಟ್ಟ ಊಟಕ್ಕೆ ನ್ಯಾಯ ಬೆಲೆ ಕೇಳಿದರೆ ಡ್ರೋಣ್ ಮೂಲಕ ಹೊಗೆ ಬಾಂಬು ಸಿಡಿಸಿ ಕಣ್ಣೀರು ತರಿಸ್ತೀವಿ ಎಂದೂ ಹೊಸ ಸಂಶೋಧನೆ ಮಾಡಿ ತೋರಿಸಿದ್ದಾರೆ. ಗದ್ದೆಯಲ್ಲಿ ಇರಬೇಕಾದವರು ದಿಲ್ಲಿಗೆ ಬಂದ್ರೆ ನಾವು ಎಲ್ಲಿಗೆ ಹೋಗಬೇಕು, 144 ಸೆಕ್ಷನ್ ತಿಂಗಳುಗಟ್ಟಲೆ ಹಾಕ್ತೀವಿ ಎಂದು ಮೋದಿಯವರ ಸರಕಾರ ಪಣ ತೊಟ್ಟಂತಿದೆ. ಸದ್ಯ

ಮತ ಯತ್ನದ ಭಾರತ ರತ್ನ 

ಭಾರತ ರತ್ನ ಪ್ರಶಸ್ತಿಯ ಬಗೆಗೆ ಪ್ರಧಾನಿಯವರು ರಾಷ್ಟ್ರಪತಿಗಳಿಗೆ ಹೆಸರು ಸೂಚಿಸುತ್ತಾರೆ. ಅದಕ್ಕೆ ರಾಷ್ಟ್ರಪತಿ ಅವರು ಅಂಗೀಕಾರ ಮುದ್ರೆ ಒತ್ತುತ್ತಾರೆ. ಹಿಂದೆಲ್ಲ ಸಮಿತಿ ರಚನೆ, ಅಭಿಪ್ರಾಯ, ಮಂತ್ರಿ ಮಂಡಲದಲ್ಲಿ ಚರ್ಚೆ ಮೂಲಕ ಹೆಸರನ್ನು ಪ್ರಧಾನಿಯವರು ರಾಷ್ಟ್ರಪತಿಗಳಿಗೆ ಶಿಫಾರಸು ಮಾಡುತ್ತಿದ್ದರು. ಈಗ ಪ್ರಧಾನಿ ಮೋದಿಯವರು ಕಿಸೆಯಿಂದ ತೆಗೆದುಕೊಟ್ಟಂತೆ ಭಾರತ ರತ್ನ ಎಂದು ಸದ್ದು ಮಾಡಿದ್ದಾರೆ. ಕ್ರಮ ಪ್ರಕಾರ ಕರ್ಪೂರಿ ಠಾಕೂರ್, ಆಮೇಲೆ ಲಾಲ್ ಕೃಷ್ಣ ಅಡ್ವಾಣಿ,

ಅಂಕಿ ಅಂಶದ ಪ್ರಶ್ನೆಗೆ ಸೊನ್ನೆ ಸೊನ್ನೆ ಉತ್ತರ

ಜಿಎಸ್‍ಟಿ ವಂಚನೆಯಲ್ಲಿ ಗುಜರಾತ್ ಮತ್ತು ಮುಂಬಯಿಯ ಗುಜರಾತ್ ಉದ್ಯಮಿಗಳೇ ಮೊದಲ ಸ್ಥಾನದಲ್ಲಿರುವುದು ವರದಿಯಾಗಿದೆ. ಕರ್ನಾಟಕದ ಕಾಂಗ್ರೆಸ್ ಸರಕಾರವು ಒಕ್ಕೂಟ ಸರಕಾರವು ತನಗೆ ಮಾಡಿರುವ ಹಣಕಾಸು ವಂಚನೆಯ ವಿರುದ್ಧ ದಿಲ್ಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಈ ನಡುವೆ ಲೋಕ ಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿಯವರು ತೆರಿಗೆ ಪಾಲು ನೀಡಿಕೆ ಮತ್ತು ಅನುದಾನ ಕೊಡುವುದರಲ್ಲಿ ಬಿಜೆಪಿಯೇತರ ಸರಕಾರಗಳನ್ನು ಒಕ್ಕೂಟ ಸರಕಾರವು ವಂಚಿಸಿದೆ ಎಂದು ಆಳುವವರನ್ನು

ಸಿನಿ ರಾಜಕೀಯ ಈಜಿದವರು, ಮುಳುಗಿದವರು

ತಮಿಳು ನಟ ವಿಜಯ್ ತಮಿಳಗ ವೆಟ್ರಿ ಕಳಗಂ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ. ಆ ಹೆಸರಿನ ಅರ್ಥ ತಮಿಳುನಾಡು ವಿಜಯ ಸಂಘಟನೆ. ವಿಜಯ್ ಎಂದರೆ ಗೆಲುವು, ವೆಟ್ರಿ ಎಂದೇ ಅರ್ಥ. ನಟಿಸುತ್ತಿರುವ ಎರಡು ಸಿನಿಮಾ ಮುಗಿಸಿ ಚಿತ್ರ ರಂಗಕ್ಕೆ ವಿದಾಯ ಹೇಳುವುದಾಗಿ ಸಹ ವಿಜಯ್ ಹೇಳಿದ್ದಾರೆ. ಕ್ರಿಶ್ಚಿಯನ್ ತಂದೆ ಎಸ್. ಎ. ಚಂದ್ರಶೇಖರ್, ಹಿಂದೂ ತಾಯಿ ಶೋಭಾ ಪುತ್ರ ವಿಜಯ್‍ರ ಮಡದಿ ಶ್ರೀಲಂಕಾ ತಮಿಳದಿ. ಹುಟ್ಟು ಹೆಸರು ಜೋಸೆಫ್ ವಿಜಯ್ ಚಂದ್ರಶೇಖರ್. ವಿಜಯ್ ರಾಜಕೀಯ ಪಕ್ಷ

ಪ್ರತ್ಯೇಕತೆ ಕೆರಳಿಸಿದ ಆಯವ್ಯಯ

ಚುನಾವಣಾ ಪೂರ್ವ ಮಧ್ಯಾವಧಿ ಆಯವ್ಯಯ ಮಂಡನೆ ಆಗಿದೆ. ಸಂಸದ ಶಶಿ ತರೂರ್ ಪ್ರಕಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಅಂಕಿ ಅಂಶಗಳಿಗಿಂತ ಹೆಚ್ಚಾಗಿ ಗಿಲೀಟಿನ ಮಾಮೂಲಿ ಶಬ್ದಗಳದ್ದಾಗಿದೆ. ಈ ಮಾತನ್ನು ನಿರ್ಮಲಾರ ಗಂಡ ಪರಕಾಲ ಪ್ರಭಾಕರ್ ಅವರು ಬಿಜೆಪಿ ಸರಕಾರದ ಒಟ್ಟಾರೆ ಶಬ್ದಗಳ ಕಸರತ್ತು ಗಮನಿಸಿ ಹಿಂದೆಯೇ ಟೀಕಿಸಿದ್ದಾರೆ. ಬಜೆಟ್ ಮಂಡನೆ ವೇಳೆ ಸಂಸದರ ಹಾಜರಾತಿ ಕಡಿಮೆ ಇತ್ತು. ಗ್ಯಾಲರಿಯಲ್ಲಿ ನಿರ್ಮಲಾರ ಮಗಳು ವಂಗಮಯಿ ಪರಕಾಲ ಕುಳಿತಿದ್ದರು.

ತೆಕ್ಕಿಲ್ ಶಾಲಾ ವತಿಯಿಂದ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅವರಿಗೆ ಸನ್ಮಾನ

ಸುಳ್ಯದ ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ, ಗೂನಡ್ಕ ವತಿಯಿಂದ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜಿಮ್ ರವರನ್ನು ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ಇವರು ಮೈಸೂರು ಪೇಟ ತೊಡಿಸಿ ಶಾಲು, ಹಾರ ಮತ್ತು ಸ್ಮರಣಿಕೆ, ತೆಕ್ಕಿಲ್ ದಶದೀವಿಕೆ ಹಾಗು ಬೆಳಕಿನೆಡೆಗೆ 10 ಮುಸ್ಲಿಂ ಕತೆಗಳ ಪುಸ್ತಕ ನೀಡಿ ಸ್ವಾಗತಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸಂಪತ್ ಜೆ ಡಿ ಇವರು ಶಾಲೆಯ ಶಿಕ್ಷಕ

ನಿತೀಶ್ ಕುಮಾರ್ ಇಂಡಿಯಾ ಮೈತ್ರಿಕೂಟ ಬಿಡುತ್ತಿರುವ ಬಗ್ಗೆ ಮೊದಲೇ ಸುಳಿವು ಸಿಕ್ಕಿತ್ತು: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಬಿಹಾರ ಮುಖ್ಯಮಂತ್ರಿ ಬಿಜೆಪಿಯೊಂದಿಗೆ ಕೈಜೋಡಿಸುವ ವಿಚಾರದ ಬಗ್ಗೆ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಹಾಗೂ ಅವರ ಮಗ ತೇಜಸ್ವಿ ಯಾದವ್ ಅವರು ಐದು ದಿನಗಳ ಹಿಂದೆಯೇ ನನಗೆ ಮಾಹಿತಿ ನೀಡಿದ್ದರು. ಅದು ಈಗ ನಿಜವಾಗಿದೆ. ಅವರು ಹೋಗುವುದಾದರೆ ಹೋಗಲಿ ಎಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟ ಬಿಡುತ್ತಿರುವ ಬಗ್ಗೆ ಮುಂಚೆಯೇ ಸುಳಿವು

ಕೋಲಿಗೆ ಕಟ್ಟಿದ ಗಜ್ಜರಿ ನಿಗಮ ಮಂಡಳಿ

ಕರ್ನಾಟಕದಲ್ಲಿ 34 ಶಾಸಕರನ್ನು ನಿಗಮ ಮಂಡಳಿಗಳಿಗೆ ನೇಮಿಸಿ ಆದೇಶ ಹೊರಡಿಸಲಾಗಿದೆ. ಅವರಿಗೆಲ್ಲ ಮಂತ್ರಿ ಸ್ಥಾನಮಾನ ನೀಡಲಾಗಿದೆ. ಮಂತ್ರಿ ಮಂಡಲದಲ್ಲಿ 34 ಮಂದಿ ಇದ್ದಾರೆ. ಕಾರ್ಯದರ್ಶಿಗಳನ್ನೂ ಸೇರಿ ರಾಜ್ಯದಲ್ಲಿ ಮಂತ್ರಿ ಸ್ಥಾನಮಾನ ಪಡೆದವರ ಸಂಖ್ಯೆ 74ಕ್ಕೆ ಏರಿತು. ಎಲ್ಲ 4ರ ಮಹಿಮೆ. 4ನೇ ತಿಂಗಳಿನಲ್ಲಿ ಲೋಕ ಸಭೆ ಚುನಾವಣೆಯ ಬಿರುಸು. ಅದಕ್ಕೆ ಮೊದಲು ಅಸಮಾಧಾನ ಮರೆಸಿ ತಯಾರಾಗುವುದು ಗುರಿ. ಅದೇ ರಾಜಕೀಯದ ಕಿರಿಕಿರಿ. ರಾಜನಾದವನ ಕುತ್ತಿಗೆಯ ಮೇಲೆ ಸದಾ

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ

ಎಂಟು ತಿಂಗಳ ಹಿಂದೆ ವಿಧಾನ ಸಭಾ ಚುನಾವಣೆಯ ಕಾಲದಲ್ಲಿ ಟಿಕೆಟ್ ಸಿಗಲಿಲ್ಲ ಎಂದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರಿದ್ದಾರೆ, ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಕಾಂಗ್ರೆಸ್ಸಿನಿಂದ ಟಿಕೆಟ್ ಕೊಡುತ್ತಾರೆ ಎಂದು ವಿಧಾನ ಪರಿಷತ್ ಚುನಾವಣೆಯ ಕಾಲದಲ್ಲಿ ಕಾಂಗ್ರೆಸ್ ಸೇರಿದ್ದರು. ಆದರೆ ಚುನಾವಣೆಯಲ್ಲಿ ಸೋತರು. ಆದ್ದರಿಂದ ಅವರನ್ನು ಅನಂತರ ಮೇಲ್ಮನೆಗೆ ಕಳುಹಿಸಿತು.ಬಿಜೆಪಿಯಲ್ಲಿ ಶಾಸಕ, ಮಂತ್ರಿ,