Home Archive by category ರಾಷ್ಟ್ರೀಯ (Page 10)

ಇಂಡಿಯಾದ ಹೆಸರು ಕೆಡಿಸುವ ಫೇಕ್ ನ್ಯೂಸ್

ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿ ಕೂಟದವರು ಗುಂಪು ಫೋಟೋ ತೆಗೆಸಿಕೊಳ್ಳುವಾಗ ಮುಸ್ಲಿಮರ ಆಜಾನ್ ಹಾಕಿದ್ದರು, ಎಚ್ಚರ ಎಂಬ ಪೋಸ್ಟ್ ಒಂದು ಜಾಲ ತಾಣಗಳಲ್ಲಿ ಹರಿದಾಡುತ್ತಿದೆ. ಅದು ಸುಳ್ಳು ಸುದ್ದಿ ಎಂದು ಕ್ವಿಂಟ್ ಫ್ಯಾಕ್ಟ್ ಚೆಕ್ ಹೇಳಿದೆ. ಇಲ್ಲಿ ಈ ಪೋಸ್ಟ್‌ಗೆ ಬಳಸಿದ ವೀಡಿಯೋ ಆಗಸ್ಟ್ 31, ಸೆಪ್ಟೆಂಬರ್ 1ರಂದು ಮುಂಬಯಿಯಲ್ಲಿ ನಡೆದ ಇಂಡಿಯಾ ಮೈತ್ರಿ ಕೂಟದ

ಬೆಂಗಳೂರಿನಬಟ್ಟೆ ವ್ಯಾಪಾರಿ ಈಗ ರಾಜಸ್ತಾನದ ಶಾಸಕ

ಬೆಂಗಳೂರಿನ ಚಿಕ್ಕಪೇಟೆಯ ಬಟ್ಟೆ ವ್ಯಾಪಾರಿ ಹಾಗೂ ಜೂಗನಹಳ್ಳಿಯ ಬಂಗಲೆ ವಾಸಿ ಲಾಡುಲಾಲ್ ಪಿಟ್ಲಿಯಾ ಅವರು ಈಗ ರಾಜಸ್ತಾನದ ಸಹಾರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ.ಕಳೆದ ಬಾರಿ ಪಕ್ಷೇತರರಾಗಿ ಸ್ಪರ್ಧಿಸಿ 31 ಲಕ್ಷ ಮತ ಪಡೆದಿದ್ದರು. ಈ ಬಾರಿ ಬಿಜೆಪಿ ಟಿಕೆಟ್ ಪಡೆದು 1.17 ಲಕ್ಷ ಮತ ಪಡೆದು ಗೆದ್ದಿದ್ದಾರೆ. ಸೋತ ಕಾಂಗ್ರೆಸ್ ಅಭ್ಯರ್ಥಿ 55 ಸಾವಿರ ಮಾತ್ರ ಪಡೆದಿದ್ದಾರೆ.ಬೆಂಗಳೂರಿನ ಲಾಡುಲಾಲರ ವ್ಯವಹಾರವನ್ನು ಈಗ ಮಕ್ಕಳು ನೋಡಿಕೊಳ್ಳುತ್ತಿದ್ದಾರೆ.

ಮಿಜೋರಾಂನಲ್ಲಿ ಮುಖ್ಯಮಂತ್ರಿಗಳಿಗೆ ಸೋಲು, ಜೆಡ್‌ಪಿಎಂ ಅಧಿಕಾರಕ್ಕೆ

ಮುಖ್ಯಮಂತ್ರಿ ಜೋರಮ್ ತಂಗ, ಉಪ ಮುಖ್ಯಮಂತ್ರಿ ಸಹಿತ ಹಲವು ಮಂತ್ರಿಗಳ ಸೋಲಿನೊಂದಿಗೆ ಮಿಜೋರಾಂ ನ್ಯಾಶನಲ್ ಫ್ರಂಟ್ ಅಧಿಕಾರ ಕಳೆದುಕೊಂಡಿದೆ. ಬಿಜೆಪಿ ಸಹ ಈ ಸರಕಾರದ ಭಾಗವಾಗಿತ್ತು. ಜೆಡ್‌ಪಿಎಂ ಮೈತ್ರಿ ಕೂಟವು 40 ಸದಸ್ಯ ಬಲದ ಮಿಜೋರಾಂನಲ್ಲಿ 27 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೆ ಬಂದಿದೆ. ಎಂಎನ್ಎಫ್ ಬರೇ 10 ಕಡೆ ಗೆದ್ದಿದೆ. ಬಿಜೆಪಿ 2, ಕಾಂಗ್ರೆಸ್ 1 ಸ್ಥಾನ ಪಡೆದಿವೆ.

ನೌಕಾಪಡೆಯ ಹೊಸ ಉಪ ಮುಖ್ಯಸ್ಥರ ನೇಮಕ

ವೈಸ್ ಎಡ್ಮಿರಲ್ ದಿನೇಶ್ ಕೆ ತ್ರಿಪಾಠಿಯವರನ್ನು ಭಾರತೀಯ ನೌಕಾ ಪಡೆಯ ಹೊಸ ಉಪ ಮುಖ್ಯಸ್ಥರನ್ನಾಗಿ ನೇಮಿಸಲು ಭಾರತೀಯ ಸರಕಾರವು ಒಪ್ಪಿಗೆ ಮುದ್ರೆ ಒತ್ತಿತು. ಇದೇ ವೇಳೆ ಹಲವು ಉನ್ನತ ನೇಮಕಾತಿಗಳಿಗೂ ಸರಕಾರದ ಒಪ್ಪಿಗೆ ಬಿತ್ತು. ಸದ್ಯ ನೌಕಾಪಡೆಯ ಪಶ್ಚಿಮ ಕಮಾಂಡಿನಲ್ಲಿ ಬಾವುಟ ಕಮಾಂಡಿಂಗ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವೈಸ್ ಎಡ್ಮಿರಲ್ ಸೂ ಸಿಂಗ್ ಅವರು ತ್ರಿಪಾಠಿಯವರ ಜಾಗಕ್ಕೆ ಬಡ್ತಿ ಪಡೆಯುತ್ತಿದ್ದಾರೆ. ಹಲವು ಬಡ್ತಿ ನಡೆದಿದ್ದು ಇವರೆಲ್ಲರೂ

ಬಿಜೆಪಿಗೆ ನಾಲ್ಕರಲ್ಲಿ ಮೂರು ಎರಡು ಲಾಭ, ಹೇಗೆ? ಭಾರತ, ಇಂಡಿಯಾಕ್ಕೆ ಸೋಲು, ಎಲ್ಲಿ?

ನಾಲ್ಕು ರಾಜ್ಯಗಳ‌ ಚುನಾವಣೆಯ ಫಲಿತಾಂಶ ಬಿಜೆಪಿಗೆ ಲಾಭ ನೀಡಿದೆ. ಕಾಂಗ್ರೆಸ್ ಬಲ ನಿಂತ ನೀರಾಗಿದೆ. ಭಾರತ, ಇಂಡಿಯಾಗಳು ಸೋತು ಹೋಗಿವೆ. ಬಿಜೆಪಿಯಯ 142 ಹೆಚ್ಚು ಶಾಸಕರನ್ನು ಗೆದ್ದಿದೆ. ನಾಲ್ಕು ರಾಜ್ಯಗಳಲ್ಲೂ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸ್ಥಾನ ಪಡೆದಿದೆ. ಕಾಂಗ್ರೆಸ್ ಮತ ಭಾರ ಭಾರೀ ಇಳಿಯದಿದ್ದರೂ ಒಟ್ಟು 66 ಶಾಸಕರನ್ನು ಕಳೆದುಕೊಂಡಿದೆ. ತೆಲಂಗಾಣದಲ್ಲಿ ಮಾತ್ರ ಅದು ತನ್ನ ಶಾಸಕ ಸಂಖ್ಯೆ ಹೆಚ್ಚಿಸಿಕೊಂಡು ಮೂರು ರಾಜ್ಯಗಳ ಕೊರತೆಯನ್ನು ಸ್ವಲ್ಪ ಭರ್ತಿ

ಸುಳ್ಳು ಸುದ್ದಿ ಹರಡುವ 9 ಯೂಟ್ಯೂಬ್ ಚಾನೆಲ್‌ಗಳ ಪಟ್ಟಿ ಬಿಡುಗಡೆ

ಸುಳ್ಳು ಸುದ್ದಿ ಹರಡಿ ಲಕ್ಷಾಂತರ ಸಬ್‌ಸ್ಕ್ರೈಬರ್‌ಗಳನ್ನು ಹೊಂದಿದ್ದ ಒಂಬತ್ತು ಫೇಕ್ ನ್ಯೂಸ್ ಚಾನೆಲ್‌ಗಳ ಪಟ್ಟಿ ಬಿಡುಗಡೆ ಆಗಿದೆ.ಸರ್ಕಾರಿ ಯೋಜನಾ ಅಫೀಶಿಯಲ್, ಸನ್ನಾನಿ‌ ಲೈವ್, ಬಜರಂಗ್ ಎಜುಕೇಶನ್, ಆಫ್ ಕ ಗುರೂಜಿ, ಬಿಜೆ ನ್ಯೂಸ್, ಅಬ್ ಬೋಲೇಗಾ ಭಾರತ್, ಜಿವಿಟಿ ನ್ಯೂಸ್, ಡೈಲಿ ಸ್ಟಡಿ, ಭಾರತ್ ಏಕ್ತಾ ನ್ಯೂಸ್ ಇವೇ ಆ ಸುಳ್ಳು ಸುದ್ದಿ ಶೂರ ಯೂಟ್ಯೂಬ್ ಚಾನೆಲ್‌ಗಳು.ಇವುಗಳಲ್ಲಿ ಆಫ್ ಕ ಗುರೂಜಿ 34 ಲಕ್ಷ ಮತ್ತು ಬಜರಂಗ್ ಎಜುಕೇಶನ್ 25 ಲಕ್ಷ

ಮಹಾಮಾರಿ ಏಡ್ಸ್

ಏನಿದು ಏಡ್ಸ್ ?ಏಡ್ಸ್ ಎನ್ನುವುದು ಎಚ್.ಐ.ವಿ ಎಂಬ ವೈರಾಣುವಿನ ಸೋಂಕಿನಿಂದ ಉಂಟಾಗುವ ರೋಗ ಲಕ್ಷಣಗಳ ಗುಚ್ಚವಾಗಿರುತ್ತದೆ. ಎಚ್.ಐ.ವಿ ಎಂದರೆ ಹ್ಯೂಮನ್ ಇಮ್ಯೂನೋ ಡೆಫಿಷಿಯನ್‍ಸ್ಸಿ ವೈರಸ್ ಆಗಿರುತ್ತದೆ. ಈ ಎಚ್.ಐ.ವಿ ವೈರಾಣುವಿನಿಂದ ಸೋಂಕು ಹೊಂದಿದ ವ್ಯಕ್ತಿಗಳೆಲ್ಲಾ ಏಡ್ಸ್ ರೋಗದಿಂದ ಬಳಲಬೇಕೇಂದಿಲ್ಲ. ಆದರೆ ಏಡ್ಸ್ ಇರುವವರೆಲ್ಲಾ ಎಚ್.ಐ.ವಿ ವೈರಾಣುವಿನಿಂದ ಸೋಂಕಿತರಾಗಿರುತ್ತಾರೆ. ಏಡ್ಸ್ ಎನ್ನುವುದು ತಮ್ಮ ದೇಹದ ರೋಗ ನೀರೋಧಕ ಶಕ್ತಿಗೆ ಸಂಬಂಧಪಟ್ಟ

ಮನುಕುಲವನ್ನು ಬೆಚ್ಚಿ ಬೀಳಿಸಿದ ಮಹಾಮಾರಿ ಏಡ್ಸ್

ಪ್ರತಿ ವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನ ಆಚರಿಸಲಾಗುತ್ತದೆ. ಎಚ್.ಐ.ವಿ ಎಂಬ ವೈರಸ್‍ನಿಂದ ಉಂಟಾಗುವ ಈ ರೋಗದ ಬಗ್ಗೆ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ 1988ರಿಂದ ಈ ಆಚರಣೆಯನ್ನು ಜಾರಿಗೆ ತರಲಾಯಿತು,ಮಾರಣಾಂತಿಕ ಖಾಯಿಲೆಗಳ ಪಟ್ಟಿಯಲ್ಲಿ ಮೊದಲ ಹತ್ತು ಸ್ಥಾನದ ಒಳಗೆ ಬರುವ ಏಡ್ಸ್‍ರೋಗ ಮನುಕುಲದ ಬಹುದೊಡ್ಡ ಶತ್ರು. 2013ರ ಅಂಕಿಅಂಶಗಳ ಪ್ರಕಾರ ಸುಮಾರು 36 ಮಿಲಿಯನ್ ಮಂದಿ (1981-2012ರ ವರೆಗೆ) ಸಾವನ್ನಪ್ಪಿದ್ದಾರೆ

ಚಿನ್ನದ ನವಿಲು ಗೆದ್ದ ಎಂಡ್‌ಲೆಸ್ ಬಾರ್ಡರ್ಸ್‌, ಡ್ರಿಫ್ಟ್‌ಗೆ ಯುನೆಸ್ಕೋ ಗಾಂಧಿ ಪ್ರಶಸ್ತಿ, ರಿಷಬ್ ಶೆಟ್ಟಿಗೆ ತೀರ್ಪುಗಾರರ ಪ್ರಶಸ್ತಿ

ಗೋವಾದ ಪಣಜಿಯ ಐನಾಕ್ಸ್‌ನಲ್ಲಿ ನಡೆದ ಎಂಟು ದಿನದ 54ನೇ ಚಲನಚಿತ್ರೋತ್ಸವ ಮುಗಿದಿದ್ದು, ಪರ್ಶಿಯಾದ ಅಬ್ಬಾಸ್ ಅಮಿನಿ ಅವರ ಎಂಡ್‌ಲೆಸ್ ಬಾರ್ಡರ್ಸ್ ಚಿತ್ರವು ಬಂಗಾರದ ನವಿಲು ಶ್ರೇಷ್ಠ ಚಿತ್ರ ಪ್ರಶಸ್ತಿಯನ್ನು ಗಳಿಸಿತು. ಆಂಟನಿ ಚೆನ್ ಅವರ ಡ್ರಿಫ್ಟ್ ಚಲನಚಿತ್ರವು ಯುನೆಸ್ಕೋ ಗಾಂಧಿ ಪ್ರಶಸ್ತಿಯನ್ನು ಪಡೆಯಿತು. ಕಾಂತಾರಕ್ಕಾಗಿ ರಿಷಬ್ ಶೆಟ್ಟಿ ತೀರ್ಪುಗಾರರ ವಿಶೇಷ ಪ್ರಶಸ್ತಿ ಪಡೆದರು

ಜಮ್ಮು-ಕಾಶ್ಮೀರ: ಕಲಕೋಟ್ ಅರಣ್ಯದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ: ಇಬ್ಬರು ಯೋಧರು ಹುತಾತ್ಮ

ಜಮ್ಮು-ಕಾಶ್ಮೀರದ ರಾಜೋರಿಯಲ್ಲಿ ಉಗ್ರರೊಂದಿಗಿನ ಗುಂಡಿನ ಚಕಮಕಿ ಹೋರಾಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ರಾಜೌರಿ ಜಿಲ್ಲೆಯ ಕಲಕೋಟ್ ಅರಣ್ಯದಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಹುತಾತ್ಮರಾದವರ ಇಬ್ಬರು ಸೇನಾಧಿಕಾರಿಗಳ ಪೈಕಿ ಒಬ್ಬರು ಕರ್ನಾಟಕದ ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್(29) ಎಂಬುದು ದೃಢಪಟ್ಟಿದೆ. ಕ್ಯಾಪ್ಟನ್ ಪ್ರಾಂಜಲ್ ಮಂಗಳೂರಿನ ಎಂ.ಆರ್.ಪಿ.ಎಲ್ ತೈಲ ಕಂಪನಿಯಲ್ಲಿ ಹಲವು ವರ್ಷಗಳ ಕಾಲ ವ್ಯವಸ್ಥಾಪಕ ನಿರ್ದೇಶಕರಾಗಿ