Home Archive by category ರಾಷ್ಟ್ರೀಯ (Page 14)

ಕಾಠ್ಮಂಡು: 72 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ

ನೇಪಾಳದ ಕಾಠ್ಮಂಡುವಿನಿಂದ ಹೊರಟ ವಿಮಾನವೊಂದು ಪೋಖರಾ ವಿಮಾನ ನಿಲ್ದಾಣದಲ್ಲಿ ಹೊತ್ತಿ ಉರಿದಿದ್ದು, ವಿಮಾನದಲ್ಲಿದ್ದ 45ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಯೇತಿ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನವು ಪೋಖರಾ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗುವ ವೇಳೆ ಪತನವಾಗಿದೆ. ಇದುವರೆಗೆ 45 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ವಿಮಾನದಲ್ಲಿ 68 ಪ್ರಯಾಣಿಕರು

ಆಪ್ ರಾಜ್ಯ, ಜಿಲ್ಲಾ ಸಮಿತಿ ಬರ್ಕಾಸ್ತು

ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಘಟಕದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ ಯವರು, ಕರ್ನಾಟಕ ರಾಜ್ಯ, ಜಿಲ್ಲೆಗಳಲ್ಲಿನ ಎಲ್ಲಾ ಪದಾಧಿಕಾರಿಗಳು, ಘಟಕಗಳನ್ನು ಅನ್ವಯಿಸುವಂತೆ ವಿಸರ್ಜಿಸಿರುತ್ತಾರೆ. ಎಲ್ಲಾ ವಿಧಾನಸಭಾ ಅಭ್ಯರ್ಥಿ ಆಕಾಂಕ್ಷಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಪೂರ್ಣಪ್ರಮಾಣದಲ್ಲಿ ಸಕ್ರಿಯವಾಗಿ ಪಕ್ಷದ ನಾಯಕರು, ಕಾರ್ಯಕರ್ತರ ಸಮನ್ಚಯದಲ್ಲಿ ಪಕ್ಷದ ಪ್ರಚಾರ ಅಭಿಯಾನದಲ್ಲಿ ಭಾಗವಹಿಸುತ್ತಾ, ಶೀಘ್ರದಲ್ಲೇ ಹೊಸದಾಗಿ, ರಾಜ್ಯ ಚುನಾವಣಾ ಉಸ್ತುವಾರಿ

ಮಾಜಿ ಕೇಂದ್ರ ಸಚಿವ, RJD ಹಿರಿಯ ನಾಯಕ ಶರದ್ ಯಾದವ್ ನಿಧನ

ಹೊಸದಿಲ್ಲಿ: ಮಾಜಿ ಕೇಂದ್ರ ಸಚಿವ ಮತ್ತು RJD ಪಕ್ಷದ ಹಿರಿಯ ನಾಯಕ ಶರದ್ ಯಾದವ್ ಅವರು ಗುರುವಾರ ನಿಧನರಾಗಿದ್ದಾರೆ.ಅವರಿಗೆ 75 ವರ್ಷ ವಯಸ್ಸಾಗಿತ್ತು. ಶರದ್ ಯಾದವ್ ಅವರ ನಿಧನದ ಸುದ್ದಿಯನ್ನು ಪುತ್ರಿ ಸುಭಾಷಿಣಿ ಶರದ್ ಯಾದವ್ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶರದ್ ಯಾದವ್ ಅವರನ್ನು ಗುರುಗ್ರಾಮ್ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಕೊನೆಯುಸಿರೆಳೆದಿದ್ದಾರೆ.

ಶಿರಾಡಿ ಘಾಟ್‌ ಸುರಂಗ ಮಾರ್ಗಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ

ಶಿರಾಡಿ ಘಾಟ್‌ನಲ್ಲಿ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಂಸದ ನಳೀನ್‌ ಕುಮಾರ್ ಕಟೀಲ್‌ ಟ್ವಿಟ್ ಮಾಡಿದ್ದು ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರನಹಳ್ಳಿ-ಅಡ್ಡಹೊಳೆ(ಶಿರಾಡಿ ಘಾಟ್) ಭಾಗದ ಚತುಷ್ಪತ ರಸ್ತೆ ಕಾಮಗಾರಿಗೆ 1976 ಕೋಟಿ ರೂ.ಮೊತ್ತದ ಬಿಡ್ ಆಹ್ವಾನಿಸಿದೆ. ಶಿರಾಡಿ ಘಾಟ್‌ನಲ್ಲಿ 15,000 ಕೋಟಿ ಮೊತ್ತದ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಆದೇಶಿಸಿದೆ ಅಂತ

2016ರ ನೋಟು ರದ್ಧತಿ ಮಾನ್ಯವಾಗಿದೆ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಕೈಗೊಂಡ ನೋಟು ರದ್ಧತಿ ಕ್ರಮವು ಮಾನ್ಯವಾದುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಇಂದು ಪ್ರಕಟಗೊಂಡ ಭಿನ್ನಮತದ ತೀರ್ಪಿನಲ್ಲಿ ಕೇಂದ್ರ ಸರ್ಕಾರವು ಅದನ್ನು ಆರಂಭಿಸಿದ ಮಾತ್ರಕ್ಕೆ ನಿರ್ಧಾರವನ್ನು ತಪ್ಪೆನ್ನಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ. ನೋಟು ಅಮಾನ್ಯೀಕರಣವನ್ನು ತಳ್ಳಿಹಾಕಲು ಸಾಧ್ಯವಿಲ್ಲ, ನೋಟುಗಳ ವಿನಿಮಯಕ್ಕೆ ನೀಡಿದ 52 ದಿನಗಳ ಅವಧಿಯು ಅಸಮಂಜಸವಲ್ಲ ಎನ್ನಲಾಗದು ಎಂದು ಸುಪ್ರೀಂ ಹೇಳಿದೆ. ಭಾರತೀಯ

ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಕಾರು ಅಪಘಾತ

ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿದೆ. ರೂರ್ಕಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ಮರ್ಸಿಡಿಸ್ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಷಬ್ ಅವರ ಹಣೆ, ಕಣ್ಣು , ಬೆನ್ನಿಗೆ ಮತ್ತು ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ವರದಿಯಾಗಿದೆ.ಸದ್ಯ ಇವರನ್ನು ಚಿಕಿತ್ಸೆಗಾಗಿ ದೆಹಲಿಯ ಸೆಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದ ಪೊಲೀಸ್ ವರಿಷ್ಠಾಧಿಕಾರಿ ದೇಹತ್

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ನಿಧನ

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ಬೆಳಗಿನ ಜಾವ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟರು.

ಪ್ರಧಾನಿ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರಾಗಿದೆ. ಗುಜರಾತ್‌ನ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿ ಆರೋಗ್ಯ ವಿಚಾರಿಸಲು ಸಂಜೆ ತೆರಳಲಿದ್ದಾರೆ. ಈ ವರ್ಷದ ಜೂನ್‌ನಲ್ಲಿ 99 ನೇ ವರ್ಷಕ್ಕೆ ಕಾಲಿಟ್ಟ ಹೀರಾಬೆನ್ ಮೋದಿ ಅವರ ಆರೋಗ್ಯ ಕಳೆದ ರಾತ್ರಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಧಾನಿ ತಾಯಿ ಅವರ ಆರೋಗ್ಯ ಸ್ಥಿತಿ

ಮಧ್ಯಪ್ರದೇಶದ ಆಶಾ ಮಾಲ್ವಿಯ ಯುವತಿಯಿಂದ 4000 ಕಿಲೋಮೀಟರ್ ಸೈಕಲ್ ರ್‍ಯಾಲಿ

ಮಧ್ಯಪ್ರದೇಶದ ಆಶಾ ಮಾಲ್ವಿಯ ಎಂಬ ಯುವತಿ ಸೈಕಲ್‍ನಲ್ಲಿ ದೇಶದ 28 ರಾಜ್ಯಗಳನ್ನು 20 ಸಾವಿರ ಪ್ರಯಾಣ ಮಾಡಲು ಉದ್ದೇಶಿಸಿದ್ದು, ಯುವಕ, ಯುವತಿಯರಿಗೆ ಹಾಗೂ ಮಹಿಳೆಯರಿಗೆ ಭಾರತದಲ್ಲಿಯೂ ಹೆಣ್ಣುಮಕ್ಕಳು ಸುರಕ್ಷಿತವಾಗಿದ್ದಾರೆ ಎಂದೂ ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಸೈಕಲ್ ರ್‍ಯಾಲಿ ಯನ್ನು ಹಮ್ಮಿಕೊಂಡಿದ್ದಾರೆ. ಈಗಾಗಲೇ ಸುಮಾರು 4000 ಕಿಲೋಮೀಟರ್ ಪ್ರಯಾಣ ಮಾಡಿ ಮಂಗಳೂರಿಗೆ ಆಗಮಿಸಿದ್ದು. ಅವರನ್ನು ಮಾಜಿ ಶಾಸಕರು ಹಾಗೂ ಕೆಪಿಸಿಸಿಯ ಉಪಾಧ್ಯಕ್ಷರಾದ

ಹಾಡು ಹಗಲೆ ಶಾಲಾ ಬಾಲಕಿಯ ಮೇಲೆ ಆ್ಯಸಿಡ್ ದಾಳಿ

ನವದೆಹಲಿ: ಬೈಕ್ ನಲ್ಲಿ ಬಂದ ಇಬ್ಬರು ಯುವಕರು 17 ವರ್ಷದ ಬಾಲಕಿಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾದ ಆತಂಕಕಾರಿ ಘಟನೆ ನೈಋತ್ಯ ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದಿದೆ. ಆ್ಯಸಿಡ್ ದಾಳಿಯ ಪರಿಣಾಮ ಬಾಲಕಿಯ ಮುಖ ಹಾಗೂ ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ ಎಂದು ಬಾಲಕಿಯ ತಂದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ರಸ್ತೆ ಬದಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುತ್ತಿದ್ದು, ಈ