Home Archive by category ರಾಷ್ಟ್ರೀಯ (Page 2)

ಮಾಜಿ ಕೇಂದ್ರ ಸಚಿವ, RJD ಹಿರಿಯ ನಾಯಕ ಶರದ್ ಯಾದವ್ ನಿಧನ

ಹೊಸದಿಲ್ಲಿ: ಮಾಜಿ ಕೇಂದ್ರ ಸಚಿವ ಮತ್ತು RJD ಪಕ್ಷದ ಹಿರಿಯ ನಾಯಕ ಶರದ್ ಯಾದವ್ ಅವರು ಗುರುವಾರ ನಿಧನರಾಗಿದ್ದಾರೆ.ಅವರಿಗೆ 75 ವರ್ಷ ವಯಸ್ಸಾಗಿತ್ತು. ಶರದ್ ಯಾದವ್ ಅವರ ನಿಧನದ ಸುದ್ದಿಯನ್ನು ಪುತ್ರಿ ಸುಭಾಷಿಣಿ ಶರದ್ ಯಾದವ್ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶರದ್ ಯಾದವ್ ಅವರನ್ನು ಗುರುಗ್ರಾಮ್ನ ಫೋರ್ಟಿಸ್ ಆಸ್ಪತ್ರೆಗೆ

ಶಿರಾಡಿ ಘಾಟ್‌ ಸುರಂಗ ಮಾರ್ಗಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ

ಶಿರಾಡಿ ಘಾಟ್‌ನಲ್ಲಿ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಂಸದ ನಳೀನ್‌ ಕುಮಾರ್ ಕಟೀಲ್‌ ಟ್ವಿಟ್ ಮಾಡಿದ್ದು ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರನಹಳ್ಳಿ-ಅಡ್ಡಹೊಳೆ(ಶಿರಾಡಿ ಘಾಟ್) ಭಾಗದ ಚತುಷ್ಪತ ರಸ್ತೆ ಕಾಮಗಾರಿಗೆ 1976 ಕೋಟಿ ರೂ.ಮೊತ್ತದ ಬಿಡ್ ಆಹ್ವಾನಿಸಿದೆ. ಶಿರಾಡಿ ಘಾಟ್‌ನಲ್ಲಿ 15,000 ಕೋಟಿ ಮೊತ್ತದ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಆದೇಶಿಸಿದೆ ಅಂತ

2016ರ ನೋಟು ರದ್ಧತಿ ಮಾನ್ಯವಾಗಿದೆ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಕೈಗೊಂಡ ನೋಟು ರದ್ಧತಿ ಕ್ರಮವು ಮಾನ್ಯವಾದುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಇಂದು ಪ್ರಕಟಗೊಂಡ ಭಿನ್ನಮತದ ತೀರ್ಪಿನಲ್ಲಿ ಕೇಂದ್ರ ಸರ್ಕಾರವು ಅದನ್ನು ಆರಂಭಿಸಿದ ಮಾತ್ರಕ್ಕೆ ನಿರ್ಧಾರವನ್ನು ತಪ್ಪೆನ್ನಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ. ನೋಟು ಅಮಾನ್ಯೀಕರಣವನ್ನು ತಳ್ಳಿಹಾಕಲು ಸಾಧ್ಯವಿಲ್ಲ, ನೋಟುಗಳ ವಿನಿಮಯಕ್ಕೆ ನೀಡಿದ 52 ದಿನಗಳ ಅವಧಿಯು ಅಸಮಂಜಸವಲ್ಲ ಎನ್ನಲಾಗದು ಎಂದು ಸುಪ್ರೀಂ ಹೇಳಿದೆ. ಭಾರತೀಯ

ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಕಾರು ಅಪಘಾತ

ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿದೆ. ರೂರ್ಕಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ಮರ್ಸಿಡಿಸ್ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಷಬ್ ಅವರ ಹಣೆ, ಕಣ್ಣು , ಬೆನ್ನಿಗೆ ಮತ್ತು ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ವರದಿಯಾಗಿದೆ.ಸದ್ಯ ಇವರನ್ನು ಚಿಕಿತ್ಸೆಗಾಗಿ ದೆಹಲಿಯ ಸೆಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದ ಪೊಲೀಸ್ ವರಿಷ್ಠಾಧಿಕಾರಿ ದೇಹತ್

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ನಿಧನ

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ಬೆಳಗಿನ ಜಾವ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟರು.

ಪ್ರಧಾನಿ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರಾಗಿದೆ. ಗುಜರಾತ್‌ನ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿ ಆರೋಗ್ಯ ವಿಚಾರಿಸಲು ಸಂಜೆ ತೆರಳಲಿದ್ದಾರೆ. ಈ ವರ್ಷದ ಜೂನ್‌ನಲ್ಲಿ 99 ನೇ ವರ್ಷಕ್ಕೆ ಕಾಲಿಟ್ಟ ಹೀರಾಬೆನ್ ಮೋದಿ ಅವರ ಆರೋಗ್ಯ ಕಳೆದ ರಾತ್ರಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಧಾನಿ ತಾಯಿ ಅವರ ಆರೋಗ್ಯ ಸ್ಥಿತಿ

ಮಧ್ಯಪ್ರದೇಶದ ಆಶಾ ಮಾಲ್ವಿಯ ಯುವತಿಯಿಂದ 4000 ಕಿಲೋಮೀಟರ್ ಸೈಕಲ್ ರ್‍ಯಾಲಿ

ಮಧ್ಯಪ್ರದೇಶದ ಆಶಾ ಮಾಲ್ವಿಯ ಎಂಬ ಯುವತಿ ಸೈಕಲ್‍ನಲ್ಲಿ ದೇಶದ 28 ರಾಜ್ಯಗಳನ್ನು 20 ಸಾವಿರ ಪ್ರಯಾಣ ಮಾಡಲು ಉದ್ದೇಶಿಸಿದ್ದು, ಯುವಕ, ಯುವತಿಯರಿಗೆ ಹಾಗೂ ಮಹಿಳೆಯರಿಗೆ ಭಾರತದಲ್ಲಿಯೂ ಹೆಣ್ಣುಮಕ್ಕಳು ಸುರಕ್ಷಿತವಾಗಿದ್ದಾರೆ ಎಂದೂ ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಸೈಕಲ್ ರ್‍ಯಾಲಿ ಯನ್ನು ಹಮ್ಮಿಕೊಂಡಿದ್ದಾರೆ. ಈಗಾಗಲೇ ಸುಮಾರು 4000 ಕಿಲೋಮೀಟರ್ ಪ್ರಯಾಣ ಮಾಡಿ ಮಂಗಳೂರಿಗೆ ಆಗಮಿಸಿದ್ದು. ಅವರನ್ನು ಮಾಜಿ ಶಾಸಕರು ಹಾಗೂ ಕೆಪಿಸಿಸಿಯ ಉಪಾಧ್ಯಕ್ಷರಾದ

ಹಾಡು ಹಗಲೆ ಶಾಲಾ ಬಾಲಕಿಯ ಮೇಲೆ ಆ್ಯಸಿಡ್ ದಾಳಿ

ನವದೆಹಲಿ: ಬೈಕ್ ನಲ್ಲಿ ಬಂದ ಇಬ್ಬರು ಯುವಕರು 17 ವರ್ಷದ ಬಾಲಕಿಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾದ ಆತಂಕಕಾರಿ ಘಟನೆ ನೈಋತ್ಯ ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದಿದೆ. ಆ್ಯಸಿಡ್ ದಾಳಿಯ ಪರಿಣಾಮ ಬಾಲಕಿಯ ಮುಖ ಹಾಗೂ ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ ಎಂದು ಬಾಲಕಿಯ ತಂದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ರಸ್ತೆ ಬದಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುತ್ತಿದ್ದು, ಈ

ನಾಳೆ ಮಧ್ಯರಾತ್ರಿ ಉಲ್ಕಾಪಾತ; ಬರಿಗಣ್ಣಿನಲ್ಲಿಯೇ ನೋಡಬಹುದು ಎಂದ ತಜ್ಞರು

ದೇಶದ ಜನರು ಡಿ. 13ರ ಮಧ್ಯರಾತ್ರಿ ಮತ್ತು ಡಿ. 14ರ ಮುಂಜಾನೆ ಆಕಾಶದಲ್ಲಿ ಸ್ಪಷ್ಟವಾಗಿ ಉಲ್ಕಾಪಾತ ನೋಡುಬಹುದಾಗಿದೆ. ಡಿ. 13ರ ಮಧ್ಯರಾತ್ರಿ 2 ಗಂಟೆಯಿಂದ 3 ಗಂಟೆ ಸಮಯಕ್ಕೆ ಉಲ್ಕಾಪಾತ ತನ್ನ ಉತ್ತುಂಗಕ್ಕೆ ತಲುಪಲಿದೆ. ಇದನ್ನು ನೋಡಲು ದೂರದರ್ಶಕದ ಆವಶ್ಯಕತೆ ಇಲ್ಲ. ಬರಿ ಕಣ್ಣಿನಿಂದ ಇದನ್ನು ವೀಕ್ಷಿಸಬಹುದಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಈ ವರ್ಷ ಡಿ. 13ರ ಮಧ್ಯರಾತ್ರಿ 100 ಕ್ಕೂ ಹೆಚ್ಚು ಉಲ್ಕಾಪಾತಗಳು ಭೂಮಿಯ ಸಮೀಪ ಬರಲಿವೆ. ಮೋಡವಿಲ್ಲದೆ, ವಾತಾವರಣ

ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದ : ಡಿ.14 ಎರಡು ರಾಜ್ಯದ ಮುಖ್ಯಮಂತ್ರಿ ಗಳ ಬೇಟಿಯಾಗಲಿರುವ ಗೃಹ ಸಚಿವ ಅಮಿತ್ ಶಾ

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವನ್ನು ಶಮನಗೊಳಿಸಲು ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 14 ರಂದು ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ ಎಂದು ಎನ್‍ಸಿಪಿ ನಾಯಕ ಅಮೋಲ್ ಕೋಲ್ಹೆ ಶುಕ್ರವಾರ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸಂಸದರ ನಿಯೋಗದೊಂದಿಗೆ ಶಾ ಅವರನ್ನು ಭೇಟಿ ಮಾಡಿದ ನಂತರ ಶಿರೂರಿನ ಲೋಕಸಭಾ ಸದಸ್ಯ ಕೋಲ್ಹೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮಹಾರಾಷ್ಟ್ರ