Home Archive by category ರಾಷ್ಟ್ರೀಯ (Page 9)

ದಶಕದಲ್ಲಿ ದಲಿತರ ವಿರುದ್ಧ ದೌರ್ಜನ್ಯ 48%ದಷ್ಟು ಹೆಚ್ಚಳ

ಕಳೆದೊಂದು ದಶಕದಲ್ಲಿ ದಲಿತರ ಮೇಲಿನ ಅಪರಾಧಗಳು ಭಾರತದಲ್ಲಿ 48 ಶೇಕಡಾದಷ್ಟು ಹೆಚ್ಚಾಗಿರುವುದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಗ್ರಾಫ್ ಪೋಸ್ಟ್ ಮಾಡುವ ಮೂಲಕ ಬಿಜೆಪಿಯ ಸಬ್ ಕ ಸಾಥ್ ಹೇಳಿಕೆಯನ್ನು ಲೇವಡಿ ಮಾಡಿದ್ದಾರೆ.ಎನ್‍ಸಿಆರ್‍ಬಿ- ರಾಷ್ಟ್ರೀಯ ಅಪರಾಧ ವರದಿಯ ಆಧಾರದ ಮೇಲೆ ಈ ಗ್ರಾಫ್ ತಯಾರಾಗಿದೆ. ದಲಿತರ ಮೇಲೆ 46.12%

ಮಾಸ್ಟರ್ ಚೆಫ್ ಇಂಡಿಯಾ-2023 ವಿಜೇತರಾಗಿ ಮಂಗಳೂರಿನ ಮೊಹಮ್ಮದ್ ಆಶಿಕ್

ಮಂಗಳೂರಿನ ಮೊಹಮ್ಮದ್ ಆಶಿಕ್ ಮಾಸ್ಟರ್ ಚೆಫ್ ಇಂಡಿಯಾ-2023 ವಿಜೇತರಾಗಿ ಹೊರಹೊಮ್ಮಿದರು. ನಂಬಿ ಜೆಸ್ಸಿಕಾ ಮರಕ್ ಮತ್ತು ರುಖ್ಸಾರ್ ಸಯೀದ್, ಸೂರಜ್ ಅವರೊಂದಿಗೆ ಕ್ರಮವಾಗಿ ಮೊದಲ ಮತ್ತು ಎರಡನೇ ರನ್ನರ್ ಅಪ್ ಸ್ಥಾನಗಳನ್ನು ಪಡೆದರು. ಮೊಹಮ್ಮದ್ ಆಶಿಕ್ ಇದಿಗ ಮಂಗಳೂರಿನಲ್ಲಿ ಚಿರಪರಿಚಿತ ಹೆಸರು ಮಂಗಳೂರಿನ ಕುಲುಕಿ ಹಬ್ ಎನ್ನುವ ಸಣ್ಣ ಜ್ಯೂಸ್ ಮಳಿಗೆಯಿಂದ ಸಾಗಿ ಇಂದು ಭಾರತದ ದೊಡ್ಡ ರಿಯಾಲಿಟಿ ಶೋ ಸೋನಿ ಟಿವಿಯ ಮಾಸ್ಟರ್ ಚೆಫ್ ಇಂಡಿಯಾದಲ್ಲಿ ವಿಜೆತರಾದವರು.ಹೋಟೆಲ್

ರಾಜಸ್ತಾನ – ಹಾಸ್ಟೆಲ್ಲಿನ ಹುಡುಗಿಯರನ್ನು ನೋಡಲು ಬಂದ ಚಿರತೆ

ಶನಿವಾರ ಬೆಳ್ಳಂಬೆಳಿಗ್ಗೆ ಉದಯಪುರದ ಬಾಲಕಿಯರ ಹಾಸ್ಟೆಲ್ಲಿಗೆ ಚಿರತೆಯೊಂದು ಮೆಲ್ಲನೆ ಬಂದು ಅಲ್ಲಿದ್ದ ಎಲ್ಲರೂ ಗಡಗಡ ನಡುಗುವಂತೆ ಮಾಡಿತು.ರಾಜಸ್ತಾನದ ಉದಯಪುರದಲ್ಲಿ ಈ ಚಿರತೆ ಇಣುಕುವಿಕೆ ನೋಡುತ್ತಲೇ ಹುಡುಗಿಯರು ಮತ್ತು ವಾರ್ಡನ್ ಎಲ್ಲರೂ ಬಾಗಿಲು ಹಾಕಿಕೊಂಡು ಒಳಗೆ ಕುಳಿತುಕೊಂಡರು. ಭಯದಿಂದ ಹೊರಗೆ ಇಣುಕಿ ನೋಡುತ್ತಲಿದ್ದರು. ಒಂದು ಸುತ್ತು ಆಚೀಚೆ ಹಾಕಿದ ಚಿರತೆಯು ಮೆಲ್ಲನೆ ಬೆಳಗಾಗುವಾಗ ಬಂದ ದಾರಿಯಲ್ಲಿಯೇ ಹಿಂದಕ್ಕೆ ಹೋಯಿತು

ದೆಹಲಿ: ಶೋಭಾ ಕರಂದ್ಲಾಜೆಗೆ ಹೆಚ್ಚುವರಿ ಮಂತ್ರಿಗಿರಿ

ವಿಧಾನ ಸಭೆಗೆ ಆಯ್ಕೆಯಾದ ಕಾರಣ ರಾಜೀನಾಮೆ ನೀಡಿದ ಕೇಂದ್ರ ಮಂತ್ರಿಗಳಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದಸಿಂಗ್ ಪಟೇಲ್, ರೇಣುಕಾ ಸಿಂಗ್ ಅವರು ಹೊಂದಿದ್ದ ಸಚಿವ ಖಾತೆಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೆಚ್ಚುವರಿಯಾಗಿ ನಾಲ್ವರು ಮಂತ್ರಿಗಳಿಗೆ ಹಂಚಿದ್ದಕ್ಕೆ ಅಂಕಿತ ಹಾಕಿದರು. ಮಂತ್ರಿ ಅರ್ಜುನ್ ಮುಂಡಾರಿಗೆ ಹೆಚ್ಚುವರಿಯಾಗಿ ಕೃಷಿ ಮತ್ತು ರೈತರ ಕಲ್ಯಾಣ, ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಹೆಚ್ಚುವರಿಯಾಗಿ ಆಹಾರ ಸಂಸ್ಕರಣಾ ಉದ್ಯಮಗಳು, ಸಚಿವ ರಾಜೀವ

ಹೊನ್ನೆ ಎಣ್ಣೆಗೂ ಪೆಟ್ರೋಲು ಬದಲಿ ಭಾಗ್ಯ

ನಮ್ಮ ತುಳು ಹಿರಿಯರು ಸೀಮೆ ಎಣ್ಣೆ ಬರುವುದಕ್ಕೆ ಮೊದಲು ದೀಪಕ್ಕೆ ಹೊನ್ನೆ ಎಣ್ಣೆ ಇತ್ಯಾದಿ ಉಪಯೋಗಿಸುತ್ತಿದ್ದರು.ಇದನ್ನು ಗಾಯ, ಸುಟ್ಟ ಗಾಯದ ಸಹಿತ ಚರ್ಮದ ಎಲ್ಲ ತೊಂದರೆಗಳಿಗೆ ಬಳಸುತ್ತಿದ್ದರು. ತುಳುವರು ಇದರ ಎಣ್ಣೆ ಅಡುಗೆಗೆ ಬಳಸದಿದ್ದರೂ ಇದರ ಎಲೆಯಲ್ಲಿ ಅಡ್ಯೆ, ಗೊಡ್ಡು ಬೇಯಿಸುತ್ತಿದ್ದರು. ಇದು ನಿತ್ಯಹಸಿರು ಮರವಾಗಿದ್ದು ಕೊಂಗಣ ಏಶಿಯಾದ ಕರಾವಳಿಯಲ್ಲೆಲ್ಲ ಬೆಳೆಯುತ್ತದೆ. ಇದು ಕ್ಯಾಲೋಪಿಲುಮ್ ಇನೋಪಿಲುಮ್ ಲಿನ್ ಎಂಬ ವೈಜ್ಞಾನಿಕ ವಿಭಾಗದ್ದಾಗಿದೆ.ಈಗ

ಸಾಬೀತು ಮಾಡದಿದ್ದರೆ ಪಾಕ್‍ಗೆ ಹೋಗಲು ಯತ್ನಾಳ್‍ಗೆ ‘ಹಾಶ್ಮಿ’ ಸವಾಲು

ನನಗೆ ಐಸಿಸ್ ಸಂಪರ್ಕ ಇರುವುದನ್ನು ಸಾಬೀತು ಪಡಿಸಿದರೆ ನಾನು ದೇಶವನ್ನೇ ಬಿಡುತ್ತೇನೆ. ನೀವು ಸಾಬೀತು ಪಡಿಸದಿದ್ದರೆ ಪಾಕಿಸ್ತಾನಕ್ಕೆ ಹೋಗಬೇಕು ಎಂದು ಬಿಜೆಪಿ ಶಾಸಕ ಯತ್ನಾಳರಿಗೆ ವಿಜಯಪುರದ ಹಜರತ್ ಹಾಸಿಂ ಪೀರ ದರ್ಗಾದ ಧರ್ಮಾಧಿಕಾರಿ ಸಯ್ಯದ್ ಮೊಹಮದ್ ತನ್ಸೀರ್ ಹಾಶ್ಮಿ ಸವಾಲು ಹಾಕಿದ್ದಾರೆ. ಇದೇ ವೇಳೆ ಹಾಶ್ಮಿಯವರು ಕೇಂದ್ರ ಮಂತ್ರಿ ನಿತಿನ್ ಗಡ್ಕರಿ ಮತ್ತು ಕೆಲವು ಬಿಜೆಪಿ ನಾಯಕರ ಜೊತೆಗೆ ಇರುವ ಫೆÇೀಟೋ ಸಹ ಬಹಿರಂಗ ಆಗಿದೆ. ಹಾಶ್ಮಿ ಐಸಿಸ್ ಜನ, ಮುಖ್ಯಮಂತ್ರಿ

ತಿರುವನಂತಪುರ – ಮದುವೆಗೆ ಬಿಎಂಡಬ್ಲ್ಯು ಕಾರು ಚಿನ್ನ ಕೇಳಿದ ವರ ; ವಧು ಆತ್ಮಹತ್ಯೆ

ತಿರುವನಂತಪುರ ವೈದ್ಯಕೀಯ ಕಾಲೇಜಿನಲ್ಲಿ ಪೋಸ್ಟ್ ಗ್ರಾಜುಯೇಶನ್ ಮಾಡುತ್ತಿದ್ದ ವೈದ್ಯೆ ಮದುವೆಗೆ ವರ ಬಿಎಂಡಬ್ಲ್ಯು ಕಾರು ಮತ್ತು ಚಿನ್ನ ಕೇಳಿದನೆಂದು 26ರ ಪ್ರಾಯದ ಶಹನಾ ಅವರು ತಾಕೊಲೆ ಮಾಡಿಕೊಂಡಿದ್ದಾರೆ. ಅಸಹಜ ಸಾವು ಪ್ರಕರಣ ದಾಖಲಾಗಿದೆ. ಅವರು ತಮ್ಮ ವಸತಿ ಸಮುಚ್ಚಯದ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರವ್ಸಿ ಜೊತೆಗೆ  ಶಹನಾ ಮದುವೆ ಗೊತ್ತಾಗಿತ್ತು. ಆದರೆ ಕೊನೆಗೆ ರವ್ಸಿ ಕುಟುಂಬದವರು 150 ಸವರನ್ ಚಿನ್ನ, 15 ಎಕರೆ ಭೂಮಿ ಮತ್ತು ಒಂದು ಬಿಎಂಡಬ್ಲ್ಯು

ತೆಲಂಗಾಣದ ಎರಡನೆಯ ಮುಖ್ಯಮಂತ್ರಿ ಎನುಮುಲ ರೇವಂತ್ ರೆಡ್ಡಿ ಅಧಿಕಾರ ಸ್ವೀಕಾರ

ತೆಲಂಗಾಣ ರಾಜ್ಯವಾದ ಬಳಿಕ ಕಾಂಗ್ರೆಸ್ ಪಕ್ಷದ ಮೊದಲ ಮತ್ತು ಆ ರಾಜ್ಯದ ಎರಡನೆಯ ಮುಖ್ಯಮಂತ್ರಿಯಾಗಿ ಎನುಮುಲ ರೇವಂತ್ ರೆಡ್ಡಿಯವರು ಉಪ ಮುಖ್ಯಮಂತ್ರಿ ಮತ್ತು 11 ಮಂತ್ರಿಗಳ ಜೊತೆಗೆ ಪ್ರಮಾಣವಚನ ಸ್ವೀಕರಿಸಿದರು. ಲಾಲ್ ಬಹದೂರ್ ಶಾಸ್ತ್ರಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಪ್ರಮಾಣ ವಚನ ಬೋಧಿಸಿದರು. ತೆಲಂಗಾಣದ ಉಪ ಮುಖ್ಯಮಂತ್ರಿಯಾಗಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಅಧಿಕಾರದ ದೀಕ್ಷೆ ತೆಗೆದುಕೊಂಡರು. ಎನ್. ಉತ್ತಮ ಕುಮಾರ್

ದೇಶದೊಳಗಿನ ಸೈನಿಕರೇ ಗೃಹರಕ್ಷಕರು

ಗೃಹರಕ್ಷಕ ದಳ ಎನ್ನುವುದು ದೇಶದ ಕಾನೂನು ಮತ್ತು ಶಿಸ್ತು ಪಾಲನೆಯಲ್ಲಿ ಪೊಲೀಸ್ ಇಲಾಖೆಗೆ ಪೂರಕವಾಗಿ ಕೆಲಸ ಮಾಡುವ ಸರ್ಕಾರದ ಅಧೀನದಲ್ಲಿರುವ ಸ್ವತಂತ್ರವಾದ ಶಿಸ್ತುಬದ್ಧವಾದ ಸಮವಸ್ರದಾರಿ ಸ್ವಯಂಸೇವಕರ ಸೇವಾ ಸಂಸ್ಥೆ ಆಗಿರುತ್ತದೆ. ‘ನಿಷ್ಕಾಮ ಸೇವೆ’ ಎಂಬ ಧ್ಯೇಯ ವಾಕ್ಯದೊಂದಿಗೆ ದೇಶದ ಆಸ್ತಿಪಾಸ್ತಿ ರಕ್ಷಣೆ ಮತ್ತು ಜನರ ಜೀವದ ರಕ್ಷಣೆ ಮಾಡುವ ದೇಶದೊಳಗಿನ ಸೈನಿಕರೇ ನಮ್ಮ ಗೃಹರಕ್ಷಕರು. ಹೇಗೆ ದೇಶದ ಗಡಿಗಳಲ್ಲಿ ಸೈನಿಕರು ನಮ್ಮ ದೇಶವನ್ನು ವೈರಿಗಳಿಂದ ಮತ್ತು

ಇಂಡಿಯಾದ ಹೆಸರು ಕೆಡಿಸುವ ಫೇಕ್ ನ್ಯೂಸ್

ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿ ಕೂಟದವರು ಗುಂಪು ಫೋಟೋ ತೆಗೆಸಿಕೊಳ್ಳುವಾಗ ಮುಸ್ಲಿಮರ ಆಜಾನ್ ಹಾಕಿದ್ದರು, ಎಚ್ಚರ ಎಂಬ ಪೋಸ್ಟ್ ಒಂದು ಜಾಲ ತಾಣಗಳಲ್ಲಿ ಹರಿದಾಡುತ್ತಿದೆ. ಅದು ಸುಳ್ಳು ಸುದ್ದಿ ಎಂದು ಕ್ವಿಂಟ್ ಫ್ಯಾಕ್ಟ್ ಚೆಕ್ ಹೇಳಿದೆ. ಇಲ್ಲಿ ಈ ಪೋಸ್ಟ್‌ಗೆ ಬಳಸಿದ ವೀಡಿಯೋ ಆಗಸ್ಟ್ 31, ಸೆಪ್ಟೆಂಬರ್ 1ರಂದು ಮುಂಬಯಿಯಲ್ಲಿ ನಡೆದ ಇಂಡಿಯಾ ಮೈತ್ರಿ ಕೂಟದ ಸಭೆಯದ್ದಾಗಿದೆ. ವೇದಿಕೆಯಲ್ಲಿ ಆ ಬ್ಯಾನರ್ ಇದೆ. ಈ ಸುದ್ದಿ ಆಗ ಎಲ್ಲ ಪತ್ರಿಕೆ, ಟೀವಿಗಳಲ್ಲಿ