Home Archive by category ಹಾನಿ (Page 5)

ಬೆಟ್ಟಂಪಾಡಿ ಗ್ರಾಮದ ಮಿತ್ತಡ್ಕ ವಡ್ಯಾ ಸಂಪರ್ಕ ರಸ್ತೆ ಕಡಿತ

ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮದ ಮಿತಡ್ಕ ವಡ್ಯಾ ಎಂಬಲ್ಲಿ ಸಾರ್ವಜನಿಕ ರಸ್ತೆಗೆ ಮರ ಬಿದ್ದು ಸಂಪೂರ್ಣ ಸಾರ್ವಜನಿಕರಿಗೆ ಸಂಪರ್ಕ ಕಡಿತಗೊಂಡಿದೆ ಇದಕ್ಕೆ ಸುಮಾರು 10 ದಿನದಿಂದ ಇಲ್ಲಿಯ ಶಾಲಾ ಮಕ್ಕಳಿ ಗೆ ಸಾರ್ವಜನಿಕರಿಗೆ ತೊಂದರೆ ಈಡಾಗಿದ್ದು ಯಾವುದೇ ಅಧಿಕಾರಿಗಳು ಹಾಗೂ ಪಂಚಾಯತ್ ಸಿಬ್ಬಂದಿಗಳೂ ಕೂಡ ಭೇಟಿ ನೀಡದೆ ಜನಪ್ರತಿನಿಧಿಯು ಕೂಡ ಭೇಟಿ ನೀಡದೆ

ಸುರತ್ಕಲ್ ರಸ್ತೆ ಅಪಘಾತ, ಕಟಪಾಡಿ ಮೂಡಬೆಟ್ಟು ದೇವಸ್ಥಾನದ ಅರ್ಚಕ ದುರ್ಮರಣ

ಕಟಪಾಡಿ : ಸುರತ್ಕಲ್ ನಲ್ಲಿ ಲಾರಿ ಮಟ್ಟು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಕಟಪಾಡಿ ಬಳಿಯ ಮಟ್ಟು ನಿವಾಸಿ, ದೇಗುಲದ ಅರ್ಚಕ ಅಕ್ಷಯ್ ಕೆ. ಆರ್ (33) ದುರ್ಮರಣ ಹೊಂದಿದ್ದಾರೆ. ಕಟಪಾಡಿ ಮೂಡಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ನಡೆಸುತ್ತಿದ್ದ ಅಕ್ಷಯ್ ಸುರತ್ಕಲ್ ನಲ್ಲಿ ಪೂಜೆ ಮುಗಿಸಿ ಕಟಪಾಡಿ ಗೆ ಹಿಂತಿರುಗಿ ಬರುವ ವೇಳೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ಮೃತರು ತಾಯಿಯನ್ನು ಅಗಲಿದ್ದಾರೆ

ಮೃತ್ಯುಕೂಪದಂತಿರುವ ರಾಷ್ಟ್ರೀಯ ಹೆದ್ದಾರಿ, ಪ್ರತಿನಿತ್ಯ ಹೆದ್ದಾರಿಗಳಲ್ಲಿ ಅಪಘಾತಗಳ ಸರಮಾಲೆ

ಜಿಲ್ಲೆಯ ಸಾವಿರಾರು ಪ್ರಯಾಣಿಕ ವಾಹನಗಳಿಗೆ ನಿತ್ಯ ಆಸರೆಯಾಗುವ ಹೆದ್ದಾರಿಯು ಮರಣ ಗುಂಡಿಗಳಾಗಿ ಬದಲಾಗುತ್ತಿದೆ. ಹೆದ್ದಾರಿಯ ಬಹುತೇಕ ಭಾಗಗಳಲ್ಲಿ ಹೊಂಡಗಳೇ ತುಂಬಿಕೊಂಡಿದ್ದು, ಸಂಚಾರ ಕಷ್ಟಕರವಾಗಿದೆ.ಇಲ್ಲಿರುವ ಗುಂಡಿಗಳು ಸವಾರರ ಮತ್ತು ಪ್ರಯಾಣಿಕರ ಹೃದಯಬಡಿತ ಹೆಚ್ಚಿಸುವಂತಿದೆ.ಸ್ವಲ್ಪ ಎಚ್ಚರ ತಪ್ಪಿದ್ರೆ ಸಾಕು ವಾಹನ ಹೊಂಡಕ್ಕೆ ಬೀಳುವುದು ಖಚಿತ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೃಹತ್ತಾಕಾರದ ಹೊಂಡಗುಂಡಿಗಳಿಂದ ವಾಹನ ಸವಾರ ನರಕಯಾತನೆ ಅನುಭವಿಸುವಂತಾಗಿದೆ.

ಟೋಲ್‍ಗೇಟ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಆಂಬ್ಯುಲೆನ್ಸ್ ಮೂವರು ಮೃತ್ಯು

ಅತಿವೇಗದಿಂದ ಬಂದ ಅಂಬ್ಯುಲೆನ್ಸ್ ವೊಂದು ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಶಿರೂರು ಟೋಲ್ ಗೇಟ್ ನಲ್ಲಿ ಬುಧವಾರ ನಡೆದಿದೆ. ಹೊನ್ನಾವರದಿಂದ ಕುಂದಾಪುರದ ಆಸ್ಪತ್ರೆಗೆ ರೋಗಿಯನ್ನು ಕರೆ ತರುವ ವೇಳೆ ಅತಿವೇಗದಿಂದ ಬಂದ ಅಂಬ್ಯುಲೆನ್ಸ್ ಶಿರೂರು ಟೋಲ್ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಂಬ್ಯುಲೆನ್ಸ್ ನಲ್ಲಿ ಹೊನ್ನಾವರದ ಆಸ್ಪತ್ರೆಯಿಂದ ಲೋಕೇಶ್ ಮಾದೇವ ನಾಯ್ಕ

ವಿಟ್ಲ: ಹಾಳೆ ತಟ್ಟೆ ಕಾರ್ಖಾನೆಯಲ್ಲಿ ಬೆಂಕಿ: ಲಕ್ಷಾಂತರ ರೂ. ನಷ್ಟ

ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಳೆ ತಟ್ಟೆ ತಯಾರಿಕಾ ಘಟಕ ಇಕೋ ವಿಶನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕಟ್ಟಡದ ಮೇಲ್ಭಾಗದಲ್ಲಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಫ್ಯಾಕ್ಟರಿ ಯಿಂದ ದಟ್ಟ ಹೊಗೆ ಆವರಿಸುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೆÇಲೀಸರು, ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದರೂ ಕಟ್ಟಡದಲ್ಲಿದ್ದ ಹಲವು ಮೆಷಿನ್, ಮತ್ತು ಹಾಳೆತಟ್ಟೆಗಳು ಸುಟ್ಟು ಕರಕಲಾಗಿದೆ. ಇದರಿಂದ ಲಕ್ಷಾಂತರ

ಪಲ್ಗುಣಿ ತೀರದಲ್ಲಿ ತೇಲಿ ಬಂದ ಟನ್‍ಗಟ್ಟಳೆ ತ್ಯಾಜ್ಯ : ಸಂಘಸಂಸ್ಥೆ, ಸ್ವಯಂಸೇವಕರಿಂದ ಸ್ವಚ್ಛತಾ ಕಾರ್ಯ

ಕೂಳೂರಿನ ನದಿ ತೀರದಲ್ಲಿ ಶೇಖರಣೆಗೊಂಡಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪಲ್ಗುಣಿ ನದಿ ತೀರದಲ್ಲಿ ರಾಶಿ ಬಿದ್ದಿದ್ದ ಪ್ಲಾಸ್ಟಿಕ್, ನದಿಯಲ್ಲಿ ತೇಲಿ ಬಂದ ಟನ್‍ಗಟ್ಟಲೆ ತ್ಯಾಜ್ಯವನ್ನು ಸಂಘ ಸಂಸ್ಥೆ ಸ್ವಯಂ ಸೇವಕರು ಸ್ವಚ್ಚತಾ ಕಾರ್ಯ ನಡೆಸಿದರು. ಎಲ್ಲಾ ತ್ಯಾಜ್ಯಗಳನ್ನು ಸ್ವಯಂ ಸೇವಕರು ಹೆಕ್ಕಿ ಸ್ವಚ್ಛಗೊಳಿಸಿದರು. ಮಂಗಳೂರಿನ ರೇಂಜ್ ಅರಣ್ಯ ಇಲಾಖೆ, ಸಿಒಡಿಪಿ, ಎನ್‍ಇಸಿಎಫ್ ಮೊದಲಾದ ಸಂಘಟನೆಗಳುವರು ಸಹಕಾರ ನೀಡಿದ್ದಾರೆ.

ಕುಂಪಲದಲ್ಲಿ ಉದ್ಯಮಶೀಲತೆ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

ಯುಎನ್‍ಡಿಪಿ ಮತ್ತು ಎಎಲ್‍ಸಿ ಇಂಡಿಯಾ ಸಂಸ್ಥೆಯ ವತಿಯಿಂದ 5 ದಿನದ ಉದ್ಯಮಶಿಲತೆ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಕುಂಪಲದಲ್ಲಿ ಉದ್ಘಾಟನೆಗೊಂಡಿತು. ಮಹಿಳಾ ಉದ್ಯಮಿ ಗಳನ್ನು ಪ್ರೋತ್ಸಾಹಿಸಿ ಅವರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಈ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದೊಂದಿಗೆ ಸ್ತ್ರೀ ಶಕ್ತಿ ಗುಂಪಿನ ಆಸಕ್ತ ಮಹಿಳೆಯರು ಈ ತರಬೇತಿಯಲ್ಲಿ ಭಾಗವಹಿಸಿದರು. ನಾರಾಯಣ ಕುಂಪಲ ಅವರು

ವಿಟ್ಲ: ಕೆಟ್ಟು ನಿಂತ ಅಡುಗೆ ಎಣ್ಣೆ ಸಾಗಾಟದ ಟ್ಯಾಂಕರ್ , ಕಿಲೋಮೀಟರ್ ಸಾಲು ನಿಂತ ವಾಹನಗಳು

ವಿಟ್ಲ: ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುವಲ್ಲಿ ರಸ್ತೆಯ ಮಧ್ಯೆ ಅಡುಗೆ ಎಣ್ಣೆ ಸಾಗಾಟದ ಟ್ಯಾಂಕರ್ ಕೆಟ್ಟು ನಿಂತಿದ್ದರ ಪರಿಣಾಮ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲಾಗಿ ನಿಂತಿದೆ,ಸ್ಥಳದಲ್ಲಿ ಪೋಲಿಸರು ಮತ್ತು ಸೂರಿಕುಮೇರು ಪರಿಸರದ ಯುವಕರು ವಾಹನಗಳ ಸಂಚಾರಕ್ಕೆ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸುತ್ತಿದ್ಸಾರೆ

ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಸಚಿವ ಅಂಗಾರ ಭೇಟಿ : ಉಪ್ಪುಕಳ ಗ್ರಾಮಕ್ಕೆ ಶೀಘ್ರದಲ್ಲೇ ಸೇತುವೆ ನಿರ್ಮಾಣದ ಭರವಸೆ

ಮಳೆಯಿಂದ ಹಾನಿಗೊಳಗಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಉಪ್ಪುಕಳ ಗ್ರಾಮಕ್ಕೆ ಬಂದರು ಹಾಗೂ ಮೀನುಗಾರಿಕೆ ಸಚಿವ ಅಂಗಾರ ಭೇಟಿ ನೀಡಿದ್ದು, ಶೀಘ್ರದಲ್ಲೇ ಸೇತುವೆ ನಿರ್ಮಾಣದ ಭರವಸೆ ನೀಡಿದರು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 124 ಸೇತುವೆಗಳು ನಿರ್ಮಾಣವಾಗಿವೆ. ವಿಶೇಷ ಪ್ರಾಶಸ್ತ್ಯ ನೀಡಿ ಗ್ರಾಮಗಳನ್ನು ಬೆಸೆಯುವ ಸಂಪರ್ಕ ಸೇತುವೆ ನಿರ್ಮಿಸಲಾಗುತ್ತದೆ. ಉಪ್ಪುಕಳದಲ್ಲೂ ಅತೀ ಶೀಘ್ರದಲ್ಲೇ ಸೇತುವೆ ರಚನೆಯಾಗಲಿದ್ದು, ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಲಾಗುವುದು

ಮಳೆಗೆ ಸಂಪೂರ್ಣವಾಗಿ ಹದಗೆಟ್ಟ ಮುಖ್ಯರಸ್ತೆ : ಚರಂಡಿ ಮೋರಿಗಳಿಗೆ ಕೋಟ್ಯಾಂತರ ರೂಪಾಯಿ ಖರ್ಚು

ಕಾರ್ಕಳ : ಕಳೆದ ಮಾರ್ಚ್ ತಿಂಗಳಲ್ಲಿ ಕಾರ್ಕಳದಲ್ಲಿ ಬಹಳ ಅದ್ದೂರಿಯಾಗಿ ಕಾರ್ಕಳ ಉತ್ಸವ ಜರುಗಿದ್ದು. ಈ ಸಂದರ್ಭದಲ್ಲಿ ಕಾರ್ಕಳ ತಾಲೂಕಿನ ಮುಖ್ಯ ರಸ್ತೆಗಳು, ಚರಂಡಿ ಮೋರಿಗಳಿಗೆ ಕೋಟಿಗಟ್ಟಲೆ ರೂಪಾಯಿಗಳನ್ನು ಖರ್ಚು ಮಾಡಿ ಡಾಮರೀಕರ್ಣ ಮಾಡಲಾಗಿತ್ತು. ಇದೀಗ ಕಾರ್ಕಳದ ಮುಖ್ಯ ರಸ್ತೆಗಳಲ್ಲಿ ಒಳ ಚರಂಡಿಯ ತ್ಯಾಜ್ಯ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಕಾರ್ಕಳ ಮುಖ್ಯ ರಸ್ತೆಯ ಡಾಮರು ಎದ್ದು ಹೊಂಡಗಳು ಬಿದ್ದು ಪಾದಾಚಾರಿಗಳಿಗೆ ಹಾಗೂ ವಾಹನ ಚಾಲಕರಿಗೆ ಹೋಗುವುದೇ ಒಂದು