Home Archive by category ಹಾನಿ (Page 8)

ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಹಲವೆಡೆ ಮನೆಗಳು ಜಲಾವೃತಗೊಂಡಿದೆ.ಕರಂಬಳ್ಳಿ, ಮೂಡುನಿಡಂಬೂರು, ಕೊಡವೂರು ಭಾಗದಲ್ಲಿ ನೆರೆ ಸೃಷ್ಟಿಯಾಗಿದೆ. ಕರಂಬಳ್ಳಿ ಭಾಗದಲ್ಲಿ, ಬನ್ನಂಜೆ ಮೂಡನಿಡಂಬೂರು ಕೆಲವು ಮನೆಗಳು ಜಲಾವೃತಗೊಂಡಿದೆ. ಇಂದ್ರಾಣಿ ನದಿ ಹರಿಯುವ ಪಾತ್ರದಲ್ಲಿ ಗುಂಡಿಭಾಗದಲ್ಲಿ ತೋಟ, ಗದ್ದೆಗಳು

ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿದ ಲೋಡುಗಟ್ಟಲೆ ತ್ಯಾಜ್ಯ

ಬ್ರಹ್ಮಾವರ: ಕರಾವಳಿ ಜಿಲ್ಲೆಯಲ್ಲಿ ಕಳೆದ ಕೆಲವುದಿನದಿಂದ ಸುರಿಯುವ ಬಾರೀ ಮಳೆಯಿಂದ ಪ್ರವಾಹದಿಂದ ತುಂಬಿಹರಿಯುವ ನದಿಯಲ್ಲಿ ಬಾರಕೂರು ಬಳಿಯ ಸೀತಾನದಿಯ ನೀಲಾವರ ಕಿಂಡಿ ಅಣೆಕಟ್ಟಿನಲ್ಲಿ ಲೋಡುಗಟ್ಟಲೆ ತ್ಯಾಜ್ಯಗಳು ಸಿಲಿಕಿಕೊಂಡು ನದಿ ತೀರದಲ್ಲಿ ಕೃತಕ ನೆರೆ ಉಂಟಾಗಿದೆ. ಪೂರ್ವ ಭಾಗವಾದ ಕೊಕ್ಕರ್ಣೆ ,ಎಳ್ಳಂಪಳ್ಳಿ, ಕರ್ದಾಡಿ, ಕೂರಾಡಿ ಭಾಗದಲ್ಲಿ ಸೇತುವೆಯಿಂದ ನದಿಗೆ ಎಸೆಯುವಖಾಲಿ ಬಾಟಲಿಗಳು ಬೃಹತ್ ಮರದದಿಮ್ಮಿಗಳು ಸತ್ತು ಬಿದ್ದ ಪ್ರಾಣಿಗಳು ಇಲ್ಲಿನ

ರಸ್ತೆ ಕಾಮಗಾರಿಗೆ ಸ್ಥಳೀಯರ ಆಗ್ರಹ

ಮುಲ್ಕಿ ತಾಲ್ಲೂಕು ವ್ಯಾಪ್ತಿಯ ಕೆಮ್ರಾಲ್ ಗ್ರಾಮ ಪಂಚಾಯತ್‌ನ ಪಕ್ಷಿಕೆರೆಯಿಂದ ಪಂಜ ಮೂಲಕ ಸುರತ್ಕಲ್ ಸಂಪರ್ಕ ಕಲ್ಪಿಸುವ ಜಿಲ್ಲಾ ಪಂಚಾಯತ್ ರಸ್ತೆ ತೀವ್ರ ಕೆಟ್ಟು ಹೋಗಿದ್ದು ಸಂಚಾರ ದುಸ್ತರವಾಗಿ ಪರಿಣಮಿಸಿದೆ. ಈ ರಸ್ತೆಯ ಕೆಮ್ರಾಲ್ ಸಮುದಾಯ ಆರೋಗ್ಯ ಕೇಂದ್ರ ಹಾಗೂ ದಿ.ಶಾಂತರಾಮ ಶೆಟ್ಟಿ ಶಾಲೆಯ ಬಳಿ ತೀವ್ರ ಹದಗೆಟ್ಟಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ಮಳೆ ನೀರು ಹರಿದು ರೋಡ್, ತೋಡಾಗಿ ಪರಿಣಮಿಸಿದ್ದು ಸ್ಥಳೀಯರು ಸಂಬಂಧಪಟ್ಟವರಿಗೆ ಹಿಡಿ ಶಾಪ

ಕೊಲ್ಪೆ: ಕಾರು ಡಿಕ್ಕಿ ಲಾರಿ ಚಾಲಕರಿಬ್ಬರಿಗೆ ಗಂಭೀರ ಗಾಯ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ನಡುವೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಎಂಬಲ್ಲಿ ಲಾರಿ ನಿಲ್ಲಿಸಿ ಚಹಾ ಕುಡಿದು ಲಾರಿಯ ಕಡೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ ಸಕಲೇಶಪುರ ಮೂಲದ ಲಾರಿ ಚಾಲಕರಿಬ್ಬರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜು.8ರಂದು ಬೆಳಿಗ್ಗೆ ನಡೆದಿದೆ. ಸಕಲೇಶಪುರ ಮೂಲದ ವಿನಯ ಕುಮಾರ್ ಹಾಗೂ ಮಂಜ ಗಾಯಗೊಂಡ ಲಾರಿ ಚಾಲಕರು. ಇವರಿಬ್ಬರು

ನಾಟಿ ಮಾಡುವ ವೇಳೆ ಕುಸಿದು ಬಿದ್ದು ಮಹಿಳೆ ಸಾವು

ಹೆಬ್ರಿ : ಮುದ್ರಾಡಿ ರಾಂಬೆಟ್ಟು ನಿವಾಸಿ ದಿ.ಉಪೇಂದ್ರ ಆಚಾರ್ಯ ಅವರ ಪತ್ನಿ ಕುಸುಮಾ ಆಚಾರ್ಯ ಎಂಬವರು ಶುಕ್ರವಾರ ಬೇಸಾಯದ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕುಸುಮಾ ಆಚಾರ್ಯ ಹೆಬ್ರಿ ವಿಶ್ವಕರ್ಮ ಸಮಾಜ ಸೇವಾ ಸಂಘದ ಕಾರ್ಯಕ್ರಮ ಮತ್ತು ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರು ಹೆಬ್ರಿ ವಿಶ್ವಕರ್ಮ ಮಹಿಳಾ ಮಂಡಳಿಯ ಸಕ್ರಿಯ ಸದಸ್ಯರಾಗಿದ್ದರು. ಮೃತರು

ಜೆಸಿಬಿಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಜೆಸಿಬಿಗೆ ಬೈಕ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಮೃತ ಸವಾರನನ್ನು ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಎಂದು ಗುರುತಿಸಲಾಗಿದೆ. ತಮ್ಮನನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹಿಂಬದಿ ಸವಾರ ಸಹೋದರ ಪ್ರೀತಿಶ್ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ. ಮೂರು ತಿಂಗಳ ಹಿಂದೆಯಷ್ಟೇ ತಂದೆಯನ್ನು ಕಳೆದುಕೊಂಡಿದ್ದ, ಪ್ರತ್ಯಕ್ಷ ಶೆಟ್ಟಿ ಮನೆಯ ಆದರ

ಮಂಜೇಶ್ವರದ ಹೆದ್ದಾರಿಯಲ್ಲಿ ವಿದ್ಯುತ್ ಕಂಬ ಅಳವಡಿಕೆ ಅವ್ಯವಹಾರ ಆರೋಪ

ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಗೆ ಅಡ್ಡಲಾಗಿ ಇತ್ತೀಚೆಗೆ ಸ್ಥಾಪಿತವಾಗಿದ್ದ ವಿದ್ಯುತ್ ಕಂಬ ಅಳವಡಿಕೆಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಸ್ಥಳೀಯರಿಂದ ವ್ಯಾಪಕ ಆರೋಪಗಳು ಕೇಳಿ ಬರುತ್ತಿದೆ. ಸರ್ವೀಸ್ ರಸ್ತೆ ನಿರ್ಮಾಣ ಪೂರ್ಣಗೊಂಡ ನಂತರ, ಈ ಪೋಸ್ಟ್‌ಗಳನ್ನು ಕಾಂಕ್ರೀಟೀಕರಣಗೊಳಿಸಿ ಅಳವಡಿಸಲಾಗುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳೀಯರಿಗೆ ಭರವಸೆ ನೀಡಿದ್ದರು. ಆದರೆ ಸೋಮವಾರ ಸಂಜೆ ಏಳು ಗಂಟೆ ಸುಮಾರಿಗೆ ತಲಪಾಡಿಯಿಂದ ಉದ್ಯಾವರ ತನಕ

ರಸ್ತೆ ವಿಭಜಕವೇರಿ ಮಗುಚಿ ಬಿದ್ದ ಗೂಡ್ಸ್ ಟೆಂಪೊ

ಎರ್ಮಾಳು-ಪಡುಬಿದ್ರಿ ಗಡಿಭಾಗ ರಾಷ್ಟ್ರೀಯ ಹೆದ್ದಾರಿ ೬೬ರ ಕಿರು ಸೇತುವೆ ಬಳಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಅಪಘಾತ ವಲಯವಾಗಿ ರೂಪುಗೊಳ್ಳುತ್ತಿದೆ. ಸೋಮವಾರ ರಾತ್ರಿ ಗೂಡ್ಸ್ ಟೆಂಪೊವೊಂದು ಹೆದ್ದಾರಿಯಲ್ಲಿ ಶೇಕರಣೆಗೊಂಡಿರುವ ನೀರಿನ ಮೇಲಿಂದ ಚಲಿಸಿ ರಸ್ತೆ ವಿಭಜಕವೇರಿ ಮಗುಚಿ ಬಿದ್ದಿದೆ. ಭಾನುವಾರ ರಾತ್ರಿ ಕಾರೊಂದು ಅದೇ ಪ್ರದೇಶದಲ್ಲಿ ಪಲ್ಟಿಯಾಗಿ ನಾಲ್ವರು ಪ್ರಾಣಾಪಾಯದಿಂದ ಪಾರದ ಘಟನೆ ಹಚ್ಚ ಹಸುರಾಗಿರುವಾಗಲೇ ಮತ್ತೆ ಅಪಘಾತ ನಡೆದಿದೆ. ಈ ಅಪಘಾತಕ್ಕೆ

ಮನಪಾ ವ್ಯಾಪ್ತಿಯ ಚಿಲಿಂಬಿ ಪ್ರದೇಶದಲ್ಲಿ ಗುಡ್ಡ ಕುಸಿತದ ಭೀತಿ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಚಿಲಿಂಬಿಯ ೩ನೇ ಕ್ರಾಸ್ ರಸ್ತೆಯಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಬೃಹತ್ತಾಕಾರದ ಮರಗಳು ಧರೆಗುರುಳು ಭೀತಿ ಹೆಚ್ಚಾಗಿದ್ದು, ಸಂಬಂಧಪಟ್ಟವರು ಕೂಡಲೇ ಎಚ್ಚೆತ್ತು ಅಪಾಯ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.ಮಳೆಗಾಲದ ಈ ಸಂದರ್ಭದಲ್ಲಿ ಮಂಗಳೂರಿನ ವಿವಿಧೆಡೆಯ ಪ್ರದೇಶಗಳು ಅಪಾಯದ ಭೀತಿಯಲ್ಲಿದೆ. ನಗರದ ಚಿಲಿಂಬಿ ಪ್ರದೇಶದ ೩ನೇ ಅಡ್ಡ ರಸ್ತೆಯಲ್ಲಿ ಗುಡ್ಡ ಕುಸಿತದ ಆತಂಕ ಎದುರಾಗಿದ್ದು, ಅಲ್ಲಲ್ಲಿ ಗುಡ್ಡ ಬಿರುಕು

ಶಿಬಾಜೆ, ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಶಾಕ್‌ಗೆ ಯುವತಿ ಸಾವನ್ನಪ್ಪಿದ್ದು ಮೆಸ್ಕಾಂ ಇಲಾಖೆಯ ನಿರ್ಲಕ್ಷ÷್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.ಕಳೆದ ಕೆಲವು ಸಮಯಗಳಿಂದ ತಂತಿ ಸರಿಪಡಿಸುವಂತೆ ಸಂಬAಧ ಪಟ್ಟ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಿಗೆ ಮನೆಯವರು ತಿಳಿಸಿದರೂ ಅವರು ನಿರ್ಲಕ್ಷಿ÷್ಸಸಿದ್ದಾರೆ. ಅದ್ದರಿಂದ ಇವತ್ತು ಅಮಾಯಕ ಯುವತಿ ಬಲಿಯಾಗಿದ್ದಾಳೆ. ಈ ದುರಂತಕ್ಕೆ ಮೆಸ್ಕಾಂ ಇಲಾಖೆಯೇ ಕಾರಣ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು