Home Archive by category ಹಾನಿ (Page 8)

ಬಾರಿ ಮಳೆಯ ಕಾರಣ ಕಾರ್ಕಳದಲ್ಲಿ ತೋಟಗಳಿಗೆ ನುಗ್ಗಿದ ನೀರು : ಜನರಲ್ಲಿ ಪ್ರವಾಹದ ಭೀತಿ

ಕಾರ್ಕಳ: ಕಾರ್ಕಳ ತಾಲೂಕಿನ ಲ್ಲಿ ಭಾರಿ ಮಳೆ ಸುರಿಯುತಿದ್ದು ಹಲವೆಡೆಗಳಲ್ಲಿ ತೋಟಗಳಿಗೆ ನೀರು ನುಗ್ಗಿದೆ. ಕೆಲವರಿಗೆ ಪ್ರವಾಹ ನೋವು ತಂದರೆ ಇನ್ನು ಕೆಲವರಿಗೆ ಅನುಕೂಲ ವಾದ ಉದಾಹರಣೆಗಳು ಸಾಕ್ಷಿಕರಿಸಿದೆ. ಕಾರ್ಕಳ ತಾಲೂಕಿನ ಮರ್ಣೆ ಗ್ರಾಮ ಎಣ್ಣೆಹೊಳೆ ಬಳಿ ಡ್ಯಾಂ ಬಳಿ ಸ್ವರ್ಣೆ ಉಕ್ಕಿ ಹರಿಯುತಿದ್ದು ನದಿ ಪಾತ್ರ ದ ಬಳಿಯ ಪಂಪ್ ಹೌಸ್ ಬಳಿ ನೀರಿನ ಜೊತೆ ತೆಂಗಿನಕೈ

ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟ : ತಾತ್ಕಲಿಕ ನೆರೆಯಿಂದ ಜನರ ಪರದಾಟ

ಕರಾವಳಿಯಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದ್ದು ನದಿ, ತೊರೆಗಳು ತುಂಬಿ ಹರಿಯತೊಡಗಿದೆ. ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹ‌ ಸ್ಥಿತಿ ಎದುರಾಗಿದೆ. ಮುಂಜಾಗ್ರತೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆ, ಕಾಲೇಜಿಗೆ ರಜೆ ಸಾರಲಾಗಿದೆ. ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ನಿರಂತರ ಮಳೆಯಾಗಿದೆ. ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದ್ದರಿಂದ ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪ್ರವಾಹ ಸ್ಥಿತಿ

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಎರಗಿದ ಲಾರಿ : ಮನೆಯಲ್ಲಿ ಯಾರೂ ಇಲ್ಲದ ಕಾರಣ ತಪ್ಪಿದ ದುರಂತ

ಪರ್ಕಳ: ಇಲ್ಲಿನ ಕೆಳಪರ್ಕಳದ ಕಾಂಕ್ರಿಟ್ ರಸ್ತೆಯಿಂದ ಡಾಮಾರು ರಸ್ತೆಗೆ ತಿರುಗುವಾಗ ಕೆಳಪರ್ಕಳದ ತಿರುವಿನಲ್ಲಿ ಭಾರಿ ಗಾತ್ರದ ಕ್ಯಾಂಟನೇರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದಲ್ಲಿರುವ ಶೆಣೈ ಕಂಪೌಂಡ್ ನಾ ಮನೆಯ ಮೇಲೆ ಎರಗಿ ಮಗುಚಿ ಬಿದ್ದೀದೆ. ಪರ್ಕಳ ದಿಂದ .ಗೋವಾ ಕಡೆಗೆ ರದ್ದೀ ಪೇಪರ್ ತೆಗೆದು ಕೊಂಡು ಹೋಗುತ್ತಿತ್ತು.ಇಲ್ಲಿರುವ ಬಾಡಿಗೆ ಮನೆಯಲ್ಲಿ ಈಗ ಯಾರು ವಾಸಮಾಡುತ್ತಿಲ್ಲ, ಸದ್ಯದದ ಪರಿಸ್ಥಿತಿಯಲ್ಲಿ ಈ ಬಾಗದಲ್ಲಿ ಸೂಕ್ತ ದಾರಿದೀಪದ ವ್ಯವಸ್ಥೆ,,ಆಗಬೇಕು

ಚಾಲಕನ ನಿಯಂತ್ರಣ ತಪ್ಪಿದ ಬಸ್ : ಹೆಜಮಾಡಿಯ ರಾ.ಹೆ 66ರಲ್ಲಿ ಘಟನೆ

ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಸಂಭವಿಸಿದೆ.ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳನ್ನು ಹೊರತುಪಡಿಸಿ ಯಾವುದೇ ಸಾವು ನೋವು ಸಂಭವಿಸಿಲ್ಲ.ಹೆಜಮಾಡಿ ಟೋಲ್ ಸುರಕ್ಷತಾ ಅಧಿಕಾರಿ ಶೈಲೇಶ್ ಶೆಟ್ಟಿ, ಟೋಲ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ

ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯ ಕಾಮಗಾರಿ ; ಮೀನು ಮಾರಾಟ ಮಹಿಳೆಯರ ಆಕ್ರೋಶ

ಮಂಗಳೂರಿನ ಹೊರವಲಯದ ಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಕಾಮಗಾರಿಯ ಹಿನ್ನಲೆ ಪಕ್ಕದಲ್ಲಿದ್ದ ಮೀನು ಮಾರುಕಟ್ಟೆಯ ಮೆಲ್ಚಾವಣಿಯನ್ನು ತೆಗದು ಮಾರುಕಟ್ಟೆಯನ್ನು ನೆಲಸಮ ಮಾಡಲು ಹೊರಟಿರುವುದು ಮೀನು ಮಾರಾಟ ಮಾಡುವ ಮಹಿಳೆಯರ ಆಕ್ರೋಶಕ್ಕೆ ಕಾರಣವಾಗಿದೆ. ಎಐಸಿಸಿ ಕಾರ್ಯದರ್ಶಿ ಐವನ್ ಡಿ’ಸೊಜಾರವರು 2 ವರ್ಷದ ಹಿಂದೆ ಎಂಎಲ್‌ಸಿಯಾಗಿದ್ದ ಸಂದರ್ಭ ಎನ್‌ಹೆಚ್ 66 ಬೈಕಂಪಾಡಿಯಲ್ಲಿ ಮೀನುಗಾರ ಮಹಿಳೆಯರಿಗೆ ಸಹಾಯವಾಗುವ ನಿಟ್ಟಿನಲ್ಲಿ ಅನುದಾನ ನೀಡಿ

ವರುಣನ ಆರ್ಭಟ ಜಮೀನಿಗೆ ನುಗ್ಗಿದ ನೀರು : ಶುಂಠಿ ಬೆಳೆ ನೀರುಪಾಲು

ಆಲೂರು: ಆಲೂರು ತಾಲೂಕಿನಾದ್ಯಂತ ವರುಣ ಆರ್ಭಟಿಸಿ ಬೊಬ್ಬಿರಿಯುತ್ತಿದ್ದು ತಾಲೂಕು ಪಾಳ್ಯ ಚಂದ್ರಶೇಖರ್ ಎಂಬುವವರು ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಶುಂಠಿ ಬೆಳೆಗೆ ಶಂಕುತೀರ್ಥ ಹೊಳೆಯ ನೀರು ದಿಡೀರನೆ ನುಗ್ಗಿದ ಪರಿಣಾಮವಾಗಿ ಶುಂಠಿ ಬೆಳೆಯುವ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಹೋಗಿದೆ ಅಲ್ಲದೆ ಭತ್ತದ ನಾಟಿಗಾಗಿ ಸಿದ್ದಪಡಿಸಿದ್ದ ಸಸಿ ಕೂಡ ನೀರಿನಲ್ಲಿ ಕೊಚ್ಚಿ ಹೋಗಿರುವ ಪ್ರಸಂಗ ತಾಲೂಕಿನಲ್ಲಿ ನಡೆದಿದ್ದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆ

ಚೀನಾದಲ್ಲಿ ಧಾರಕಾರ ಮಳೆ: 12 ಮಂದಿ ಸಾವು, ಒಂದು ಲಕ್ಷಕ್ಕೂ ಹೆಚ್ಚು ಮಂದಿಯ ಸ್ಥಳಾಂತರ

ಚೀನಾದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದ ಇದುವರೆಗೂ 12 ಮಂದಿ ಸಾವನ್ನಪ್ಪಿದ್ದು, ಒಂದು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಹೆನ್ನಾನ್ ಪ್ರಾಂತ್ಯದ ಝೆಂಗ್ಜು ಪ್ರದೇಶದಲ್ಲಿ ಕೇವಲ ಒಂದು ಗಂಟೆಯ ಅವಧಿಯಲ್ಲಿ 201.9 ಮಿ,ಮೀ ಮಳೆಯಾಗಿದೆ. ಝೆಂಗ್ಜು ಪ್ರದೇಶದ ತಗ್ಗುಪ್ರದೇಶಗಳಿಗೆ ನೀರು ಹರಿಯುತ್ತಿದ್ದು, ನೂರಾರು ಮನೆ ಮಠಗಳು ನಾಶವಾಗಿವೆ. ಇದುವರೆಗೂ 12 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ಮುಂಜಾಗೃತಾ

ಬಂಟ್ವಾಳದ ಕಲ್ಲಗುಡ್ಡೆಯಲ್ಲಿ ಮನೆ ಮೇಲೆ ಆವರಣಗೋಡೆ ಕುಸಿತ: ಮನೆಮಂದಿ ಪವಾಡ ಸದೃಶ ಪಾರು

ಬಂಟ್ವಾಳ: ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಬಂಟ್ವಾಳದ ಕಲ್ಲಗುಡ್ಡೆ ಎಂಬಲ್ಲಿ ಮಣ್ಣು ಸಹಿತ ಆವರಣ ಗೋಡೆ ಮನೆಯೊಂದರ ಮೇಲೆ ಕುಸಿದು ಬಿದ್ದು ಮನೆಮಂದಿ ಪವಾಡ ಸದೃಶ್ಯರಾಗಿ ಪಾರಾದ ಘಟನೆ ನಡೆದಿದೆ. ಘಟನೆಯಲ್ಲಿ ಮನೆ ಸಂಪೂರ್ಣ ಜಖಂಗೊಂಡಿದ್ದು 5 ಲಕ್ಷ ರೂಪಾಯಿಗಿಂತಲೂ ಅಧಿಕ ನಷ್ಟ ಸಂಭವಿಸಿದೆ. ಸೋಮನಾಥ ಕುಲಾಲ್ ಎಂಬವರಿಗೆ ಸೇರಿದ ಈ ಮನೆಯನ್ನು ನವೀನ್ ಎಂಬವರಿಗೆ ವಾಸ್ತವ್ಯಕ್ಕಾಗಿ ಬಾಡಿಗೆಗೆ ನೀಡಲಾಗಿತ್ತು. ಅವರು ಪತ್ನಿ ಪವಿತ್ರ ಹಾಗೂ ಮಗಳೊಂದಿಗೆ ಈ ಮನೆಯಲ್ಲಿ