ಫಲವತ್ತಾದ ಕೃಷಿ ಭೂಮಿಗಳನ್ನು ಹಡಿಲು ಬಿಡುವುದು ರಾಷ್ಟ್ರಕ್ಕೆ ಮಾಡುವ ದ್ರೋಹ. ಭೂಮಿ ತಾಯಿಯನ್ನು ಹಸನಾಗಿಸಿದರೆ ಆ ತಾಯಿ ನಮಗೆ ಚಿನ್ನದಂತಹ ಬೆಳೆಯನ್ನು ನೀಡುತ್ತಾಳೆ. ಹಡಿಲು ಭೂಮಿಯನ್ನು ಕೃಷಿ ಮಾಡುವಂತಹ ಈ ಪುಣ್ಯದ ಕಾರ್ಯವನ್ನು ಉಡುಪಿಯಲ್ಲಿ ಹಮ್ಮಿಕೊಂಡು ರಾಷ್ಟ್ರಕ್ಕೆ ಮಾದರಿಯಾಗಿದ್ದೀರಿ ಎಂದು ಕೃಷಿ ಸಚಿವರಾದ ಶ್ರೀ ಬಿ. ಸಿ. ಪಾಟೀಲ್ ಹೇಳಿದರು. ಹಡಿಲು ಭೂಮಿ
ಪಡುಬಿದ್ರಿ: ಅಂತರಾಷ್ಟ್ರೀಯ ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಪ್ಪಿ ಮಾಡಿದ ಒಂದು ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಉಡುಪಿ ಜಿಲ್ಲೆಯ ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿರುವ ಆಯುಷ್ಯ್ ಎನ್ವಯರ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ನಾಶಪಡಿಸಲಾಯಿತು. ಈ ಸಂದರ್ಭದಲ್ಲಿ ಎಸ್ಪಿ ವಿಷ್ಣುವರ್ಧನ್, ಎ ಎಸ್ಪಿ ಕುಮಾರ ಚಂದ್ರ, ಡಿವೈಎಸ್ಪಿ ಪ್ರಮೋದ್
ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾರ್ಯಚರಿಸುತ್ತಿರುವ ಯುಪಿಸಿಎಲ್ ಕಂಪನಿಯ ಎಲೆಕ್ಟ್ರಿಕಲ್ ಗುತ್ತಿಗೆ ಕಂಪನಿ ಹೆರಿಕಾನ್ ನಲ್ಲಿ ಕರ್ತವ್ಯ ನಿರ್ವಾಹಿಸುತ್ತಿದ್ದ ಸಿಬ್ಬಂದಿಯೊರ್ವ ಪಡುಬಿದ್ರಿ ಕಾರ್ಕಳ ರಸ್ತೆಯ ಸುಜ್ಲಾನ್ ಕಂಪನಿಯ ಸಮೀಪ ಅಪಘಾತಕ್ಕೆ ಬಲಿಯಾಗಿದ್ದಾರೆ. ಮೃತ ಯುವಕ ಪಶ್ಚಿಮ ಬಂಗಾಳ ನಿವಾಸಿ ಗುರುದಾಸ್,(26), ತಂದೆಯನ್ನು ಕಳೆದುಕೊಂಡು ತಾಯಿಯೊಂದಿಗೆ ವಾಸವಿದ್ದ ಈತ ಒರ್ವನೇ ಮಗ, ಕಳೆದ ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದು, ಮದುವೆಯ ಸಂದರ್ಭ
ಕೋವಿಡ್ ಮಹಾಮಾರಿಯಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರಕಾರದ ಲಾಕ್ ಡೌನ್ ಘೋಷಿಸಿದ್ದರಿಂದ ಜನ ಸಾಮಾನ್ಯರು ಕೆಲಸ ಕಾರ್ಯಗಳಿಲ್ಲದೆ ಆರ್ಥಿಕ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ, ಗ್ಯಾಸ್, ಪೆಟ್ರೋಲ್, ಡಿಸೇಲ್, ವಿದ್ಯುತ್ ಹಾಗೂ ನಿತ್ಯ ಉಪಯೋಗಿ ವಸ್ತುಗಳ ಬೆಲೆ ಏರಿಕೆ ವಿರುದ್ಧ ಉಡುಪಿ ಜಿಲ್ಲಾಧಿಕಾರಿ ಕಛೇರಿ ಎದುರು ಜೆ.ಡಿ.ಎಸ್ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಯವರಿಗೆ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ನೀಡಲಾಯಿತು. ಈ
ಅಡುಗೆಗೆ ಬಳಸುವ ಸಿಲಿಂಡರ್ ಸ್ಪೋಟಗೊಂಡ ಘಟನೆ ಮಣಿಪಾಲದ ಸೋನಿಯಾ ಕ್ಲಿನಿಕ್ ಬಳಿ ನಡೆದಿದೆ. ಮನೆಗೆ ಬಳಸುವ ಸಿಲಿಂಡರ್ನಲ್ಲಿ ಅಡುಗೆ ಅನಿಲ ಸೋರುತ್ತಿರುವುದು ಮನೆಯವರ ಗಮನಕ್ಕೆ ಬಂದಿದ್ದು, ಅದನ್ನು ತಡೆಯುವ ಪ್ರಯತ್ನ ಮಾಡಿದರೂ ಸಫಲವಾಗದೇ ಸಿಲಿಂಡರ್ ಸ್ಪೋಟಗೊಂಡಿದೆ. ಅದೃಷ್ಟವಶತ್ ಮನೆಯವರು ಹೊರ ಓಡಿದ್ದು ಅಡುಗೆ ಮನೆಯ ಮೇಲ್ಚಾವಣೆಗಳು ಸ್ಪೋಟದ ರಭಸಕ್ಕೆ ಹಾರಿ ಹೋಗಿವೆ. ಅಡುಗೆ ಕೋಣೆಯೊಳಗಡೆಯೂ ಹಾನಿ ಉಂಟಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ತಂಡ ತಕ್ಷಣ ತಲುಪಿ
ಕೊವಿಡ್ ಲಾಕ್ ಡೌನ್ ನಿಂದ ಖಾಸಗಿ ಬಸ್ ಉದ್ಯಮ ಸಂಕಷ್ಟದಲ್ಲಿದೆ.ಸರಕಾರ ಡಿಸೇಲ್ ದರ ಏರಿಕೆಯನುಸಾರ ದರ ಪರಿಷ್ಕರಿಸಿ ಒಂದಷ್ಟು ತೆರಿಗೆ ವಿನಾಯಿತಿಗಳನ್ನು ಮಾಡಿದ್ರೆ ಖಾಸಗಿ ಬಸ್ಸುಗಳು ಸುಗಮ ಸಂಚಾರ ಮಾಡಲು ಅನುಕೂಲವಾಗುವುದು ಎಂದು ಉಡುಪಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಗ್ರಹಿಸಿದ್ದಾರೆ. ಕಳೆದ ವರುಷ ಕೆ ಎಸ್ ಅರ್ ಟಿಸಿ ದರ ಕಡಿತ ಹಾಗೂ ವಿದ್ಯಾರ್ಥಿಗಳಿಗೆ ವಿನಾಯಿತಿ ಮಾಡಿರುವ ಕಾರಣಗಳನ್ನು ನೀಡಿದ ಹಿನ್ನಲೆಯಲ್ಲಿ, ಸರಕಾರ ಸುಮಾರು
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆಯೂ ಕೋವಿಡ್ ಸಂಕಷ್ಟ ಕಾಲದಲ್ಲಿ ಜನರಿಗೆ ಪ್ಯಾಕೇಜ್ ಗಳನ್ನು ನೀಡುವಂತೆ ಅಗ್ರಹಿಸಿ ಹಮ್ಮಿಕೊಂಡಿರುವ ಜನಂದೋಲನವು ಇಂದು ಉಡುಪಿ ಶಾಸಕ ರಘುಪತಿ ಭಟ್ ಕಚೇರಿ ಮುಂದುಗಡೆ ನಡೆಸಲಾಯಿತು.ವಿವಿಧ ಸಂಘಟನೆಗಳ ಕಾರ್ಯಕರ್ತರು ಜನಾಂದೋಲನದಲ್ಲಿ ಭಾಗವಹಿಸಿ ಶಾಸಕ ರಘುಪತಿ ಭಟ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ದ ಘೊಷಣೆಗಳನ್ನು ಕೂಗಿದ್ರು. ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಮಾತನಾಡಿ ಕೊವಿಡ್ ಸಂಕಷ್ಟ ಕಾಲದಲ್ಲಿ ಜನರಿಗೆ ಪ್ಯಾಕೇಜ್ ಗಳನ್ನ
ಹೆಜಮಾಡಿಯ ನದಿ ಹಾಗೂ ಸಮುದ್ರ ಒಂದಾಗುವ ಅಳುವೆ ಬಾಗಿಲಿಗೆ ಮೀನುಗಾರಿಕೆಗೆ ತೆರಳಿದ ಮೀನುಗಾರರೋರ್ವರು ಸಮುದ್ರದ ಬೃಹತ್ ಅಲೆಯ ದಾಳಿಗೆ ತುತ್ತಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರು ಹೆಜಮಾಡಿ ಕೋಡಿ ಮಾನಂಪಾಡಿ ನಿವಾಸಿ ಜಯಂತ್ (51).ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಹೊಂದಿದ್ದ ಇವರು ಮುಂಜಾನೆ ತೀರ ಮೀನುಗಾರಿಕೆ ನಡೆಸುವುದಕ್ಕಾಗಿ ಅಳವೆ ಪ್ರದೇಶಕ್ಕೆ ತೆರಳಿದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಂದ ಪಡುಬಿದ್ರಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು,
ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಕಾಂಗ್ರೆಸ್, ಜೆಡಿಎಸ್, ದಲಿತ ಸಂಘಟನೆಗಳಿಂದ ಜನಾಗ್ರಹ ಆಂದೋಲನ ಕಾಪುವಿನಲ್ಲಿ ನಡೆಯಿತು. ಕಾಪುವಿನಲ್ಲಿ ಶಾಸಕ ಲಾಲಾಜಿ ಮೆಂಡನ್ ಕಛೇರಿಗೆ ಮುತ್ತಿಗೆ ಹಾಕಿ ರಾಜ್ಯ, ಕೇಂದ್ರ ಸರ್ಕಾರಗಳ ಹಾಗೂ ಕಾಪು ಶಾಸಕರ ವಿರುದ್ಧ ಘೋಷಣೆಯನ್ನು ಕೂಗುವ ಮೂಲಕ ಪ್ರತಿಭಟಿಸಿದ್ದಾರೆ. ನೂರಾರು ಕಾರ್ಯಕರ್ತರು ಕಾಪು ರಾಜೀವ ಭವನದಿಂದ ಜಾಥದ ಮೂಲಕ ಶಾಸಕರ ಕಛೇರಿಯ ಮುಂಭಾಗದಲ್ಲಿ ಸಾಮಾಜಿಕ ಅಂತರದಲ್ಲಿ ನಿಂತು ಪ್ರತಿಭಟನೆಗೆ ಸಾತ್
ತನ್ನ ಅಸ್ಥಿತ್ವವನ್ನೇ ಕಳೆದುಕೊಂಡು ಭೂಗತದ ಅಂಚಿನಲ್ಲಿರುವ ಪಡುಬಿದ್ರಿ ಸ್ಮಶಾನ ಉಳಿಸುವಂತೆ ಅಂಬೇಡ್ಕರ್ ಯುವಸೇನೆಯ ತಾಲೂಕು ಅಧ್ಯಕ್ಷ ಲೋಕೇಶ್ ಕಂಚಿನಡ್ಕ ಹೆಸರಲ್ಲಿ ಸಾಮಾಜಿಕ ಜಲತಾಣ ದಲ್ಲಿ ಫೋಸ್ಟೊಂದು ಹರಿದಾಡುತ್ತಿದಂತೆ ಚುರುಕಾದ ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ ಭೇಟಿ ನೀಡಿ ಸಮಸ್ಯೆ ತಕ್ಷಣವೇ ಪರಿಹಾರ ಮಾಡುವ ಭರವಸೆ ವ್ಯಕ್ತ ಪಡಿಸಿದ್ದಾರೆ. ಪಡುಬಿದ್ರಿಯ ಕಂಚಿನಡ್ಕ ಭಾಗದಲ್ಲಿ ಇರುವ ಏಕೈಕ ಸಾರ್ವಜನಿಕ ರುದ್ರಭೂಮಿ ಇದಾಗಿದೆ, ಇಲ್ಲಿ ಎಲ್ಲಾ