Home ಕರಾವಳಿ Archive by category ಉಳ್ಳಾಳ

ದ.ಕ ದಲ್ಲಿ ಮತದಾನಕ್ಕೆ ಎಲ್ಲಾ ಸಿದ್ಧತೆ ಪೂರ್ಣ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಎ.26ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎ.೨೪.ರಂದು ಸಂಜೆ 6ಗಂಟೆಗೆ ಎಲ್ಲಾ ರೀತಿಯ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.ಎ.26ರಂದು ದಕ್ಷಿಣ ಕನ್ನಡ ಜಿಲ್ಲೆಯ 1876ಮತಗಟ್ಟೆಗಳಲ್ಲಿ ಬೆಳಗ್ಗೆ 7ಗಂಟೆಯಿಂದ ಸಂಜೆ 6ಗಂಟೆಯ ವರೆಗೆ ಮತದಾನ ನಡೆಸಲು ಎಲ್ಲಾ ಸಿದ್ದತೆ ಪೂರ್ಣ ಗೊಂಡಿದೆ ಎಂದು ದಕ್ಷಿಣ

ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತ : 28ರ ವಿವಾಹಿತ ಸಾವು

ಉಳ್ಳಾಲ: ಕೊಲ್ಯ ಕನೀರುತೋಟ ನಿವಾಸಿ 28 ರ ಹರೆಯದ ವಿವಾಹಿತರೊಬ್ಬರು ಮಲಗಿದ್ದಲ್ಲೆ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಇಂದು ಸಂಭವಿಸಿದೆ.ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು ಜಿತೇಶ್ ನಿನ್ನೆ ರಾತ್ರಿ ಊಟ ಮುಗಿಸಿ ಮಲಗಿದ್ದವರು ಬೆಳಿಗ್ಗೆ ಏಳದ ಸಂದರ್ಭ, ಮನೆಮಂದಿ ವಿಚಾರಿಸಿದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮಂಗಳೂರಿನ ಕೆಟಿಎಂ ಷೋರೂಮಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿತೇಶ್, ಕೊರೊನಾ ಸಂದರ್ಭ ಪಂಡಿತ್ ಹೌಸ್ ನಿವಾಸಿ

ಉಳ್ಳಾಲ : ರಾಜು ಕೋಟ್ಯಾನ್ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೊಗವೀರ ಪಟ್ಟಣ ನಿವಾಸಿ ರಾಜೇಶ್ ಕೋಟ್ಯಾನ್ ಯಾನೆ ರಾಜು ಕೋಟ್ಯಾನ್ ಎಂಬುವವರ ಕೊಲೆ ನಡೆಸಿದ್ದ ನಾಲ್ಕು ಮಂದಿ ಆರೋಪಿಗಳಿಗೆ  ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಠಾಣಾ ವ್ಯಾಪ್ತಿಯಲ್ಲಿ ಉಳ್ಳಾಲ ಮೊಗವೀರಪಟ್ಟಣ ನಿವಾಸಿ ರಾಜೇಶ್ ಕೋಟ್ಯಾನ್ ಯಾನೆ ರಾಜು ಕೋಟ್ಯಾನ್ ಎಂಬವರನ್ನು 2016ಎಪ್ರಿಲ್ 12 ರಂದು ಆರೋಪಿಗಳು ಬೆಳಗ್ಗಿನ ಜಾವ  ಉಳ್ಳಾಲ ಕೋಟೆಪುರ ಬರಕಾ ಓವರ್ ಸೀಸ್ ಫ್ಯಾಕ್ಟರಿಯ ಬಳಿ ಮರದ ಕಟ್ಟಿಗೆಗಳಿಂದ

ಉಳ್ಳಾಲ ಬೀಚ್‌ನಲ್ಲಿ ಮರಳಿನ ಆಕೃತಿ ಮೂಲಕ ಮತದಾನ ಜಾಗೃತಿ

ಉಳ್ಳಾಲ ಬೀಚ್‌ನಲ್ಲಿ ತಾಲೂಕು ಪಂಚಾಯತ್ ಉಳ್ಳಾಲ ಹಾಗೂ ಉಳ್ಳಾಲ ನಗರ ಸಭೆ, ಕೋಟೆಕಾರ್ ಪಟ್ಟಣ ಪಂಚಾಯತ್, ಸೋಮೆಶ್ವರ ಪುರಸಭೆ ಸಹಭಾಗಿತ್ವದಲ್ಲಿ ಮರಳು ಆಕೃತಿ ಜತೆಗೆ ಮೇಣದ ಬತ್ತಿ ಬೆಳಗುವ ಮೂಲಕ ಮತದಾನ ಜಾಗೃತಿ ಸಭೆ ನಡೆಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಜನಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನಶೆಟ್ಟಿ ಹಾಗೂ ಕೃಷ್ಣಪ್ಪ ಮೂಲ್ಯರು ನೆರೆದಿದ್ದವರಿಂದ ಮತದಾನ ಘೋಷಣೆ ಮೊಳಗಿಸಿದರು. ನಂತರ ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಮಾನ್ಯ ಮುಖ್ಯ

ದೇರಳಕಟ್ಟೆ : ಸ್ವೀಟ್ ಕಾರ್ನ್ ಸ್ಟಾಲ್‌ನಲ್ಲಿ ಗ್ಯಾಸ್ ಸಿಡಿದು ಬೆಂಕಿ

ದೇರಳಕಟ್ಟೆ : ರಸ್ತೆಬದಿಯಲ್ಲಿ ಇರಿಸಲಾದ ಸ್ವೀಟ್ ಕಾರ್ನ್ ಸ್ಟಾಲ್ ಒಂದರ ಗ್ಯಾಸ್ ಸಿಲಿಂಡರಿನಲ್ಲಿ ಗ್ಯಾಸ್ ಸೋರಿಕೆ ಉಂಟಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ. ಬಶೀರ್ ಎಂಬವರು ವ್ಯವಹಾರದಲ್ಲಿ ತೊಡಗಿದ್ದ ಸಂದರ್ಭ ಗ್ಯಾಸ್ ಸೋರಿಕೆ ಉಂಟಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಅಲ್ಲಿದ್ದ ಗ್ರಾಹಕರು ಹಾಗೂ ಸ್ಟಾಲ್ ಮಾಲೀಕರು ಓಡಿ ಪಾರಾಗಿದ್ದಾರೆ. ಬೆಂಕಿ ತೀವ್ರಗೊಂಡಿದ್ದು, ಸಾರ್ವಜನಿಕರು ಹೊಯ್ಗೆ, ನೀರು ಹಾಯಿಸಿ ಬೆಂಕಿ ನಂದಿಸಲು

ಪಿಯುಸಿ ಫಲಿತಾಂಶ: ದ.ಕ. ಪ್ರಥಮ, ಉಡುಪಿ ದ್ವಿತೀಯ

ಕರ್ನಾಟಕ 2023-24ರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಯುಥಾಪ್ರಕಾರ ಹೆಣ್ಣುಮಕ್ಕಳು ಮೇಲುಗಯ್ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ.ಗದಗ ಜಿಲ್ಲೆಯು ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರಿನ ಮೇಧಾ ಡಿ. ಅವರು ಕಲಾ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ; ಅಲ್ಲದೆ ವಿಜಯಪುರದ ವೇದಾಂತ್ ಮತ್ತು ಕವಿತಾ ಕೂಡ ಟಾಪರ್‌ಗಳಲ್ಲಿ ಇದ್ದಾರೆ. ವಿಜ್ಞಾನ ವಿಭಾಗದಲ್ಲಿ 598 ಅಂಕ ಪಡೆದ ವಿದ್ಯಾಲಕ್ಷ್ಮಿ ಮೊದಲ

ಬ್ರಹ್ಮಾವರ : ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ ಲಕ್ಷಾಂತರ ಮೌಲ್ಯದ ಮಿಲಿಟರಿ ಮದ್ಯ ವಶಕ್ಕೆ – ಓರ್ವ ಅರೆಸ್ಟ್

ಬ್ರಹ್ಮಾವರ : ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರದಲ್ಲಿ ನಡೆಸಿದ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಿಲಿಟರಿ ಮದ್ಯವನ್ನು ವಶಕ್ಕೆ ಪಡೆದು ಓರ್ವನ್ನು ಅರೆಸ್ಟ್ ಮಾಡಿದ್ದಾರೆ. ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ಉಡುಪಿ ಜಿಲ್ಲೆ ಇವರುಗಳು ಮಾರ್ಗದರ್ಶನದಂತೆ ಖಚಿತ ಮಾಹಿತಿ ಮೇರೆಗೆ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ

ಉಳ್ಳಾಲ: ಕಿಂಗ್ಸ್ ಕಲ್ಲಾಪು ವತಿಯಿಂದ ಭಂದುತ್ವ ಸೌಹಾರ್ದ ಇಫ್ತಾರ್ ಕೂಟ

ಉಳ್ಳಾಲ: ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ಕಿಂಗ್ಸ್ ಕಲ್ಲಾಪು ಅಯೋಜಿಸಿದ ಬಂಧುತ್ವ ಸೌಹಾರ್ದ ಇಫ್ತಾರ್ ಕೂಟ ತೊಕ್ಕೋಟ್ಟು ಯುನಿಟಿ‌ ಹಾಲ್‌ ಮೈದಾನದಲ್ಲಿ ನಡೆಯಿತು. ಸಭಾಧ್ಯಕ್ಷ ಯು.ಟಿ ಖಾದರ್ ಫರೀದ್ ಮುಖ್ಯ ಅತಿಥಿಯಾಗಿ ‌ಭಾಗವಹಿಸಿ‌ ಮಾತನಾಡಿ, ಪವಿತ್ರವಾದ ತಿಂಗಳ ಪವಿತ್ರವಾದ ದಿನದಲ್ಲಿ ಶ್ರದ್ಧಾಪೂರ್ವಕ ಉಪವಾಸ ವೃತ ‌ಮಾಡಿಕೊಂಡು ಇಫ್ತಾರ್ ಸಂದರ್ಭದಲ್ಲಿ ಎಲ್ಲಾ ಜಾತಿ ಎಲ್ಲಾ ಧರ್ಮದ ಸಮಾಜಿಕ ಧಾರ್ಮಿಕ ಮುಖಂಡರನ್ನು ಸೇರಿಸಿಕೊಂಡು ಭಂದುತ್ವ

ಉಳ್ಳಾಲ: ನಾಟೆಕಲ್ ಬೈಕ್ ಅಪಘಾತ – ಬೈಕ್‌ನಲ್ಲಿದ್ದ ಇಬ್ಬರು ಮೃತ್ಯು

ಉಳ್ಳಾಲ: ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.ಬೋಂದೇಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ಹಳೆಯಂಗಡಿ ತೋಕೂರು ಬಸ್ ನಿಲ್ದಾಣ ಬಳಿಯ ನಿವಾಸಿ ಶ್ರೀ ನಿಧಿ (29) ನಿನ್ನೆ ಸಾವನ್ನಪ್ಪಿದ್ದು

ಉಳ್ಳಾಲ : ಲಾರಿ ನಂಬರ್ ಪ್ಲೇಟ್ ಗ್ರೀಸ್ ಹಚ್ಚಿ ಮರಳು ಸಾಗಾಟ

ಮಂಗಳೂರು : ಲಾರಿಗಳ ನಂಬರ್ ಪ್ಲೇಟ್‌ಗೆ ಗ್ರೀಸ್ ಹಚ್ಚಿ ಹಾಗೂ ಸ್ಟಿಕ್ಕರ್ ಬಳಸಿ ಮರೆಮಾಚಿಸಿ ರಾತ್ರಿಯಿಡೀ ವ್ಯಾಪಕವಾಗಿ ಮರಳು ಸಾಗಾಟವನ್ನು ಕೊಣಾಜೆ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿ ಪೊಲೀಸರ ಸಮ್ಮುಖದಲ್ಲೇ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ನಿನ್ನೆ ತಡರಾತ್ರಿ ಅಡ್ಯಾರ್ ಕಣ್ಣೂರು ಸಮೀಪ ನಂಬರ್ ಪ್ಲೇಟ್ ಮಾಸಿದ ಮರಳು ಸಾಗಾಟದ ಲಾರಿ ಡಿವೈಡರಿಗೆ ಢಿಕ್ಕಿ ಹೊಡೆದ ಪರಿಣಾಮ ಸಾರ್ವಜನಿಕರು ಲಾರಿಗಳನ್ನು ತಡೆಹಿಡಿದು ನಡೆಸಿದ