Home ಕರಾವಳಿ Archive by category ಉಳ್ಳಾಳ (Page 30)

ನಿವೃತ್ತ ಮುಖ್ಯೋಪಾಧ್ಯಾಯ ಜಗನ್ನಾಥ .ಕೆ ನಿಧನ

ಮಂಗಳೂರು : ಉಳ್ಳಾಲ ತಾಲೂಕಿನ ಸೋಮೇಶ್ವರ ಆನಂದಾಶ್ರಮ ಪ್ರೌಢ ಶಾಲೆಯ ನಿವತ್ತ ಮುಖ್ಯೋಪಾಧ್ಯಾಯ ಜಗನ್ನಾಥ .ಕೆ (77)ಅವರು ಹೃದಯಾಘಾತದಿಂದ ಮಂಗಳವಾರ ನಿಧನರಾದರು . ಅವರು ಉಳ್ಳಾಲ ಕಾಪಿಕಾಡ್ ನಿವಾಸಿಯಾಗಿದ್ದರು . ತನ್ನ ನಿವೃತ್ತಿಯ ಬಳಿಕ ಅವರು ಆನಂದಾಶ್ರಮ ಶಾಲೆಯ ಮಾತೃಸಂಸ್ಥೆಯಾಗಿರುವ ಸಾರಸ್ವತ ಶಿಕ್ಷಣ ಸಂಸ್ಥೆಯ ಆಡಳಿತಕ್ಕೊಳಪಟ್ಟ ಉತ್ತರ ಕನ್ನಡದ ಶಿರಾಲಿಯ

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ, ಚಾಲಕನಿಗೆ ಗಾಯ

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕದಲ್ಲಿರುವ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿ ಹೊಡೆದಿರುವ ಘಟನೆ ರಾ.ಹೆ66 ರ ಕೋಟೆಕಾರು ಬೀರಿ ಸಮೀಪ ನಿನ್ನೆ ತಡರಾತ್ರಿ ವೇಳೆ ನಡೆದಿದೆ. ಸ್ಥಳೀಯ ಯುವಕರ ತಂಡ ತಕ್ಷಣ ಕಾರು ಚಾಲಕನನ್ನು ಹೊರಗೆಳೆದು ರಕ್ಷಿಸಿ ಮಾನವೀಯತೆ ಮೆರೆದಿರುವ ವೀಡಿಯೋ ವೈರಲ್ ಆಗಿದೆ. ಹಳೆಯಂಗಡಿ ನಿವಾಸಿ ನೌಫಾಲ್ ಗಾಯಗೊಂಡವರು. ತಲಪಾಡಿ ಕಡೆಯಿಂದ ಹಳೆಯಂಗಡಿಯತ್ತ ತೆರಳುವ ವೇಳೆ ಕಾರು ನಿಯಂತ್ರಣ ಕಳೆದು ರಾ.ಹೆ. ಬಳಿಯ ವಿಭಜಕ

ಬೈಕ್ ನಲ್ಲಿ ಗಾಂಜಾ ಸಾಗಾಟ : ಓರ್ವ ಬಂಧನ, ಇನ್ನೋರ್ವ ಪರಾರಿ

ಉಳ್ಳಾಲ: ಬೈಕಿನಲ್ಲಿ ಗೋಣಿಚೀಲದಲ್ಲಿ ರೂ.40,000 ಮೌಲ್ಯದ ಗಾಂಜಾ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿರುವ ಘಟನೆ ತಲಪಾಡಿ ತಚ್ಚಣಿ ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದ ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಮಂಜೇಶ್ವರ ಸುಂಕದಕಟ್ಟೆಯ ಮೊಹಮ್ಮದ್ ರಾಝಿಕ್ ಎಂಬಾತನನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ಅಸ್ಗರ್ ತಲೆಮರೆಸಿಕೊಂಡಿದ್ದಾನೆ. ಇಬ್ಬರು ತಲಪಾಡಿ ಗ್ರಾಮದ ತಚ್ಚಣಿ ಎಂಬಲ್ಲಿ ಗಾಂಜಾ ಮಾರಾಟ ಮಾಡಲು ಬಂದಿದ್ದರು.

ಕುತ್ತಾರು , ಬೈಕ್ ಅಪಘಾತ : ಮಿದುಳು ನಿಷ್ಕ್ರಿಯ, ಕುಟುಂಬಸ್ಥರಿಂದ ಅಂಗಾಂಗ ದಾನ

ಉಳ್ಳಾಲ: ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಅಂಗಾಂಗ ದಾನ ನಡೆಸಲು ಮುಂದಾಗಿದ್ದಾರೆ. ಅಪಘಾತ ನಂತರ ಅವರನ್ನು ದೇರಳಕಟ್ಟೆ ಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ಗಾಯಾಳು ಮಿದುಳು

ಕುತ್ತಾರು : ಡಿವೈಡರ್ ಗುದ್ದಿದ ಬೈಕ್,ಸವಾರ ಗಂಭೀರ ಗಾಯ

ಉಳ್ಳಾಲ: ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಘಟನೆ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಸಮೀಪ ಸಂಭವಿಸಿದೆ. ಚೆಂಬುಗುಡ್ಡೆ ಕೆರೆಬೈಲು ನಿವಾಸಿ ಭೂಷಣ್ ರೈ (20) ಗಾಯಾಳು. ಕಲ್ಲಾಪು ಬುರ್ದುಗೋಳಿ ಕೋಲದಲ್ಲಿ ಭಾಗವಹಿಸಿದ್ದ ಇವರು ಬೈಕಿನಲ್ಲಿ ಕುತ್ತಾರಿನತ್ತ ಬರುವ ಸಂದರ್ಭ ಬೈಕ್ ಡಿವೈಡರಿಗೆ ಬಡಿದಿದ್ದು, ಪರಿಣಾಮ ಭೂಷಣ್ ಇನ್ನೊಂದು ರಸ್ತೆಗೆ ಎಸೆಯಲ್ಪಟ್ಟಿದ್ದರು. ತಲೆಗೆ

ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಫ್ಯಾಕ್ಟರಿ : ಸಿದ್ದರಾಮಯ್ಯ ಹೇಳಿಕೆ

ಉಳ್ಳಾಲ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹಿಂದುತ್ವದ ಫ್ಯಾಕ್ಟರಿ ಆಗಿದ್ದು, ಕೋಮುವಾದ ಹುಟ್ಟೋದು ಇಲ್ಲಿಂದ, ಇದು ಕೊಮುವಾದದ ಲ್ಯಾಬೋರೇಟರಿ, ಬಿಜೆಪಿ ಬಂಡವಾಡಳವೇ ಇದು ಎಂದು ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಅವರು ಹರೇಕಳ ಕಡವಿನಬಳಿಯ ಯು.ಟಿ ಫರೀದ್ ವೇದಿಕೆಯಲ್ಲಿ ಜರಗಿದ ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಬೃಹತ್ ಸಾರ್ವಜನಿಕ ಜನಜಾಗೃತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅಧಿಕಾರಕ್ಕೆ

ತಲೆನೋವು,ಜ್ವರದಿಂದ ಬಳಲುತ್ತಿದ್ದ ಆರನೇ ತರಗತಿ ವಿದ್ಯಾರ್ಥಿ ಸಾವು.

ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು,ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಎರಡು ದಿನಗಳಿಂದ ಜ್ವರ ,ತಲೆನೋವು ಎನ್ನುತ್ತಿದ್ದ ಅಶ್ವಿತ್ ನಾಳೆ ನಡೆಯಲಿರುವ ಶಾಲಾ ವಾರ್ಷಿಕೋತ್ಸವದ ಸ್ಕಿಟ್ ನಲ್ಲೂ ಭಾಗವಹಿಸಲು ತಯಾರಿ ನಡೆಸಿದ್ದನಂತೆ. ವಿದ್ಯಾರ್ಥಿಯ ಅಕಾಲಿಕ ಮರಣದಿಂದ ಶಾಲಾ ಆಡಳಿತ ಮಂಡಳಿ ,ಕುಟುಂಬ

ರಸ್ತೆ ಬದಿ ನಿಂತಿದ್ದ ಬಾಲಕನಿಗೆ ಕಾರು ಢಿಕ್ಕಿ , ಬಾಲಕ ಸ್ಥಳದಲ್ಲೇ ಸಾವು

ರಸ್ತೆ ಬದಿ ನಿಂತಿದ್ದ ಎಂಟನೇ ತರಗತಿ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಮೃತ ಬಾಲಕ. ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದನು. ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆಬದಿಯಲ್ಲಿ ನಿಂತಿದ್ದ ಬಾಲಕನಿಗೆ ಮುಡಿಪು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಕಾರು ಚಾಲಕನ

ವಿದೇಶಿ ವಿದ್ಯಾರ್ಥಿಗಳಿದ್ದ ಸ್ಕೂಟರಿಗೆ ಕಾರು ಢಿಕ್ಕಿ

ಉಳ್ಳಾಲ: ವಿದೇಶಿ ವಿದ್ಯಾರ್ಥಿ ಗಳಿದ್ದ ಸ್ಕೂಟರ್‍ಗೆ ಢಿಕ್ಕಿ ಹೊಡೆದ ಕಾರು ಪರಾರಿಯಾಗುವ ಯತ್ನದಲ್ಲಿದ್ದಾಗ ತಡೆದ ಸ್ಥಳೀಯರು, ಅದನ್ನು ಹಿಡಿದು ಪೊಲೀಸ್ರಿಗೆ ಒಪ್ಪಿಸಿದ ಘಟನೆ ತಲಪಾಡಿ ದೇವಿನಗರ ಎಂಬಲ್ಲಿ ನಡೆದಿದೆ. ಕೇರಳ ಮೂಲದ ಕಾರು ಮತ್ತು ಅದರ ಚಾಲಕ ಅಹಮ್ಮದ್ ಮುಬಾರಿಷ್ ಎ.ಕೆ ಎಂಬಾತನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಅಹಮ್ಮದ್ ಮುಬಾರಿಷ್ ಶುಕ್ರವಾರ ಸಂಜೆ ಕಾರಿನಲ್ಲಿ ಮಂಗಳೂರಿಂದ ಕೇರಳದ ಕಡೆಗೆ ಅತಿ ವೇಗದಿಂದ

ವಿದೇಶಿ ವಿದ್ಯಾರ್ಥಿಗಳಿದ್ದ ಸ್ಕೂಟರಿಗೆ ಢಿಕ್ಕಿ ಹೊಡೆದು ಪರಾರಿಗೆ ಯತ್ನಸಿದ ಕಾರು ಚಾಲಕ ವಶಕ್ಕೆ

ಉಳ್ಳಾಲ: ವಿದೇಶಿ ವಿದ್ಯಾರ್ಥಿ ಗಳಿದ್ದ ಸ್ಕೂಟರ್‍ಗೆ ಢಿಕ್ಕಿ ಹೊಡೆದ ಕಾರು ಪರಾರಿಯಾಗುವ ಯತ್ನದಲ್ಲಿದ್ದಾಗ ತಡೆದ ಸ್ಥಳೀಯರು, ಅದನ್ನು ಹಿಡಿದು ಪೆÇಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿ ದೇವಿನಗರ ಎಂಬಲ್ಲಿ ನಡೆದಿದೆ. ಕೇರಳ ಮೂಲದ ಕಾರು ಮತ್ತು ಅದರ ಚಾಲಕ ಅಹಮ್ಮದ್ ಮುಬಾರಿಷ್ ಎ.ಕೆ ಎಂಬಾತನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಅಹಮ್ಮದ್ ಮುಬಾರಿಷ್ ಶುಕ್ರವಾರ ಸಂಜೆ ಕಾರಿನಲ್ಲಿ ಮಂಗಳೂರಿಂದ ಕೇರಳದ ಕಡೆಗೆ ಅತಿ ವೇಗದಿಂದ