ಮಂಜೇಶ್ವರದ ಮಿಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಟ್ಟತ್ತಮೊಗರುವಿನಲ್ಲಿ ಮೊಗೇರ ದೈವದ ಪವಾಡ ಕಂಡು ಅಲ್ಲಿನ ಜನತೆ ಅಚ್ಚರಿಗೆ ಒಳಗಾಗಿದ್ದಾರೆ. ಮೊಗೇರ ದೈವಗಳ ವರ್ಷಾವಧಿ ನೇಮೋತ್ಸವ ನಡೆಯುತ್ತದೆ. ಈ ಬಾರಿ ದೈವಗಳ ಭಂಡಾರವನ್ನು ಈ ವರ್ಷದ ಉತ್ಸವಕ್ಕೆಂದು ತೆಗೆದಿಡುವಾಗ, ಕಳೆದ ವರ್ಷ ದೈವದ ಭಂಡಾರಕ್ಕೆ ಅರ್ಪಿಸಿದ ಮಲ್ಲಿಗೆ ಹೂ ವರ್ಷ ಕಳೆದರೂ ಇಂದಿಗೂ ಬಾಡದೆ ಹಾಗೆ
ಮಂಜೇಶ್ವರದ ಮೊರತ್ತಾಣೆ ನಿವಾಸಿ ಬಾಬು ಬೆಳ್ಚಪ್ಪಾಡ ಎಂಬವರ ಪುತ್ರ ರೋಹಿತಾಕ್ಷ ಎಂಬವರು ನಾಪತ್ತೆಯಾಗಿದ್ದಾರೆ. ಮಂಜೇಶ್ವರ ಸಮೀಪದ ದೈಗೋಳಿ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಇವರು ಎಪ್ರಿಲ್ 4ರಂದು ಕೆಲಸಕ್ಕೆಂದು ಹೋದಾವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಆತನ ಸಹೋದರ ಗಂಗೂ ಮೊರತ್ತಾಣೆ ಅವರು ಮಂಜೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ದೂರು ದಾಖಲಿಸಿಕೊಂಡು ತಪಾಸಣೆ ನಡೆಸುತ್ತಿದ್ದಾರೆ. ಅಲ್ಲದೆ ರೋಹಿತಾಕ್ಷನ ಬಗ್ಗೆ ಸುಳಿವು ಸಿಕ್ಕಲ್ಲಿ
ಮಂಜೇಶ್ವರ: ಭಾರತದ ಆಯಕಟ್ಟಿನ ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಭಾರೀ ಬಂಡವಾಳದ ಕುಳಗಳಾದ ಅದಾನಿ ಮತ್ತು ಅಂಬಾನಿ ಎಂಬ ಆಧುನಿಕ ಕುಬೇರರ ಪಾದಗಳಿಗೆ ಸಮರ್ಪಿಸಿ ದೇಶದ ಆರ್ಥಿಕತೆಯನ್ನು ಪಾತಾಳಕ್ಕಿಳಿಸಿದ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಜನಹಿತವನ್ನು ಸಂಪೂರ್ಣವಾಗಿ ಮರೆತಿದೆ. ಜನವಿರೋಧಿ, ಭ್ರಷ್ಟ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ತನಕ ಹೋರಾಟ ಮುಂದುವರಿಸಲಿದೆ ಎಂದು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ
ಮಂಜೇಶ್ವರ: ಕುಂಜತ್ತೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಡರ್ ಪಾಸ್ ನಿಂದ ಬುಧವಾರ ಬೆಳಗ್ಗಿನಿಂದ ವಾಹನ ಸಂಚಾರ ಆರಂಭಗೊಂಡಿತು.ಅಂಡರ್ ಪಾಸ್ ನೀಡುವುದಾಗಿ ಅಧಿಕಾರಿಗಳ ಭಾಗದಿಂದ ಹಸಿರು ನಿಶಾನೆ ಲಭಿಸಿದಾಗ ಸ್ಥಳೀಯರು ಅತೀವ ಸಂತೋಷಪಟ್ಟಿದ್ದರೂ ಈ ರೀತಿಯ ಅಂಡರ್ ಪಾಸ್ ಸಿಗಬಹುದೆಂದು ಯಾರೂ ನಿರೀಕ್ಷಿಸಿರಲಿಲ್ಲವೆಂಬುದಾಗಿ ಜನರು ಆಡಿಕೊಳ್ಳುತಿದ್ದಾರೆ. ಅಂಡರ್ ಪಾಸ್ ಅಗಲ ಕಿರಿದಾಗಿದ್ದು ಎರಡು ಲಘು ವಾಹನಗಳು ಮುಖಾಮುಖಿಯಾಗಿ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ
ಮಂಜೇಶ್ವರ : ಮಂಜೇಶ್ವರ ಗ್ರಾ.ಪಂ. ನ 17ನೇ ವಾರ್ಡು ವ್ಯಾಪ್ತಿಯಲ್ಲಿರುವ ಪುರಾತನ ಬಾವಿಯೊಂದು ಈಗ ಕಸದ ತೊಟ್ಟಿಯಾಗಿ ದುರ್ನಾತ ಬೀರುತ್ತಿದ್ದು ಅವಸಾನದ ಅಂಚಿಗೆ ತಲುಪಿದ್ದರೂ ಈ ಬಾವಿಯ ನೀರನ್ನು ಸಮೀಪದ ಹೋಟೆಲ್, ಬೇಕರಿ, ಜ್ಯೂಸ್ ಅಂಗಡಿ, ಪಾನಿಪುರಿ ಸ್ಟಾಲ್ ಗಳಿಗೆ ವರ್ಷಗಳಿಂದ ಉಪಯೋಗಿಸುತ್ತಿರುವ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ವರ್ಷಗಳ ಹಿಂದೆ ಪರಿಸರದ ನಾಗರಿಕರ ನೀರಿನ ದಾಹ ತೀರಿಸುತ್ತಿದ್ದ ಬಾವಿಯನ್ನು ಈಗ ಕಸ ಎಸೆಯಲು ಬಳಸುತ್ತಿರುವುದರಿಂದ ಬಾವಿಯ ನೀರು
ಮಂಜೇಶ್ವರ: ಮಿಯಾಪದವು ಪರಿಸರದಲ್ಲಿ ಎರಡು ಲಾರಿಗಳನ್ನು ಬಂದೂಕು ತೋರಿಸಿ ಅಪಹರಿಸಿದ ಅರೋಪಿಗಳನ್ನು ಹಾಗೂಕಳವು ವಾಹನಗಳನ್ನು ಮಂಜೇಶ್ವರ ಪೊಲೀಸ್ರು ವಶಕ್ಕೆ ತೆಗೆದಿದ್ದಾರೆ. ಒಂದು ಆಲ್ಟೋ ಕಾರು ಹಾಗೂ ಬೈಕಿನಲ್ಲಿ ಆಗಮಿಸಿದ ತಂಡ ಈ ಕೃತ್ಯಗೈದಿದೆ. ಮಾಹಿತಿ ಅರಿತು ಸ್ಥಳಕ್ಕಾಗಮಿಸಿದ ಮಂಜೇಶ್ವರ ಪೊಲೀಸ್ರು ಸ್ಥಳೀಯರ ಮಾಹಿತಿ ಆಧಾರದಲ್ಲಿ ಕುರುಡಪದವು ಕೊಮ್ಮಂಗಳ ತನಕ ಅಪರಾಧಿಗಳನ್ನು ಹಿಂಬಾಲಿಸಿದ್ದಾರೆ. ಕುರುಡ ಪದವು ಕೊಮ್ಮಂಗಳಕ್ಕೆ ಪೊಲೀಸ್ರು ತಲುಪುತಿದ್ದಂತೆಯೇ
ಕಾಸರಗೋಡು ಜಿಲ್ಲೆಯ ಶ್ರೀ ಮದ್ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠದಲ್ಲಿ ತುಲು ಲಿಪಿ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು. ಶ್ರೀ ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠ ಕಾಸರಗೋಡು. ಇಲ್ಲಿನ ಶ್ರೀ ವಿಷ್ಣುಮಂಗಲ ದೇವಾಲಯದ ವಾರ್ಷಿಕೋತ್ಸವದ ಸಂಧರ್ಭದಲ್ಲಿ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದಂಗಳವರ ಹಾಗೂ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಕೇರಳದ ಮಾಜಿ ಕಂದಾಯ ಸಚಿವರಾದ ಶ್ರೀ ಇ ಚಂದ್ರಶೇಖರನ್ ಅವರು ಶ್ರೀ ಮಠದ
ಮಂಜೇಶ್ವರ: ಅದಾನಿ ಗ್ರೂಪಿನ ಕಾನೂನು ಬಾಹಿರವಾದ ಚಟುವಟಿಕೆಗಳನ್ನು ಸಂಯುಕ್ತ ಪಾರ್ಲಿಮೆಂಟರಿ ಸಮಿತಿ ತನಿಖೆ ನಡೆಸಬೇಕು, ಕೇಂದ್ರ ಸರ್ಕಾರದ ಬಜೆಟಿನ ಜನ ವಿರೋಧಿ ನಿರ್ದೇಶನಗಳನ್ನು ಕೂಡಲೇ ಹಿಂಪಡೆಯಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ಸಿಪಿಐ ಮಂಜೇಶ್ವರ ವಲಯ ಸಮಿತಿಯ ವತಿಯಿಂದ ಹೊಸಂಗಡಿಯಲ್ಲಿ ಪ್ರತಿಭಟನಾ ಧರಣಿ ನಡೆಸಿದರು. ಸಿಪಿಐ ಜಿಲ್ಲಾ ಸಮಿತಿ ಸದಸ್ಯ ಅಜಿತ್ ಎಂಸಿ ಲಾಲ್ ಬಾಗ್ ರವರ ಅಧ್ಯಕ್ಷತೆಯಲ್ಲಿ ನಡೆದ ಧರಣಿಯನ್ನು ಸಿಪಿಐ ಜಿಲ್ಲಾ ಕಾರ್ಯಕಾರಿ ಸದಸ್ಯ
ಮಂಜೇಶ್ವರ: ಸರಕಾರಿ ವೃತ್ತಿಪರ ಉನ್ನತ ಪ್ರೌಢಶಾಲೆ ಕುಂಜತ್ತೂರು ಇಲ್ಲಿನ ವಿದ್ಯಾರ್ಥಿ ಆಕಾಶ್ ಕ್ರೀಡಾರಂಗದಲ್ಲಿ ಮಾಡಿದ ಸಾಧನೆಗೆ ಶಾಲಾವತಿಯಿಂದ ಸನ್ಮಾನ ಸಮಾರಂಭವನ್ನು ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. 2022 -23ನೇ ಸಾಲಿನ ಕೇರಳ ರಾಜ್ಯ ಮಟ್ಟದ ಶಾಲಾ ಕ್ರೀಡೋತ್ಸವದಲ್ಲಿ ನಡೆದ ಕಬಡ್ಡಿಯಲ್ಲಿ ಕಾಸರಗೋಡು ಜಿಲ್ಲೆಯ ತಂಡದ ನಾಯಕನಾಗಿ ಆಡಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ, ಹಾಗೂ ಇವರ ಸಾಧನೆಯನ್ನು ಪರಿಗಣಿಸಿ
ಮಂಜೇಶ್ವರ: ಹುಟ್ಟು ಹಬ್ಬದಂದೇ ಗ್ರೈಂಡರ್ ಗೆ ಶಾಲು ಸಿಲುಕಿ ಯುವತಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿದ್ದಾಳೆ. ತೂಮಿನಾಡು ಲಕ್ಷಂ ವೀಡು ಕಾಲನಿ ನಿವಾಸಿ ರಂಜನ್ ಕುಟ್ಟ ಎಂಬವರ ಪತ್ನಿ ಜಯಶೀಲ ಚುಮ್ಮಿ (20) ಸಾವನ್ನಪ್ಪಿದ ದುರ್ದೈವಿ. ಈಕೆ ತೂಮಿನಾಡಿನಲ್ಲಿರುವ ಬೇಕರಿಯೊಂದರ ನೌಕರಿಯಾಗಿದ್ದು ಎಂದಿನಂತೆ ಬೇಕರಿಗೆ ತೆರಳಿ ಗ್ರೈಂಡರ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಮಧ್ಯೆ ಶಾಲು ಗ್ರೈಂಡರ್ ಗೆ ಸಿಲುಕಿ ದುರಂತ ಸಂಭವಿಸಿದೆ. ಹುಟ್ಟು ಹಬ್ಬದ ದಿನವಾದ ಹಿನ್ನೆಲೆಯಲ್ಲಿ




























