Home ಕರಾವಳಿ Archive by category ಕಾಸರಗೋಡು (Page 4)

ಮಂಜೇಶ್ವರ : ರಾ.ಹೆದ್ದಾರಿಯಲ್ಲಿ ಕಾರಿಗೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್ – ಮೂವರ ದಾರುಣ ಅಂತ್ಯ

ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ ಕುಂಜತ್ತೂರಿನ ವಿರುದ್ಧ ದಿಕ್ಕಿನಲ್ಲಿ ಅಮಿತ ವೇಗದಲ್ಲಿ ಸಂಚರಿಸಿದ ಆಂಬ್ಯುಲೆನ್ಸ್ ಎದುರಿನಿಂದ ಬರುತಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಕೂಡಾ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕುಂಜತ್ತೂರು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರದಂದು ಬೆಳಿಗ್ಗೆ 10-50 ರ ಸುಮಾರಿಗೆ ಈ

ಪಿಯುಸಿ ಫಲಿತಾಂಶ: ದ.ಕ. ಪ್ರಥಮ, ಉಡುಪಿ ದ್ವಿತೀಯ

ಕರ್ನಾಟಕ 2023-24ರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಯುಥಾಪ್ರಕಾರ ಹೆಣ್ಣುಮಕ್ಕಳು ಮೇಲುಗಯ್ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ.ಗದಗ ಜಿಲ್ಲೆಯು ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರಿನ ಮೇಧಾ ಡಿ. ಅವರು ಕಲಾ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ; ಅಲ್ಲದೆ ವಿಜಯಪುರದ ವೇದಾಂತ್ ಮತ್ತು ಕವಿತಾ ಕೂಡ ಟಾಪರ್‌ಗಳಲ್ಲಿ ಇದ್ದಾರೆ. ವಿಜ್ಞಾನ ವಿಭಾಗದಲ್ಲಿ 598 ಅಂಕ ಪಡೆದ ವಿದ್ಯಾಲಕ್ಷ್ಮಿ ಮೊದಲ

ಮಂಜೇಶ್ವರ: ಎಟಿಎಂಗೆ ಹಣ ತುಂಬಿಸಲು ಬಂದ ವಾಹನದಿಂದ ದರೋಡೆ

ಮಂಜೇಶ್ವರ : ಎಟಿಎಂಗೆ ಹಣ ತುಂಬಿಸಲು ಬಂದ ವಾಹನದ ಗಾಜು ಪುಡಿಗೈದು ೫೦ಲಕ್ಷ ರೂ. ದರೋಡೆಗೈದು ತಂಡ ಪರಾರಿಯಾದ ಘಟನೆ ಉಪ್ಪಳದಲ್ಲಿ ನಡೆದಿದೆ. ವಾಹನದ ಗಾಜು ಒಡೆದು ಹಣವಿದ್ದ ಪೆಟ್ಟಿಗೆಯನ್ನು ತೆಗೆದುಕೊಂಡು ತಂಡ ಪರಾರಿಯಾಗಿದೆ ಎಂದು ತಿಳಿದು ಬಂದಿದೆ. ಬುಧವಾರ ಮಧ್ಯಾಹ್ನ 2 ಗಂಟೆಗೆ ಉಪ್ಪಳದಲ್ಲಿ ಈ ಘಟನೆ ನಡೆದಿದೆ. ಎಟಿಎಂನಲ್ಲಿ ಹಣ ತುಂಬುತ್ತಿದ್ದಾಗ ಖಾಸಗಿ ಕಂಪನಿಯ ವಾಹನದಲ್ಲಿ ಕಳ್ಳತನ ನಡೆದಿದೆ. ಸ್ಥಳಕ್ಕಾಗಮಿಸಿದ ಉಪ್ಪಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ

ಕೊಂಡೆವೂರಿನಲ್ಲಿ ಲೋಕಕ್ಷೇಮಕ್ಕಾಗಿ ನವಗ್ರಹ ಯಾಗ ಮತ್ತು ಪ್ರತಿಷ್ಠೆ

ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ ಲೋಕಕ್ಷೇಮಕ್ಕಾಗಿ ಅತ್ಯಪೂರ್ವವಾದ ‘ನವಗ್ರಹ ಪ್ರತಿಷ್ಠೆ’ ಹಾಗೂ ‘ಅಷ್ಟೋತ್ತರ ಸಹಸ್ರ ನವಗ್ರಹ ಯಾಗ’ಗಳು ಸಹಸ್ರಾರು ಭಕ್ತಾದಿಗಳ ಪಾಲ್ಗೊಳ್ಳುವಿಕೆಯಿಂದ ವಿಜೃಂಭಣೆಯಿAದ ನಡೆಯಿತು. ಉಡುಪಿಯ ಅದಮಾರು ಮಠದ ಪರಮ ಪೂಜ್ಯ ಶ್ರೀ ಶ್ರೀ ಈಶ ಪ್ರಿಯ ತೀರ್ಥ ಶ್ರೀಪಾದಂಗಳವರು ತಮ್ಮ ಆಶೀರ್ವಚನದಲ್ಲಿ “ಇಡೀ ದೇಶಕ್ಕೆ ಯಾಗದ ಮೂಲಕ ಸಂಪತ್ತು ತನ್ಮೂಲಕ ಸದ್ಭಾವನೆ ದೊರೆಯುತ್ತದೆ, ನಾವೆಲ್ಲರೂ ಕೂಡ ದೇಶದ ಏಳಿಗೆಯನ್ನು ಕೊಂಡೆವೂರು

ಕಾಸರಗೋಡು: ಅಂಬಲತ್ತರದಲ್ಲಿ ಪತ್ತೆಯಾದ ಖೋಟಾ ನೋಟು

ಕಾಸರಗೋಡು ಜಿಲ್ಲೆಯ ಕಾಞಾಂಗಾಡ್ ಸಮೀಪ ಅಂಬಲತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ರೂ 2 ಸಾವಿರ ಮುಖಬೆಲೆಯ 7.25 ಕೋಟಿ ರೂ ಪತ್ತೆಯಾಗಿದ್ದು ತನಿಖೆಯ ವೇಳೆ ಇವೆಲ್ಲವೂ ಖೋಟಾ ನೋಟುಗಳು ಎಂದು ತನಿಖೆಯಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ನಿವಾಸಿ ಸುಲೈಮಾನ್ ಸಹಿತ ಹಾಗೂ ಇಬ್ಬರನ್ನು ಪೋಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.ಅಂಬಲತರ ಠಾಣಾ ವ್ಯಾಪ್ತಿಯ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ

ಮಂಜೇಶ್ವರ: ವಿದ್ಯುತ್ ಶಾಕ್ ತಗುಲಿ ಯುವಕನ ದಾರುಣ ಅಂತ್ಯ

ಮಂಜೇಶ್ವರ: ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಹೊಸಂಗಡಿ ಸಮೀಪದ ಅಂಗಡಿಪದವು ನಿವಾಸಿ ದಿವಂಗತ ಅಶೋಕ್ – ಕಲಾವತಿ ದಂಪತಿಯ ಪುತ್ರ ಪ್ರಜ್ವಲ್ (19) ಸಾವನ್ನಪ್ಪಿದ ದುರ್ದೈವಿ. ಅಂಗಡಿಪದವಿನ ಅಂಗಡಿಯೊಂದರ ಮುಂಭಾಗದಲ್ಲಿ ವಿದ್ಯುತ್ ಹರಿಯುತ್ತಿದ್ದ ಕಬ್ಬಿಣದ ಗೇಟ್ ನ್ನು ತಿಳಿಯದೆ ಸ್ಪರ್ಶಿಸಿದಾಗ ವಿದ್ಯುತ್ ಶಾಕ್ ತಗುಲಿದ್ದು, ಬೊಬ್ಬೆ ಕೇಳಿದ ಸ್ಥಳೀಯರು ವಿದ್ಯುತ್ ವಯರ್ ನ್ನು ವಿಚ್ಚೆದಿಸಿ, ಕೂಡಲೇ ಉಪ್ಪಳದ ಖಾಸಗಿ

ಕೊಂಡೆವೂರು ಮಠದಲ್ಲಿ ನವಗ್ರಹ ಪ್ರತಿಷ್ಠೆ ಮತ್ತು ಅಷ್ಟೋತ್ತರ ಸಹಸ್ರ ನವಗ್ರಹ ಯಾಗ

ಶ್ರೀ ನಿತ್ಯಾನಂದ ಯೋಗಾಶ್ರಮ, ಕೊಂಡೆವೂರು ಮಠದಲ್ಲಿ ದಿ. 24.03.2024 ನೇ ರವಿವಾರ ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಗಳವರ ನೇತೃತ್ವದಲ್ಲಿ, ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕರಾದ ಬ್ರಹ್ಮ ಶ್ರೀ ಅನಂತಪದ್ಮನಾಭ ಆಸ್ರಣ್ಣರ ನಿರ್ದೇಶನದೊಂದಿಗೆ ಮತ್ತು ಬ್ರಹ್ಮ ಶ್ರೀ ಕಮಲಾದೇವೀ ಪ್ರಸಾದ ಆಸ್ರಣ್ಣರವರ ಆಚಾರ್ಯತ್ವದಲ್ಲಿ ನವಗ್ರಹ ಪ್ರತಿಷ್ಠೆ ಮತ್ತು ಲೋಕ ಕಲ್ಯಾಣಾರ್ಥವಾಗಿ ‘‘ಅಷ್ಟೋತ್ತರ ಸಹಸ್ರ ನವಗ್ರಹ ಯಾಗ’’ ವು ಜರಗಲಿರುವುದು.

ಮಂಗಳೂರು : ಕರಾವಳಿಯಲ್ಲಿ ಮೂರು ದಿನಗಳ ಕಾಲ ಮಳೆ

ಕರ್ನಾಟಕದ ಕರಾವಳಿ ಮತ್ತು ಮಲೆನಾಡು, ತೆಂಕಣ ಒಳನಾಡಿನಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿಯಲ್ಲಿ ಮೋಡ ಮುಚ್ಚಿದ ವಾತಾವರಣ ಮುಂದುವರಿಯಲಿದೆ. ಗಾಳಿ ಕೂಡ ಬಲವಾಗಿ ಬೀಸಲಿದೆ ಎನ್ನಲಾಗಿದೆ. ಕರ್ನಾಟಕದ ಬಡಗಣ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಕೊಪ್ಪಳದಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅದು ಆ ಸುತ್ತ ಕೆಲ ದಿನಗಳ ಕಾಲ ‌ಮುಂದುವರಿಯುತ್ತದೆ ಎಂದೂ ತಿಳಿಸಲಾಗಿದೆ.

ಕಾಸರಗೋಡಿನಲ್ಲಿ ಬಿಸಿಯೇರುತ್ತಿರುವ ಲೋಕ ಸಭಾ ಚುನಾವಣಾ ಕಣ : ಪ್ರಚಾರದಲ್ಲಿ ಸಿಪಿಐ(ಎಂ) ಅಭ್ಯರ್ಥಿ ಮೇಲುಗೈ

ಕಾಸರಗೋಡು : ಕಾಸರಗೋಡು ಲೋಕ ಸಭಾ ಕ್ಷೇತ್ರದಲ್ಲಿ ಒಂದು ತಿಂಗಳ ಹಿಂದೆಯೇ ಪ್ರಚರಣಾ ರಂಗಕ್ಕಿಳಿದ ಸಿಪಿಎಂ ಅಭ್ಯರ್ಥಿ ಯ ಬೆನ್ನಲ್ಲೇ ಇದೀಗ ಬಿಜೆಪಿ ಯ ಮಹಿಳಾ ಅಭ್ಯರ್ಥಿ ಎಂ ಎಲ್ ಅಶ್ವಿನಿಯ ಅನಿರೀಕ್ಷಿತ ಎಂಟ್ರಿ.ಅಭ್ಯರ್ಥಿ ಯಾರೆಂದು ಈ ತನಕ ಘೋಷಣೆ ಆಗದಿದ್ದರೂ ಯು ಡಿ ಎಫ್ ಅಭ್ಯರ್ಥಿ ನಾನೇ ಎಂಬ ಸ್ವಯಂ ಘೋಷಣೆಯೊಂದಿಗೆ ಸದ್ರಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಕೂಡಾ ಪ್ರಮುಖರನ್ನು ಬೇಟಿಯಾಗಿ ಪ್ರಚರಣಾ ರಂಗಕ್ಕಿಳಿದಿದ್ದಾರೆ. ಅಭ್ಯರ್ಥಿ ಯಾರೆಂದು ಘೋಷಣೆಯಾಗದ

ಮಂಜೇಶ್ವರ : ರಾಗಂ ಜಂಕ್ಷನ್‌ನಲ್ಲಿ ಮುಷ್ಕರ

ಮಂಜೇಶ್ವರದ ರಾಗಂ ಜಂಕ್ಷನಿನಲ್ಲಿ ರಾ.ಹೆದ್ದಾರಿ ದಾಟಲು ಸುರಕ್ಷಿತ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ ಏಳನೇ ದಿನಕ್ಕೆ ಕಾಲಿಟ್ಟಿದೆ. ಮಾಡು ಇಲ್ಲವೇ ಮಡಿ ಎಂಬ ಧ್ಯೇಯದಲ್ಲಿ ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವ ಭಿತ್ತಿ ಪತ್ರ ಎಲ್ಲೆಡೆ ರಾರಾಜಿಸುತ್ತಿರುವುದು ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದೆ. ಹೆದ್ದಾರಿ ದಾಟಲು ಯಾವುದಾದರೂ ಪರ್ಯಾಯ ವ್ಯವಸ್ಥೆ