ಮಂಜೇಶ್ವರ : ತಂದೆಯ ಸಹೋದರ ಕಾರನ್ನು ಮುಂದಕ್ಕೆ ತೆಗೆಯುತ್ತಿರುವ ಮಧ್ಯೆ ಕಾರಿನಡಿಯಲ್ಲಿ ಸಿಲುಕಿ ಒಂದೂವರೆ ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದ್ದಾನೆ. ಸೋಂಕಾಲ್ ಕೋಡಂಗ ರಸ್ತೆಯ ನಿಸಾರ್ – ತಸ್ರೀಫಾ ದಂಪತಿಗಳ ಪುತ್ರ ಮಾಶಿತುಲ್ ಜಿಶಾನ್ ಸಾವನ್ನಪ್ಪಿದ ದುರ್ದೈವಿ. ಉಪ್ಪಳಕ್ಕೆ ಹೋಗಲು ಬಾಲಕನ ಚಿಕ್ಕಪ್ಪ ಮನೆಯ ಗೇಟಿನೊಳಗೆ ಕಾರಿನಲ್ಲಿ ಆಗಮಿಸುತ್ತಿರುವಾಗ
: ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ (MLA AKM Ashraf) ಸಹಿತ ನಾಲ್ವರಿಗೆ ಕಾಸರಗೋಡು ಜ್ಯುಡೀಶಿಯಲ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಒಂದು ವರ್ಷ ಸಜೆ ವಿಧಿಸಿದೆ.2015ರಲ್ಲಿ ನವೆಂಬರ್ 25 ರಂದು ಮಂಜೇಶ್ವರ ಬ್ಲಾಕ್ ಪಂಚಾಯತ್ ಕಾನ್ಪರೆನ್ಸ್ ಹಾಲ್ನಲ್ಲಿ ಚುನಾವಣೆ ಕುರಿತು ಹಿಯರಿಂಗ್ ನಡೆಯುತ್ತಿದ್ದ ಸಂದರ್ಭದಲ್ಲಿ ಮತದಾರನೋರ್ವನ ಅರ್ಜಿಯಲ್ಲಿ ಲೋಪ ಇರುವ ಕಾರಣ ಬದಿಗಿರಿಸಿದ್ದರು. ಇದರಿಂದ ಕೋಪಗೊಂಡ ಕೆಎಂ ಅಶ್ರಫ್ ಮತ್ತಿತರರು ಅಂದಿನ
ಕೇರಳ ರಾಜ್ಯದ ಎರ್ನಾಕುಲಂನಲ್ಲಿ ಬಾಂಬ್ ಸ್ಫೋಟ ನಡೆದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೂಕ್ಷ್ಮವಾಗಿ ಗಮನಿಸಿದ್ದೇವೆ. ಕರಾವಳಿ ಭಾಗ ಮತ್ತು ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಗುಪ್ತಚರ ಇಲಾಖೆ ತೀವ್ರ ನಿಗಾ ಇರಿಸುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಕರ್ನಾಟಕದಲ್ಲಿ ಬಾಂಬ್ ಸ್ಫೋಟದಂತಹ ಘಟನೆಗಳು ನಡೆಯಲು ಬಿಡಲ್ಲ. ಯಾವುದೇ ವ್ಯಕ್ತಿ ಅಥವಾ
ಮಂಜೇಶ್ವರ ಸಮೀಪದ ಕುಂಜತ್ತೂರಿನ ದಾರುಸ್ಸಲಾಂ ಸಲಫಿ ಮಸೀದಿ ತಿರುವಿನಲ್ಲಿರುವ ಖಾಸಗಿ ಅಪಾರ್ಟ್ಮೆಂಟ್ನಿಂದ ಶೌಚಾಲಯದ ನೀರು ಸಾರ್ವಜನಿಕ ಸ್ಥಳಕ್ಕೆ ಹಾಗೂ ಸಮೀಪದ ರಸ್ತೆಗೆ ಹರಿದು ಬರುತಿದ್ದು, ಪರಿಸರವೆಲ್ಲ ದುರ್ವಾಸನೆ ಆವರಿಸಿದೆ. ಪರಿಸರವಾಸಿಗಳು ಹಾಗೂ ಈ ದಾರಿಯಿಂದ ಸಾಗುವವರು ಮೂಗು ಮುಚ್ಚಿಕೊಂಡು ಸಾಗುವ ಪರಿಸ್ಥಿತಿ ಎದುರಾಗಿದೆ. ಈ ದಾರಿಯಾಗಿ ದಿನನಿತ್ಯ ಶಾಲೆಗೂ ಮದ್ರಸಕ್ಕೂ ನೂರಾರು ವಿದ್ಯಾರ್ಥಿಗಳು ಈ ಶೌಚಾಲಯದ ನೀರನ್ನು ದಾಟಿಕೊಂಡೇ ಸಾಗಬೇಕಾದ
ಮಂಜೇಶ್ವರದ ಉಪಜಿಲ್ಲಾ ವ್ಯಾಪ್ತಿಯಲ್ಲಿರುವ ಸರಕಾರಿ ಶಾಲೆಗಳಲ್ಲಿ ಹಾಗೂ ಖಾಸಗಿ ಶಾಲೆಗಳ ಶೌಚಾಲಯಗಳಲ್ಲಿ ಶುಚಿತ್ವ ಇಲ್ಲದೇ ಇರುವುದು ಪೋಷಕರಲ್ಲಿ ಸಾಂಕ್ರಾಮಿಕ ರೋಗದ ಭೀತಿಯನ್ನು ಹೆಚ್ಚಿಸಿದೆ. ಮಂಜೇಶ್ವರ ಉಪಜಿಲ್ಲೆಯ ವ್ಯಾಪ್ತಿಯಲ್ಲಿರುವ ಶಾಲೆಯೊಂದರಲ್ಲಿ ಶೌಚಾಲಯದಲ್ಲಿ ಮಾಲಿನ್ಯ ಕಟ್ಟಿ ನಿಂತು ದುರ್ವಾಸನೆಯಿಂದ ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ಎದುರಾಗಿದೆ. ಆದರೂ ಶಾಲೆಯ ಉಸ್ತುವಾರಿ ವಹಿಸಿಕೊಂಡಿರುವವರು ಈ ಬಗ್ಗೆ ಗಮನ ಹರಿಸುತ್ತಿಲ್ಲ
ಮಂಜೇಶ್ವರದ ನೆತ್ತಿಲ ಪದವು ಗೋವಿಂದ ಪೈ ರಸ್ತೆಯ ಮರುಡಾಮರೀಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಐದು ಕೋಟಿ ರೂಪಾಯಿ ಮಂಜೂರುಗೊಂಡು ಕಾಮಗಾರಿ ನಡೆಸಲಾಗಿದೆ. ಆದರೆ, ಇದೀಗ ಕಾಮಗಾರಿಯಲ್ಲಿ ಲೋಪದೋಷಗಳು ಕಂಡುಬಂದಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಈ ಮೊದಲು ರಸ್ತೆಯು 3 ಮೀಟರ್ 80 ಸೆಂಟಿ ಮೀಟರ್ ಅಗಲವಾಗಿತು. ಆದರೆ ನೂತನವಾಗಿ ನಿರ್ಮಾಣವಾಗುವ ರಸ್ತೆ 5 ಮೀಟರ್ 80 ಸೆಂಟಿ ಮೀಟರ್ ಇರಬೇಕೆಂಬುವುದು ಸ್ಥಳೀಯರ ಬೇಡಿಕೆಯಾಗಿತ್ತು. ಆದರೆ ಈಗಾಗಲೇ ಕಾಮಗಾರಿ
ಮಂಜೇಶ್ವರದ ಕುನ್ನಿಲ್ ನೋಬಲ್ ಫೌಂಡೇಶನ್ನ 5ನೇ ವಾರ್ಷಿಕೋತ್ಸವದ ಪ್ರಯುಕ್ತ ಡ್ರಗ್ಸ್ ಜಾಗೃತಿ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಉದ್ಯಾವರ ಗುಡ್ಡೆ ಸರಕಾರಿ ಶಾಲೆಯಲ್ಲಿ ಸಂಘಟನೆಯ ಅಧ್ಯಕ್ಷ ಝಕರಿಯ್ಯ ಶಾಲಿಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಂಜೇಶ್ವರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಜೇಶ್ ತೆರುವತ್ತ್ ಪೀಡಿಗಯಿಲ್ ಉದ್ಘಾಟಿಸಿದರು. ಮಂಜೇಶ್ವರ ಠಾಣೆಯ ಜನ ಮೈತ್ರಿ ಪೊಲೀಸ್ ಅಧಿಕಾರಿಗಳಾದ ಮಧು ಕರಕಡವತ್ ಹಾಗೂ ಅನೂಪ್
ಮಂಜೇಶ್ವರ: ಉದ್ಯೋಗ ಖಾತರಿ ಯೋಜನೆಯನ್ನು ಬುಡಮೇಲುಗೊಳಿಸುವ ಕ್ರಮವನ್ನು ಕೊನೆಗೊಳಿಸಿ, ಹೆಚ್ಚಿಸಿದ ಮಜೂರಿಯನ್ನು ಕೂಡಲೇ ವಿತರಿಸಿ, ಕಡಿತಗೊಳಿಸಿದ ಲೇಬರ್ ಬಜೆಟ್ ಪುನಸ್ತಾಪಿಸಿ ಇತ್ಯಾದಿ ಬೇಡಿಕೆಯನ್ನು ಮುಂದಿಟ್ಟುಕೊಂಡು ಎನ್ಆರ್ಇಜಿ ಯೂನಿಯನ್ ನೇತೃತ್ವದಲ್ಲಿ ಮೀಯಪದವಿನಲ್ಲಿ ಪ್ರತಿಭಟನೆ ನಡೆಸಿದರು. ಸಭೆಯನ್ನು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಟಿ.ಎಂ.ಏ. ಕರೀಂ ಉದ್ಘಾಟಿಸಿದರು. ಮೀಂಜ ಪಂಚಾಯತ್ ಸದಸ್ಯ ಜನಾರ್ಧನ ಪೂಜಾರಿ ಅಧ್ಯಕ್ಷತೆ
ಮಂಜೇಶ್ವರದ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರೊಂದು ಢಿಕ್ಕಿಯಾಗಿ ವಿದ್ಯಾರ್ಥಿ ದಾರುಣವಾಗಿ ಮೃತಪಟ್ಟಿದ್ದು, ಘಟನೆಯನ್ನು ಖಂಡಿಸಿ ಇಂದು ನಾಗರಿಕರು ವಿದ್ಯಾರ್ಥಿ ಸುಮಂತ್ನ ಮೃತದೇಹವಿಟ್ಟು ಪ್ರತಿಭಟನೆ ನಡೆಸಿದರು. ಉದ್ಯಾವರ ಮಾಡ ಕ್ಷೇತ್ರ ಸಮೀಪದ ರಘುನಾಥ ಆಳ್ವ ಎಂಬವರ ಪುತ್ರ ಮಂಗಳೂರು ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸುಮಂತ್ (17) ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದಾನೆ. ಸುಮಂತ್ನ ತಲೆಗೆ
ಮಂಜೇಶ್ವರ: ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಮಿತ ವೇಗದಿಂದ ಬಂದ ಇನೋವಾ ಕಾರೊಂದು ರಸ್ತೆದಾಟುತ್ತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗಳೊಂದಿಗೆ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಉದ್ಯಾವರ ಮಾಡ ಕ್ಷೇತ್ರ ಸಮೀಪದ ರಘುನಾಥ ಆಳ್ವ ಎಂಬವರ ಪುತ್ರ ಮಂಗಳೂರು ನಿಟ್ಟೆ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸುಮಂತ್ (17) ಗಾಯಗೊಂಡ ವಿದ್ಯಾರ್ಥಿ. ಈತನನ್ನು ಸ್ಥಳೀಯರು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.