Home ಕರಾವಳಿ Archive by category ಪುತ್ತೂರು (Page 27)

ಪುತ್ತೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

ಪುತ್ತೂರು :ಪುತ್ತೂರಿನ ಖಾಸಗಿ ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕುರಿಯ ಪಡ್ಪು ನಿವಾಸಿ, ಪುತ್ತೂರಿನ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ. ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಪುತ್ತೂರು: ಕರುವನ್ನು ಕೊಂದು ರಬ್ಬರ್ ಮರದ ಕೊಂಬೆಯಲ್ಲಿ ನೇತು ಹಾಕಿದ ಚಿರತೆ…!

ಒಂದೆರಡು ವರ್ಷಗಳಿಂದ ಪುತ್ತೂರು ಮತ್ತು ಆಸುಪಾಸಿನ ನಾನಾ ಕಡೆ ಚಿರತೆ ಓಡಾಟದ ಹೆಜ್ಜೆಗುರುತುಗಳು ಗೋಚರವಾದ ನಡುವೆಯೇ, ಇದೇ ಮೊದಲ ಬಾರಿಗೆ ಚಿರತೆಯು ತನ್ನ ಬೇಟೆಯನ್ನು ಮರದ ಮೇಲಿಟ್ಟು ನಾಪತ್ತೆಯಾದ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಕೆಯ್ಯೂರು ಮತ್ತು ಕೊಳ್ತಿಗೆ ಗ್ರಾಮ ವ್ಯಾಪ್ತಿಯ ಕಣಿಯಾರುಮಲೆ ರಕ್ಷಿತಾರಣ್ಯದ ಅರ್ತಿಯಡ್ಕ ಎಂಬಲ್ಲಿ ರಬ್ಬರ್ ಮರವೊಂದರ ಕೊಂಬೆಯಲ್ಲಿ ಸತ್ತ ದನದ ಕರುವಿನ ಕಳೇಬರ ಪತ್ತೆಯಾಗಿದ್ದು, ಇದು ಚಿರತೆಯದ್ದೇ ಕೆಲಸ ಎಂದು ಅರಣ್ಯ ಇಲಾಖೆ

ಕಡಬ: ದೈವಾರಾಧನೆಯ ನರ್ತನ ಪ್ರದರ್ಶನ ಮೆರವಣಿಗೆಗಳಲ್ಲಿ ಪ್ರದರ್ಶಿಸುವುದು ತರವಲ್ಲ: ಕಿಟ್ಟು ಕಲ್ಲುಗುಡ್ಡೆ

ನಮ್ಮ ಧಾರ್ಮಿಕ ಆಚರಣೆಯ ಮೆರವಣಿಗೆಗಗಳಲ್ಲಿ ದೈವಾರಾಧನೆಯ ನರ್ತನ ಪ್ರದರ್ಶನ ಮಾಡುವುದು ಸರಿಯಲ್ಲ. ಈ ಬಗ್ಗೆ ಜನರಿಗೆ ತಿಳವಳಿಕೆ ಮೂಡಿಸುವ ಕಾರ್ಯ ಆಗಬೇಕಿದೆ ಎಂದು ನಲಿಕೆ ಸಮಾಜ ಸೇವಾ ಸಂಘದ ದೈವಾರಾಧನ ಸಮಿತಿಯ ಕಡಬ ತಾಲೂಕು ಅಧ್ಯಕ್ಷ ಕಿಟ್ಟು ಕಲ್ಲುಗುಡ್ಡೆ ಹೇಳಿದರು. ಅವರು ಕಡಬದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದೈವಗಳ ನರ್ತನ ದೈವದ ಕೊಡಿಯಡಿಯಲ್ಲೇ ನಡೆಯಬೇಕು ಹೊರತು ಹಾದಿಬೀದಿಯಲ್ಲಿ ನಡೆಯಬಾರದು ಯಾಕೆಂದರೆ ಅದಕ್ಕೊಂದು ಕಟ್ಟುಕಟ್ಟಲೆ ನೀತಿ ನಿಯಮವಿದೆ.

ಪುತ್ತೂರು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಕೂಟ- ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರಕಾರಿ ಪ್ರೌಢಶಾಲೆ ಏನೆಕಲ್ಲು ಇದರ ಸಂಯುಕ್ತ ಆಶಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಕೂಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿಯ ಪ್ರೌಢ ಶಾಲಾ ಮತ್ತು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.ಈ ಪಂದ್ಯಕೂಟದಲ್ಲಿ ಬೆಥನಿ ಶಾಲೆಯ ಆಯುಶಾ ಹಿಬಾ ಬೆಸ್ಟ್ ಆಲ್ ರೌಂಡರ್ ಆಗಿ ಹಾಗೂ

ಪುತ್ತೂರು: ಶಿವಮೊಗ್ಗ ಘಟನೆ ಬಗ್ಗೆ ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆಯಾಗಲಿ, ವಿಹಿಂಪ, ಬಜರಂಗದಳ ಆಗ್ರಹ

ಪುತ್ತೂರು: ಶಿವಮೊಗ್ಗದಲ್ಲಿ ಮಿಲಾದ್ ಆಚರಣೆ ಸಂದರ್ಭ ನಡೆದ ದಾಳಿಯನ್ನು ವಿಶ್ವ ಹಿಂದೂ ಪರಿಷತ್, ಬಜರಂಗಳ ತೀವ್ರವಾಗಿ ಖಂಡಿಸುತ್ತದೆ. ಈ ಘಟನೆಯಲ್ಲಿ ಭಾಗಿಯಾದವರನ್ನು ತಕ್ಷಣ ಬಂಧಿಸಿ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ವಿಹಿಂಪ, ಬಜರಂಗದಳ ಆಗ್ರಹಿಸಿದೆ. ಬಜರಂಗಳ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಸುದ್ದಿಗೋಷ್ಠಿಯಲ್ಲಿ ಖಂಡನೆ ವ್ಯಕ್ತಪಡಿಸಿ, ಮಿಲಾದ್ ಮೆರವಣಿಗೆ ವೇಳೆ ಅಳವಡಿಸಿದ ಬೃಹತ್ ಕಟೌಟ್‍ಗಳನ್ನು ಪೆÇಲೀಸರು ತೆಗೆಸಿದ್ದಾರೆ. ಇದನ್ನು

ಪುತ್ತೂರು: ಅ.7ರಂದು ಶೌರ್ಯ ಜಾಗರಣ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ

ಪುತ್ತೂರು: ವಿಶ್ವ ಹಿಂದೂ ಪರಿಷತ್ ಸ್ಥಾಪನೆಯಾಗಿ 60ನೇ ವರ್ಷಕ್ಕೆ ಕಾಲಿಡುತ್ತಿರುವ ನಿಟ್ಟಿನಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆ ವತಿಯಿಂದ ಶೌರ್ಯ ಜಾಗರಣಾ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ ಅ.7 ರಂದು ಸಂಜೆ ಪುತ್ತೂರಿನ ಕಿಲ್ಲೇ ಮೈದಾನದಲ್ಲಿ ನಡೆಯಲಿದೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಶ್ವ ಹಿಂದೂ ಪರಿಷತ್ ದೇಶಾದ್ಯಂತ ಅನೇಕ

ಪುತ್ತೂರು: ಮದ್ಯದಂಗಡಿ ತೆರೆಯುವುದು ಬಿಟ್ಟು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ನೀಡಿ, ನಶ್ರೀಯಾ ಬೆಳ್ಳಾರೆ

ಪುತ್ತೂರು: ರಾಜ್ಯ ಸರಕಾರ 1 ಸಾವಿರ ಮದ್ಯಂಗಡಿ ತೆರೆಯುವ ಮೂಲಕ ಗಾಂಧಿ ತತ್ವಕ್ಕೆ ವಿರೋಧವಾಗಿ ನಡೆಯುತ್ತಿದೆ ಮತ್ತು ಮದ್ಯದಂಗಡಿ ಹೆಚ್ಚಿಸಿ ಗಾಂಧಿ ಜಯಂತಿ ಆಚರಿಸುತ್ತಿದೆ ಎಂದು ಆರೋಪಿಸಿ ಎಸ್‍ಡಿಪಿಐ ಪುತ್ತೂರು ಕ್ಷೇತ್ರ ಸಮಿತಿಯಿಂದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು. ವುಮೆನ್ಸ್ ಇಂಡಿಯಾ ಮೂವುಮೆಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಶ್ರೀಯಾ ಬೆಳ್ಳಾರೆ ಅವರು ಮಾತನಾಡಿ, ರಾಜ್ಯ ಸರಕಾರ ಗ್ಯಾರೆಂಟಿ ಸರಿದೂಗಿಸಲು ಮದ್ಯಪಾನ

ಕಡಬ : ಕಾರು, ಬೈಕ್ ಡಿಕ್ಕಿ-ಬೈಕ್ ಸವಾರರಿಗೆ ಗಾಯ

ಕಡಬ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಮರ್ದಾಳ ಸಮೀಪದ ಕೆಂಚಭಟ್ರೆ ಎಂಬಲ್ಲಿ ನಡೆದಿದೆ. ನೆಕ್ಕಿತ್ತಡ್ಕ ನಿವಾಸಿ ಜಗನ್ನಾಥ ರೈ ಎಂಬವರು ತನ್ನ ಕಾರಿನಲ್ಲಿ ಕಡಬದಿಂದ ಮರ್ದಾಳಕ್ಕೆ ಹೋಗುತ್ತಿದ್ದ ವೇಳೆ ಮರ್ದಾಳದಿಂದ ಕಡಬ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಬೈಕ್ ಸವಾರ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಕಾರಿಗೆ ಡಿಕ್ಕಿಯುಂಟಾಗಿದ್ದು, ಕಾರು ಚಾಲಕ ಬೈಕ್ ಡಿಕ್ಕಿಯಾಗುವುದನ್ನು ತಪ್ಪಿಸಲು

ಪುತ್ತೂರು: ಮನೆಮಂದಿಯನ್ನು ಕಟ್ಟಿಹಾಕಿ ದರೋಡೆ ಪ್ರಕರಣ, ಆರು ಮಂದಿ ಆರೋಪಿಗಳ ಬಂಧನ

ಪುತ್ತೂರು: ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಕುದ್ಕಾಡಿ ಎಂಬಲ್ಲಿ ಮನೆ ಮಂದಿಯನ್ನು ಕಟ್ಟಿಹಾಕಿ ದರೋಡೆ ನಡೆಸಿದ ಪ್ರಕರಣವನ್ನು ಪತ್ತೆ ಹಚ್ಚಿದ ಪೊಲೀಸರು ಕೇರಳ ಮೂಲದ ಐವರು ಸೇರಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿ, ದರೋಡೆ ನಡೆಸಿದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ತಿಳಿಸಿದ್ದಾರೆ. ಅವರು ಪುತ್ತೂರು ಎಎಸ್‍ಪಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರಕರಣವನ್ನು ಭೇದಿಸಿದ ಬಗ್ಗೆ

ಪುತ್ತೂರು : ಬೆಂಕಿ, ಹರಿತವಾದ ಆಯುಧ ಬಳಸಿ ತಾಲೀಮು ಪ್ರದರ್ಶನ

ಪುತ್ತೂರು : ಆಧುನಿಕ ಫಿಟ್ನೆಸ್ ಸೆಂಟರ್‍ಗಳ ಭರಾಟೆಯ ನಡುವೆಯೂ, ಪ್ರಾಚೀನ, ಸಾಂಪ್ರದಾಯಿಕ ವ್ಯಾಯಾಮ ಶಾಲೆಗಳು ಇಂದಿಗೂ ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡಿದೆ. ವ್ಯಾಯಾಮಗಳಿಗೆ, ದೇಹದಾಢ್ರ್ಯ ಪ್ರದರ್ಶನದ ಜೊತೆಗೆ ವ್ಯಾಯಾಮ ಶಾಲೆಗಳು ಆಕರ್ಷಕ ಹಾಗು ಸಾಹಸಮಯ ಪ್ರದರ್ಶನಕ್ಕೂ ಹೆಸರುವಾಸಿಯಾಗಿವೆ. ಪುತ್ತೂರಿನ ಉದಯ ಕುಮಾರ್ ಈಗಲೂ ತಾಲೀಮು ತರಬೇತಿಯನ್ನು ನೀಡುತ್ತಿದ್ದಾರೆ. ತಾಲೀಮಿನಲ್ಲಿ ಸುಮಾರು 42 ಪ್ರಕಾರದ ತಾಲೀಮು ಪ್ರದರ್ಶನಗಳಿದ್ದು, ಸಿಂಗಲ್ ಬಾಣ, ಡಬಲ್