Home ಕರಾವಳಿ Archive by category ಪುತ್ತೂರು (Page 28)

ಕಡಬ : ಬಸ್ಸಿನಿಂದ ಎಸೆಯಲ್ಪಟ್ಟು ವ್ಯಕ್ತಿ ಸಾವು

ಕಡಬ, ಸೆ. 24: ಚಲಿಸುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ಸಿನಿಂದ ವ್ಯಕ್ತಿಯೊಬ್ಬರು ಕೆಳಕ್ಕೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ಕಡಬ ಪೇಟೆಯ ಅಂಚೆ ಕಛೇರಿ ಬಳಿ ರವಿವಾರ ಸಂಜೆ ನಡೆದಿದೆ. ಕಡಬ ಸಮೀಪದ ಕಳಾರ ಕುದ್ಕೊಳಿ ನಿವಾಸಿ ಅಚ್ಚುತ ಗೌಡ (63) ಮೃತ ಪಟ್ಟವರು. ಕಡಬದಿಂದ ಮಂಗಳೂರಿನಿಂದ ತೆರಳುತ್ತಿದ್ದ ಬಸ್ಸು ಏರಿ ಮನೆಯ ಕಡೆ ಹೊರಟ ಬಸ್ಸು ಕಡಬ ಅಂಚೆ ಕಛೇರಿ ಬಳಿ

ಪುತ್ತೂರು: ಅಪರೂಪದ ಫಾರೆಸ್ಟಿನ್ ಕ್ಯಾಟ್ ಸ್ನೇಕ್ ಪತ್ತೆ

ಪುತ್ತೂರಿನ ಬಲ್ನಾಡು ನಿವಾಸಿ ರವಿಕೃಷ್ಣ ಕಲ್ಲಜೆ ಎಂಬವರ ಮನೆಯಲ್ಲಿ ಫಾರೆಸ್ಟಿನ್ ಕ್ಯಾಟ್ ಸ್ನೇಕ್ ಪತ್ತೆಯಾಗಿದೆ. ಪುತ್ತೂರಿನ ಉರಗತಜ್ಞ ತೇಜಸ್ ಬನ್ನೂರು ಹಾವನ್ನು ರಕ್ಷಿಸಿ ಮತ್ತೆ ಅದರ ವಾಸಸ್ಥಾನವಾದ ದಟ್ಟ ಅರಣ್ಯಕ್ಕೆ ಬಿಟ್ಟಿದ್ದಾರೆ. ಫಾರೆಸ್ಟಿನ್ ಕ್ಯಾಟ್ ಸ್ನೇಕ್ ಎಂದು ಕರೆಯಲಾಗುವ ಈ ಹಾವನ್ನು ನೋಡಿದ ಉರಗತಜ್ಞ ತೇಜಸ್ ಪುತ್ತೂರಿನಲ್ಲಿ ಈ ರೀತಿಯ ಹಾವು ಪತ್ತೆಯಾಗಿರುವುದೇ ಅಪರೂಪ ಎಂದಿದ್ದಾರೆ. ಕಿರಿಯ ವಯಸ್ಸಿನಲ್ಲೇ ಹಾವು ಹಿಡಿದು ಅವುಗಳ ರಕ್ಷಣೆ

ಪುತ್ತೂರು: ಬೀರಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಸಚಿವ ರಮಾನಾಥ ರೈ

ಪುತ್ತೂರು: ಪುತ್ತೂರು ನಗರದ ಬೀರಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು 72ನೇ ಹುಟ್ಟು ಹಬ್ಬವನ್ನು ವಿನೂತನವಾಗಿ ಆಚರಿಸಿಕೊಂಡರು. ಆಶ್ರಮದಲ್ಲಿನ ವಿಶೇಷ ಚೇತನರೊಂದಿಗೆ ಸಹಭೋಜನ ನಡೆಸಿ ತನ್ನ ಹುಟ್ಟು ಹಬ್ಬ ಆಚರಿಸಿದ ರಮಾನಾಥ ರೈ ಅವರು, ನನ್ನ ರಾಜಕೀಯ ಬದುಕಿನಲ್ಲಿ ಹಲವಾರು ಏಳು ಬೀಳುಗಳನ್ನು ಕಂಡಿದ್ದು, ಎಲ್ಲವನ್ನೂ ಸಮಾನವಾಗಿ ಸ್ವೀಕರಿಸುತ್ತಾ ಬಂದಿದ್ದೇನೆ. ಇಲ್ಲಿನ ಜನರು ನನಗೆ ನೀಡಿರುವ ಪ್ರೀತಿಗೆ ಬೆಲೆ ಕಟ್ಟಲಾಗದು

ಪುತ್ತೂರು|| ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗೆ ಖಂಡನೆ: ಬಿಜೆಪಿಯಿಂದ ಪ್ರತಿಭಟನೆ

ರಾಷ್ಟ್ರೀಯ ವಿಚಾರಧಾರೆಗಳಲ್ಲಿ ಬಿಜೆಪಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಹಿಂದುಗಳನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಿರ್ಲಕ್ಷಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಡಾ. ನವೀನ್ ಹೇಳಿದರು. ಪುತ್ತೂರು ಅಮರ ಜವಾನ್ ಸ್ಮಾರಕದ ಬಳಿ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.

ಕಡಬ: ಪಂಚಾಯತ್ ಸಂಪರ್ಕ ರಸ್ತೆ ಬಂದ್ ಮಾಡಿ ದಿಗ್ಬಂಧನ: ತಹಶೀಲ್ದಾರರಿಂದ ತೆರವು

ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಬದನೆ ಎಂಬಲ್ಲಿ ಪಂಚಾಯತ್ ರಸ್ತೆಗೆ ಸಂಪರ್ಕಿಸುವ ರಸ್ತೆಯನ್ನು ವೆಂಕಪ್ಪ ಪೂಜಾರಿ ಮತ್ತು ರೂಪೇಶ್ ಕುಮಾರ್ ಅವರು ಬಂದ್ ಮಾಡಿರುವ ಬಗ್ಗೆ ಇಚ್ಲಂಪಾಡಿ ಗ್ರಾಮದ ಬದನೆ ನಿವಾಸಿ ಶ್ರೀನಿವಾಸ್ ಪೂಜಾರಿಯವರು, ಪುತ್ತೂರು ಸಹಾಯಕ ಆಯುಕ್ತರು, ಕಡಬ ತಹಶೀಲ್ದಾರರು, ಗ್ರಾಮ ಪಂಚಾಯತ್ ಹಾಗೂ ಪೋಲಿಸ್ ಇಲಾಖೆಗೆ ದೂರು ನೀಡಿದ್ದಾರೆ. ಕಡಬ ತಹಶೀಲ್ದಾರರಾದ ಪ್ರಭಾಕರ ಕಜುರೆ, ಕಂದಾಯ ನಿರೀಕ್ಷಕರಾದ ಪೃಥ್ವಿರಾಜ್ ಘಟನಾ ಸ್ಥಳಕ್ಕೆ ಭೇಟಿ ನೀಡಿ

ಉತ್ತಮ ಆರೋಗ್ಯ ಸೇವೆ ನೀಡುವುದು ಮೋದಿ ಸರ್ಕಾರದ ಸಂಕಲ್ಪ- ರಾಜ್ಯ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್

ಕೇಂದ್ರ ಸರ್ಕಾರದ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಕ್ಷೇತ್ರ ಸಂಬಂಧಿಸಿದ ಶೈಕ್ಷಣಿಕ ಸಂಸ್ಥೆಗಳನ್ನು 70ಕ್ಕೆ ಏರಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಆರೋಗ್ಯ ಸೇವೆ ನೀಡುವುದು ಮೋದಿ ಸರ್ಕಾರದ ಸಂಕಲ್ಪವಾಗಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್ ಹೇಳಿದರು. ಅವರು ವಿವೇಕಾನಂದ ಕಾಲೇಜು ಕ್ಯಾಂಪಸ್‍ನ ಕೇಶವ ಸಂಕಲ್ಪ ಸಭಾಭವನದಲ್ಲಿ ಪುತ್ತೂರು

ಕಡಬ ಪೇಟೆಯಲ್ಲಿ ವಿದ್ಯುತ್ ತಂತಿಯಲ್ಲಿ ಸಿಲುಕಿದ್ದ ಪಾರಿವಾಳವನ್ನು ರಕ್ಷಿಸಿದ ಪವರ್‍ಮ್ಯಾನ್ ಪಿ.ಜೆ ಗುರುಮೂರ್ತಿ

ಕಡಬ ಪೇಟೆಯಲ್ಲಿ ವಿದ್ಯುತ್ ತಂತಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಪಾರಿವಾಳವೊಂದನ್ನು ಕಡಬ ಸಿಟಿ ಫೀಡರ್ ಪವರ್‍ಮ್ಯಾನ್ ಆಗಿರುವ ಪಿ.ಜೆ ಗುರುಮೂರ್ತಿ ಅವರು ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕಡಬ ಪೇಟೆಯಲ್ಲಿ ಪಾರಿವಾಳವೊಂದರ ಕಾಲಿಗೆ ಪ್ಲಾಸ್ಟಿಕ್ ಹಗ್ಗವೊಂದು ತಗುಲಿ ನಂತರದಲ್ಲಿ ಆ ಪಾರಿವಾಳ ವಿದ್ಯುತ್ ತಂತಿಯಲ್ಲಿ ಸಿಲುಕಿ ಒದ್ದಾಡುತ್ತಿತ್ತು. ತಕ್ಷಣ ಸ್ಥಳೀಯರು ಪವರ್ ಮ್ಯಾನ್ ಗಮನಕ್ಕೆ ತಂದಿದ್ದು ಪವರ್‍ಮ್ಯಾನ್ ಗುರುಮೂರ್ತಿ ತಕ್ಷಣ

ಉಪ್ಪಿನಂಗಡಿ : ಶಿರಾಡಿ ರಕ್ಷಿತಾರಣ್ಯದಲ್ಲಿ ಮರಗಳ ಮಾರಣ ಹೋಮ..!!!

ನೆಲ್ಯಾಡಿ: ಪಶ್ಚಿಮ ಘಟ್ಟದ ತಪ್ಪಲುನಲ್ಲಿರುವ ಉಪ್ಪಿನಂಗಡಿ ವಲಯ ವ್ಯಾಪ್ತಿಯಲ್ಲಿ ಬರುವ ಶಿರಾಡಿ, ಶಿಬಾಜೆ ಮೊದಲಾದ ಪ್ರದೇಶದಲ್ಲಿರುವ ರಕ್ಷಿತಾರಣ್ಯದಲ್ಲಿ ರಾಜಾರೋಷವಾಗಿ ಅರಣ್ಯ ಸಂಪತ್ತು ಕಳ್ಳರ ಪಾಲಾಗುತ್ತಿದ್ದು, ಉತ್ತಮ ಜಾತಿಯ ಬೃಹತ್ ಮರಗಳ ಮಾರಣ ಹೋಮ ನಡೆಯುತ್ತಿರುವ ಬಗ್ಗೆ ವ್ಯಾಪಕ ದೂರುಗಳು ವ್ಯಕ್ತವಾಗಿದೆ. ಶಿರಾಡಿ ರಕ್ಷಿತಾರಣ್ಯದ ಶಿಬಾಜೆ ಸೆಕ್ಷನ್ ವ್ಯಾಪ್ತಿಯಲ್ಲಿರುವ ನೀರಾನದಿಂದ ಕುರುಂಬು, ಅರಂಪಾದೆ ಭೂತಮಜಲುನಿಂದ ಮೇಲಿನ ಕುರುಂಜ ತನಕ, ಪೆರ್ಲದ

ಪುತ್ತೂರು: ಯುವಕನಿಂದ ಯುವತಿಯ ಕೊಲೆ-ಆರೋಪಿ ಪದ್ಮರಾಜ್ ಬಂಧನ

ಪುತ್ತೂರು: ಯುವಕನೊರ್ವ ಯುವತಿಯ ಕುತ್ತಿಗೆಗೆ ಚೂರಿಯಿಂದ ಇರಿದು ಕೊಲೆಗೈದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣಾ ಬಳಿ ನಡೆದಿದೆ. ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಕುದ್ದುಪದವಿನ ವಿಜಯನ್ ಎಂಬವರ ಪುತ್ರಿ ಗೌರಿ ಎಂಬಾಕೆ ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದು ತಕ್ಷಣ ಆಕೆಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಪುತ್ತೂರು ಬಸ್ ನಿಲ್ದಾಣದಲ್ಲಿ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ನೈಬೇಲು ನಿವಾಸಿ

ಪುತ್ತೂರು || ಕುದ್ದುಪದವು ಯುವಕನಿಂದ ಚೂರಿ ಇರಿತ-ಯುವತಿ ಗಂಭೀರ

ಪುತ್ತೂರು: ಪುತ್ತೂರು ಮಹಿಳಾ ಪೊಲೀಸ್ ಠಾಣಾ ಬಳಿ ಚೂರಿ ಇರಿತಗೊಂಡ ಯುವತಿ ಗಂಭೀರ ಗಾಯಗೊಂಡ ಹಿನ್ನಲೆಯಲ್ಲಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪುತ್ತೂರು ಬಸ್ ನಿಲ್ದಾಣದಲ್ಲಿ ಯುವಕ ಮತ್ತು ಯುವತಿ ಮಧ್ಯೆ ಮಾತಿನಚಕಮಕಿ ನಡೆದಿದ್ದು ಕೊನೆಗೆ ಆಕೆ ಮಹಿಳಾ ಪೊಲೀಸ್ ಠಾಣೆಯ ಬಳಿ ಬಂದಾಗ ಬೈಕ್ ನಲ್ಲಿ ಬಂದ ಯುವಕ ಆಕೆಯ ಕತ್ತಿಗೆ ಚೂರಿಯಿಂದ ಇರಿದ್ದಿದ್ದಾನೆ ಎಂದು ತಿಳಿದು ಬಂದಿದೆ. ಯುವತಿಯನ್ನು ಕುದ್ದು ಪದವಿನ ವಿಜಯನ್ ಎಂಬವರ ಪುತ್ರಿ ಗೌರಿ ಎಂದು