Home ಕರಾವಳಿ Archive by category ಪುತ್ತೂರು (Page 3)

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹಿನ್ನೆಲೆ-ರೂ.25ಲಕ್ಷ ದೇಣಿಗೆ ಸಮರ್ಪಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹಿನ್ನೆಲೆ-ಈಶಾನ್ಯ ಬದಿಯ ಕಟ್ಟೆ ನಿರ್ಮಾಣಕ್ಕೆ ಬೆಂಗಳೂರಿನ ಉದ್ಯಮಿ ನಾಗೇಶ್ ರಾವ್ ಅತ್ತಾಳ ಸುಜಾತ ದಂಪತಿಯಿಂದ ರೂ.25ಲಕ್ಷ ದೇಣಿಗೆ ಸಮರ್ಪಣೆ. ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಬಗ್ಗೆ ದೇವಳದ ಈಶಾನ್ಯ ಬದಿಯ

ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂವಿಧಾನ ದಿನಾಚರಣೆ

ಸಂವಿಧಾನದ ಆಶಯಗಳನ್ನು ಗೌರವಿಸಿರಿ: ಕೃಷ್ಣ ಪ್ರಸಾದ ಆಳ್ವ ಸಂವಿಧಾನದ ಜಾಗೃತಿ ಮೂಡಿಸುವ, ಬ್ಲಾಕ್ ಕಾಂಗ್ರೆಸ್ಸಿನ ಕಾರ್ಯ ಶ್ಲಾಘನೀಯ:ನೂರುದ್ದೀನ್ ಸಾಲ್ಮರಪುತ್ತೂರು : ಪುತ್ತೂರು ಬ್ಲಾಕ್ ಕಾಂಗ್ರೆಸ್ಸಿನ ವತಿಯಿಂದ, ಕಾಂಗ್ರೆಸ್ ಕಚೇರಿಯಲ್ಲಿ ಇಂದು, ಸಂವಿಧಾನ ದಿನಾಚರಣೆಯನ್ನು ಆಚರಿಸಿ, ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ಬರೆದ “ಸಂವಿಧಾನ ಓದು” ಎಂಬ ಪುಸ್ತಕವನ್ನು, ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಎಲ್ಲಾ

ಪುತ್ತೂರು: ಅನಾರೋಗ್ಯ ಪೀಡಿತ ಯುವತಿ ಆತ್ಮಹತ್ಯೆ

ಪುತ್ತೂರು: ತಲೆನೋವು, ನರದೋಷ ಮತ್ತಿತರ ಸಮಸ್ಯೆಯಿಂದ ಬಳಲುತ್ತಿದ್ದು ಮಾನಸಿಕವಾಗಿ ಜರ್ಝರಿತಗೊಂಡಿದ್ದ ಯುವತಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.23ರಂದು ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಪೊಯ್ಯೊಲೆ ಎಂಬಲ್ಲಿ ನಡೆದಿದೆ. ಗುಡ್ಡಪ್ಪ ರೈ ಎಂಬವರ ಪುತ್ರಿ ನೀತಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈ ಬಗ್ಗೆ ಮೃತಳ ಅಕ್ಕ ಗೀತಾ ಪಿ. ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು :ರಾಜಸ್ಥಾನದಲ್ಲಿ ನಡೆಯುವ ಹುಡುಗರ ಮತ್ತು ಹುಡುಗಿಯರ 49ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್ಶಿಪ್

ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ .ಬಾಲಕರ ಮತ್ತು ಬಾಲಕಿಯರ 49ನೇ ಜೂನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ 2025 ರ ಡಿಸೆಂಬರ್ 16 ರಿಂದ 21 ರವರೆಗೆ ರಾಜಸ್ಥಾನದ ಜುನ್ಜುನುವಿನ ಪಿಲಾನಿಯಲ್ಲಿ ನಡೆಯಲಿದೆ . ಕರ್ನಾಟಕ ರಾಜ್ಯ ವಾಲಿಬಾಲ್ ಅಸೋಸಿಯೇಷನ್ ಗೆ .ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ ಕಳುಹಿಸಿರುವ ಸುತ್ತೋಲೆ ಪ್ರಕಾರ ದಿನಾಂಕ: 27ನೇ ಮತ್ತು 28 ನವೆಂಬರ್ 2025 ರಂದು ಬೆಳಗ್ಗೆ 9 ಗಂಟೆಗೆ ಭಾರತೀಯ ಕ್ರೀಡಾ

ಯುವ ಮನಸ್ಸುಗಳು ಎಚ್ಚೆತ್ತುಕೊಂಡಲ್ಲಿ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ : ಡಾ. ಅನುರಾಧ ಕುರುಂಜಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ) ಸುಳ್ಯ ತಾಲೂಕು, ಸುಳ್ಯ ವಲಯ ಗಾಂಧಿನಗರ ಕಾರ್ಯಕ್ಷೇತ್ರದ ವತಿಯಿಂದ ಆಲೆಟ್ಟಿ ಮಿತಡ್ಕ ರೋಟರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಭಾಗದ ಮಕ್ಕಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ಅನುರಾಧ ಕುರುಂಜಿಯವರು ಮಾತನಾಡಿ ಯುವ ಮನಸ್ಸುಗಳು ಎಚ್ಚೆತ್ತುಕೊಂಡಲ್ಲಿ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ ಎಂದರಲ್ಲದೇ ದುಶ್ಚಟಕ್ಕೆ

ಪುತ್ತೂರು: ಯುವಕನ ದುರಂತ ಅಂತ್ಯ; ತಂದೆ-ತಾಯಿಯಂತೆಯೇ ಮಗನೂ ಆತ್ಮಹತ್ಯೆಗೆ ಶರಣು

ಪುತ್ತೂರು: ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪುರುಷರಕಟ್ಟೆ ಇಂದಿರಾನಗರದಲ್ಲಿ ನವೆಂಬರ್ 21ರಂದು ನಡೆದಿದೆ. ಮೃತರನ್ನು ಪುರುಷರಕಟ್ಟೆ ಇಂದಿರಾನಗರ ನಿವಾಸಿ, ದಿವಂಗತ ಪ್ರವೀಣ್ ಜೋಗಿ ಅವರ ಪುತ್ರ ಪ್ರತೀಕ್ (23) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಶೋರೂಮ್‌ ವರ್ಕ್‌ಶಾಪ್‌ ಒಂದರಲ್ಲಿ ಉದ್ಯೋಗದಲ್ಲಿದ್ದ ಪ್ರತೀಕ್, ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಗುರುವಾರ ಮಧ್ಯಾಹ್ನ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

ಪುತ್ತೂರು:ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬಿ ಪ್ರಯುಕ್ತ ದೇಶದ್ಯಾಂತ ಬಿ.ಜೆ.ಪಿ ವತಿಯಿಂದ ಅಟಲ್ ವಿರಾಸತ್ ವಿಶೇಷ ಕಾರ್ಯಕ್ರಮವನ್ನು ಪಕ್ಷ ಆಯೋಜಿಸಿದ್ದು, ದ.ಕ ಜಿಲ್ಲಾ ಬಿ.ಜೆ.ಪಿ ವತಿಯಿಂದ ಪುತ್ತೂರು ವೆಂಕಟರಮಣ ದೇವಸ್ಥಾನದ ಮೈದಾನದಲ್ಲಿ ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಪುತ್ತೂರಿಗೆ ಆಗಮಿಸಿದ್ದು, ಪ್ರಾರಂಭದಲ್ಲಿ ಹತ್ತೂರ ಒಡೆಯ ಪುತ್ತೂರಿನ ಮಹಾಲಿಂಗೇಶ್ವರನ

ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಮಂಗಳೂರು “ಹಿರಿಯ ನಾಗರಿಕರ ದಿನಾಚರಣೆ”

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ (ರಿ.) ಪುತ್ತೂರುಇವರ ಸಂಯುಕ್ತ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಮಂಗಳೂರುಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇವರುಗಳ ಸಹಯೋಗದೊಂದಿಗೆ ಹಿರಿಯ ನಾಗರಿಕರ ದಿನಾಚರಣೆ” ಯ ಅಂಗವಾಗಿ ಕಾನೂನು ಮಾಹಿತಿ ಕಾರ್ಯಕ್ರಮ ಮನೀಷಾ ಸಭಾಂಗಣ, ಪುತ್ತೂರು, ಇಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು

ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್: ಪುತ್ತೂರಿನ ದಿಶಾನ್ ಎಂ ಗೆ ಚಿನ್ನದ ಪದಕ.

ಪುತ್ತೂರು: ಸಂತ ಫಿಲೋಮಿನಾ ಪ ಪೂ ಕಾಲೇಜಿನ ದಿಶಾನ್ ಎಂ ಗೆ ಚಿನ್ನದ ಪದಕ. ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಸಂಘದ ಆಶ್ರಯದಲ್ಲಿ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಷನ್ ಸುಳ್ಯದಲ್ಲಿ ನ 8 ಮತ್ತು 9 ರವರೆಗೆ ನಡೆದ ರಾಜ್ಯಮಟ್ಟದ ಯುವ ಕಿರಿಯ ಮತ್ತು ಹಿರಿಯ ವಿಭಾಗದ 71 ಕೆ ಜಿ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ದಿಶಾನ್ ಎಂ ಚಿನ್ನದ ಪದಕವನ್ನು ಪಡೆದಿರುತ್ತಾರೆ. […]

ಕುಕ್ಕೆ ಸುಬ್ರಹ್ಮಣ್ಯಕ್ಕೆ ಚಿತ್ರನಟಿ ನಯನತಾರಾ ದಂಪತಿ ಭೇಟಿ

ಸುಬ್ರಹ್ಮಣ್ಯ: ಭಾರತೀಯ ಚಿತ್ರರಂಗದ ಕಾಲಿವುಡ್ ನ ಬಹುಭಾಷಾ ನಟಿ ನಯನತಾರ ಹಾಗೂ ಅವರ ಪತಿ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿಗಳು ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಸರ್ಪಸಂಸ್ಕಾರ ಪೂಜೆಯಲ್ಲಿ ಪಾಲ್ಗೊಂಡರು. ನಯನತಾರಾ ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡ ಚಿತ್ರಗಳಲ್ಲಿ ನಟಿಸಿರುವ ಪ್ರಖ್ಯಾತ ಬಹುಭಾಷಾ ನಟಿಯಾಗಿದ್ದಾರೆ. ಅವರು ಲೇಡಿ ಸೂಪರ್ ಸ್ಟಾರ್ ಎಂದೇ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕುಕ್ಕೆ ಶ್ರೀ