ಪುತ್ತೂರಿನ ಪವಿತ್ರ ಶೆಟ್ಟಿ ಅವರು 2022 ರ ಜೂನ್ 26 ರಂದು ದುಬೈ ಸಿಲಿಕಾನ್ ಓಯಸಿಸ್ನ ರಾಡಿಸನ್ ರೆಡ್ನಲ್ಲಿ ನಡೆದ ಪ್ರತಿಷ್ಠಿತ ಮಿಸೆಸ್ ಯುಎಇ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಒಂದನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.ಯುಎಇಯಲ್ಲಿ ವಾಸಿಸುವ ಎಲ್ಲಾ ರಾಷ್ಟ್ರೀಯತೆಗಳಿಗೆ ಮುಕ್ತವಾಗಿರುವ ಈ ಸ್ಪರ್ಧೆಯು ಮಧ್ಯಪ್ರಾಚ್ಯದಲ್ಲಿ ಅತಿದೊಡ್ಡ ಮತ್ತು
ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಶಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವಾರು ಮಂದಿಗೆ ಗಾಯವಾಗಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಸಂಚಾರಿ ಠಾಣೆಯ ಯಸ್. ಐ. ರಾಮ ನಾಯ್ಕ್ ಹಾಗು ಸಿಬ್ಬಂದಿಗಳು ತನಿಖೆ ನಡೆಸಿ ಪುತ್ತೂರಿನ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರಿನ ಹಾರಾಡಿ ಶಾಲೆಯಲ್ಲಿ ಆವರಣಗೋಡೆ ಕುಸಿತ : ಪುತ್ತೂರು ನಗರಸಭೆ ಅಧ್ಯಕ್ಷರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ
ಭಾರಿ ಮಳೆಗೆ ಪುತ್ತೂರು ನಗರ ಸಭಾ ವ್ಯಾಪ್ತಿಯ ಹಾರಾಡಿ ಸ.ಉ.ಹಿ.ಪ್ರಾ.ಶಾಲೆಯ ಆವರಣಗೋಡೆಯೊಂದು ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ ಪುತ್ತೂರು ನಗರಸಭೆ ಅಧ್ಯಕ್ಷರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿದ್ದಾರೆ.ಹಾರಾಡಿಯ ಶಾಲೆಯ ಹಿಂಬದಿಯ ಪ್ರಯಾಣಿಕರ ತಂಗುದಾಣದ ಬಳಿಯಲ್ಲಿರುವ ಆವರಣಗೋಡೆ ಕುಸಿದಿದೆ. ಘಟನಾ ಸ್ಥಳಕ್ಕೆ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ಸ್ಥಳೀಯ ಸದಸ್ಯೆ ಪ್ರೇಮಲತಾ ನಂದಿಲ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಲೋಕೇಶ್ ಅವರು ಭೇಟಿ,ನೀಡಿ
ಭಾರತೀಯ ಸೇನೆಯಲ್ಲಿ ಸುದೀರ್ಘ ಅವಧಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿಯಾದ ಬಳಿಕ ಮಂಗಳೂರು ಘಟಕದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಪುತ್ತೂರಿನ ಪೆರ್ಲಂಪಾಡಿಯ ಹರಿಪ್ರಸಾದ್ ಕೆ. ಅವರು ನೇಮಕಗೊಂಡಿದ್ದಾರೆ. ಹರಿಪ್ರಸಾದ್ ಕೆ. ಅವರು ಭಾರತೀಯ ಸೇನೆಯಲ್ಲಿ ಸರಿ ಸುಮಾರು 17 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿದ್ದು, ತಮ್ಮ ಸೇವಾ ಅವಧಿಯಲ್ಲಿ ದೇಶದ ಪಂಜಾಬ್, ಅಸ್ಸಾಂ, ಜಮ್ಮು ಕಾಶ್ಮೀರ, ರಾಜಸ್ತಾನ, ವಡೋದರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸೇವೆಯನ್ನು
ಪುತ್ತೂರು: ದೇವಸ್ಥಾನ ನಿರ್ಮಾಣವೆಂದರೆ ಇತಿಹಾಸ ಸೃಷ್ಟಿಸಿದಂತೆ. ಈ ಮಹಾಕಾರ್ಯ ಎಲ್ಲರಿಗೂ ಸಿಗುವುದಿಲ್ಲ. ಜೀವನದಲ್ಲಿ ಭಗವಂತ ಕೊಟ್ಟ ಅವಕಾಶದಲ್ಲಿ ಶ್ರದ್ಧೆಯಿಂದ ಭಾಗವಹಿಸಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಡಿ.21ರಿಂದ 28 ರವರೆಗೆ ನಡೆಯಲಿರುವ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದಲ್ಲಿ ಬಿಡುಗಡೆ ಮಾಡಿ ಮಾತನಾಡಿದರು. ಬ್ರಹ್ಮಕಲಶೋತ್ಸವ ಸಮಿತಿ
ಪುತ್ತೂರು: ದೈವ ಸೇವಾಕಾರ್ಯದಲ್ಲಿ ಮಧ್ಯಸ್ಥರಾಗಿ ಸೇವೆ ಮಾಡುತ್ತಿದ್ದ ಬನ್ನೂರು ನಿವಾಸಿ ಭರತ್ ಭಂಡಾರಿ ಅನಾರೋಗ್ಯದಿಂದ ನ.29ರ ನಸುಕಿನ ಜಾವ ದೇರಳಕಟ್ಟೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯಕ್ಷಗಾನ ಕಲಾವಿದ ಗಂಗಾಧರ ಭಂಡಾರಿಯವರ ಪುತ್ರ ಭರತ್ ಭಂಡಾರಿ ಅವರು ದೈವ ಸೇವಾ ಕಾರ್ಯದಲ್ಲಿ ಮಧ್ಯಸ್ಥರಾಗಿ ತೊಡಗಿಸಿಕೊಂಡು ಎಲ್ಲರಿಗೂ ಚಿರಪರಿಚಿತರಾಗಿದ್ದರು. ಇತ್ತೀಚೆಗೆ ಅವರು ಜಾಂಡೀಸ್ ಖಾಯಿಲೆಗೆ ತುತ್ತಾಗಿ ದೇರಳಕಟ್ಟೆ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಮೃತರು ತಂದೆ
ಕಡಬ : ಆಲ್ಟೋ ಕಾರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಹೋದ ಘಟನೆ ಬುಧವಾರ ಸಂಜೆ ವೇಳೆ ಬಳ್ಪ ಸಮೀಪ ಸಂಭವಿಸಿದೆ. ಪಂಜ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಬಳ್ಪ ಎಂಬಲ್ಲಿಯ ಪಾದೆ ಬಳಿ ಘಟನೆ ಸಂಭವಿಸಿದೆ. ಪಂಜದ ಕೃಷ್ಣನಗರ ಕೇಶವ ಆಚಾರಿ ಎಂಬವರು ತಮ್ಮ ಕಾರಿನಲ್ಲಿ ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿರುವಾಗ ಪಾದೆ ಬಳಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಿಂದ ಇಳಿದು ನೋಡಬೇಕು ಎನ್ನವ ಕ್ಷಣ ಮಾತ್ರದಲ್ಲಿ
ಪುತ್ತೂರು: ವಿಲೇವಾರಿಗೆ ಕಷ್ಟವಾಗಿರುವ ಹಳೆಯ ನೋಟುಗಳನ್ನು ವಿಲೇವಾರಿ ಮಾಡಿಕೊಟ್ಟವರಿಗೆ 30 ಶೇ. ಕಮಿಷನ್ ನೀಡುವುದಾಗಿ ಹೇಳಿ ಮಹಿಳೆಯೊಬ್ಬರಿಂದ 10 ಲಕ್ಷ ರೂ.ಪಡೆದು ನೋಟಿನ ಬದಲು ಕಾಗದದ ತುಂಡುಗಳನ್ನು ನೀಡಿ ವಂಚಿಸಿರುವ ಆರೋಪದಲ್ಲಿ ರೆಂಜದ ಅರಂತನಡ್ಕ ನಿವಾಸಿ ಸಹಿತ ಐವರನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ. ತಮ್ಮ ಬಳಿ ದೇವಸ್ಥಾನಗಳ ಹುಂಡಿಯಲ್ಲಿ ಭಕ್ತರು ಹಾಕಿದ್ದ ರೂ.100 ಮುಖ ಬೆಲೆಯ ರೂ.10 ಲಕ್ಷ ಮೌಲ್ಯದ ನೋಟುಗಳಿದ್ದು, ಆವುಗಳನ್ನು ವಿಲೇವಾರಿ ಮಾಡಲು
ಪುತ್ತೂರು ತಾಲೂಕಿನ ಪ್ರಸಿದ್ಧ ಕಾರಣಿಕ ಕ್ಷೇತ್ರ ಕಾರ್ಪಾಡಿ, ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೆಂಬರ್ 21 ರಂದು ಆರಂಭಗೊಂಡು ಜನವರಿ 7 ರ ತನಕ ನಿರಂತರ 48 ದಿನಗಳ ಕಾಲ (ಒಂದು ಮಂಡಲ) ಸಂಜೆ ವಿಶೇಷ ರಂಗಪೂಜೆ ನಡೆಯಲಿದೆ. ಮೂರನೇ ವರ್ಷದಲ್ಲಿ ನಡೆಯುತ್ತಿರುವ ಈ ವಿಶೇಷ ರಂಗಪೂಜೆಯು ಕಾರ್ಪಾಡಿ, ಶ್ರೀ. ಸುಬ್ರಹ್ಮಣ್ಯ ಕ್ಷೇತ್ರದ ವಿಶೇಷತೆಗಳಲ್ಲಿ ಒಂದು. ನಿರಂತರ 48 ದಿನಗಳ ಕಾಲ ನಡೆಯುವ ರಂಗಪೂಜೆಯಲ್ಲಿ ಪ್ರತೀದಿನ 12 ಕುಟುಂಬಗಳಿಗೆ ಸೇವೆ ಮಾಡಿಸಲು ಅವಕಾಶವಿದೆ.
ಪುತ್ತೂರು: ಶ್ರೀಗಂಧ ಎಣ್ಣೆಯನ್ನು ಕೇರಳ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಲಯದಿಂದ ಜಾಮೀನು ಪಡೆದ ಆರೋಪಿಗಳ ಪೈಕಿ ವಿಚಾರಣೆಗೆ ತಲೆಮರೆಸಿಕೊಂಡಿದ್ದ ಓರ್ವ ಆರೋಪಿಯನ್ನು ಸಂಪ್ಯ ಎಸ್.ಐ ಉದಯ ರವಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಕೇರಳದ ಕಣ್ಣೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಕೊಲ್ಲಂಬಾಡಿ ತಾಯಲ್ ನಿವಾಸಿ ಅಬ್ದುಲ್ ಖಾದರ್ ಅವರ ಪುತ್ರ ಮಹಮ್ಮದ್ ರಫೀಕ್ ಎಮ್.ಎಮ್. ಬಂಧಿತ





















