ಪುತ್ತೂರಿನ ಬೊಳುವಾರಿನ ವಿಶ್ವ ಕರ್ಮ ಸಭಾ ಭವನದ ಮುಂಭಾಗ ಸರ್ಕಾರಿ ಬಸ್ ಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡಸಿದ್ದಾರೆ. ಇದೀಗ ಪುತ್ತೂರಿನ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಎಲ್ಲಾ ಮಾರ್ಗಗಳಲ್ಲಿ ಬಸ್ ನ್ನು ಸಂಚಾರ ತಡೆ ಹಿಡಿಯಲಾಗಿದೆ. ದೂರದೂರುಗಳಿಗೆ ಸಂಚರಿಸುವ ಪ್ರಯಾಣಿಕರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಬಸ್
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಕಗ್ಗೊಲೆಯಾಗಿದೆ. ಬೆಳ್ಳಾರೆಯ ನೆಟ್ಟಾರು ನಿವಾಸಿ 32 ವರ್ಷದ ಪ್ರವೀಣ್ ನೆಟ್ಟಾರು ಎಂಬಾತನನ್ನು ದುಷ್ಕರ್ಮಿಗಳು ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ಇಟ್ಟುಕೊಂಡಿದ್ದ ಪ್ರವೀಣ್ ತನ್ನ ಅಂಗಡಿಯನ್ನು ಬಂದ್ ಮಾಡುವ ವೇಳೆಗೆ ಒಂದೇ ಬೈಕ್ ನಲ್ಲಿ ಆಗಮಿಸಿದ ಮೂವರು ತಲ್ವಾರ್ ನಿಂದ ಹಲ್ಲೆ ಮಾಡಿ ಹೋಗಿದ್ದಾರೆ. ತಕ್ಷಣ ಸ್ಥಳೀಯರು ಪ್ರವೀಣ್
ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮದ ಮಿತಡ್ಕ ವಡ್ಯಾ ಎಂಬಲ್ಲಿ ಸಾರ್ವಜನಿಕ ರಸ್ತೆಗೆ ಮರ ಬಿದ್ದು ಸಂಪೂರ್ಣ ಸಾರ್ವಜನಿಕರಿಗೆ ಸಂಪರ್ಕ ಕಡಿತಗೊಂಡಿದೆ ಇದಕ್ಕೆ ಸುಮಾರು 10 ದಿನದಿಂದ ಇಲ್ಲಿಯ ಶಾಲಾ ಮಕ್ಕಳಿ ಗೆ ಸಾರ್ವಜನಿಕರಿಗೆ ತೊಂದರೆ ಈಡಾಗಿದ್ದು ಯಾವುದೇ ಅಧಿಕಾರಿಗಳು ಹಾಗೂ ಪಂಚಾಯತ್ ಸಿಬ್ಬಂದಿಗಳೂ ಕೂಡ ಭೇಟಿ ನೀಡದೆ ಜನಪ್ರತಿನಿಧಿಯು ಕೂಡ ಭೇಟಿ ನೀಡದೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಸದ್ಯ ಸಂಬಂಧಪಟ್ಟ ಇಲಾಖೆ ಗಮನ ಹರಿಸಿ ಸಂಪರ್ಕ
ಜಿಲ್ಲೆಯ ಸಾವಿರಾರು ಪ್ರಯಾಣಿಕ ವಾಹನಗಳಿಗೆ ನಿತ್ಯ ಆಸರೆಯಾಗುವ ಹೆದ್ದಾರಿಯು ಮರಣ ಗುಂಡಿಗಳಾಗಿ ಬದಲಾಗುತ್ತಿದೆ. ಹೆದ್ದಾರಿಯ ಬಹುತೇಕ ಭಾಗಗಳಲ್ಲಿ ಹೊಂಡಗಳೇ ತುಂಬಿಕೊಂಡಿದ್ದು, ಸಂಚಾರ ಕಷ್ಟಕರವಾಗಿದೆ.ಇಲ್ಲಿರುವ ಗುಂಡಿಗಳು ಸವಾರರ ಮತ್ತು ಪ್ರಯಾಣಿಕರ ಹೃದಯಬಡಿತ ಹೆಚ್ಚಿಸುವಂತಿದೆ.ಸ್ವಲ್ಪ ಎಚ್ಚರ ತಪ್ಪಿದ್ರೆ ಸಾಕು ವಾಹನ ಹೊಂಡಕ್ಕೆ ಬೀಳುವುದು ಖಚಿತ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೃಹತ್ತಾಕಾರದ ಹೊಂಡಗುಂಡಿಗಳಿಂದ ವಾಹನ ಸವಾರ ನರಕಯಾತನೆ ಅನುಭವಿಸುವಂತಾಗಿದೆ.
ಕಳೆದ 15 ವರ್ಷಗಳಿಂದ ಬೀದಿ ನಾಯಿಗಳ ಅನ್ನದಾತರಾಗಿ ದಾನಿಯೊಬ್ಬರು ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಪೇಪರ್ ಏಜೆಂಟ್ ಆಗಿಯೂ, ಜನಪ್ರತಿನಿಧಿಯೂ ಆಗಿದ್ದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು ಇದೀಗ ನಾಯಿಗಳ ಆರೈಕೆಗಾಗಿ ದಾನಿಗಳ ಸಹಾಯ ಯಾಚಿಸುತ್ತಿದ್ದಾರೆ. ಪ್ರತಿದಿನವೂ 150 ಕ್ಕೂ ಮಿಕ್ಕಿದ ನಾಯಿಗಳಿಗೆ ಆಹಾರ ಸೇರಿದಂತೆ ಆರೋಗ್ಯವನ್ನೂ ನೋಡಿಕೊಳ್ಳುತ್ತಿರುವ ಇವರು ದಿನವೊಂದಕ್ಕೆ ನಾಯಿಗಳಿಗಾಗಿ 1500 ರೂಪಾಯಿಗಳನ್ನು ವ್ಯಯಿಸಬೇಕಾದ
ಕಡಬ: ಇನ್ನೋವಾ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಶನಿವಾರ ಬೆಳಿಗ್ಗೆ ಪಂಜ – ಕಡಬ ರಸ್ತೆಯ ಕೋಡಿಂಬಾಳದಲ್ಲಿ ನಡೆದಿದೆ.ಧರ್ಮಸ್ಥಳ ಮೂಲದವರಿದ್ದ ಇನ್ನೋವಾ ಕಾರು ಹಾಗೂ ಬೆಂಗಳೂರಿನಿಂದ ಪಂಜ ಮಾರ್ಗವಾಗಿ ಕಡಬಕ್ಕೆ ಬರುತ್ತಿದ್ದ ಸುಗಮ ಸಂಸ್ಥೆಗೆ ಸೇರಿದ ಖಾಸಗಿ ಬಸ್ ನಡುವೆ ಕೋಡಿಂಬಾಳ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಇನ್ನೋವಾ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಪವಾಡಸದೃಶ ಅಪಾಯದಿಂದ ಪಾರಾಗಿದ್ದಾರೆ.
ಕಡಬ,ಸವಣೂರು : ಮಾತೃಭೂಮಿ ಸಾವಯವ ಕೃಷಿ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ.) ಕಡಬ ,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ಅರಣ್ಯ ಇಲಾಖೆ ಪುತ್ತೂರು ,ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ ಇದರ ವತಿಯಿಂದ ಸವಣೂರು ಯುವಕ ಮಂಡಲದ ಯುವ ಸಭಾಭವನದಲ್ಲಿ ಸಸಿ ಮತ್ತು ತರಕಾರಿ ಬೀಜ ವಿತರಣೆ ಹಾಗೂ ಕೃಷಿ ಅರಣ್ಯ ರೈತ ಸಹಾಯಧನದ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಪ್ಪ ಮಾತನಾಡಿ,
ವಿಟ್ಲ: ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುವಲ್ಲಿ ರಸ್ತೆಯ ಮಧ್ಯೆ ಅಡುಗೆ ಎಣ್ಣೆ ಸಾಗಾಟದ ಟ್ಯಾಂಕರ್ ಕೆಟ್ಟು ನಿಂತಿದ್ದರ ಪರಿಣಾಮ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲಾಗಿ ನಿಂತಿದೆ,ಸ್ಥಳದಲ್ಲಿ ಪೋಲಿಸರು ಮತ್ತು ಸೂರಿಕುಮೇರು ಪರಿಸರದ ಯುವಕರು ವಾಹನಗಳ ಸಂಚಾರಕ್ಕೆ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸುತ್ತಿದ್ಸಾರೆ
ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ಇಲ್ಲಿನ ಬೈಪಾಸ್ ರಸ್ತೆಯ ಉರ್ಲಾಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.ಶುಂಠಿಕೊಪ್ಪದ ಚಂಗಪ್ಪ ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮೃತದೇಹವನ್ನು ಶ್ರೀ ಶರವು ಗಣೇಶ್ ಆಂಬ್ಯುಲೆನ್ಸ್ ನಲ್ಲಿ ಶುಂಠಿಕೊಪ್ಪಕ್ಕೆ ಕೊಂಡೊಯ್ಯುವಾಗ ಘಟನೆ ಸಂಭವಿಸಿದೆ. ಘಟನೆಯಲ್ಲಿ ಆಂಬ್ಯುಲೆನ್ಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಮೃತರ ಪತ್ನಿ ಲಲಿತಾ ಹಾಗೂ ಇನ್ನೋರ್ವ ಮಹಿಳೆ ಇನ್ನೊಂದು
ಪುತ್ತೂರು -ಬೆಳ್ಳಾರೆ ರಾಜ್ಯ ಹೆದ್ದಾರಿಯ ನೆಟ್ಟಾರ್ ಎಂಬಲ್ಲಿ ಗುಡ್ಡ ಕುಸಿದು ರಾಜ್ಯ ಹೆದ್ದಾರಿಗೆ ಗುಡ್ಡದ ಮಣ್ಣು ಮತ್ತು ಮರ ಅಪಾಯದ ಅಂಚಿನಲ್ಲಿ ಇರುವುದನ್ನು ಮನಗಂಡು ತಕ್ಷಣ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಬೆಳ್ಳಾರೆ ಗ್ರಾಮ ಪಂಚಾಯತಿ ಪಿಡಿಒ ಅನುಸೂಯ, ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್ ಪರಮೇಶ್ವರ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಜೂನಿಯರ್ ಇಂಜಿನಿಯರ್ ಪ್ರಸಾದ್, ಹಾಗೂ ಪೆರುವಾಜೆ ಅರಣ್ಯಧಿಕಾರಿ ಪ್ರಸಾದ್ ಗ್ರಾಮಕರಣಿಕರ























